Homeಚಳವಳಿತಟ್ಟೆ ಚಳವಳಿ: ಮೋದಿಯವರ 'ಮನ್ ಕಿ ಬಾತ್' ವೇಳೆ ರಾಜ್ಯಾದ್ಯಂತ ತಟ್ಟೆ ಬಡಿದು ಪ್ರತಿಭಟನೆ

ತಟ್ಟೆ ಚಳವಳಿ: ಮೋದಿಯವರ ‘ಮನ್ ಕಿ ಬಾತ್’ ವೇಳೆ ರಾಜ್ಯಾದ್ಯಂತ ತಟ್ಟೆ ಬಡಿದು ಪ್ರತಿಭಟನೆ

ರೈತರ ಕರೆಗೆ ಓಗೊಟ್ಟು ರಾಯಚೂರಿನಲ್ಲಿ ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ ವತಿಯಿಂದ ತಟ್ಟೆ ಬಡಿಯುವ ಪ್ರತಿಭಟನೆ ನಡೆಸಲಾಯಿತು.

- Advertisement -
- Advertisement -

ದೆಹಲಿಯಲ್ಲಿನ ಹೋರಾಟನಿರತ ರೈತರ ಕರೆ ಮೇರೆಗೆ ಇಂದು ಪ್ರಧಾನಿ ನರೇಂದ್ರ ಮೋದಿಯವರ ಮನ್‌ ಕಿ ಬಾತ್ ಸಮಯದಲ್ಲಿ ರಾಜ್ಯಾದ್ಯಂತ ತಟ್ಟೆ ಬಡಿದು ಪ್ರತಿಭಟನೆ ನಡೆಸಲಾಯಿತು. ಮೋದಿಯವರು ಕೊರೊನಾ ಸಾಂಕ್ರಾಮಿಕದ ಸಮಯದಲ್ಲಿ ತಟ್ಟೆ ಬಡಿಯುವಂತೆ ಕರೆ ನೀಡಿದ್ದನ್ನು ಅನುಸರಿಸಿದ ರೈತರು ಇಂದು ಮೋದಿಯವರ ಭಾಷಣದ ವೇಳೆಯೇ ತಟ್ಟೆ ಬಡಿಯುವ ಮೂಲಕ ತಿರುಗೇಟು ನೀಡಿದ್ದಾರೆ.

ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ ಬೆಂಬಲಿಸಿ, ಜನ ವಿರೋಧಿ ನೀತಿಗಳನ್ನು ಖಂಡಿಸಿ ರೈತ, ದಲಿತ, ವಿದ್ಯಾರ್ಥಿ-ಯುವಜನ, ಮತ್ತು ಜನಪರ ಸಂಘಟನೆಗಳ ನೇತೃತ್ವದಲ್ಲಿ ತುಮಕೂರಿನಲ್ಲಿ ತಟ್ಟೆ ಬಡಿಯುವ ಚಳವಳಿ ನಡೆಸಲಾಯಿತು. ಟೌನ್ ಹಾಲ್ ವೃತ್ತದಲ್ಲಿ ಸೇರಿದ ನೂರಾರು ಕಾರ್ಯಕರ್ತರು ಬಿ.ಹೆಚ್. ರಸ್ತೆಯ ರಿಲೆಯನ್ಸ್ ಟ್ರೆಂಡ್ಸ್ ವರೆಗೆ ಮೆರವಣಿಗೆ ನಡೆಸಿ ತಟ್ಟೆ ಬಡಿಯುವ ಚಳುವಳಿ ನಡೆಸಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿ ರಾಜ್ಯ ರೈತ ಮತ್ತು ಹಸಿರು ಸೇನೆ ಜಿಲ್ಲಾಧ್ಯಕ್ಷ ಆನಂದ್ ಪಟೇಲ್  “ನರೇಂದ್ರ ಮೋದಿ ಪ್ರಧಾನಿ ಹುದ್ದೆಯ ಘನತೆ, ಗೌರವಕ್ಕೆ ಚ್ಯುತಿ ತರುವಂತಹ ಕೆಲಸ ಮಾಡುತ್ತಿದ್ದಾರೆ. ಪ್ರಜಾಪ್ರಭುತ್ವದ ಮೌಲ್ಯಗಳ ವಿರುದ್ಧ ನಡೆಯುತ್ತಿದ್ದು, ದೇಶದ ಕಾನೂನುಗಳನ್ನು ಧಿಕ್ಕರಿಸುತ್ತಿರುವ ಪ್ರಧಾನಿಗೆ ನಾಚಿಕೆ ಆಗಬೇಕು” ಎಂದು ವಾಗ್ದಾಳಿ ನಡೆಸಿದರು.

