Homeಮುಖಪುಟದುರ್ಗಾ ಪೂಜೆ: ಹಿಂದೂ ಮುಸ್ಲಿಂ ಧಾರ್ಮಿಕ ಸಾಮರಸ್ಯ ಮೆರೆಯುವ ಕಿದಿರ್‌ಪುರ್‌‌ ನಗರ!

ದುರ್ಗಾ ಪೂಜೆ: ಹಿಂದೂ ಮುಸ್ಲಿಂ ಧಾರ್ಮಿಕ ಸಾಮರಸ್ಯ ಮೆರೆಯುವ ಕಿದಿರ್‌ಪುರ್‌‌ ನಗರ!

ಉತ್ಸವ ಅಥವಾ ಆಚರಣೆಯ ಕಲ್ಪನೆ ಕೇವಲ ಒಂದು ಸಮುದಾಯಕ್ಕೆ ಸೇರಿಲ್ಲ. ಅದು ದುರ್ಗಾ ಪೂಜೆಯಾಗಲಿ, ಈದ್ ಆಗಿರಲಿ, ಜನರು ಒಟ್ಟಾಗಿ ಉತ್ಸವ ಆಚರಿಸಲು ಮಾನವೀಯತೆಯ ಉತ್ಸಾಹದಲ್ಲಿ ಸೇರುತ್ತಾರೆ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿನ ದುರ್ಗಾ ಪೂಜೆ ವೈಭವಕ್ಕೆ ಈ ಬಾರಿ ಕೊರೊನಾ ಸಾಂಕ್ರಾಮಿಕ ತಡೆ ಒಡ್ಡಿದೆ. ಹೆಚ್ಚುತ್ತಿರುವ ಕೊರೊನಾ ಸೋಂಕು ಪ್ರಕರಣಗಳ ಮಧ್ಯೆ, ಆರ್ಥಿಕತೆ ಕುಸಿದಿರುವ ಸಂದರ್ಭದಲ್ಲಿ ಈ ವರ್ಷ ದುರ್ಗಾ ಪೂಜೆಯು ವಿಭಿನ್ನ ರೀತಿಯ ಅನುಭವಕ್ಕೆ ಸಾಕ್ಷಿಯಾಗಲಿದೆ.

ಕೋಲ್ಕತಾ ಹೊಸ ನಿಯಮಗಳ ಮಧ್ಯೆ ಉತ್ಸವಕ್ಕೆ ಸಜ್ಜಾಗುತ್ತಿದ್ದಂತೆ, ಅಲ್ಲಿನ ಹಳೆಯ ಮುಸ್ಲಿಂ ಪ್ರಾಬಲ್ಯದ ಪ್ರದೇಶಗಳಲ್ಲಿ ಒಂದಾದ ಕಿದಿರ್‌ಪುರ್ ತನ್ನ ದೀರ್ಘಕಾಲದ ಸಂಪ್ರದಾಯವಾದ ಧಾರ್ಮಿಕ ಸಾಮರಸ್ಯವನ್ನು ಆಚರಿಸಲು ಸಜ್ಜಾಗಿದೆ.

ಕಿದಿರ್‌ಪುರದ ಚೆಟ್ಲಾ ಅಗ್ರಾನಿ ಕ್ಲಬ್, ಕಿದಿರ್‌ಪುರ್ 5 ಸ್ಟಾರ್ ಕ್ಲಬ್ ಮತ್ತು ಮುನ್‌ಶೋಟೊಲಾ ದುರ್ಗೋತ್ಸವ್ ಕ್ಲಬ್ ಸ್ಥಾಪಿಸಿರುವ ಪೆಂಡಾಲ್‌ಗಳು ಈ ಪ್ರದೇಶದ ಮಸೀದಿಗೆ ಅತಿ ಸಮೀಪದಲ್ಲಿಯೇ ಇವೆ. ಎಲ್ಲಾ ಧರ್ಮದ ಜನರು ಇಲ್ಲಿ ದುರ್ಗಾ ಮಾತೆಯ ಹಬ್ಬದ ಆಚರಣೆಯಲ್ಲಿ ತೊಡಗಿದ್ದರು.

ಈ ಪ್ರದೇಶದಲ್ಲಿ ಸ್ಥಾಪಿಸಲಾಗುವ ಪೆಂಡಾಲ್‌ಗಳಲ್ಲಿ ಹೆಚ್ಚಿನವರು ಮುಸ್ಲಿಂ ಸಮುದಾಯದವರು. ಇವರೇ ಪೆಂಡಾಲ್‌ಗಳಿಗೆ ಹಣಕಾಸು ನೀಡುವವರಾಗಿದ್ದಾರೆ. ಇಲ್ಲಿ ಸುಮಾರು 80 ವರ್ಷಗಳ ಹಿಂದಿನಿಂದಲೂ ಪೆಂಡಾಲ್‌ಗಳನ್ನು ಸ್ಥಾಪಿಸಲಾಗುತ್ತಿದೆ.

ಚೆಟ್ಲಾ ಅಗ್ರಾನಿ ಕ್ಲಬ್‌ನ ಪ್ರಧಾನ ಕಾರ್ಯದರ್ಶಿ ಸವ್ಯಸಾಚಿ ರಾಯ್‌ಚೌಧರಿ ಅವರು ನಗರದ ಇಲ್ಲಿನ ಪ್ರಸಿದ್ಧ ಪೆಂಡಾಲ್ ‌ಇತಿಹಾಸವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ಪಶ್ಚಿಮ ಬಂಗಾಳದಲ್ಲಿ ಮುಸ್ಲಿಮರು ಕಾಳಿ ದೇವಿಯ ಮೂರ್ತಿ ಸುಟ್ಟರೆ?

