Homeಕರೋನಾ ತಲ್ಲಣಸಾಂಕ್ರಾಮಿಕ ದುರಂತದ ಸಮಯದಲ್ಲಿ ಐಪಿಎಲ್ ಕವರೇಜ್ ಮಾಡುವುದಿಲ್ಲವೆಂದ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್!

ಸಾಂಕ್ರಾಮಿಕ ದುರಂತದ ಸಮಯದಲ್ಲಿ ಐಪಿಎಲ್ ಕವರೇಜ್ ಮಾಡುವುದಿಲ್ಲವೆಂದ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್!

ಬಯೋ ಬಬಲ್‌ನಲ್ಲಿ ಆಟಗಾರರು ಎಲ್ಲ ಸುರಕ್ಷತೆಗಳೊಂದಿಗೆ ಆಡುವ ಹೊತ್ತಿನಲ್ಲಿ ಜನ ಆರೋಗ್ಯ ಸೌಲಭ್ಯ ಸಿಗದೇ ಒದ್ದಾಡುತ್ತಿದ್ದಾರೆ. ಈ ದುರಂತದ ಸಂದರ್ಭದಲ್ಲಿ ಐಪಿಎಲ್ ನಡೆಯುತ್ತಿರುವುದು ಸಮಂಜಸವಲ್ಲ ಎಂದು ಪತ್ರಿಕೆ ಭಾವಿಸಿದೆ.

- Advertisement -
- Advertisement -

‘ದೇಶವು ಕೋವಿಡ್ ಎರಡನೆ ಅಲೆ ಉಲ್ಬಣದಿಂದ ತತ್ತರಿಸಿರುವ ಈ ಸಮಯದಲ್ಲಿ ಐಪಿಎಲ್ ಎಂಬ ಕ್ರಿಕೆಟ್ ಹಬ್ಬ ನಡೆಯುತ್ತಿರುವುದು ವಿಷಾದಕರ. ದೇಶದ ಸಂಕಷ್ಟದ ಜೊತೆ ನಿಂತು ಜನರಲ್ಲಿ ನೈತಿಕ ಶಕ್ತಿ ತುಂಬುವುದರ ಸಂಕೇತವಾಗಿ ನಾವು ಈಗಿನಿಂದಲೇ ಕ್ರಿಕೆಟ್ ಹಬ್ಬದ ಕವರೇಜ್ ನಿಲ್ಲಿಸಿದ್ದೇವೆ ಮತ್ತು ಅದಕ್ಕೆ ಸಂಬಂಧಿಸಿದ ಯಾವ ಸುದ್ದಿಯನ್ನೂ ಪ್ರಕಟಿಸದಿರಲು ನಿರ್ಧರಿಸಿದ್ದೇವೆ’ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಸಂಪಾದಕೀಯ ಮಂಡಳಿ ಇಂದು ರವಿವಾರ ಮುಖಪುಟದಲ್ಲೇ ಪ್ರಕಟಣೆ ನೀಡಿದ್ದು, ಇದೊಂದು ಜರೂರಾದ ನೈತಿಕ ನಡೆ ಎಂದು ಓದುಗರಿಂದ ಪ್ರಶಂಸೆ ವ್ಯಕ್ತವಾಗಿದೆ.

‘ಭಾರತವು ಈಗ ಕೋವಿಡ್ ಸಾಂಕ್ರಾಮಿಕದ ತೀವ್ರ ದುರಂತದಲ್ಲಿ ನರಳುತ್ತಿದೆ. ಸಾವಿರಾರು ಜನ ಆಸ್ಪತ್ರೆಗಳಲ್ಲಿ ಹಾಸಿಗೆ ಸಿಗದೇ ಒದ್ದಾಡುತ್ತಿದ್ದಾರೆ. ಎರಡನೇ ಅಲೆಯಲ್ಲಿ ಉಸಿರಾಟದ ಸಮಸ್ಯೆ ಅಧಿಕಗೊಂಡಿದ್ದು, ಆಸ್ಪತ್ರೆಗಳು ಆಮ್ಲಜನಕ ಮತ್ತು ಅಗತ್ಯ ಜೀವರಕ್ಷಕ ಔಷಧಿಗಳನ್ನು ಒದಗಿಸಿ ಎಂದು ಅಸಹಾಯಕ ಸ್ಥಿತಿಯಲ್ಲಿ ಸರ್ಕಾರಗಳಿಗೆ ಮನವಿ ಮಾಡುತ್ತಿವೆ. ಸ್ಮಶಾನಗಳಲ್ಲಿ ಶವ ಸಂಸ್ಕಾರಕ್ಕೆ ಪಾಳೆ ಹಚ್ಚುವ ಪರಿಸ್ಥಿತಿ ಬಂದಿದೆ…….

