Homeಮುಖಪುಟದುರ್ಗಾ ಪೂಜೆ: ಹಿಂದೂ ಮುಸ್ಲಿಂ ಧಾರ್ಮಿಕ ಸಾಮರಸ್ಯ ಮೆರೆಯುವ ಕಿದಿರ್‌ಪುರ್‌‌ ನಗರ!

ದುರ್ಗಾ ಪೂಜೆ: ಹಿಂದೂ ಮುಸ್ಲಿಂ ಧಾರ್ಮಿಕ ಸಾಮರಸ್ಯ ಮೆರೆಯುವ ಕಿದಿರ್‌ಪುರ್‌‌ ನಗರ!

ಉತ್ಸವ ಅಥವಾ ಆಚರಣೆಯ ಕಲ್ಪನೆ ಕೇವಲ ಒಂದು ಸಮುದಾಯಕ್ಕೆ ಸೇರಿಲ್ಲ. ಅದು ದುರ್ಗಾ ಪೂಜೆಯಾಗಲಿ, ಈದ್ ಆಗಿರಲಿ, ಜನರು ಒಟ್ಟಾಗಿ ಉತ್ಸವ ಆಚರಿಸಲು ಮಾನವೀಯತೆಯ ಉತ್ಸಾಹದಲ್ಲಿ ಸೇರುತ್ತಾರೆ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿನ ದುರ್ಗಾ ಪೂಜೆ ವೈಭವಕ್ಕೆ ಈ ಬಾರಿ ಕೊರೊನಾ ಸಾಂಕ್ರಾಮಿಕ ತಡೆ ಒಡ್ಡಿದೆ. ಹೆಚ್ಚುತ್ತಿರುವ ಕೊರೊನಾ ಸೋಂಕು ಪ್ರಕರಣಗಳ ಮಧ್ಯೆ, ಆರ್ಥಿಕತೆ ಕುಸಿದಿರುವ ಸಂದರ್ಭದಲ್ಲಿ ಈ ವರ್ಷ ದುರ್ಗಾ ಪೂಜೆಯು ವಿಭಿನ್ನ ರೀತಿಯ ಅನುಭವಕ್ಕೆ ಸಾಕ್ಷಿಯಾಗಲಿದೆ.

ಕೋಲ್ಕತಾ ಹೊಸ ನಿಯಮಗಳ ಮಧ್ಯೆ ಉತ್ಸವಕ್ಕೆ ಸಜ್ಜಾಗುತ್ತಿದ್ದಂತೆ, ಅಲ್ಲಿನ ಹಳೆಯ ಮುಸ್ಲಿಂ ಪ್ರಾಬಲ್ಯದ ಪ್ರದೇಶಗಳಲ್ಲಿ ಒಂದಾದ ಕಿದಿರ್‌ಪುರ್ ತನ್ನ ದೀರ್ಘಕಾಲದ ಸಂಪ್ರದಾಯವಾದ ಧಾರ್ಮಿಕ ಸಾಮರಸ್ಯವನ್ನು ಆಚರಿಸಲು ಸಜ್ಜಾಗಿದೆ.

ಕಿದಿರ್‌ಪುರದ ಚೆಟ್ಲಾ ಅಗ್ರಾನಿ ಕ್ಲಬ್, ಕಿದಿರ್‌ಪುರ್ 5 ಸ್ಟಾರ್ ಕ್ಲಬ್ ಮತ್ತು ಮುನ್‌ಶೋಟೊಲಾ ದುರ್ಗೋತ್ಸವ್ ಕ್ಲಬ್ ಸ್ಥಾಪಿಸಿರುವ ಪೆಂಡಾಲ್‌ಗಳು ಈ ಪ್ರದೇಶದ ಮಸೀದಿಗೆ ಅತಿ ಸಮೀಪದಲ್ಲಿಯೇ ಇವೆ. ಎಲ್ಲಾ ಧರ್ಮದ ಜನರು ಇಲ್ಲಿ ದುರ್ಗಾ ಮಾತೆಯ ಹಬ್ಬದ ಆಚರಣೆಯಲ್ಲಿ ತೊಡಗಿದ್ದರು.

ಈ ಪ್ರದೇಶದಲ್ಲಿ ಸ್ಥಾಪಿಸಲಾಗುವ ಪೆಂಡಾಲ್‌ಗಳಲ್ಲಿ ಹೆಚ್ಚಿನವರು ಮುಸ್ಲಿಂ ಸಮುದಾಯದವರು. ಇವರೇ ಪೆಂಡಾಲ್‌ಗಳಿಗೆ ಹಣಕಾಸು ನೀಡುವವರಾಗಿದ್ದಾರೆ. ಇಲ್ಲಿ ಸುಮಾರು 80 ವರ್ಷಗಳ ಹಿಂದಿನಿಂದಲೂ ಪೆಂಡಾಲ್‌ಗಳನ್ನು ಸ್ಥಾಪಿಸಲಾಗುತ್ತಿದೆ.

ಚೆಟ್ಲಾ ಅಗ್ರಾನಿ ಕ್ಲಬ್‌ನ ಪ್ರಧಾನ ಕಾರ್ಯದರ್ಶಿ ಸವ್ಯಸಾಚಿ ರಾಯ್‌ಚೌಧರಿ ಅವರು ನಗರದ ಇಲ್ಲಿನ ಪ್ರಸಿದ್ಧ ಪೆಂಡಾಲ್ ‌ಇತಿಹಾಸವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ಪಶ್ಚಿಮ ಬಂಗಾಳದಲ್ಲಿ ಮುಸ್ಲಿಮರು ಕಾಳಿ ದೇವಿಯ ಮೂರ್ತಿ ಸುಟ್ಟರೆ?

