Homeಚಳವಳಿತಟ್ಟೆ ಚಳವಳಿ: ಮೋದಿಯವರ 'ಮನ್ ಕಿ ಬಾತ್' ವೇಳೆ ರಾಜ್ಯಾದ್ಯಂತ ತಟ್ಟೆ ಬಡಿದು ಪ್ರತಿಭಟನೆ

ತಟ್ಟೆ ಚಳವಳಿ: ಮೋದಿಯವರ ‘ಮನ್ ಕಿ ಬಾತ್’ ವೇಳೆ ರಾಜ್ಯಾದ್ಯಂತ ತಟ್ಟೆ ಬಡಿದು ಪ್ರತಿಭಟನೆ

ರೈತರ ಕರೆಗೆ ಓಗೊಟ್ಟು ರಾಯಚೂರಿನಲ್ಲಿ ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ ವತಿಯಿಂದ ತಟ್ಟೆ ಬಡಿಯುವ ಪ್ರತಿಭಟನೆ ನಡೆಸಲಾಯಿತು.

- Advertisement -
- Advertisement -

ದೆಹಲಿಯಲ್ಲಿನ ಹೋರಾಟನಿರತ ರೈತರ ಕರೆ ಮೇರೆಗೆ ಇಂದು ಪ್ರಧಾನಿ ನರೇಂದ್ರ ಮೋದಿಯವರ ಮನ್‌ ಕಿ ಬಾತ್ ಸಮಯದಲ್ಲಿ ರಾಜ್ಯಾದ್ಯಂತ ತಟ್ಟೆ ಬಡಿದು ಪ್ರತಿಭಟನೆ ನಡೆಸಲಾಯಿತು. ಮೋದಿಯವರು ಕೊರೊನಾ ಸಾಂಕ್ರಾಮಿಕದ ಸಮಯದಲ್ಲಿ ತಟ್ಟೆ ಬಡಿಯುವಂತೆ ಕರೆ ನೀಡಿದ್ದನ್ನು ಅನುಸರಿಸಿದ ರೈತರು ಇಂದು ಮೋದಿಯವರ ಭಾಷಣದ ವೇಳೆಯೇ ತಟ್ಟೆ ಬಡಿಯುವ ಮೂಲಕ ತಿರುಗೇಟು ನೀಡಿದ್ದಾರೆ.

ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ ಬೆಂಬಲಿಸಿ, ಜನ ವಿರೋಧಿ ನೀತಿಗಳನ್ನು ಖಂಡಿಸಿ ರೈತ, ದಲಿತ, ವಿದ್ಯಾರ್ಥಿ-ಯುವಜನ, ಮತ್ತು ಜನಪರ ಸಂಘಟನೆಗಳ ನೇತೃತ್ವದಲ್ಲಿ ತುಮಕೂರಿನಲ್ಲಿ ತಟ್ಟೆ ಬಡಿಯುವ ಚಳವಳಿ ನಡೆಸಲಾಯಿತು. ಟೌನ್ ಹಾಲ್ ವೃತ್ತದಲ್ಲಿ ಸೇರಿದ ನೂರಾರು ಕಾರ್ಯಕರ್ತರು ಬಿ.ಹೆಚ್. ರಸ್ತೆಯ ರಿಲೆಯನ್ಸ್ ಟ್ರೆಂಡ್ಸ್ ವರೆಗೆ ಮೆರವಣಿಗೆ ನಡೆಸಿ ತಟ್ಟೆ ಬಡಿಯುವ ಚಳುವಳಿ ನಡೆಸಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿ ರಾಜ್ಯ ರೈತ ಮತ್ತು ಹಸಿರು ಸೇನೆ ಜಿಲ್ಲಾಧ್ಯಕ್ಷ ಆನಂದ್ ಪಟೇಲ್  “ನರೇಂದ್ರ ಮೋದಿ ಪ್ರಧಾನಿ ಹುದ್ದೆಯ ಘನತೆ, ಗೌರವಕ್ಕೆ ಚ್ಯುತಿ ತರುವಂತಹ ಕೆಲಸ ಮಾಡುತ್ತಿದ್ದಾರೆ. ಪ್ರಜಾಪ್ರಭುತ್ವದ ಮೌಲ್ಯಗಳ ವಿರುದ್ಧ ನಡೆಯುತ್ತಿದ್ದು, ದೇಶದ ಕಾನೂನುಗಳನ್ನು ಧಿಕ್ಕರಿಸುತ್ತಿರುವ ಪ್ರಧಾನಿಗೆ ನಾಚಿಕೆ ಆಗಬೇಕು” ಎಂದು ವಾಗ್ದಾಳಿ ನಡೆಸಿದರು.

