Homeಮುಖಪುಟದುರ್ಗಾ ಪೂಜೆ: ಹಿಂದೂ ಮುಸ್ಲಿಂ ಧಾರ್ಮಿಕ ಸಾಮರಸ್ಯ ಮೆರೆಯುವ ಕಿದಿರ್‌ಪುರ್‌‌ ನಗರ!

ದುರ್ಗಾ ಪೂಜೆ: ಹಿಂದೂ ಮುಸ್ಲಿಂ ಧಾರ್ಮಿಕ ಸಾಮರಸ್ಯ ಮೆರೆಯುವ ಕಿದಿರ್‌ಪುರ್‌‌ ನಗರ!

ಉತ್ಸವ ಅಥವಾ ಆಚರಣೆಯ ಕಲ್ಪನೆ ಕೇವಲ ಒಂದು ಸಮುದಾಯಕ್ಕೆ ಸೇರಿಲ್ಲ. ಅದು ದುರ್ಗಾ ಪೂಜೆಯಾಗಲಿ, ಈದ್ ಆಗಿರಲಿ, ಜನರು ಒಟ್ಟಾಗಿ ಉತ್ಸವ ಆಚರಿಸಲು ಮಾನವೀಯತೆಯ ಉತ್ಸಾಹದಲ್ಲಿ ಸೇರುತ್ತಾರೆ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿನ ದುರ್ಗಾ ಪೂಜೆ ವೈಭವಕ್ಕೆ ಈ ಬಾರಿ ಕೊರೊನಾ ಸಾಂಕ್ರಾಮಿಕ ತಡೆ ಒಡ್ಡಿದೆ. ಹೆಚ್ಚುತ್ತಿರುವ ಕೊರೊನಾ ಸೋಂಕು ಪ್ರಕರಣಗಳ ಮಧ್ಯೆ, ಆರ್ಥಿಕತೆ ಕುಸಿದಿರುವ ಸಂದರ್ಭದಲ್ಲಿ ಈ ವರ್ಷ ದುರ್ಗಾ ಪೂಜೆಯು ವಿಭಿನ್ನ ರೀತಿಯ ಅನುಭವಕ್ಕೆ ಸಾಕ್ಷಿಯಾಗಲಿದೆ.

ಕೋಲ್ಕತಾ ಹೊಸ ನಿಯಮಗಳ ಮಧ್ಯೆ ಉತ್ಸವಕ್ಕೆ ಸಜ್ಜಾಗುತ್ತಿದ್ದಂತೆ, ಅಲ್ಲಿನ ಹಳೆಯ ಮುಸ್ಲಿಂ ಪ್ರಾಬಲ್ಯದ ಪ್ರದೇಶಗಳಲ್ಲಿ ಒಂದಾದ ಕಿದಿರ್‌ಪುರ್ ತನ್ನ ದೀರ್ಘಕಾಲದ ಸಂಪ್ರದಾಯವಾದ ಧಾರ್ಮಿಕ ಸಾಮರಸ್ಯವನ್ನು ಆಚರಿಸಲು ಸಜ್ಜಾಗಿದೆ.

ಕಿದಿರ್‌ಪುರದ ಚೆಟ್ಲಾ ಅಗ್ರಾನಿ ಕ್ಲಬ್, ಕಿದಿರ್‌ಪುರ್ 5 ಸ್ಟಾರ್ ಕ್ಲಬ್ ಮತ್ತು ಮುನ್‌ಶೋಟೊಲಾ ದುರ್ಗೋತ್ಸವ್ ಕ್ಲಬ್ ಸ್ಥಾಪಿಸಿರುವ ಪೆಂಡಾಲ್‌ಗಳು ಈ ಪ್ರದೇಶದ ಮಸೀದಿಗೆ ಅತಿ ಸಮೀಪದಲ್ಲಿಯೇ ಇವೆ. ಎಲ್ಲಾ ಧರ್ಮದ ಜನರು ಇಲ್ಲಿ ದುರ್ಗಾ ಮಾತೆಯ ಹಬ್ಬದ ಆಚರಣೆಯಲ್ಲಿ ತೊಡಗಿದ್ದರು.

