Homeಮುಖಪುಟದುರ್ಗಾ ಪೂಜೆ: ಹಿಂದೂ ಮುಸ್ಲಿಂ ಧಾರ್ಮಿಕ ಸಾಮರಸ್ಯ ಮೆರೆಯುವ ಕಿದಿರ್‌ಪುರ್‌‌ ನಗರ!

ದುರ್ಗಾ ಪೂಜೆ: ಹಿಂದೂ ಮುಸ್ಲಿಂ ಧಾರ್ಮಿಕ ಸಾಮರಸ್ಯ ಮೆರೆಯುವ ಕಿದಿರ್‌ಪುರ್‌‌ ನಗರ!

ಉತ್ಸವ ಅಥವಾ ಆಚರಣೆಯ ಕಲ್ಪನೆ ಕೇವಲ ಒಂದು ಸಮುದಾಯಕ್ಕೆ ಸೇರಿಲ್ಲ. ಅದು ದುರ್ಗಾ ಪೂಜೆಯಾಗಲಿ, ಈದ್ ಆಗಿರಲಿ, ಜನರು ಒಟ್ಟಾಗಿ ಉತ್ಸವ ಆಚರಿಸಲು ಮಾನವೀಯತೆಯ ಉತ್ಸಾಹದಲ್ಲಿ ಸೇರುತ್ತಾರೆ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿನ ದುರ್ಗಾ ಪೂಜೆ ವೈಭವಕ್ಕೆ ಈ ಬಾರಿ ಕೊರೊನಾ ಸಾಂಕ್ರಾಮಿಕ ತಡೆ ಒಡ್ಡಿದೆ. ಹೆಚ್ಚುತ್ತಿರುವ ಕೊರೊನಾ ಸೋಂಕು ಪ್ರಕರಣಗಳ ಮಧ್ಯೆ, ಆರ್ಥಿಕತೆ ಕುಸಿದಿರುವ ಸಂದರ್ಭದಲ್ಲಿ ಈ ವರ್ಷ ದುರ್ಗಾ ಪೂಜೆಯು ವಿಭಿನ್ನ ರೀತಿಯ ಅನುಭವಕ್ಕೆ ಸಾಕ್ಷಿಯಾಗಲಿದೆ.

ಕೋಲ್ಕತಾ ಹೊಸ ನಿಯಮಗಳ ಮಧ್ಯೆ ಉತ್ಸವಕ್ಕೆ ಸಜ್ಜಾಗುತ್ತಿದ್ದಂತೆ, ಅಲ್ಲಿನ ಹಳೆಯ ಮುಸ್ಲಿಂ ಪ್ರಾಬಲ್ಯದ ಪ್ರದೇಶಗಳಲ್ಲಿ ಒಂದಾದ ಕಿದಿರ್‌ಪುರ್ ತನ್ನ ದೀರ್ಘಕಾಲದ ಸಂಪ್ರದಾಯವಾದ ಧಾರ್ಮಿಕ ಸಾಮರಸ್ಯವನ್ನು ಆಚರಿಸಲು ಸಜ್ಜಾಗಿದೆ.

ಕಿದಿರ್‌ಪುರದ ಚೆಟ್ಲಾ ಅಗ್ರಾನಿ ಕ್ಲಬ್, ಕಿದಿರ್‌ಪುರ್ 5 ಸ್ಟಾರ್ ಕ್ಲಬ್ ಮತ್ತು ಮುನ್‌ಶೋಟೊಲಾ ದುರ್ಗೋತ್ಸವ್ ಕ್ಲಬ್ ಸ್ಥಾಪಿಸಿರುವ ಪೆಂಡಾಲ್‌ಗಳು ಈ ಪ್ರದೇಶದ ಮಸೀದಿಗೆ ಅತಿ ಸಮೀಪದಲ್ಲಿಯೇ ಇವೆ. ಎಲ್ಲಾ ಧರ್ಮದ ಜನರು ಇಲ್ಲಿ ದುರ್ಗಾ ಮಾತೆಯ ಹಬ್ಬದ ಆಚರಣೆಯಲ್ಲಿ ತೊಡಗಿದ್ದರು.

