Homeಕರೋನಾ ತಲ್ಲಣಸಾಂಕ್ರಾಮಿಕ ದುರಂತದ ಸಮಯದಲ್ಲಿ ಐಪಿಎಲ್ ಕವರೇಜ್ ಮಾಡುವುದಿಲ್ಲವೆಂದ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್!

ಸಾಂಕ್ರಾಮಿಕ ದುರಂತದ ಸಮಯದಲ್ಲಿ ಐಪಿಎಲ್ ಕವರೇಜ್ ಮಾಡುವುದಿಲ್ಲವೆಂದ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್!

ಬಯೋ ಬಬಲ್‌ನಲ್ಲಿ ಆಟಗಾರರು ಎಲ್ಲ ಸುರಕ್ಷತೆಗಳೊಂದಿಗೆ ಆಡುವ ಹೊತ್ತಿನಲ್ಲಿ ಜನ ಆರೋಗ್ಯ ಸೌಲಭ್ಯ ಸಿಗದೇ ಒದ್ದಾಡುತ್ತಿದ್ದಾರೆ. ಈ ದುರಂತದ ಸಂದರ್ಭದಲ್ಲಿ ಐಪಿಎಲ್ ನಡೆಯುತ್ತಿರುವುದು ಸಮಂಜಸವಲ್ಲ ಎಂದು ಪತ್ರಿಕೆ ಭಾವಿಸಿದೆ.

- Advertisement -
- Advertisement -

‘ದೇಶವು ಕೋವಿಡ್ ಎರಡನೆ ಅಲೆ ಉಲ್ಬಣದಿಂದ ತತ್ತರಿಸಿರುವ ಈ ಸಮಯದಲ್ಲಿ ಐಪಿಎಲ್ ಎಂಬ ಕ್ರಿಕೆಟ್ ಹಬ್ಬ ನಡೆಯುತ್ತಿರುವುದು ವಿಷಾದಕರ. ದೇಶದ ಸಂಕಷ್ಟದ ಜೊತೆ ನಿಂತು ಜನರಲ್ಲಿ ನೈತಿಕ ಶಕ್ತಿ ತುಂಬುವುದರ ಸಂಕೇತವಾಗಿ ನಾವು ಈಗಿನಿಂದಲೇ ಕ್ರಿಕೆಟ್ ಹಬ್ಬದ ಕವರೇಜ್ ನಿಲ್ಲಿಸಿದ್ದೇವೆ ಮತ್ತು ಅದಕ್ಕೆ ಸಂಬಂಧಿಸಿದ ಯಾವ ಸುದ್ದಿಯನ್ನೂ ಪ್ರಕಟಿಸದಿರಲು ನಿರ್ಧರಿಸಿದ್ದೇವೆ’ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಸಂಪಾದಕೀಯ ಮಂಡಳಿ ಇಂದು ರವಿವಾರ ಮುಖಪುಟದಲ್ಲೇ ಪ್ರಕಟಣೆ ನೀಡಿದ್ದು, ಇದೊಂದು ಜರೂರಾದ ನೈತಿಕ ನಡೆ ಎಂದು ಓದುಗರಿಂದ ಪ್ರಶಂಸೆ ವ್ಯಕ್ತವಾಗಿದೆ.

‘ಭಾರತವು ಈಗ ಕೋವಿಡ್ ಸಾಂಕ್ರಾಮಿಕದ ತೀವ್ರ ದುರಂತದಲ್ಲಿ ನರಳುತ್ತಿದೆ. ಸಾವಿರಾರು ಜನ ಆಸ್ಪತ್ರೆಗಳಲ್ಲಿ ಹಾಸಿಗೆ ಸಿಗದೇ ಒದ್ದಾಡುತ್ತಿದ್ದಾರೆ. ಎರಡನೇ ಅಲೆಯಲ್ಲಿ ಉಸಿರಾಟದ ಸಮಸ್ಯೆ ಅಧಿಕಗೊಂಡಿದ್ದು, ಆಸ್ಪತ್ರೆಗಳು ಆಮ್ಲಜನಕ ಮತ್ತು ಅಗತ್ಯ ಜೀವರಕ್ಷಕ ಔಷಧಿಗಳನ್ನು ಒದಗಿಸಿ ಎಂದು ಅಸಹಾಯಕ ಸ್ಥಿತಿಯಲ್ಲಿ ಸರ್ಕಾರಗಳಿಗೆ ಮನವಿ ಮಾಡುತ್ತಿವೆ. ಸ್ಮಶಾನಗಳಲ್ಲಿ ಶವ ಸಂಸ್ಕಾರಕ್ಕೆ ಪಾಳೆ ಹಚ್ಚುವ ಪರಿಸ್ಥಿತಿ ಬಂದಿದೆ…….