ಈ ಪ್ರದೇಶದಲ್ಲಿ ಸ್ಥಾಪಿಸಲಾಗುವ ಪೆಂಡಾಲ್‌ಗಳಲ್ಲಿ ಹೆಚ್ಚಿನವರು ಮುಸ್ಲಿಂ ಸಮುದಾಯದವರು. ಇವರೇ ಪೆಂಡಾಲ್‌ಗಳಿಗೆ ಹಣಕಾಸು ನೀಡುವವರಾಗಿದ್ದಾರೆ. ಇಲ್ಲಿ ಸುಮಾರು 80 ವರ್ಷಗಳ ಹಿಂದಿನಿಂದಲೂ ಪೆಂಡಾಲ್‌ಗಳನ್ನು ಸ್ಥಾಪಿಸಲಾಗುತ್ತಿದೆ.

ಚೆಟ್ಲಾ ಅಗ್ರಾನಿ ಕ್ಲಬ್‌ನ ಪ್ರಧಾನ ಕಾರ್ಯದರ್ಶಿ ಸವ್ಯಸಾಚಿ ರಾಯ್‌ಚೌಧರಿ ಅವರು ನಗರದ ಇಲ್ಲಿನ ಪ್ರಸಿದ್ಧ ಪೆಂಡಾಲ್ ‌ಇತಿಹಾಸವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ಪಶ್ಚಿಮ ಬಂಗಾಳದಲ್ಲಿ ಮುಸ್ಲಿಮರು ಕಾಳಿ ದೇವಿಯ ಮೂರ್ತಿ ಸುಟ್ಟರೆ?

“ನಾವು ಇಲ್ಲಿಯವರೆಗೆ ಬರಲು ಮುಖ್ಯ ಕಾರಣ, ಬಾಬಿ (ಟಿಎಂಸಿ ನಾಯಕ) ಎಂದೂ ಕರೆಯಲ್ಪಡುವ ಫಿರಾಜ್ ಹಕೀಮ್. ನಮ್ಮಲ್ಲಿ ಮೊದಲಿಗೆ ನಾಲ್ಕು-ಐದು ಜನರು ಈ ಪೂಜೆ ಪ್ರಾರಂಭಿಸಿದರು. ನಮ್ಮ ನಡುವೆ ಯಾವತ್ತೂ ವ್ಯತ್ಯಾಸಗಳಿರಲಿಲ್ಲ. ಮುಸ್ಲಿಂ ಯಾರು, ಹಿಂದೂ ಯಾರು ಎಂಬ ಬಗ್ಗೆ ನಾವು ಎಂದಿಗೂ ಕಾಳಜಿ ವಹಿಸಲಿಲ್ಲ. ಅವರು ನಮ್ಮ ಆಚರಣೆಯ ಭಾಗವಾಗಿದ್ದಾರೆ, ನಾವು ಅವರ ಆಚರಣೆಯ ದೊಡ್ಡ ಭಾಗವಾಗಿದ್ದೇವೆ” ಎನ್ನುತ್ತಾರೆ.

Munshotola Durgotsav Club’s pandal.
PC: Malini Chakrabarty

‘ಉತ್ಸವ’ ಅಥವಾ ಆಚರಣೆಯ ಕಲ್ಪನೆ ಕೇವಲ ಒಂದು ಸಮುದಾಯಕ್ಕೆ ಸೇರಿಲ್ಲ. ಅದು ದುರ್ಗಾ ಪೂಜೆಯಾಗಲಿ, ಈದ್ ಆಗಿರಲಿ, ಜನರು ಒಟ್ಟಾಗಿ ‘ಉತ್ಸವ’ ಆಚರಿಸಲು ಮಾನವೀಯತೆಯ ಉತ್ಸಾಹದಲ್ಲಿ ಸೇರುತ್ತಾರೆ. ಕೋಮು ಸೌಹಾರ್ದತೆ ಎಷ್ಟು ಮಹತ್ವದ್ದಾಗಿದೆ ಎಂಬುದರ ಸಂಕೇತ ಇದು. ಜಾತಿ ಮತಗಳೆಂದು ದೊಂಬಿ-ಗಲಾಟೆಗಳು ನಡೆಯುತ್ತಿರುವ ಈ ಸಮಯದಲ್ಲಿ ಕೊಲ್ಕಾತ್ತಾ  ಎನು ಮಾಡುತ್ತಿದೆಯೋ ಅದು ಮತ್ತಷ್ಟು ರಾಜ್ಯಗಳಿಗೆ ಮಾದರಿಯಾಗಲಿ ಎಂದು ನಾನು ಆಶಿಸುತ್ತೇನೆ ಎಂದು ಚೆಟ್ಲಾ ಅಗ್ರಾನಿ ಕ್ಲಬ್‌ನ ಪ್ರಧಾನ ಕಾರ್ಯದರ್ಶಿ ಸವ್ಯಸಾಚಿ ರಾಯ್‌ಚೌಧರಿ ಹೇಳುತ್ತಾರೆ.

