Homeಮುಖಪುಟದುರ್ಗಾ ಪೂಜೆ: ಹಿಂದೂ ಮುಸ್ಲಿಂ ಧಾರ್ಮಿಕ ಸಾಮರಸ್ಯ ಮೆರೆಯುವ ಕಿದಿರ್‌ಪುರ್‌‌ ನಗರ!

ದುರ್ಗಾ ಪೂಜೆ: ಹಿಂದೂ ಮುಸ್ಲಿಂ ಧಾರ್ಮಿಕ ಸಾಮರಸ್ಯ ಮೆರೆಯುವ ಕಿದಿರ್‌ಪುರ್‌‌ ನಗರ!

ಉತ್ಸವ ಅಥವಾ ಆಚರಣೆಯ ಕಲ್ಪನೆ ಕೇವಲ ಒಂದು ಸಮುದಾಯಕ್ಕೆ ಸೇರಿಲ್ಲ. ಅದು ದುರ್ಗಾ ಪೂಜೆಯಾಗಲಿ, ಈದ್ ಆಗಿರಲಿ, ಜನರು ಒಟ್ಟಾಗಿ ಉತ್ಸವ ಆಚರಿಸಲು ಮಾನವೀಯತೆಯ ಉತ್ಸಾಹದಲ್ಲಿ ಸೇರುತ್ತಾರೆ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿನ ದುರ್ಗಾ ಪೂಜೆ ವೈಭವಕ್ಕೆ ಈ ಬಾರಿ ಕೊರೊನಾ ಸಾಂಕ್ರಾಮಿಕ ತಡೆ ಒಡ್ಡಿದೆ. ಹೆಚ್ಚುತ್ತಿರುವ ಕೊರೊನಾ ಸೋಂಕು ಪ್ರಕರಣಗಳ ಮಧ್ಯೆ, ಆರ್ಥಿಕತೆ ಕುಸಿದಿರುವ ಸಂದರ್ಭದಲ್ಲಿ ಈ ವರ್ಷ ದುರ್ಗಾ ಪೂಜೆಯು ವಿಭಿನ್ನ ರೀತಿಯ ಅನುಭವಕ್ಕೆ ಸಾಕ್ಷಿಯಾಗಲಿದೆ.

ಕೋಲ್ಕತಾ ಹೊಸ ನಿಯಮಗಳ ಮಧ್ಯೆ ಉತ್ಸವಕ್ಕೆ ಸಜ್ಜಾಗುತ್ತಿದ್ದಂತೆ, ಅಲ್ಲಿನ ಹಳೆಯ ಮುಸ್ಲಿಂ ಪ್ರಾಬಲ್ಯದ ಪ್ರದೇಶಗಳಲ್ಲಿ ಒಂದಾದ ಕಿದಿರ್‌ಪುರ್ ತನ್ನ ದೀರ್ಘಕಾಲದ ಸಂಪ್ರದಾಯವಾದ ಧಾರ್ಮಿಕ ಸಾಮರಸ್ಯವನ್ನು ಆಚರಿಸಲು ಸಜ್ಜಾಗಿದೆ.

ಕಿದಿರ್‌ಪುರದ ಚೆಟ್ಲಾ ಅಗ್ರಾನಿ ಕ್ಲಬ್, ಕಿದಿರ್‌ಪುರ್ 5 ಸ್ಟಾರ್ ಕ್ಲಬ್ ಮತ್ತು ಮುನ್‌ಶೋಟೊಲಾ ದುರ್ಗೋತ್ಸವ್ ಕ್ಲಬ್ ಸ್ಥಾಪಿಸಿರುವ ಪೆಂಡಾಲ್‌ಗಳು ಈ ಪ್ರದೇಶದ ಮಸೀದಿಗೆ ಅತಿ ಸಮೀಪದಲ್ಲಿಯೇ ಇವೆ. ಎಲ್ಲಾ ಧರ್ಮದ ಜನರು ಇಲ್ಲಿ ದುರ್ಗಾ ಮಾತೆಯ ಹಬ್ಬದ ಆಚರಣೆಯಲ್ಲಿ ತೊಡಗಿದ್ದರು.

ಈ ಪ್ರದೇಶದಲ್ಲಿ ಸ್ಥಾಪಿಸಲಾಗುವ ಪೆಂಡಾಲ್‌ಗಳಲ್ಲಿ ಹೆಚ್ಚಿನವರು ಮುಸ್ಲಿಂ ಸಮುದಾಯದವರು. ಇವರೇ ಪೆಂಡಾಲ್‌ಗಳಿಗೆ ಹಣಕಾಸು ನೀಡುವವರಾಗಿದ್ದಾರೆ. ಇಲ್ಲಿ ಸುಮಾರು 80 ವರ್ಷಗಳ ಹಿಂದಿನಿಂದಲೂ ಪೆಂಡಾಲ್‌ಗಳನ್ನು ಸ್ಥಾಪಿಸಲಾಗುತ್ತಿದೆ.

ಚೆಟ್ಲಾ ಅಗ್ರಾನಿ ಕ್ಲಬ್‌ನ ಪ್ರಧಾನ ಕಾರ್ಯದರ್ಶಿ ಸವ್ಯಸಾಚಿ ರಾಯ್‌ಚೌಧರಿ ಅವರು ನಗರದ ಇಲ್ಲಿನ ಪ್ರಸಿದ್ಧ ಪೆಂಡಾಲ್ ‌ಇತಿಹಾಸವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ಪಶ್ಚಿಮ ಬಂಗಾಳದಲ್ಲಿ ಮುಸ್ಲಿಮರು ಕಾಳಿ ದೇವಿಯ ಮೂರ್ತಿ ಸುಟ್ಟರೆ?