ಈ ಪ್ರದೇಶದಲ್ಲಿ ಸ್ಥಾಪಿಸಲಾಗುವ ಪೆಂಡಾಲ್‌ಗಳಲ್ಲಿ ಹೆಚ್ಚಿನವರು ಮುಸ್ಲಿಂ ಸಮುದಾಯದವರು. ಇವರೇ ಪೆಂಡಾಲ್‌ಗಳಿಗೆ ಹಣಕಾಸು ನೀಡುವವರಾಗಿದ್ದಾರೆ. ಇಲ್ಲಿ ಸುಮಾರು 80 ವರ್ಷಗಳ ಹಿಂದಿನಿಂದಲೂ ಪೆಂಡಾಲ್‌ಗಳನ್ನು ಸ್ಥಾಪಿಸಲಾಗುತ್ತಿದೆ.

ಚೆಟ್ಲಾ ಅಗ್ರಾನಿ ಕ್ಲಬ್‌ನ ಪ್ರಧಾನ ಕಾರ್ಯದರ್ಶಿ ಸವ್ಯಸಾಚಿ ರಾಯ್‌ಚೌಧರಿ ಅವರು ನಗರದ ಇಲ್ಲಿನ ಪ್ರಸಿದ್ಧ ಪೆಂಡಾಲ್ ‌ಇತಿಹಾಸವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ಪಶ್ಚಿಮ ಬಂಗಾಳದಲ್ಲಿ ಮುಸ್ಲಿಮರು ಕಾಳಿ ದೇವಿಯ ಮೂರ್ತಿ ಸುಟ್ಟರೆ?

“ನಾವು ಇಲ್ಲಿಯವರೆಗೆ ಬರಲು ಮುಖ್ಯ ಕಾರಣ, ಬಾಬಿ (ಟಿಎಂಸಿ ನಾಯಕ) ಎಂದೂ ಕರೆಯಲ್ಪಡುವ ಫಿರಾಜ್ ಹಕೀಮ್. ನಮ್ಮಲ್ಲಿ ಮೊದಲಿಗೆ ನಾಲ್ಕು-ಐದು ಜನರು ಈ ಪೂಜೆ ಪ್ರಾರಂಭಿಸಿದರು. ನಮ್ಮ ನಡುವೆ ಯಾವತ್ತೂ ವ್ಯತ್ಯಾಸಗಳಿರಲಿಲ್ಲ. ಮುಸ್ಲಿಂ ಯಾರು, ಹಿಂದೂ ಯಾರು ಎಂಬ ಬಗ್ಗೆ ನಾವು ಎಂದಿಗೂ ಕಾಳಜಿ ವಹಿಸಲಿಲ್ಲ. ಅವರು ನಮ್ಮ ಆಚರಣೆಯ ಭಾಗವಾಗಿದ್ದಾರೆ, ನಾವು ಅವರ ಆಚರಣೆಯ ದೊಡ್ಡ ಭಾಗವಾಗಿದ್ದೇವೆ” ಎನ್ನುತ್ತಾರೆ.

