Homeಮುಖಪುಟದುರ್ಗಾ ಪೂಜೆ: ಹಿಂದೂ ಮುಸ್ಲಿಂ ಧಾರ್ಮಿಕ ಸಾಮರಸ್ಯ ಮೆರೆಯುವ ಕಿದಿರ್‌ಪುರ್‌‌ ನಗರ!

ದುರ್ಗಾ ಪೂಜೆ: ಹಿಂದೂ ಮುಸ್ಲಿಂ ಧಾರ್ಮಿಕ ಸಾಮರಸ್ಯ ಮೆರೆಯುವ ಕಿದಿರ್‌ಪುರ್‌‌ ನಗರ!

ಉತ್ಸವ ಅಥವಾ ಆಚರಣೆಯ ಕಲ್ಪನೆ ಕೇವಲ ಒಂದು ಸಮುದಾಯಕ್ಕೆ ಸೇರಿಲ್ಲ. ಅದು ದುರ್ಗಾ ಪೂಜೆಯಾಗಲಿ, ಈದ್ ಆಗಿರಲಿ, ಜನರು ಒಟ್ಟಾಗಿ ಉತ್ಸವ ಆಚರಿಸಲು ಮಾನವೀಯತೆಯ ಉತ್ಸಾಹದಲ್ಲಿ ಸೇರುತ್ತಾರೆ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿನ ದುರ್ಗಾ ಪೂಜೆ ವೈಭವಕ್ಕೆ ಈ ಬಾರಿ ಕೊರೊನಾ ಸಾಂಕ್ರಾಮಿಕ ತಡೆ ಒಡ್ಡಿದೆ. ಹೆಚ್ಚುತ್ತಿರುವ ಕೊರೊನಾ ಸೋಂಕು ಪ್ರಕರಣಗಳ ಮಧ್ಯೆ, ಆರ್ಥಿಕತೆ ಕುಸಿದಿರುವ ಸಂದರ್ಭದಲ್ಲಿ ಈ ವರ್ಷ ದುರ್ಗಾ ಪೂಜೆಯು ವಿಭಿನ್ನ ರೀತಿಯ ಅನುಭವಕ್ಕೆ ಸಾಕ್ಷಿಯಾಗಲಿದೆ.

ಕೋಲ್ಕತಾ ಹೊಸ ನಿಯಮಗಳ ಮಧ್ಯೆ ಉತ್ಸವಕ್ಕೆ ಸಜ್ಜಾಗುತ್ತಿದ್ದಂತೆ, ಅಲ್ಲಿನ ಹಳೆಯ ಮುಸ್ಲಿಂ ಪ್ರಾಬಲ್ಯದ ಪ್ರದೇಶಗಳಲ್ಲಿ ಒಂದಾದ ಕಿದಿರ್‌ಪುರ್ ತನ್ನ ದೀರ್ಘಕಾಲದ ಸಂಪ್ರದಾಯವಾದ ಧಾರ್ಮಿಕ ಸಾಮರಸ್ಯವನ್ನು ಆಚರಿಸಲು ಸಜ್ಜಾಗಿದೆ.

ಕಿದಿರ್‌ಪುರದ ಚೆಟ್ಲಾ ಅಗ್ರಾನಿ ಕ್ಲಬ್, ಕಿದಿರ್‌ಪುರ್ 5 ಸ್ಟಾರ್ ಕ್ಲಬ್ ಮತ್ತು ಮುನ್‌ಶೋಟೊಲಾ ದುರ್ಗೋತ್ಸವ್ ಕ್ಲಬ್ ಸ್ಥಾಪಿಸಿರುವ ಪೆಂಡಾಲ್‌ಗಳು ಈ ಪ್ರದೇಶದ ಮಸೀದಿಗೆ ಅತಿ ಸಮೀಪದಲ್ಲಿಯೇ ಇವೆ. ಎಲ್ಲಾ ಧರ್ಮದ ಜನರು ಇಲ್ಲಿ ದುರ್ಗಾ ಮಾತೆಯ ಹಬ್ಬದ ಆಚರಣೆಯಲ್ಲಿ ತೊಡಗಿದ್ದರು.

ಈ ಪ್ರದೇಶದಲ್ಲಿ ಸ್ಥಾಪಿಸಲಾಗುವ ಪೆಂಡಾಲ್‌ಗಳಲ್ಲಿ ಹೆಚ್ಚಿನವರು ಮುಸ್ಲಿಂ ಸಮುದಾಯದವರು. ಇವರೇ ಪೆಂಡಾಲ್‌ಗಳಿಗೆ ಹಣಕಾಸು ನೀಡುವವರಾಗಿದ್ದಾರೆ. ಇಲ್ಲಿ ಸುಮಾರು 80 ವರ್ಷಗಳ ಹಿಂದಿನಿಂದಲೂ ಪೆಂಡಾಲ್‌ಗಳನ್ನು ಸ್ಥಾಪಿಸಲಾಗುತ್ತಿದೆ.

ಚೆಟ್ಲಾ ಅಗ್ರಾನಿ ಕ್ಲಬ್‌ನ ಪ್ರಧಾನ ಕಾರ್ಯದರ್ಶಿ ಸವ್ಯಸಾಚಿ ರಾಯ್‌ಚೌಧರಿ ಅವರು ನಗರದ ಇಲ್ಲಿನ ಪ್ರಸಿದ್ಧ ಪೆಂಡಾಲ್ ‌ಇತಿಹಾಸವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ಪಶ್ಚಿಮ ಬಂಗಾಳದಲ್ಲಿ ಮುಸ್ಲಿಮರು ಕಾಳಿ ದೇವಿಯ ಮೂರ್ತಿ ಸುಟ್ಟರೆ?