‘ಕುಸಿದು ಹೋಗಿರುವ ದೇಶದ ಆರೋಗ್ಯ ವ್ಯವಸ್ಥೆಯ ಕುರಿತಾಗಿ ಸರ್ಕಾರದ ಬಳಿ ಯಾವುದೇ ಸಮರ್ಪಕ ಉತ್ತರವಿಲ್ಲ. ಅದು ಈ ಸವಾಲನ್ನು ಮೆಟ್ಟಿ ನಿಲ್ಲುವ ಸಿದ್ಧತೆ ಮಾಡಿಕೊಂಡಂತೆ ಜನರಿಗೆ ಅನಿಸುತ್ತಿಲ್ಲ. ಇಂತಹ ಒಂದು ಸಂದರ್ಭದಲ್ಲಿ ಕ್ರಿಕೆಟ್ ಹಬ್ಬ ಎಂದು ಕರೆಯಲ್ಪಡುವ ಐಪಿಎಲ್ ನಡೆಯುತ್ತಿರುವುದು ಸಮಂಜಸವಲ್ಲ ಎಂದು ಪತ್ರಿಕೆ ಭಾವಿಸಿದೆ. ಇದು ಕ್ರಿಕೆಟ್ ಕುರಿತಾದ ಪ್ರಶ್ನೆಯಲ್ಲ. ಆದರೆ ಈ ದುರಂತದ ಸಂದರ್ಭದ ಪ್ರಶ್ನೆಯಾಗಿದೆ. ಬಯೋ ಬಬಲ್‌ನಲ್ಲಿ ಆಟಗಾರರು ಎಲ್ಲ ಸುರಕ್ಷತೆಗಳೊಂದಿಗೆ ಆಡುವ ಹೊತ್ತಿನಲ್ಲಿ ಜನ ಆರೋಗ್ಯ ಸೌಲಭ್ಯ ಸಿಗದೇ ಒದ್ದಾಡುತ್ತಿದ್ದಾರೆ. ಒಂದು ಸಣ್ಣ ಹೆಜ್ಜೆಯಾಗಿ, ನಮ್ಮ ನೈತಿಕ ಜವಾಬ್ದಾರಿ ಎಂದು ಅಂದುಕೊಂಡು ಈಗಿನಿಂದಲೇ ಕ್ರಿಕೆಟ್ ಕವರೇಜ್ ಮಾಡದಿರಲು ಪತ್ರಿಕೆ ನಿರ್ಧರಿಸಿದೆ…. ಪರಿಸ್ಥಿತಿ ಸಹಜ ಸ್ಥಿಗೆ ಬರುವವರೆಗೂ ಕವರೇಜ್ ಮಾಡದಿರಲು ನಿರ್ಧರಿಸಿದ್ದೇವೆ…’ ಎಂದು ಹೇಳಿರುವ ಸಂಪಾದಕೀಯ ಮಂಡಳಿ, ‘ಓದುಗರು ಈ ಅಂಶವನ್ನು ಅರ್ಥ ಮಾಡಿಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ. ಈ ಸಂಕಷ್ಟ ಸಂದರ್ಬದಲ್ಲಿ ನಾವೆಲ್ಲ ಒಂದು ದೃಢ ಸಂಕಲ್ಪದೊಂದಿಗೆ ಒಂದು ದೇಶವಾಗಿ ಒಟ್ಟಾಗಿ ನಿಲ್ಲಬೇಕಿದೆ’ ಎಂದು ತಿಳಿಸಿದೆ,

ಇದೊಂದು ಭಿನ್ನ ನೈತಿಕ ನಡೆಯಾಗಿದ್ದು ಅನಕರಣೀಯ ಕ್ರಮ ಎಂಬ ಮೆಚ್ಚುಗೆ ವ್ಯಕ್ತವಾಗುತ್ತಿದೆ.


ಇದನ್ನೂ ಓದಿ: ದಿ ಗಾರ್ಡಿಯನ್ ಸಂಪಾದಕೀಯ: ನಿಯಂತ್ರಣ ತಪ್ಪಿದ ಸಾಂಕ್ರಾಮಿಕ ನಿರ್ವಹಣೆಗೆ ಮೋದಿಯೇ ಕಾರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...