Homeಕರೋನಾ ತಲ್ಲಣಸಾಂಕ್ರಾಮಿಕ ದುರಂತದ ಸಮಯದಲ್ಲಿ ಐಪಿಎಲ್ ಕವರೇಜ್ ಮಾಡುವುದಿಲ್ಲವೆಂದ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್!

ಸಾಂಕ್ರಾಮಿಕ ದುರಂತದ ಸಮಯದಲ್ಲಿ ಐಪಿಎಲ್ ಕವರೇಜ್ ಮಾಡುವುದಿಲ್ಲವೆಂದ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್!

ಬಯೋ ಬಬಲ್‌ನಲ್ಲಿ ಆಟಗಾರರು ಎಲ್ಲ ಸುರಕ್ಷತೆಗಳೊಂದಿಗೆ ಆಡುವ ಹೊತ್ತಿನಲ್ಲಿ ಜನ ಆರೋಗ್ಯ ಸೌಲಭ್ಯ ಸಿಗದೇ ಒದ್ದಾಡುತ್ತಿದ್ದಾರೆ. ಈ ದುರಂತದ ಸಂದರ್ಭದಲ್ಲಿ ಐಪಿಎಲ್ ನಡೆಯುತ್ತಿರುವುದು ಸಮಂಜಸವಲ್ಲ ಎಂದು ಪತ್ರಿಕೆ ಭಾವಿಸಿದೆ.

- Advertisement -
- Advertisement -

‘ದೇಶವು ಕೋವಿಡ್ ಎರಡನೆ ಅಲೆ ಉಲ್ಬಣದಿಂದ ತತ್ತರಿಸಿರುವ ಈ ಸಮಯದಲ್ಲಿ ಐಪಿಎಲ್ ಎಂಬ ಕ್ರಿಕೆಟ್ ಹಬ್ಬ ನಡೆಯುತ್ತಿರುವುದು ವಿಷಾದಕರ. ದೇಶದ ಸಂಕಷ್ಟದ ಜೊತೆ ನಿಂತು ಜನರಲ್ಲಿ ನೈತಿಕ ಶಕ್ತಿ ತುಂಬುವುದರ ಸಂಕೇತವಾಗಿ ನಾವು ಈಗಿನಿಂದಲೇ ಕ್ರಿಕೆಟ್ ಹಬ್ಬದ ಕವರೇಜ್ ನಿಲ್ಲಿಸಿದ್ದೇವೆ ಮತ್ತು ಅದಕ್ಕೆ ಸಂಬಂಧಿಸಿದ ಯಾವ ಸುದ್ದಿಯನ್ನೂ ಪ್ರಕಟಿಸದಿರಲು ನಿರ್ಧರಿಸಿದ್ದೇವೆ’ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಸಂಪಾದಕೀಯ ಮಂಡಳಿ ಇಂದು ರವಿವಾರ ಮುಖಪುಟದಲ್ಲೇ ಪ್ರಕಟಣೆ ನೀಡಿದ್ದು, ಇದೊಂದು ಜರೂರಾದ ನೈತಿಕ ನಡೆ ಎಂದು ಓದುಗರಿಂದ ಪ್ರಶಂಸೆ ವ್ಯಕ್ತವಾಗಿದೆ.

‘ಭಾರತವು ಈಗ ಕೋವಿಡ್ ಸಾಂಕ್ರಾಮಿಕದ ತೀವ್ರ ದುರಂತದಲ್ಲಿ ನರಳುತ್ತಿದೆ. ಸಾವಿರಾರು ಜನ ಆಸ್ಪತ್ರೆಗಳಲ್ಲಿ ಹಾಸಿಗೆ ಸಿಗದೇ ಒದ್ದಾಡುತ್ತಿದ್ದಾರೆ. ಎರಡನೇ ಅಲೆಯಲ್ಲಿ ಉಸಿರಾಟದ ಸಮಸ್ಯೆ ಅಧಿಕಗೊಂಡಿದ್ದು, ಆಸ್ಪತ್ರೆಗಳು ಆಮ್ಲಜನಕ ಮತ್ತು ಅಗತ್ಯ ಜೀವರಕ್ಷಕ ಔಷಧಿಗಳನ್ನು ಒದಗಿಸಿ ಎಂದು ಅಸಹಾಯಕ ಸ್ಥಿತಿಯಲ್ಲಿ ಸರ್ಕಾರಗಳಿಗೆ ಮನವಿ ಮಾಡುತ್ತಿವೆ. ಸ್ಮಶಾನಗಳಲ್ಲಿ ಶವ ಸಂಸ್ಕಾರಕ್ಕೆ ಪಾಳೆ ಹಚ್ಚುವ ಪರಿಸ್ಥಿತಿ ಬಂದಿದೆ…….