“ನಾವು ಇಲ್ಲಿಯವರೆಗೆ ಬರಲು ಮುಖ್ಯ ಕಾರಣ, ಬಾಬಿ (ಟಿಎಂಸಿ ನಾಯಕ) ಎಂದೂ ಕರೆಯಲ್ಪಡುವ ಫಿರಾಜ್ ಹಕೀಮ್. ನಮ್ಮಲ್ಲಿ ಮೊದಲಿಗೆ ನಾಲ್ಕು-ಐದು ಜನರು ಈ ಪೂಜೆ ಪ್ರಾರಂಭಿಸಿದರು. ನಮ್ಮ ನಡುವೆ ಯಾವತ್ತೂ ವ್ಯತ್ಯಾಸಗಳಿರಲಿಲ್ಲ. ಮುಸ್ಲಿಂ ಯಾರು, ಹಿಂದೂ ಯಾರು ಎಂಬ ಬಗ್ಗೆ ನಾವು ಎಂದಿಗೂ ಕಾಳಜಿ ವಹಿಸಲಿಲ್ಲ. ಅವರು ನಮ್ಮ ಆಚರಣೆಯ ಭಾಗವಾಗಿದ್ದಾರೆ, ನಾವು ಅವರ ಆಚರಣೆಯ ದೊಡ್ಡ ಭಾಗವಾಗಿದ್ದೇವೆ” ಎನ್ನುತ್ತಾರೆ.

Munshotola Durgotsav Club’s pandal.
PC: Malini Chakrabarty

‘ಉತ್ಸವ’ ಅಥವಾ ಆಚರಣೆಯ ಕಲ್ಪನೆ ಕೇವಲ ಒಂದು ಸಮುದಾಯಕ್ಕೆ ಸೇರಿಲ್ಲ. ಅದು ದುರ್ಗಾ ಪೂಜೆಯಾಗಲಿ, ಈದ್ ಆಗಿರಲಿ, ಜನರು ಒಟ್ಟಾಗಿ ‘ಉತ್ಸವ’ ಆಚರಿಸಲು ಮಾನವೀಯತೆಯ ಉತ್ಸಾಹದಲ್ಲಿ ಸೇರುತ್ತಾರೆ. ಕೋಮು ಸೌಹಾರ್ದತೆ ಎಷ್ಟು ಮಹತ್ವದ್ದಾಗಿದೆ ಎಂಬುದರ ಸಂಕೇತ ಇದು. ಜಾತಿ ಮತಗಳೆಂದು ದೊಂಬಿ-ಗಲಾಟೆಗಳು ನಡೆಯುತ್ತಿರುವ ಈ ಸಮಯದಲ್ಲಿ ಕೊಲ್ಕಾತ್ತಾ  ಎನು ಮಾಡುತ್ತಿದೆಯೋ ಅದು ಮತ್ತಷ್ಟು ರಾಜ್ಯಗಳಿಗೆ ಮಾದರಿಯಾಗಲಿ ಎಂದು ನಾನು ಆಶಿಸುತ್ತೇನೆ ಎಂದು ಚೆಟ್ಲಾ ಅಗ್ರಾನಿ ಕ್ಲಬ್‌ನ ಪ್ರಧಾನ ಕಾರ್ಯದರ್ಶಿ ಸವ್ಯಸಾಚಿ ರಾಯ್‌ಚೌಧರಿ ಹೇಳುತ್ತಾರೆ.

“ಈ ಪೂಜೆ ಸಮಿತಿಯಲ್ಲಿ ಹೆಚ್ಚಿನ ಜನ ಇರುವುದು ನನ್ನ ಮುಸ್ಲಿಂ ಸಹೋದರರು. ಜೊತೆಗೆ ಕೆಲವು ಹಿಂದೂ ಸಹೋದರರು ಕೂಡ ಇದ್ದಾರೆ. ಈದ್, ದುರ್ಗಾ ಪೂಜೆ ಎರಡನ್ನು ಒಟ್ಟಿಗೆ ಸೇರಿ ಆಚರಿಸಲು ಇಷ್ಟಪಡುತ್ತೇವೆ” ಎಂದು ಕಿದಿರ್‌ಪುರ್ 5 ಸ್ಟಾರ್ ಕ್ಲಬ್ ಎಂಡಿ ನಜೀಮ್ ಹೇಳುತ್ತಾರೆ.

ಒಟ್ಟಾರೆ, ದುರ್ಗಾ ಪೂಜೆ ಇಲ್ಲಿನ ಜನರಲ್ಲಿ ಸಾಂಪ್ರದಾಯಿಕವಾಗಿ ಧಾರ್ಮಿಕ ಸಾಮರಸ್ಯವನ್ನು ಆಚರಿಸಲು ನಡೆಸುವ ಹಬ್ಬವಾಗಿ ಮಾರ್ಪಟ್ಟಿದೆ. ಯಾವುದೇ ಕೋಮುಸಂಘರ್ಷಣೆಗಳು ಇಲ್ಲದೆ ಒಟ್ಟಾಗಿ ಹಬ್ಬ ಆಚರಿಸುವುದು ನಮಗೆ ನೆಮ್ಮದಿ ನೀಡಿದೆ. ನಮ್ಮಲ್ಲಿ ಯಾವುದೇ ಬೇಧಭಾವವಿಲ್ಲ ಎಂದು ಇಲ್ಲಿನ ಜನ ಹೇಳುತ್ತಾರೆ.


ಇದನ್ನೂ ಓದಿ: ವಲಸೆ ಕಾರ್ಮಿಕ ಮಹಿಳೆಗೆ ಹೋಲುವ ದುರ್ಗಾ ಮಾತೆ ಪ್ರತಿಮೆ: ಕಲಾವಿದನ ಕೈಚಳಕ ವೈರಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...