“ಈ ಪೂಜೆ ಸಮಿತಿಯಲ್ಲಿ ಹೆಚ್ಚಿನ ಜನ ಇರುವುದು ನನ್ನ ಮುಸ್ಲಿಂ ಸಹೋದರರು. ಜೊತೆಗೆ ಕೆಲವು ಹಿಂದೂ ಸಹೋದರರು ಕೂಡ ಇದ್ದಾರೆ. ಈದ್, ದುರ್ಗಾ ಪೂಜೆ ಎರಡನ್ನು ಒಟ್ಟಿಗೆ ಸೇರಿ ಆಚರಿಸಲು ಇಷ್ಟಪಡುತ್ತೇವೆ” ಎಂದು ಕಿದಿರ್‌ಪುರ್ 5 ಸ್ಟಾರ್ ಕ್ಲಬ್ ಎಂಡಿ ನಜೀಮ್ ಹೇಳುತ್ತಾರೆ.

ಒಟ್ಟಾರೆ, ದುರ್ಗಾ ಪೂಜೆ ಇಲ್ಲಿನ ಜನರಲ್ಲಿ ಸಾಂಪ್ರದಾಯಿಕವಾಗಿ ಧಾರ್ಮಿಕ ಸಾಮರಸ್ಯವನ್ನು ಆಚರಿಸಲು ನಡೆಸುವ ಹಬ್ಬವಾಗಿ ಮಾರ್ಪಟ್ಟಿದೆ. ಯಾವುದೇ ಕೋಮುಸಂಘರ್ಷಣೆಗಳು ಇಲ್ಲದೆ ಒಟ್ಟಾಗಿ ಹಬ್ಬ ಆಚರಿಸುವುದು ನಮಗೆ ನೆಮ್ಮದಿ ನೀಡಿದೆ. ನಮ್ಮಲ್ಲಿ ಯಾವುದೇ ಬೇಧಭಾವವಿಲ್ಲ ಎಂದು ಇಲ್ಲಿನ ಜನ ಹೇಳುತ್ತಾರೆ.


ಇದನ್ನೂ ಓದಿ: ವಲಸೆ ಕಾರ್ಮಿಕ ಮಹಿಳೆಗೆ ಹೋಲುವ ದುರ್ಗಾ ಮಾತೆ ಪ್ರತಿಮೆ: ಕಲಾವಿದನ ಕೈಚಳಕ ವೈರಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಮಗಳೂರು| ದಲಿತರ ಜಮೀನಿಗೆ ನುಗ್ಗಿ ಬೆಳೆ ನಾಶ; ಪ್ರಬಲ ಜಾತಿ ಜನರಿಂದ ವಿನಾಕಾರಣ ತೊಂದರೆ

ಚಿಕ್ಕಮಗಳೂರು ತಾಲೂಕಿನ ಆಲ್ದೂರು ಹೋಬಳಿಯ ಸತ್ತಿಹಳ್ಳಿ ಗ್ರಾಮದ ದಲಿತ ಸಮುದಾಯದ ರೈತರಿಗೆ ಅದೇ ಊರಿನ ಪ್ರಬಲ ಜಾತಿಗೆ ಸೇರಿದ ಜನರು ವಿನಾಕಾರಣ ತೊಂದರೆ ನಿಡುತ್ತಿದ್ದು, ಜಮೀನಿಗೆ ನುಗ್ಗಿ ಬೆಳೆ ನಾಶ ಮಾಡಿದ್ದಾರೆ ಎಂಬ...

ಎಲ್‌ಡಿಎಫ್‌ನ ‘ಕೇರಳಂ’ ಮರುನಾಮಕರಣ ಕ್ರಮ ಬೆಂಬಲಿಸಿದ ರಾಜ್ಯ ಬಿಜೆಪಿ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಮನವಿ

ಭಾರತೀಯ ಜನತಾ ಪಕ್ಷದ (ಬಿಜೆಪಿ) ಕೇರಳ ಘಟಕವು, ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್‌) ಸರ್ಕಾರದ 'ಕೇರಳಂ' ಮರುನಾಕರಣ ಪ್ರಸ್ತಾವನೆಯನ್ನು ಬೆಂಬಲಿಸಿದೆ. ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಮಧ್ಯಸ್ಥಿಕೆ ವಹಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರಲ್ಲಿ...