“ನಾವು ಇಲ್ಲಿಯವರೆಗೆ ಬರಲು ಮುಖ್ಯ ಕಾರಣ, ಬಾಬಿ (ಟಿಎಂಸಿ ನಾಯಕ) ಎಂದೂ ಕರೆಯಲ್ಪಡುವ ಫಿರಾಜ್ ಹಕೀಮ್. ನಮ್ಮಲ್ಲಿ ಮೊದಲಿಗೆ ನಾಲ್ಕು-ಐದು ಜನರು ಈ ಪೂಜೆ ಪ್ರಾರಂಭಿಸಿದರು. ನಮ್ಮ ನಡುವೆ ಯಾವತ್ತೂ ವ್ಯತ್ಯಾಸಗಳಿರಲಿಲ್ಲ. ಮುಸ್ಲಿಂ ಯಾರು, ಹಿಂದೂ ಯಾರು ಎಂಬ ಬಗ್ಗೆ ನಾವು ಎಂದಿಗೂ ಕಾಳಜಿ ವಹಿಸಲಿಲ್ಲ. ಅವರು ನಮ್ಮ ಆಚರಣೆಯ ಭಾಗವಾಗಿದ್ದಾರೆ, ನಾವು ಅವರ ಆಚರಣೆಯ ದೊಡ್ಡ ಭಾಗವಾಗಿದ್ದೇವೆ” ಎನ್ನುತ್ತಾರೆ.

Munshotola Durgotsav Club’s pandal.
PC: Malini Chakrabarty

‘ಉತ್ಸವ’ ಅಥವಾ ಆಚರಣೆಯ ಕಲ್ಪನೆ ಕೇವಲ ಒಂದು ಸಮುದಾಯಕ್ಕೆ ಸೇರಿಲ್ಲ. ಅದು ದುರ್ಗಾ ಪೂಜೆಯಾಗಲಿ, ಈದ್ ಆಗಿರಲಿ, ಜನರು ಒಟ್ಟಾಗಿ ‘ಉತ್ಸವ’ ಆಚರಿಸಲು ಮಾನವೀಯತೆಯ ಉತ್ಸಾಹದಲ್ಲಿ ಸೇರುತ್ತಾರೆ. ಕೋಮು ಸೌಹಾರ್ದತೆ ಎಷ್ಟು ಮಹತ್ವದ್ದಾಗಿದೆ ಎಂಬುದರ ಸಂಕೇತ ಇದು. ಜಾತಿ ಮತಗಳೆಂದು ದೊಂಬಿ-ಗಲಾಟೆಗಳು ನಡೆಯುತ್ತಿರುವ ಈ ಸಮಯದಲ್ಲಿ ಕೊಲ್ಕಾತ್ತಾ  ಎನು ಮಾಡುತ್ತಿದೆಯೋ ಅದು ಮತ್ತಷ್ಟು ರಾಜ್ಯಗಳಿಗೆ ಮಾದರಿಯಾಗಲಿ ಎಂದು ನಾನು ಆಶಿಸುತ್ತೇನೆ ಎಂದು ಚೆಟ್ಲಾ ಅಗ್ರಾನಿ ಕ್ಲಬ್‌ನ ಪ್ರಧಾನ ಕಾರ್ಯದರ್ಶಿ ಸವ್ಯಸಾಚಿ ರಾಯ್‌ಚೌಧರಿ ಹೇಳುತ್ತಾರೆ.

“ಈ ಪೂಜೆ ಸಮಿತಿಯಲ್ಲಿ ಹೆಚ್ಚಿನ ಜನ ಇರುವುದು ನನ್ನ ಮುಸ್ಲಿಂ ಸಹೋದರರು. ಜೊತೆಗೆ ಕೆಲವು ಹಿಂದೂ ಸಹೋದರರು ಕೂಡ ಇದ್ದಾರೆ. ಈದ್, ದುರ್ಗಾ ಪೂಜೆ ಎರಡನ್ನು ಒಟ್ಟಿಗೆ ಸೇರಿ ಆಚರಿಸಲು ಇಷ್ಟಪಡುತ್ತೇವೆ” ಎಂದು ಕಿದಿರ್‌ಪುರ್ 5 ಸ್ಟಾರ್ ಕ್ಲಬ್ ಎಂಡಿ ನಜೀಮ್ ಹೇಳುತ್ತಾರೆ.

ಒಟ್ಟಾರೆ, ದುರ್ಗಾ ಪೂಜೆ ಇಲ್ಲಿನ ಜನರಲ್ಲಿ ಸಾಂಪ್ರದಾಯಿಕವಾಗಿ ಧಾರ್ಮಿಕ ಸಾಮರಸ್ಯವನ್ನು ಆಚರಿಸಲು ನಡೆಸುವ ಹಬ್ಬವಾಗಿ ಮಾರ್ಪಟ್ಟಿದೆ. ಯಾವುದೇ ಕೋಮುಸಂಘರ್ಷಣೆಗಳು ಇಲ್ಲದೆ ಒಟ್ಟಾಗಿ ಹಬ್ಬ ಆಚರಿಸುವುದು ನಮಗೆ ನೆಮ್ಮದಿ ನೀಡಿದೆ. ನಮ್ಮಲ್ಲಿ ಯಾವುದೇ ಬೇಧಭಾವವಿಲ್ಲ ಎಂದು ಇಲ್ಲಿನ ಜನ ಹೇಳುತ್ತಾರೆ.


ಇದನ್ನೂ ಓದಿ: ವಲಸೆ ಕಾರ್ಮಿಕ ಮಹಿಳೆಗೆ ಹೋಲುವ ದುರ್ಗಾ ಮಾತೆ ಪ್ರತಿಮೆ: ಕಲಾವಿದನ ಕೈಚಳಕ ವೈರಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...