‘ಕುಸಿದು ಹೋಗಿರುವ ದೇಶದ ಆರೋಗ್ಯ ವ್ಯವಸ್ಥೆಯ ಕುರಿತಾಗಿ ಸರ್ಕಾರದ ಬಳಿ ಯಾವುದೇ ಸಮರ್ಪಕ ಉತ್ತರವಿಲ್ಲ. ಅದು ಈ ಸವಾಲನ್ನು ಮೆಟ್ಟಿ ನಿಲ್ಲುವ ಸಿದ್ಧತೆ ಮಾಡಿಕೊಂಡಂತೆ ಜನರಿಗೆ ಅನಿಸುತ್ತಿಲ್ಲ. ಇಂತಹ ಒಂದು ಸಂದರ್ಭದಲ್ಲಿ ಕ್ರಿಕೆಟ್ ಹಬ್ಬ ಎಂದು ಕರೆಯಲ್ಪಡುವ ಐಪಿಎಲ್ ನಡೆಯುತ್ತಿರುವುದು ಸಮಂಜಸವಲ್ಲ ಎಂದು ಪತ್ರಿಕೆ ಭಾವಿಸಿದೆ. ಇದು ಕ್ರಿಕೆಟ್ ಕುರಿತಾದ ಪ್ರಶ್ನೆಯಲ್ಲ. ಆದರೆ ಈ ದುರಂತದ ಸಂದರ್ಭದ ಪ್ರಶ್ನೆಯಾಗಿದೆ. ಬಯೋ ಬಬಲ್‌ನಲ್ಲಿ ಆಟಗಾರರು ಎಲ್ಲ ಸುರಕ್ಷತೆಗಳೊಂದಿಗೆ ಆಡುವ ಹೊತ್ತಿನಲ್ಲಿ ಜನ ಆರೋಗ್ಯ ಸೌಲಭ್ಯ ಸಿಗದೇ ಒದ್ದಾಡುತ್ತಿದ್ದಾರೆ. ಒಂದು ಸಣ್ಣ ಹೆಜ್ಜೆಯಾಗಿ, ನಮ್ಮ ನೈತಿಕ ಜವಾಬ್ದಾರಿ ಎಂದು ಅಂದುಕೊಂಡು ಈಗಿನಿಂದಲೇ ಕ್ರಿಕೆಟ್ ಕವರೇಜ್ ಮಾಡದಿರಲು ಪತ್ರಿಕೆ ನಿರ್ಧರಿಸಿದೆ…. ಪರಿಸ್ಥಿತಿ ಸಹಜ ಸ್ಥಿಗೆ ಬರುವವರೆಗೂ ಕವರೇಜ್ ಮಾಡದಿರಲು ನಿರ್ಧರಿಸಿದ್ದೇವೆ…’ ಎಂದು ಹೇಳಿರುವ ಸಂಪಾದಕೀಯ ಮಂಡಳಿ, ‘ಓದುಗರು ಈ ಅಂಶವನ್ನು ಅರ್ಥ ಮಾಡಿಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ. ಈ ಸಂಕಷ್ಟ ಸಂದರ್ಬದಲ್ಲಿ ನಾವೆಲ್ಲ ಒಂದು ದೃಢ ಸಂಕಲ್ಪದೊಂದಿಗೆ ಒಂದು ದೇಶವಾಗಿ ಒಟ್ಟಾಗಿ ನಿಲ್ಲಬೇಕಿದೆ’ ಎಂದು ತಿಳಿಸಿದೆ,

ಇದೊಂದು ಭಿನ್ನ ನೈತಿಕ ನಡೆಯಾಗಿದ್ದು ಅನಕರಣೀಯ ಕ್ರಮ ಎಂಬ ಮೆಚ್ಚುಗೆ ವ್ಯಕ್ತವಾಗುತ್ತಿದೆ.


ಇದನ್ನೂ ಓದಿ: ದಿ ಗಾರ್ಡಿಯನ್ ಸಂಪಾದಕೀಯ: ನಿಯಂತ್ರಣ ತಪ್ಪಿದ ಸಾಂಕ್ರಾಮಿಕ ನಿರ್ವಹಣೆಗೆ ಮೋದಿಯೇ ಕಾರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...