‘ಕುಸಿದು ಹೋಗಿರುವ ದೇಶದ ಆರೋಗ್ಯ ವ್ಯವಸ್ಥೆಯ ಕುರಿತಾಗಿ ಸರ್ಕಾರದ ಬಳಿ ಯಾವುದೇ ಸಮರ್ಪಕ ಉತ್ತರವಿಲ್ಲ. ಅದು ಈ ಸವಾಲನ್ನು ಮೆಟ್ಟಿ ನಿಲ್ಲುವ ಸಿದ್ಧತೆ ಮಾಡಿಕೊಂಡಂತೆ ಜನರಿಗೆ ಅನಿಸುತ್ತಿಲ್ಲ. ಇಂತಹ ಒಂದು ಸಂದರ್ಭದಲ್ಲಿ ಕ್ರಿಕೆಟ್ ಹಬ್ಬ ಎಂದು ಕರೆಯಲ್ಪಡುವ ಐಪಿಎಲ್ ನಡೆಯುತ್ತಿರುವುದು ಸಮಂಜಸವಲ್ಲ ಎಂದು ಪತ್ರಿಕೆ ಭಾವಿಸಿದೆ. ಇದು ಕ್ರಿಕೆಟ್ ಕುರಿತಾದ ಪ್ರಶ್ನೆಯಲ್ಲ. ಆದರೆ ಈ ದುರಂತದ ಸಂದರ್ಭದ ಪ್ರಶ್ನೆಯಾಗಿದೆ. ಬಯೋ ಬಬಲ್‌ನಲ್ಲಿ ಆಟಗಾರರು ಎಲ್ಲ ಸುರಕ್ಷತೆಗಳೊಂದಿಗೆ ಆಡುವ ಹೊತ್ತಿನಲ್ಲಿ ಜನ ಆರೋಗ್ಯ ಸೌಲಭ್ಯ ಸಿಗದೇ ಒದ್ದಾಡುತ್ತಿದ್ದಾರೆ. ಒಂದು ಸಣ್ಣ ಹೆಜ್ಜೆಯಾಗಿ, ನಮ್ಮ ನೈತಿಕ ಜವಾಬ್ದಾರಿ ಎಂದು ಅಂದುಕೊಂಡು ಈಗಿನಿಂದಲೇ ಕ್ರಿಕೆಟ್ ಕವರೇಜ್ ಮಾಡದಿರಲು ಪತ್ರಿಕೆ ನಿರ್ಧರಿಸಿದೆ…. ಪರಿಸ್ಥಿತಿ ಸಹಜ ಸ್ಥಿಗೆ ಬರುವವರೆಗೂ ಕವರೇಜ್ ಮಾಡದಿರಲು ನಿರ್ಧರಿಸಿದ್ದೇವೆ…’ ಎಂದು ಹೇಳಿರುವ ಸಂಪಾದಕೀಯ ಮಂಡಳಿ, ‘ಓದುಗರು ಈ ಅಂಶವನ್ನು ಅರ್ಥ ಮಾಡಿಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ. ಈ ಸಂಕಷ್ಟ ಸಂದರ್ಬದಲ್ಲಿ ನಾವೆಲ್ಲ ಒಂದು ದೃಢ ಸಂಕಲ್ಪದೊಂದಿಗೆ ಒಂದು ದೇಶವಾಗಿ ಒಟ್ಟಾಗಿ ನಿಲ್ಲಬೇಕಿದೆ’ ಎಂದು ತಿಳಿಸಿದೆ,

ಇದೊಂದು ಭಿನ್ನ ನೈತಿಕ ನಡೆಯಾಗಿದ್ದು ಅನಕರಣೀಯ ಕ್ರಮ ಎಂಬ ಮೆಚ್ಚುಗೆ ವ್ಯಕ್ತವಾಗುತ್ತಿದೆ.


ಇದನ್ನೂ ಓದಿ: ದಿ ಗಾರ್ಡಿಯನ್ ಸಂಪಾದಕೀಯ: ನಿಯಂತ್ರಣ ತಪ್ಪಿದ ಸಾಂಕ್ರಾಮಿಕ ನಿರ್ವಹಣೆಗೆ ಮೋದಿಯೇ ಕಾರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...