Homeಕರೋನಾ ತಲ್ಲಣಸಾಂಕ್ರಾಮಿಕ ದುರಂತದ ಸಮಯದಲ್ಲಿ ಐಪಿಎಲ್ ಕವರೇಜ್ ಮಾಡುವುದಿಲ್ಲವೆಂದ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್!

ಸಾಂಕ್ರಾಮಿಕ ದುರಂತದ ಸಮಯದಲ್ಲಿ ಐಪಿಎಲ್ ಕವರೇಜ್ ಮಾಡುವುದಿಲ್ಲವೆಂದ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್!

ಬಯೋ ಬಬಲ್‌ನಲ್ಲಿ ಆಟಗಾರರು ಎಲ್ಲ ಸುರಕ್ಷತೆಗಳೊಂದಿಗೆ ಆಡುವ ಹೊತ್ತಿನಲ್ಲಿ ಜನ ಆರೋಗ್ಯ ಸೌಲಭ್ಯ ಸಿಗದೇ ಒದ್ದಾಡುತ್ತಿದ್ದಾರೆ. ಈ ದುರಂತದ ಸಂದರ್ಭದಲ್ಲಿ ಐಪಿಎಲ್ ನಡೆಯುತ್ತಿರುವುದು ಸಮಂಜಸವಲ್ಲ ಎಂದು ಪತ್ರಿಕೆ ಭಾವಿಸಿದೆ.

- Advertisement -
- Advertisement -

‘ದೇಶವು ಕೋವಿಡ್ ಎರಡನೆ ಅಲೆ ಉಲ್ಬಣದಿಂದ ತತ್ತರಿಸಿರುವ ಈ ಸಮಯದಲ್ಲಿ ಐಪಿಎಲ್ ಎಂಬ ಕ್ರಿಕೆಟ್ ಹಬ್ಬ ನಡೆಯುತ್ತಿರುವುದು ವಿಷಾದಕರ. ದೇಶದ ಸಂಕಷ್ಟದ ಜೊತೆ ನಿಂತು ಜನರಲ್ಲಿ ನೈತಿಕ ಶಕ್ತಿ ತುಂಬುವುದರ ಸಂಕೇತವಾಗಿ ನಾವು ಈಗಿನಿಂದಲೇ ಕ್ರಿಕೆಟ್ ಹಬ್ಬದ ಕವರೇಜ್ ನಿಲ್ಲಿಸಿದ್ದೇವೆ ಮತ್ತು ಅದಕ್ಕೆ ಸಂಬಂಧಿಸಿದ ಯಾವ ಸುದ್ದಿಯನ್ನೂ ಪ್ರಕಟಿಸದಿರಲು ನಿರ್ಧರಿಸಿದ್ದೇವೆ’ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಸಂಪಾದಕೀಯ ಮಂಡಳಿ ಇಂದು ರವಿವಾರ ಮುಖಪುಟದಲ್ಲೇ ಪ್ರಕಟಣೆ ನೀಡಿದ್ದು, ಇದೊಂದು ಜರೂರಾದ ನೈತಿಕ ನಡೆ ಎಂದು ಓದುಗರಿಂದ ಪ್ರಶಂಸೆ ವ್ಯಕ್ತವಾಗಿದೆ.

‘ಭಾರತವು ಈಗ ಕೋವಿಡ್ ಸಾಂಕ್ರಾಮಿಕದ ತೀವ್ರ ದುರಂತದಲ್ಲಿ ನರಳುತ್ತಿದೆ. ಸಾವಿರಾರು ಜನ ಆಸ್ಪತ್ರೆಗಳಲ್ಲಿ ಹಾಸಿಗೆ ಸಿಗದೇ ಒದ್ದಾಡುತ್ತಿದ್ದಾರೆ. ಎರಡನೇ ಅಲೆಯಲ್ಲಿ ಉಸಿರಾಟದ ಸಮಸ್ಯೆ ಅಧಿಕಗೊಂಡಿದ್ದು, ಆಸ್ಪತ್ರೆಗಳು ಆಮ್ಲಜನಕ ಮತ್ತು ಅಗತ್ಯ ಜೀವರಕ್ಷಕ ಔಷಧಿಗಳನ್ನು ಒದಗಿಸಿ ಎಂದು ಅಸಹಾಯಕ ಸ್ಥಿತಿಯಲ್ಲಿ ಸರ್ಕಾರಗಳಿಗೆ ಮನವಿ ಮಾಡುತ್ತಿವೆ. ಸ್ಮಶಾನಗಳಲ್ಲಿ ಶವ ಸಂಸ್ಕಾರಕ್ಕೆ ಪಾಳೆ ಹಚ್ಚುವ ಪರಿಸ್ಥಿತಿ ಬಂದಿದೆ…….

