Homeಮುಖಪುಟದುರ್ಗಾ ಪೂಜೆ: ಹಿಂದೂ ಮುಸ್ಲಿಂ ಧಾರ್ಮಿಕ ಸಾಮರಸ್ಯ ಮೆರೆಯುವ ಕಿದಿರ್‌ಪುರ್‌‌ ನಗರ!

ದುರ್ಗಾ ಪೂಜೆ: ಹಿಂದೂ ಮುಸ್ಲಿಂ ಧಾರ್ಮಿಕ ಸಾಮರಸ್ಯ ಮೆರೆಯುವ ಕಿದಿರ್‌ಪುರ್‌‌ ನಗರ!

ಉತ್ಸವ ಅಥವಾ ಆಚರಣೆಯ ಕಲ್ಪನೆ ಕೇವಲ ಒಂದು ಸಮುದಾಯಕ್ಕೆ ಸೇರಿಲ್ಲ. ಅದು ದುರ್ಗಾ ಪೂಜೆಯಾಗಲಿ, ಈದ್ ಆಗಿರಲಿ, ಜನರು ಒಟ್ಟಾಗಿ ಉತ್ಸವ ಆಚರಿಸಲು ಮಾನವೀಯತೆಯ ಉತ್ಸಾಹದಲ್ಲಿ ಸೇರುತ್ತಾರೆ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿನ ದುರ್ಗಾ ಪೂಜೆ ವೈಭವಕ್ಕೆ ಈ ಬಾರಿ ಕೊರೊನಾ ಸಾಂಕ್ರಾಮಿಕ ತಡೆ ಒಡ್ಡಿದೆ. ಹೆಚ್ಚುತ್ತಿರುವ ಕೊರೊನಾ ಸೋಂಕು ಪ್ರಕರಣಗಳ ಮಧ್ಯೆ, ಆರ್ಥಿಕತೆ ಕುಸಿದಿರುವ ಸಂದರ್ಭದಲ್ಲಿ ಈ ವರ್ಷ ದುರ್ಗಾ ಪೂಜೆಯು ವಿಭಿನ್ನ ರೀತಿಯ ಅನುಭವಕ್ಕೆ ಸಾಕ್ಷಿಯಾಗಲಿದೆ.

ಕೋಲ್ಕತಾ ಹೊಸ ನಿಯಮಗಳ ಮಧ್ಯೆ ಉತ್ಸವಕ್ಕೆ ಸಜ್ಜಾಗುತ್ತಿದ್ದಂತೆ, ಅಲ್ಲಿನ ಹಳೆಯ ಮುಸ್ಲಿಂ ಪ್ರಾಬಲ್ಯದ ಪ್ರದೇಶಗಳಲ್ಲಿ ಒಂದಾದ ಕಿದಿರ್‌ಪುರ್ ತನ್ನ ದೀರ್ಘಕಾಲದ ಸಂಪ್ರದಾಯವಾದ ಧಾರ್ಮಿಕ ಸಾಮರಸ್ಯವನ್ನು ಆಚರಿಸಲು ಸಜ್ಜಾಗಿದೆ.

ಕಿದಿರ್‌ಪುರದ ಚೆಟ್ಲಾ ಅಗ್ರಾನಿ ಕ್ಲಬ್, ಕಿದಿರ್‌ಪುರ್ 5 ಸ್ಟಾರ್ ಕ್ಲಬ್ ಮತ್ತು ಮುನ್‌ಶೋಟೊಲಾ ದುರ್ಗೋತ್ಸವ್ ಕ್ಲಬ್ ಸ್ಥಾಪಿಸಿರುವ ಪೆಂಡಾಲ್‌ಗಳು ಈ ಪ್ರದೇಶದ ಮಸೀದಿಗೆ ಅತಿ ಸಮೀಪದಲ್ಲಿಯೇ ಇವೆ. ಎಲ್ಲಾ ಧರ್ಮದ ಜನರು ಇಲ್ಲಿ ದುರ್ಗಾ ಮಾತೆಯ ಹಬ್ಬದ ಆಚರಣೆಯಲ್ಲಿ ತೊಡಗಿದ್ದರು.

ಈ ಪ್ರದೇಶದಲ್ಲಿ ಸ್ಥಾಪಿಸಲಾಗುವ ಪೆಂಡಾಲ್‌ಗಳಲ್ಲಿ ಹೆಚ್ಚಿನವರು ಮುಸ್ಲಿಂ ಸಮುದಾಯದವರು. ಇವರೇ ಪೆಂಡಾಲ್‌ಗಳಿಗೆ ಹಣಕಾಸು ನೀಡುವವರಾಗಿದ್ದಾರೆ. ಇಲ್ಲಿ ಸುಮಾರು 80 ವರ್ಷಗಳ ಹಿಂದಿನಿಂದಲೂ ಪೆಂಡಾಲ್‌ಗಳನ್ನು ಸ್ಥಾಪಿಸಲಾಗುತ್ತಿದೆ.

ಚೆಟ್ಲಾ ಅಗ್ರಾನಿ ಕ್ಲಬ್‌ನ ಪ್ರಧಾನ ಕಾರ್ಯದರ್ಶಿ ಸವ್ಯಸಾಚಿ ರಾಯ್‌ಚೌಧರಿ ಅವರು ನಗರದ ಇಲ್ಲಿನ ಪ್ರಸಿದ್ಧ ಪೆಂಡಾಲ್ ‌ಇತಿಹಾಸವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ಪಶ್ಚಿಮ ಬಂಗಾಳದಲ್ಲಿ ಮುಸ್ಲಿಮರು ಕಾಳಿ ದೇವಿಯ ಮೂರ್ತಿ ಸುಟ್ಟರೆ?