Munshotola Durgotsav Club’s pandal.
PC: Malini Chakrabarty

‘ಉತ್ಸವ’ ಅಥವಾ ಆಚರಣೆಯ ಕಲ್ಪನೆ ಕೇವಲ ಒಂದು ಸಮುದಾಯಕ್ಕೆ ಸೇರಿಲ್ಲ. ಅದು ದುರ್ಗಾ ಪೂಜೆಯಾಗಲಿ, ಈದ್ ಆಗಿರಲಿ, ಜನರು ಒಟ್ಟಾಗಿ ‘ಉತ್ಸವ’ ಆಚರಿಸಲು ಮಾನವೀಯತೆಯ ಉತ್ಸಾಹದಲ್ಲಿ ಸೇರುತ್ತಾರೆ. ಕೋಮು ಸೌಹಾರ್ದತೆ ಎಷ್ಟು ಮಹತ್ವದ್ದಾಗಿದೆ ಎಂಬುದರ ಸಂಕೇತ ಇದು. ಜಾತಿ ಮತಗಳೆಂದು ದೊಂಬಿ-ಗಲಾಟೆಗಳು ನಡೆಯುತ್ತಿರುವ ಈ ಸಮಯದಲ್ಲಿ ಕೊಲ್ಕಾತ್ತಾ  ಎನು ಮಾಡುತ್ತಿದೆಯೋ ಅದು ಮತ್ತಷ್ಟು ರಾಜ್ಯಗಳಿಗೆ ಮಾದರಿಯಾಗಲಿ ಎಂದು ನಾನು ಆಶಿಸುತ್ತೇನೆ ಎಂದು ಚೆಟ್ಲಾ ಅಗ್ರಾನಿ ಕ್ಲಬ್‌ನ ಪ್ರಧಾನ ಕಾರ್ಯದರ್ಶಿ ಸವ್ಯಸಾಚಿ ರಾಯ್‌ಚೌಧರಿ ಹೇಳುತ್ತಾರೆ.

“ಈ ಪೂಜೆ ಸಮಿತಿಯಲ್ಲಿ ಹೆಚ್ಚಿನ ಜನ ಇರುವುದು ನನ್ನ ಮುಸ್ಲಿಂ ಸಹೋದರರು. ಜೊತೆಗೆ ಕೆಲವು ಹಿಂದೂ ಸಹೋದರರು ಕೂಡ ಇದ್ದಾರೆ. ಈದ್, ದುರ್ಗಾ ಪೂಜೆ ಎರಡನ್ನು ಒಟ್ಟಿಗೆ ಸೇರಿ ಆಚರಿಸಲು ಇಷ್ಟಪಡುತ್ತೇವೆ” ಎಂದು ಕಿದಿರ್‌ಪುರ್ 5 ಸ್ಟಾರ್ ಕ್ಲಬ್ ಎಂಡಿ ನಜೀಮ್ ಹೇಳುತ್ತಾರೆ.

ಒಟ್ಟಾರೆ, ದುರ್ಗಾ ಪೂಜೆ ಇಲ್ಲಿನ ಜನರಲ್ಲಿ ಸಾಂಪ್ರದಾಯಿಕವಾಗಿ ಧಾರ್ಮಿಕ ಸಾಮರಸ್ಯವನ್ನು ಆಚರಿಸಲು ನಡೆಸುವ ಹಬ್ಬವಾಗಿ ಮಾರ್ಪಟ್ಟಿದೆ. ಯಾವುದೇ ಕೋಮುಸಂಘರ್ಷಣೆಗಳು ಇಲ್ಲದೆ ಒಟ್ಟಾಗಿ ಹಬ್ಬ ಆಚರಿಸುವುದು ನಮಗೆ ನೆಮ್ಮದಿ ನೀಡಿದೆ. ನಮ್ಮಲ್ಲಿ ಯಾವುದೇ ಬೇಧಭಾವವಿಲ್ಲ ಎಂದು ಇಲ್ಲಿನ ಜನ ಹೇಳುತ್ತಾರೆ.


ಇದನ್ನೂ ಓದಿ: ವಲಸೆ ಕಾರ್ಮಿಕ ಮಹಿಳೆಗೆ ಹೋಲುವ ದುರ್ಗಾ ಮಾತೆ ಪ್ರತಿಮೆ: ಕಲಾವಿದನ ಕೈಚಳಕ ವೈರಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ: ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಡಿ.ಕೆ.ಶಿವಕುಮಾರ್

ರಾಜ್ಯದ ಜಲಾಶಯಗಳಲ್ಲಿ ನೀರಿನ ಲಭ್ಯತೆ ಕಡಿಮೆಯಿರುವಾಗ ನಮ್ಮ ರೈತರನ್ನು ಬದುಕಿಸುವ ಸವಾಲಿನ ಜೊತೆಗೆ ಕಾನೂನನ್ನೂ ಕಾಪಾಡಬೇಕಾದ ಹೊಣೆಗಾರಿಕೆ ಇದೆ. ಕಾವೇರಿ ವಿಚಾರದಲ್ಲಿ ನಮ್ಮ ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಎಂದು...