ಇಡೀ ದೇಶದ ಆರ್ಥಿಕತೆ ಕೆಲವೇ ಕುಟುಂಬಗಳ ಕೈಯಲ್ಲಿದೆ. ಹೀಗಾಗಿ ಆರ್ಥಿಕತೆ ಪಾತಾಳಕ್ಕೆ ಕುಸಿದಿದೆ. ಕೈಗಾರಿಕಾ ಕ್ಷೇತ್ರದಲ್ಲಿ ಹೂಡಿಕೆ ಮಾಡುವ ಬದಲು ಅಲ್ಪಸ್ವಲ್ಪ ಲಾಭ ಬರುತ್ತಿರುವ ಕೃಷಿ ಕ್ಷೇತ್ರದಲ್ಲಿ ಬಂಡವಾಳ ತೊಡಗಿಸಲು ಕಾರ್ಪೋರೇಟ್ ಕುಳಗಳಿಗೆ ಅವಕಾಶ ನೀಡಲಾಗುತ್ತಿದೆ. ಇದೇ ಕಾರಣಕ್ಕೆ ಕರಾಳ ಕೃಷಿ ಕಾಯ್ದೆ ಗಳನ್ನು ಜಾರಿಗೊಳಿಸಲಾಗಿದೆ. ಇದರಿಂದ ಸಣ್ಣ ಮತ್ತು ಮಧ್ಯಮ ರೈತರ ಕೈಯಲ್ಲಿದ್ದ ಭೂಮಿ ಇಲ್ಲವಾಗಲಿದೆ.  ಇದೇ ಪರಿಸ್ಥಿತಿ ಮುಂದುವರಿದರೆ ರೈತರು ಬೀದಿಗೆ ಬೀಳುವ ದಿನಗಳು ದೂರವಿಲ್ಲ ಎಂದು ಆತಂಕ ವ್ಯಕ್ತಪಡಿಸಿದರು.

ದೇಶದ ಬಡತನ ಹೆಚ್ಚುತ್ತಿದೆ. ನಿರುದ್ಯೋಗ ಸಮಸ್ಯೆ ಏರುಗತಿಯಲ್ಲಿ ಸಾಗಿದೆ. ಉದ್ಯೋಗ ಸಿಗುತ್ತಿಲ್ಲ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮನ್ ಕಿ ಬಾತ್ ನಲ್ಲಿ ಹೇಳುವ ಬದಲು ಖಾಲಿ ಮಾತುಗಳನ್ನು ಆಡುತ್ತಿದ್ದಾರೆ. ಅಂಬಾನಿ ಅದಾನಿ ಆದಾಯ ಹೆಚ್ಚಾದಂತೆ ರೈತರ ಆದಾಯ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗುತ್ತಿದೆ. ಬಹುಸಂಖ್ಯಾತರ ಓಟು ಪಡೆದು ಗೆದ್ದು ಬಂದ ಪ್ರಧಾನಿ ನರೇಂದ್ರ ಮೋದಿ ತಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳನ್ನು ಈಡೇರಿಸುವುದು ಬಿಟ್ಟು, ರೈತವಿರೋಧಿ ಕಾಯ್ದೆಗಳನ್ನು ಜಾರಿಗೊಳಿಸುತ್ತಿದ್ದಾರೆ. ಸ್ವಾಮಿನಾಥನ್ ವರದಿ ಜಾರಿ ಮತ್ತು 2 ಕೋಟಿ ಉದ್ಯೋಗದ ಭರವಸೆ ನೀಡಿಯೂ ಕೂಡ ಅದರ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಟೀಕಿಸಿದರು.

ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಪಿ.ಎನ್.ರಾಮಯ್ಯ ಮಾತನಾಡಿ “ಪ್ರಧಾನಿ ನರೇಂದ್ರ ಮೋದಿ ರೈತರು, ದಲಿತರು, ಕಾರ್ಮಿಕರು, ಮಹಿಳೆಯರ ಸಮಸ್ಯೆಗಳ ಬಗ್ಗೆ ಕಿವಿಗೊಡುತ್ತಿಲ್ಲ. ಹಿಂದಿನ ಪ್ರಧಾನಿಗಳು ರೈತರು ಸೇರಿದಂತೆ ಯಾರೇ ಪ್ರತಿಭಟನೆ ನಡೆಸಿದರೂ ಕೂಡಲೇ ಆ ಸಂಘಟನೆಗಳ ನಾಯಕರನ್ನು ಕರೆಸಿ ಮಾತುಕತೆ ನಡೆಸುವ ಪದ್ದತಿ ಇತ್ತು. ಈ ಪ್ರಧಾನಿ ಮೋದಿ ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರ ಬೇಡಿಕೆ ಬಗ್ಗೆ ಗಮನ ಕೊಡುತ್ತಿಲ್ಲ. ಕೃಷಿ ಕ್ಷೇತ್ರವನ್ನು ಉಳಿಸಬೇಕಾದ ಪ್ರಧಾನಿ ಕಾರ್ಪೋರೇಟ್ ಕಂಪನಿಗಳಿಗೆ ನೀಡುವುದಕ್ಕೆ ಮುಂದಾಗಿದ್ದಾರೆ. ದೇಶದಲ್ಲಿ ಏಕವ್ಯಕ್ತಿ ಆಡಳಿತ ನಡೆಯುತ್ತಿದೆ. ಬಿಜೆಪಿ ಸಂಸದರು, ಸಚಿವರು ರೈತರು ಮತ್ತು ಚಳವಳಿ ಕುರಿತು ಬಾಯಿಗೆ ಬಂದಂತೆ ಮಾತನಾಡುತ್ತಿರುವುದು ಸರಿಯಲ್ಲ ಎಂದರು.

ತಟ್ಟೆ ಬಡಿಯುವ ಮೆರವಣಿಗೆಯಲ್ಲಿ ರೈತ ಮುಖಂಡ ಕೆ.ಎಸ್.ಧನಂಜಯರಾಧ್ಯ, ರೈತ ಕೃಷಿ ಕಾರ್ಮಿಕ ಸಂಘಟನೆಯ ಎಸ್.ಎನ್.ಸ್ವಾಮಿ, ಅಜ್ಜಪ್ಪ, ಅಖಿಲ ಭಾರತ ಕಿಸಾನ್ ಸಭಾದ ಕಂಬೇಗೌಡ, ಡಾ. ಬಸವರಾಜು, ಡಾ. ಆರುಂಧತಿ, ಆರ್.ಕೆ.ಎಸ್.ನ ನವೀನ್, ರಮೇಶ್, ಲೋಕೇಶ್, ಮಹಿಳಾ ಸಂಘಟನೆಯ ಎಂ.ಡಿ.ಕಲ್ಯಾಣಿ, ಎಐಟಿಯುಟಿಯುಸಿಯ ಮಂಜುಳ, ಎಐಡಿಎಸ್ಒನ ಆಶ್ವಿನಿ, ರೈತ ಮುಖಂಡ ರವೀಶ್ ಅಜ್ಜಪ್ಪ ಇದ್ದರು.

ರೈತರ ಕರೆಗೆ ಓಗೊಟ್ಟು ರಾಯಚೂರಿನಲ್ಲಿ ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ ವತಿಯಿಂದ ತಟ್ಟೆ ಬಡಿಯುವ ಪ್ರತಿಭಟನೆ ನಡೆಸಲಾಯಿತು.

ದಾವಣಗೆರೆಯಲ್ಲಿ ಕರ್ನಾಟಕ ಜನಶಕ್ತಿಯ ಹಲವಾರು ಕಾರ್ಯಕರ್ತರು ತಟ್ಟೆ ಬಡಿಯುವ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಬೆಂಗಳೂರಿನಲ್ಲಿ ಕೃಷಿ ಕಾಯ್ದೆಗಳ ವಿರುದ್ಧದ ನಿರಂತರ ಹೋರಾಟ ಮುಂದುವರೆದಿದೆ. ಇಂದು ಮೌರ್ಯ ಸರ್ಕಲ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ನೂರಾರು ಸಿಖ್ ಯುವಕರು ಮೆರವಣಿಗೆಯಲ್ಲಿ ಬಂದು ಭಾಗವಹಿಸಿದರು. ಶತಾಯುಷಿ, ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್ ದೊರೆಸ್ವಾಮಿಯವರು ಸಹ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.


ಇದನ್ನೂ ಓದಿ: ಪ್ರತಿಭಟನಾ ಸ್ಥಳದಲ್ಲಿಯೇ ಈರುಳ್ಳಿ ಬಿತ್ತನೆ: ಹೋರಾಟದಲ್ಲಿಯೂ ಕೃಷಿ ಬಿಡಲೊಪ್ಪದ ರೈತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...