“ನಾವು ಇಲ್ಲಿಯವರೆಗೆ ಬರಲು ಮುಖ್ಯ ಕಾರಣ, ಬಾಬಿ (ಟಿಎಂಸಿ ನಾಯಕ) ಎಂದೂ ಕರೆಯಲ್ಪಡುವ ಫಿರಾಜ್ ಹಕೀಮ್. ನಮ್ಮಲ್ಲಿ ಮೊದಲಿಗೆ ನಾಲ್ಕು-ಐದು ಜನರು ಈ ಪೂಜೆ ಪ್ರಾರಂಭಿಸಿದರು. ನಮ್ಮ ನಡುವೆ ಯಾವತ್ತೂ ವ್ಯತ್ಯಾಸಗಳಿರಲಿಲ್ಲ. ಮುಸ್ಲಿಂ ಯಾರು, ಹಿಂದೂ ಯಾರು ಎಂಬ ಬಗ್ಗೆ ನಾವು ಎಂದಿಗೂ ಕಾಳಜಿ ವಹಿಸಲಿಲ್ಲ. ಅವರು ನಮ್ಮ ಆಚರಣೆಯ ಭಾಗವಾಗಿದ್ದಾರೆ, ನಾವು ಅವರ ಆಚರಣೆಯ ದೊಡ್ಡ ಭಾಗವಾಗಿದ್ದೇವೆ” ಎನ್ನುತ್ತಾರೆ.

Munshotola Durgotsav Club’s pandal.
PC: Malini Chakrabarty

‘ಉತ್ಸವ’ ಅಥವಾ ಆಚರಣೆಯ ಕಲ್ಪನೆ ಕೇವಲ ಒಂದು ಸಮುದಾಯಕ್ಕೆ ಸೇರಿಲ್ಲ. ಅದು ದುರ್ಗಾ ಪೂಜೆಯಾಗಲಿ, ಈದ್ ಆಗಿರಲಿ, ಜನರು ಒಟ್ಟಾಗಿ ‘ಉತ್ಸವ’ ಆಚರಿಸಲು ಮಾನವೀಯತೆಯ ಉತ್ಸಾಹದಲ್ಲಿ ಸೇರುತ್ತಾರೆ. ಕೋಮು ಸೌಹಾರ್ದತೆ ಎಷ್ಟು ಮಹತ್ವದ್ದಾಗಿದೆ ಎಂಬುದರ ಸಂಕೇತ ಇದು. ಜಾತಿ ಮತಗಳೆಂದು ದೊಂಬಿ-ಗಲಾಟೆಗಳು ನಡೆಯುತ್ತಿರುವ ಈ ಸಮಯದಲ್ಲಿ ಕೊಲ್ಕಾತ್ತಾ  ಎನು ಮಾಡುತ್ತಿದೆಯೋ ಅದು ಮತ್ತಷ್ಟು ರಾಜ್ಯಗಳಿಗೆ ಮಾದರಿಯಾಗಲಿ ಎಂದು ನಾನು ಆಶಿಸುತ್ತೇನೆ ಎಂದು ಚೆಟ್ಲಾ ಅಗ್ರಾನಿ ಕ್ಲಬ್‌ನ ಪ್ರಧಾನ ಕಾರ್ಯದರ್ಶಿ ಸವ್ಯಸಾಚಿ ರಾಯ್‌ಚೌಧರಿ ಹೇಳುತ್ತಾರೆ.

“ಈ ಪೂಜೆ ಸಮಿತಿಯಲ್ಲಿ ಹೆಚ್ಚಿನ ಜನ ಇರುವುದು ನನ್ನ ಮುಸ್ಲಿಂ ಸಹೋದರರು. ಜೊತೆಗೆ ಕೆಲವು ಹಿಂದೂ ಸಹೋದರರು ಕೂಡ ಇದ್ದಾರೆ. ಈದ್, ದುರ್ಗಾ ಪೂಜೆ ಎರಡನ್ನು ಒಟ್ಟಿಗೆ ಸೇರಿ ಆಚರಿಸಲು ಇಷ್ಟಪಡುತ್ತೇವೆ” ಎಂದು ಕಿದಿರ್‌ಪುರ್ 5 ಸ್ಟಾರ್ ಕ್ಲಬ್ ಎಂಡಿ ನಜೀಮ್ ಹೇಳುತ್ತಾರೆ.

ಒಟ್ಟಾರೆ, ದುರ್ಗಾ ಪೂಜೆ ಇಲ್ಲಿನ ಜನರಲ್ಲಿ ಸಾಂಪ್ರದಾಯಿಕವಾಗಿ ಧಾರ್ಮಿಕ ಸಾಮರಸ್ಯವನ್ನು ಆಚರಿಸಲು ನಡೆಸುವ ಹಬ್ಬವಾಗಿ ಮಾರ್ಪಟ್ಟಿದೆ. ಯಾವುದೇ ಕೋಮುಸಂಘರ್ಷಣೆಗಳು ಇಲ್ಲದೆ ಒಟ್ಟಾಗಿ ಹಬ್ಬ ಆಚರಿಸುವುದು ನಮಗೆ ನೆಮ್ಮದಿ ನೀಡಿದೆ. ನಮ್ಮಲ್ಲಿ ಯಾವುದೇ ಬೇಧಭಾವವಿಲ್ಲ ಎಂದು ಇಲ್ಲಿನ ಜನ ಹೇಳುತ್ತಾರೆ.


ಇದನ್ನೂ ಓದಿ: ವಲಸೆ ಕಾರ್ಮಿಕ ಮಹಿಳೆಗೆ ಹೋಲುವ ದುರ್ಗಾ ಮಾತೆ ಪ್ರತಿಮೆ: ಕಲಾವಿದನ ಕೈಚಳಕ ವೈರಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...