‘ಅಸ್ತಿತ್ವದ ಸಮಸ್ಯೆಯಲ್ಲ, ಹೊಣೆಗಾರಿಕೆಯೇ ಮುಖ್ಯ’: ಆರ್‌ಎಸ್‌ಎಸ್ ನೋಂದಣಿ ಕುರಿತು ಬಿ.ಎಲ್. ಸಂತೋಷ್ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ನೋಂದಣಿ ಹಾಗೂ ಅದರ ಕಾನೂನಾತ್ಮಕ ಅಸ್ತಿತ್ವಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್ ಹಾಗೂ ಕರ್ನಾಟಕದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್...

ನಾನು ‘ದಿಮಾಗಿ ನಕ್ಸಲ್’ ಆಗಿದ್ದರೆ ಅದಕ್ಕೆ ಹೆಮ್ಮೆ ಇದೆ: ಮೋದಿ-ರಿಜಿಜು ವಿರುದ್ಧ ಚಿದಂಬರಂ ತಿರುಗೇಟು

ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಳಸಿದ್ದ ‘ದಿಮಾಗಿ ನಕ್ಸಲರು’ (ವೈಚಾರಿಕ ನಕ್ಸಲರು) ಎಂಬ ಪದ ಬಳಕೆ ದೇಶದ ರಾಜಕೀಯ ವಲಯದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಪ್ರಧಾನಿಯವರ ಈ...

CAA ವಿರೋಧಿ ಪ್ರತಿಭಟನೆಗೆ ಕಾರಣವಾಗಿದ್ದ ಪ್ರಶ್ನೆಗಳು ಮತ್ತೆ ಜನಗಣತಿಯಲ್ಲಿ-ವರದಿ

ಶೀಘ್ರದಲ್ಲೇ ಪ್ರಾರಂಭವಾಗಲಿರುವ ಜನಗಣತಿಯ ಜನಸಂಖ್ಯಾ ಎಣಿಕೆ ಹಂತವು, 2011ರ ಜನಗಣತಿಗೆ ಹೋಲಿಸಿದರೆ 14 ಹೊಸ ಅಥವಾ ಮಾರ್ಪಡಿಸಿದ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಈ ಪೈಕಿ ಹಲವು ಪ್ರಶ್ನೆಗಳು 2020ರಲ್ಲಿ ಅಧಿಸೂಚನೆ ಹೊರಡಿಸಲಾಗಿದ್ದ ರಾಷ್ಟ್ರೀಯ ಜನಸಂಖ್ಯಾ ನೋಂದಣಿ...

ಹಿಂಗೋಲಿ ಶಾಲೆಯಲ್ಲಿ ಪ್ರಾಂಶುಪಾಲರ ಮದ್ಯಪಾನ, ಶಿಕ್ಷಕರ ಅಭಾವ: ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ಅಭಿಜೀತ್ ದೀಪ್ಕೆ

ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ಲಿಂಬಾಲಾ ಗ್ರಾಮದ ಸರ್ಕಾರಿ ಶಾಲೆಯೊಂದರಲ್ಲಿ ಶೈಕ್ಷಣಿಕ ವಾತಾವರಣ ಸಂಪೂರ್ಣವಾಗಿ ಕುಸಿದಿದ್ದು, ಶಾಲಾ ಪ್ರಾಂಶುಪಾಲರ ಹೊಣೆಗೇಡಿತನ ಮತ್ತು ಆಡಳಿತ ಮಂಡಳಿಯ ನಿರ್ಲಕ್ಷ್ಯದ ವಿರುದ್ಧ ಗ್ರಾಮಸ್ಥರ ಆಕ್ರೋಶ ಮುಗಿಲುಮುಟ್ಟಿದೆ. ಶಾಲೆಯ ಪ್ರಾಂಶುಪಾಲರು...