ಇಡೀ ದೇಶದ ಆರ್ಥಿಕತೆ ಕೆಲವೇ ಕುಟುಂಬಗಳ ಕೈಯಲ್ಲಿದೆ. ಹೀಗಾಗಿ ಆರ್ಥಿಕತೆ ಪಾತಾಳಕ್ಕೆ ಕುಸಿದಿದೆ. ಕೈಗಾರಿಕಾ ಕ್ಷೇತ್ರದಲ್ಲಿ ಹೂಡಿಕೆ ಮಾಡುವ ಬದಲು ಅಲ್ಪಸ್ವಲ್ಪ ಲಾಭ ಬರುತ್ತಿರುವ ಕೃಷಿ ಕ್ಷೇತ್ರದಲ್ಲಿ ಬಂಡವಾಳ ತೊಡಗಿಸಲು ಕಾರ್ಪೋರೇಟ್ ಕುಳಗಳಿಗೆ ಅವಕಾಶ ನೀಡಲಾಗುತ್ತಿದೆ. ಇದೇ ಕಾರಣಕ್ಕೆ ಕರಾಳ ಕೃಷಿ ಕಾಯ್ದೆ ಗಳನ್ನು ಜಾರಿಗೊಳಿಸಲಾಗಿದೆ. ಇದರಿಂದ ಸಣ್ಣ ಮತ್ತು ಮಧ್ಯಮ ರೈತರ ಕೈಯಲ್ಲಿದ್ದ ಭೂಮಿ ಇಲ್ಲವಾಗಲಿದೆ.  ಇದೇ ಪರಿಸ್ಥಿತಿ ಮುಂದುವರಿದರೆ ರೈತರು ಬೀದಿಗೆ ಬೀಳುವ ದಿನಗಳು ದೂರವಿಲ್ಲ ಎಂದು ಆತಂಕ ವ್ಯಕ್ತಪಡಿಸಿದರು.

ದೇಶದ ಬಡತನ ಹೆಚ್ಚುತ್ತಿದೆ. ನಿರುದ್ಯೋಗ ಸಮಸ್ಯೆ ಏರುಗತಿಯಲ್ಲಿ ಸಾಗಿದೆ. ಉದ್ಯೋಗ ಸಿಗುತ್ತಿಲ್ಲ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮನ್ ಕಿ ಬಾತ್ ನಲ್ಲಿ ಹೇಳುವ ಬದಲು ಖಾಲಿ ಮಾತುಗಳನ್ನು ಆಡುತ್ತಿದ್ದಾರೆ. ಅಂಬಾನಿ ಅದಾನಿ ಆದಾಯ ಹೆಚ್ಚಾದಂತೆ ರೈತರ ಆದಾಯ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗುತ್ತಿದೆ. ಬಹುಸಂಖ್ಯಾತರ ಓಟು ಪಡೆದು ಗೆದ್ದು ಬಂದ ಪ್ರಧಾನಿ ನರೇಂದ್ರ ಮೋದಿ ತಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳನ್ನು ಈಡೇರಿಸುವುದು ಬಿಟ್ಟು, ರೈತವಿರೋಧಿ ಕಾಯ್ದೆಗಳನ್ನು ಜಾರಿಗೊಳಿಸುತ್ತಿದ್ದಾರೆ. ಸ್ವಾಮಿನಾಥನ್ ವರದಿ ಜಾರಿ ಮತ್ತು 2 ಕೋಟಿ ಉದ್ಯೋಗದ ಭರವಸೆ ನೀಡಿಯೂ ಕೂಡ ಅದರ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಟೀಕಿಸಿದರು.

ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಪಿ.ಎನ್.ರಾಮಯ್ಯ ಮಾತನಾಡಿ “ಪ್ರಧಾನಿ ನರೇಂದ್ರ ಮೋದಿ ರೈತರು, ದಲಿತರು, ಕಾರ್ಮಿಕರು, ಮಹಿಳೆಯರ ಸಮಸ್ಯೆಗಳ ಬಗ್ಗೆ ಕಿವಿಗೊಡುತ್ತಿಲ್ಲ. ಹಿಂದಿನ ಪ್ರಧಾನಿಗಳು ರೈತರು ಸೇರಿದಂತೆ ಯಾರೇ ಪ್ರತಿಭಟನೆ ನಡೆಸಿದರೂ ಕೂಡಲೇ ಆ ಸಂಘಟನೆಗಳ ನಾಯಕರನ್ನು ಕರೆಸಿ ಮಾತುಕತೆ ನಡೆಸುವ ಪದ್ದತಿ ಇತ್ತು. ಈ ಪ್ರಧಾನಿ ಮೋದಿ ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರ ಬೇಡಿಕೆ ಬಗ್ಗೆ ಗಮನ ಕೊಡುತ್ತಿಲ್ಲ. ಕೃಷಿ ಕ್ಷೇತ್ರವನ್ನು ಉಳಿಸಬೇಕಾದ ಪ್ರಧಾನಿ ಕಾರ್ಪೋರೇಟ್ ಕಂಪನಿಗಳಿಗೆ ನೀಡುವುದಕ್ಕೆ ಮುಂದಾಗಿದ್ದಾರೆ. ದೇಶದಲ್ಲಿ ಏಕವ್ಯಕ್ತಿ ಆಡಳಿತ ನಡೆಯುತ್ತಿದೆ. ಬಿಜೆಪಿ ಸಂಸದರು, ಸಚಿವರು ರೈತರು ಮತ್ತು ಚಳವಳಿ ಕುರಿತು ಬಾಯಿಗೆ ಬಂದಂತೆ ಮಾತನಾಡುತ್ತಿರುವುದು ಸರಿಯಲ್ಲ ಎಂದರು.

ತಟ್ಟೆ ಬಡಿಯುವ ಮೆರವಣಿಗೆಯಲ್ಲಿ ರೈತ ಮುಖಂಡ ಕೆ.ಎಸ್.ಧನಂಜಯರಾಧ್ಯ, ರೈತ ಕೃಷಿ ಕಾರ್ಮಿಕ ಸಂಘಟನೆಯ ಎಸ್.ಎನ್.ಸ್ವಾಮಿ, ಅಜ್ಜಪ್ಪ, ಅಖಿಲ ಭಾರತ ಕಿಸಾನ್ ಸಭಾದ ಕಂಬೇಗೌಡ, ಡಾ. ಬಸವರಾಜು, ಡಾ. ಆರುಂಧತಿ, ಆರ್.ಕೆ.ಎಸ್.ನ ನವೀನ್, ರಮೇಶ್, ಲೋಕೇಶ್, ಮಹಿಳಾ ಸಂಘಟನೆಯ ಎಂ.ಡಿ.ಕಲ್ಯಾಣಿ, ಎಐಟಿಯುಟಿಯುಸಿಯ ಮಂಜುಳ, ಎಐಡಿಎಸ್ಒನ ಆಶ್ವಿನಿ, ರೈತ ಮುಖಂಡ ರವೀಶ್ ಅಜ್ಜಪ್ಪ ಇದ್ದರು.

ರೈತರ ಕರೆಗೆ ಓಗೊಟ್ಟು ರಾಯಚೂರಿನಲ್ಲಿ ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ ವತಿಯಿಂದ ತಟ್ಟೆ ಬಡಿಯುವ ಪ್ರತಿಭಟನೆ ನಡೆಸಲಾಯಿತು.

ದಾವಣಗೆರೆಯಲ್ಲಿ ಕರ್ನಾಟಕ ಜನಶಕ್ತಿಯ ಹಲವಾರು ಕಾರ್ಯಕರ್ತರು ತಟ್ಟೆ ಬಡಿಯುವ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಬೆಂಗಳೂರಿನಲ್ಲಿ ಕೃಷಿ ಕಾಯ್ದೆಗಳ ವಿರುದ್ಧದ ನಿರಂತರ ಹೋರಾಟ ಮುಂದುವರೆದಿದೆ. ಇಂದು ಮೌರ್ಯ ಸರ್ಕಲ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ನೂರಾರು ಸಿಖ್ ಯುವಕರು ಮೆರವಣಿಗೆಯಲ್ಲಿ ಬಂದು ಭಾಗವಹಿಸಿದರು. ಶತಾಯುಷಿ, ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್ ದೊರೆಸ್ವಾಮಿಯವರು ಸಹ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.


ಇದನ್ನೂ ಓದಿ: ಪ್ರತಿಭಟನಾ ಸ್ಥಳದಲ್ಲಿಯೇ ಈರುಳ್ಳಿ ಬಿತ್ತನೆ: ಹೋರಾಟದಲ್ಲಿಯೂ ಕೃಷಿ ಬಿಡಲೊಪ್ಪದ ರೈತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...