ರಾಯಚೂರು ಕೃಷಿ ವಿವಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ತಡೆಗೆ ಸಂಚು ಆರೋಪ: ನಿಗದಿತ ದಿನಾಂಕದಂದು ಪರೀಕ್ಷೆ ನಡೆಸಲು ಒತ್ತಾಯ 

ಬೆಂಗಳೂರು: ರಾಯಚೂರು ಕೃಷಿ ವಿವಿಯಲ್ಲಿನ 75 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ನಿಗದಿತ ದಿನಾಂಕಗಳಾದ ಜನವರಿ.17 ಮತ್ತು ಜನವರಿ.18ರಂದೇ ನಡೆಸಬೇಕು. ಪಟ್ಟಭದ್ರ ಹಿತಾಸಕ್ತಿಗಳ ಒತ್ತಾಯಕ್ಕೆ ಮಣಿದು ಪರೀಕ್ಷೆಯನ್ನು ಮುಂದೂಡಬಾರದು ಎಂದು ಅಭ್ಯರ್ಥಿಗಳು...

ಸಂಭಾಲ್ ಹಿಂಸಾಚಾರ ಪ್ರಕರಣ : ಹಿರಿಯ ಅಧಿಕಾರಿಗಳು ಸೇರಿ 12 ಪೊಲೀಸ್ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

2024ರ ನವೆಂಬರ್‌ನಲ್ಲಿ ಶಾಹಿ ಜಾಮಾ ಮಸೀದಿ ಬಳಿ ನಡೆದ ಹಿಂಸಾಚಾರದ ಸಂದರ್ಭದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಪಾತ್ರವಿದೆ ಎಂಬ ಆರೋಪದ ಮೇಲೆ ಹಿರಿಯ ಅಧಿಕಾರಿಗಳು ಸೇರಿದಂತೆ 12 ಪೊಲೀಸ್ ಸಿಬ್ಬಂದಿಯ ವಿರುದ್ಧ ಕ್ರಿಮಿನಲ್...

ಪಿಎಂ ಕೇರ್ಸ್ ನಿಧಿಗೆ ಆರ್‌ಟಿಐ ಕಾಯ್ದೆಯಡಿ ಗೌಪ್ಯತೆಯ ಹಕ್ಕಿದೆ : ದೆಹಲಿ ಹೈಕೋರ್ಟ್

ಪಿಎಂ ಕೇರ್ಸ್ ನಿಧಿಯು ಕಾನೂನು ಅಥವಾ ಸರ್ಕಾರಿ ಘಟಕವಾಗಿದ್ದರೂ, ಮಾಹಿತಿ ಹಕ್ಕು ಕಾಯ್ದೆಯಡಿಯಲ್ಲಿ ಗೌಪ್ಯತೆಯ ಹಕ್ಕನ್ನು ನಿರಾಕರಿಸಲಾಗುವುದಿಲ್ಲ ಎಂದು ದೆಹಲಿ ಹೈಕೋರ್ಟ್ ಮಂಗಳವಾರ (ಜ.13) ಮೌಖಿಕವಾಗಿ ಹೇಳಿದೆ. ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ ಮತ್ತು...

ಬಿಜೆಪಿ-ಆರ್‌ಎಸ್‌ಎಸ್‌ ನಾಯಕರನ್ನು ಭೇಟಿಯಾದ ಚೀನಾ ಕಮ್ಯುನಿಸ್ಟ್ ಪಕ್ಷದ ನಿಯೋಗ

ಗಾಲ್ವಾನ್ ಘರ್ಷಣೆಯ ನಂತರ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡಿರುವ ಚೀನಾದ ಕಮ್ಯುನಿಸ್ಟ್ ಪಕ್ಷದ (ಸಿಪಿಸಿ) ನಿಯೋಗ ಬಿಜೆಪಿ-ಆರ್‌ಎಸ್‌ಎಸ್‌ ನಾಯಕರನ್ನು ಭೇಟಿ ಮಾಡಿದೆ ಎಂದು ವರದಿಯಾಗಿದೆ. ಸೋಮವಾರ (ಜ.12) ನವದೆಹಲಿಯಲ್ಲಿ ಬಿಜೆಪಿ ನಾಯಕರನ್ನು ಭೇಟಿ...