“ನಾವು ಇಲ್ಲಿಯವರೆಗೆ ಬರಲು ಮುಖ್ಯ ಕಾರಣ, ಬಾಬಿ (ಟಿಎಂಸಿ ನಾಯಕ) ಎಂದೂ ಕರೆಯಲ್ಪಡುವ ಫಿರಾಜ್ ಹಕೀಮ್. ನಮ್ಮಲ್ಲಿ ಮೊದಲಿಗೆ ನಾಲ್ಕು-ಐದು ಜನರು ಈ ಪೂಜೆ ಪ್ರಾರಂಭಿಸಿದರು. ನಮ್ಮ ನಡುವೆ ಯಾವತ್ತೂ ವ್ಯತ್ಯಾಸಗಳಿರಲಿಲ್ಲ. ಮುಸ್ಲಿಂ ಯಾರು, ಹಿಂದೂ ಯಾರು ಎಂಬ ಬಗ್ಗೆ ನಾವು ಎಂದಿಗೂ ಕಾಳಜಿ ವಹಿಸಲಿಲ್ಲ. ಅವರು ನಮ್ಮ ಆಚರಣೆಯ ಭಾಗವಾಗಿದ್ದಾರೆ, ನಾವು ಅವರ ಆಚರಣೆಯ ದೊಡ್ಡ ಭಾಗವಾಗಿದ್ದೇವೆ” ಎನ್ನುತ್ತಾರೆ.

Munshotola Durgotsav Club’s pandal.
PC: Malini Chakrabarty

‘ಉತ್ಸವ’ ಅಥವಾ ಆಚರಣೆಯ ಕಲ್ಪನೆ ಕೇವಲ ಒಂದು ಸಮುದಾಯಕ್ಕೆ ಸೇರಿಲ್ಲ. ಅದು ದುರ್ಗಾ ಪೂಜೆಯಾಗಲಿ, ಈದ್ ಆಗಿರಲಿ, ಜನರು ಒಟ್ಟಾಗಿ ‘ಉತ್ಸವ’ ಆಚರಿಸಲು ಮಾನವೀಯತೆಯ ಉತ್ಸಾಹದಲ್ಲಿ ಸೇರುತ್ತಾರೆ. ಕೋಮು ಸೌಹಾರ್ದತೆ ಎಷ್ಟು ಮಹತ್ವದ್ದಾಗಿದೆ ಎಂಬುದರ ಸಂಕೇತ ಇದು. ಜಾತಿ ಮತಗಳೆಂದು ದೊಂಬಿ-ಗಲಾಟೆಗಳು ನಡೆಯುತ್ತಿರುವ ಈ ಸಮಯದಲ್ಲಿ ಕೊಲ್ಕಾತ್ತಾ  ಎನು ಮಾಡುತ್ತಿದೆಯೋ ಅದು ಮತ್ತಷ್ಟು ರಾಜ್ಯಗಳಿಗೆ ಮಾದರಿಯಾಗಲಿ ಎಂದು ನಾನು ಆಶಿಸುತ್ತೇನೆ ಎಂದು ಚೆಟ್ಲಾ ಅಗ್ರಾನಿ ಕ್ಲಬ್‌ನ ಪ್ರಧಾನ ಕಾರ್ಯದರ್ಶಿ ಸವ್ಯಸಾಚಿ ರಾಯ್‌ಚೌಧರಿ ಹೇಳುತ್ತಾರೆ.

“ಈ ಪೂಜೆ ಸಮಿತಿಯಲ್ಲಿ ಹೆಚ್ಚಿನ ಜನ ಇರುವುದು ನನ್ನ ಮುಸ್ಲಿಂ ಸಹೋದರರು. ಜೊತೆಗೆ ಕೆಲವು ಹಿಂದೂ ಸಹೋದರರು ಕೂಡ ಇದ್ದಾರೆ. ಈದ್, ದುರ್ಗಾ ಪೂಜೆ ಎರಡನ್ನು ಒಟ್ಟಿಗೆ ಸೇರಿ ಆಚರಿಸಲು ಇಷ್ಟಪಡುತ್ತೇವೆ” ಎಂದು ಕಿದಿರ್‌ಪುರ್ 5 ಸ್ಟಾರ್ ಕ್ಲಬ್ ಎಂಡಿ ನಜೀಮ್ ಹೇಳುತ್ತಾರೆ.

ಒಟ್ಟಾರೆ, ದುರ್ಗಾ ಪೂಜೆ ಇಲ್ಲಿನ ಜನರಲ್ಲಿ ಸಾಂಪ್ರದಾಯಿಕವಾಗಿ ಧಾರ್ಮಿಕ ಸಾಮರಸ್ಯವನ್ನು ಆಚರಿಸಲು ನಡೆಸುವ ಹಬ್ಬವಾಗಿ ಮಾರ್ಪಟ್ಟಿದೆ. ಯಾವುದೇ ಕೋಮುಸಂಘರ್ಷಣೆಗಳು ಇಲ್ಲದೆ ಒಟ್ಟಾಗಿ ಹಬ್ಬ ಆಚರಿಸುವುದು ನಮಗೆ ನೆಮ್ಮದಿ ನೀಡಿದೆ. ನಮ್ಮಲ್ಲಿ ಯಾವುದೇ ಬೇಧಭಾವವಿಲ್ಲ ಎಂದು ಇಲ್ಲಿನ ಜನ ಹೇಳುತ್ತಾರೆ.


ಇದನ್ನೂ ಓದಿ: ವಲಸೆ ಕಾರ್ಮಿಕ ಮಹಿಳೆಗೆ ಹೋಲುವ ದುರ್ಗಾ ಮಾತೆ ಪ್ರತಿಮೆ: ಕಲಾವಿದನ ಕೈಚಳಕ ವೈರಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...