“ನಾವು ಇಲ್ಲಿಯವರೆಗೆ ಬರಲು ಮುಖ್ಯ ಕಾರಣ, ಬಾಬಿ (ಟಿಎಂಸಿ ನಾಯಕ) ಎಂದೂ ಕರೆಯಲ್ಪಡುವ ಫಿರಾಜ್ ಹಕೀಮ್. ನಮ್ಮಲ್ಲಿ ಮೊದಲಿಗೆ ನಾಲ್ಕು-ಐದು ಜನರು ಈ ಪೂಜೆ ಪ್ರಾರಂಭಿಸಿದರು. ನಮ್ಮ ನಡುವೆ ಯಾವತ್ತೂ ವ್ಯತ್ಯಾಸಗಳಿರಲಿಲ್ಲ. ಮುಸ್ಲಿಂ ಯಾರು, ಹಿಂದೂ ಯಾರು ಎಂಬ ಬಗ್ಗೆ ನಾವು ಎಂದಿಗೂ ಕಾಳಜಿ ವಹಿಸಲಿಲ್ಲ. ಅವರು ನಮ್ಮ ಆಚರಣೆಯ ಭಾಗವಾಗಿದ್ದಾರೆ, ನಾವು ಅವರ ಆಚರಣೆಯ ದೊಡ್ಡ ಭಾಗವಾಗಿದ್ದೇವೆ” ಎನ್ನುತ್ತಾರೆ.

Munshotola Durgotsav Club’s pandal.
PC: Malini Chakrabarty

‘ಉತ್ಸವ’ ಅಥವಾ ಆಚರಣೆಯ ಕಲ್ಪನೆ ಕೇವಲ ಒಂದು ಸಮುದಾಯಕ್ಕೆ ಸೇರಿಲ್ಲ. ಅದು ದುರ್ಗಾ ಪೂಜೆಯಾಗಲಿ, ಈದ್ ಆಗಿರಲಿ, ಜನರು ಒಟ್ಟಾಗಿ ‘ಉತ್ಸವ’ ಆಚರಿಸಲು ಮಾನವೀಯತೆಯ ಉತ್ಸಾಹದಲ್ಲಿ ಸೇರುತ್ತಾರೆ. ಕೋಮು ಸೌಹಾರ್ದತೆ ಎಷ್ಟು ಮಹತ್ವದ್ದಾಗಿದೆ ಎಂಬುದರ ಸಂಕೇತ ಇದು. ಜಾತಿ ಮತಗಳೆಂದು ದೊಂಬಿ-ಗಲಾಟೆಗಳು ನಡೆಯುತ್ತಿರುವ ಈ ಸಮಯದಲ್ಲಿ ಕೊಲ್ಕಾತ್ತಾ  ಎನು ಮಾಡುತ್ತಿದೆಯೋ ಅದು ಮತ್ತಷ್ಟು ರಾಜ್ಯಗಳಿಗೆ ಮಾದರಿಯಾಗಲಿ ಎಂದು ನಾನು ಆಶಿಸುತ್ತೇನೆ ಎಂದು ಚೆಟ್ಲಾ ಅಗ್ರಾನಿ ಕ್ಲಬ್‌ನ ಪ್ರಧಾನ ಕಾರ್ಯದರ್ಶಿ ಸವ್ಯಸಾಚಿ ರಾಯ್‌ಚೌಧರಿ ಹೇಳುತ್ತಾರೆ.

“ಈ ಪೂಜೆ ಸಮಿತಿಯಲ್ಲಿ ಹೆಚ್ಚಿನ ಜನ ಇರುವುದು ನನ್ನ ಮುಸ್ಲಿಂ ಸಹೋದರರು. ಜೊತೆಗೆ ಕೆಲವು ಹಿಂದೂ ಸಹೋದರರು ಕೂಡ ಇದ್ದಾರೆ. ಈದ್, ದುರ್ಗಾ ಪೂಜೆ ಎರಡನ್ನು ಒಟ್ಟಿಗೆ ಸೇರಿ ಆಚರಿಸಲು ಇಷ್ಟಪಡುತ್ತೇವೆ” ಎಂದು ಕಿದಿರ್‌ಪುರ್ 5 ಸ್ಟಾರ್ ಕ್ಲಬ್ ಎಂಡಿ ನಜೀಮ್ ಹೇಳುತ್ತಾರೆ.

ಒಟ್ಟಾರೆ, ದುರ್ಗಾ ಪೂಜೆ ಇಲ್ಲಿನ ಜನರಲ್ಲಿ ಸಾಂಪ್ರದಾಯಿಕವಾಗಿ ಧಾರ್ಮಿಕ ಸಾಮರಸ್ಯವನ್ನು ಆಚರಿಸಲು ನಡೆಸುವ ಹಬ್ಬವಾಗಿ ಮಾರ್ಪಟ್ಟಿದೆ. ಯಾವುದೇ ಕೋಮುಸಂಘರ್ಷಣೆಗಳು ಇಲ್ಲದೆ ಒಟ್ಟಾಗಿ ಹಬ್ಬ ಆಚರಿಸುವುದು ನಮಗೆ ನೆಮ್ಮದಿ ನೀಡಿದೆ. ನಮ್ಮಲ್ಲಿ ಯಾವುದೇ ಬೇಧಭಾವವಿಲ್ಲ ಎಂದು ಇಲ್ಲಿನ ಜನ ಹೇಳುತ್ತಾರೆ.


ಇದನ್ನೂ ಓದಿ: ವಲಸೆ ಕಾರ್ಮಿಕ ಮಹಿಳೆಗೆ ಹೋಲುವ ದುರ್ಗಾ ಮಾತೆ ಪ್ರತಿಮೆ: ಕಲಾವಿದನ ಕೈಚಳಕ ವೈರಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...