ಅಪ್ರಾಪ್ತ ಮುಸ್ಲಿಂ ವಿದ್ಯಾರ್ಥಿಗೆ ಎರಡು ತಿಂಗಳ ಜೈಲು ಶಿಕ್ಷೆ: ಇದು ‘ಕಾನೂನುಬಾಹಿರ’ ಎಂದ ಪಾಟ್ನಾ ಹೈಕೋರ್ಟ್: 5 ಲಕ್ಷ ಪರಿಹಾರಕ್ಕೆ ಆದೇಶ

ಬಿಹಾರ ಪೊಲೀಸರು ಎರಡು ತಿಂಗಳಿಗೂ ಹೆಚ್ಚು ಕಾಲ ಮುಸ್ಲಿಂ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಬಂಧಿಸಿದ್ದು, ಕಾನೂನುಬಾಹಿರ ಎಂದು ಪಾಟ್ನಾ ಹೈಕೋರ್ಟ್ ಹೇಳಿದೆ. ಇಂಥ ವಿಚಾರಗಳಲ್ಲಿ ರಾಜ್ಯ ಮೂಕ ಪ್ರೇಕ್ಷಕನಾಗಿ ಉಳಿಯಲು ಸಾಧ್ಯವಿಲ್ಲ ಎಂದಿರುವ ಕೋರ್ಟ್...

ಒಳ ಮೀಸಲಾತಿ ಮಸೂದೆ ವಾಪಸ್ ಕಳಿಸಿದ ರಾಜ್ಯಪಾಲರು : ಹೋರಾಟಗಾರರು ಏನಂದ್ರು?

ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಅಂಗೀಕಾರಗೊಂಡ ಕರ್ನಾಟಕ ಪರಿಶಿಷ್ಟ ಜಾತಿಗಳ (ಉಪವರ್ಗೀಕರಣ) ಮಸೂದೆಗೆ ಅಂಕಿತ ಹಾಕದೆ ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ ಎಂದು ವರದಿಯಾಗಿದೆ. ಕೆಲವು ಸ್ಪಷ್ಟನೆಗಳನ್ನು ಕೇಳಿರುವ ರಾಜ್ಯಪಾಲರು, ಮಸೂದೆಯನ್ನು ವಾಪಸ್ ಕಳುಹಿಸಿದ್ದಾರೆ ಎಂದು ತಿಳಿದು...

‘ಕೂಡಲೇ ಇರಾನ್‌ನಿಂದ ಹೊರಡಿ, ಸಹಾಯ ನಿರೀಕ್ಷಿಸಬೇಡಿ’: ತನ್ನ ಪ್ರಜೆಗಳಿಗೆ ಕರೆ ನೀಡಿದ ಅಮೆರಿಕ

ವಾಷಿಂಗ್ಟನ್: ಆಡಳಿತ ವಿರೋಧಿ ಪ್ರತಿಭಟನೆಯನ್ನು ಹತ್ತಿಕ್ಕಿ, ಪ್ರತಿಭಟನಕಾರರ ಸಾವಿಗೆ ಕಾರಣವಾಗುತ್ತಿರುವ ಇರಾನ್‌ ವಿರುದ್ಧ ದಾಳಿ ಮಾಡುವ ಬೆದರಿಕೆ ಹಾಕಿದ ಬೆನ್ನಲ್ಲೇ ತಮ್ಮ ದೇಶದ ನಾಗರಿಕರಿಗೆ ಇರಾನ್ ತೊರೆಯುವಂತೆ ಅಮೆರಿಕ ಸೂಚನೆ ನೀಡಿದೆ. ದೇಶಾದ್ಯಂತ ಪ್ರತಿಭಟನೆಗಳು,...

ಭಾರತ ಭೂದಾಳಿ ನಡೆಸಲು ಸಿದ್ಧವಾಗಿತ್ತು: ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ 

ಮಂಗಳವಾರ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದು ಹೇಳಿದ್ದು, ಯಾವುದೇ ದುಸ್ಸಾಹಸವನ್ನು ಪರಿಣಾಮಕಾರಿಯಾಗಿ ನಿಭಾಯಿಸಲಾಗುವುದು ಎಂದು ಹೇಳಿದ್ದಾರೆ.  ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆ (ಎಲ್‌ಒಸಿ) ಮತ್ತು...