‘ಕುಸಿದು ಹೋಗಿರುವ ದೇಶದ ಆರೋಗ್ಯ ವ್ಯವಸ್ಥೆಯ ಕುರಿತಾಗಿ ಸರ್ಕಾರದ ಬಳಿ ಯಾವುದೇ ಸಮರ್ಪಕ ಉತ್ತರವಿಲ್ಲ. ಅದು ಈ ಸವಾಲನ್ನು ಮೆಟ್ಟಿ ನಿಲ್ಲುವ ಸಿದ್ಧತೆ ಮಾಡಿಕೊಂಡಂತೆ ಜನರಿಗೆ ಅನಿಸುತ್ತಿಲ್ಲ. ಇಂತಹ ಒಂದು ಸಂದರ್ಭದಲ್ಲಿ ಕ್ರಿಕೆಟ್ ಹಬ್ಬ ಎಂದು ಕರೆಯಲ್ಪಡುವ ಐಪಿಎಲ್ ನಡೆಯುತ್ತಿರುವುದು ಸಮಂಜಸವಲ್ಲ ಎಂದು ಪತ್ರಿಕೆ ಭಾವಿಸಿದೆ. ಇದು ಕ್ರಿಕೆಟ್ ಕುರಿತಾದ ಪ್ರಶ್ನೆಯಲ್ಲ. ಆದರೆ ಈ ದುರಂತದ ಸಂದರ್ಭದ ಪ್ರಶ್ನೆಯಾಗಿದೆ. ಬಯೋ ಬಬಲ್‌ನಲ್ಲಿ ಆಟಗಾರರು ಎಲ್ಲ ಸುರಕ್ಷತೆಗಳೊಂದಿಗೆ ಆಡುವ ಹೊತ್ತಿನಲ್ಲಿ ಜನ ಆರೋಗ್ಯ ಸೌಲಭ್ಯ ಸಿಗದೇ ಒದ್ದಾಡುತ್ತಿದ್ದಾರೆ. ಒಂದು ಸಣ್ಣ ಹೆಜ್ಜೆಯಾಗಿ, ನಮ್ಮ ನೈತಿಕ ಜವಾಬ್ದಾರಿ ಎಂದು ಅಂದುಕೊಂಡು ಈಗಿನಿಂದಲೇ ಕ್ರಿಕೆಟ್ ಕವರೇಜ್ ಮಾಡದಿರಲು ಪತ್ರಿಕೆ ನಿರ್ಧರಿಸಿದೆ…. ಪರಿಸ್ಥಿತಿ ಸಹಜ ಸ್ಥಿಗೆ ಬರುವವರೆಗೂ ಕವರೇಜ್ ಮಾಡದಿರಲು ನಿರ್ಧರಿಸಿದ್ದೇವೆ…’ ಎಂದು ಹೇಳಿರುವ ಸಂಪಾದಕೀಯ ಮಂಡಳಿ, ‘ಓದುಗರು ಈ ಅಂಶವನ್ನು ಅರ್ಥ ಮಾಡಿಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ. ಈ ಸಂಕಷ್ಟ ಸಂದರ್ಬದಲ್ಲಿ ನಾವೆಲ್ಲ ಒಂದು ದೃಢ ಸಂಕಲ್ಪದೊಂದಿಗೆ ಒಂದು ದೇಶವಾಗಿ ಒಟ್ಟಾಗಿ ನಿಲ್ಲಬೇಕಿದೆ’ ಎಂದು ತಿಳಿಸಿದೆ,

ಇದೊಂದು ಭಿನ್ನ ನೈತಿಕ ನಡೆಯಾಗಿದ್ದು ಅನಕರಣೀಯ ಕ್ರಮ ಎಂಬ ಮೆಚ್ಚುಗೆ ವ್ಯಕ್ತವಾಗುತ್ತಿದೆ.


ಇದನ್ನೂ ಓದಿ: ದಿ ಗಾರ್ಡಿಯನ್ ಸಂಪಾದಕೀಯ: ನಿಯಂತ್ರಣ ತಪ್ಪಿದ ಸಾಂಕ್ರಾಮಿಕ ನಿರ್ವಹಣೆಗೆ ಮೋದಿಯೇ ಕಾರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...