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ? CAG ವರದಿ

ದೇಶಾದ್ಯಂತ ನೆರೆ, ಬರ, ಭೂಕುಸಿತದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ ಭಾರಿ ಪ್ರಮಾಣದ ಕಡಿತವಾಗುತ್ತಿರುವುದು ಈಗ ನಿರೂಪಿತವಾಗಿದೆ. ರಾಷ್ಟ್ರೀಯ ವಿಪತ್ತು ಸ್ಪಂದನಾ ನಿಧಿ...

EFLU ವಿದ್ಯಾರ್ಥಿ ಸಂಘದ ಮುಖಂಡರು, NSUI ಸದಸ್ಯರ ಮೇಲೆ ರಾಡ್ ಮತ್ತು ಬಿಯರ್ ಬಾಟಲಿಗಳಿಂದ ಹಲ್ಲೆ; ABVP ಸದಸ್ಯರ ವಿರುದ್ಧ ಪ್ರಕರಣ ದಾಖಲು

ಹೈದರಾಬಾದ್‌ನ ಪ್ರತಿಷ್ಠಿತ ಇಂಗ್ಲಿಷ್ ಮತ್ತು ವಿದೇಶಿ ಭಾಷಾ ವಿಶ್ವವಿದ್ಯಾಲಯ (ಇಎಫ್‌ಎಲ್‌ಯು - EFLU) ಕ್ಯಾಂಪಸ್‌ನಲ್ಲಿ ಭೀಕರ ಹಿಂಸಾಚಾರ ಸಂಭವಿಸಿದ್ದು, ವಿದ್ಯಾರ್ಥಿ ಸಂಘದ ಮುಖಂಡರು ಹಾಗೂ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (NSUI) ಸದಸ್ಯರ ಮೇಲೆ...

NALSAR ವಿವಾದ : ಕಾನೂನು ವಿದ್ಯಾರ್ಥಿಗಳಲ್ಲಿ ಕ್ಷಮೆಯಾಚಿಸಿದ ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ

ನಲ್ಸಾರ್ (NALSAR) ಕಾನೂನು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ವಿರುದ್ಧ ಹೊರಡಿಸಿದ್ದ ನಿರ್ದೇಶನಗಳ ಕುರಿತು ತೀವ್ರ ಟೀಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ, ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಥ) ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಕ್ಷಮೆಯಾಚಿಸಿದ್ದಾರೆ. ಹೈದರಾಬಾದ್‌ನ ನಲ್ಸಾರ್...

ವಿಮಲ್ ‘ಏಲೈಚಿ’ ಜಾಹೀರಾತು ವಿವಾದ: ಶಾರುಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್‌ಗೆ ಮಹಾರಾಷ್ಟ್ರ ಎಫ್‌ಡಿಎ ಶೋಕಾಸ್ ನೋಟಿಸ್

ಬಾಲಿವುಡ್‌ನ ಖ್ಯಾತ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರುಗಳು ಇದೀಗ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. 'ವಿಮಲ್ ಏಲೈಚಿ' ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಮಹಾರಾಷ್ಟ್ರದ ಆಹಾರ ಮತ್ತು ಔಷಧ ಆಡಳಿತ...

ಹನೂರು ಶೂಟೌಟ್ ಪ್ರಕರಣ: ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಎಫ್‌ಐಆರ್‌ ದಾಖಲು

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಶಾಗ್ಯ ಗ್ರಾಮ ಪಂಚಾಯತ್ ವಾಪ್ತಿಯ ಅರಣ್ಯ ಪ್ರದೇಶದಲ್ಲಿ ಮೂವರು ಗುಂಡೇಟಿಗೆ ಬಲಿಯಾದ ಪ್ರಕರಣ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಎಫ್​​​​ಐಆರ್ ದಾಖಲಾಗಿದೆ. ಅರಣ್ಯ ಸಿಬ್ಬಂದಿಯ ಗುಂಡೇಟಿಗೆ ಹನೂರು...