Homeಮುಖಪುಟಪ್ರಚಂಡ ಕುಳ್ಳನಿಗೆ ಜಯಣ್ಣ ಜೀವಬೆದರಿಕೆ ಹಾಕಿದರಾ!?

ಪ್ರಚಂಡ ಕುಳ್ಳನಿಗೆ ಜಯಣ್ಣ ಜೀವಬೆದರಿಕೆ ಹಾಕಿದರಾ!?

ವಿಷ್ಣು ಜೊತೆ ದ್ವಾರಕೀ ಹಲವಾರು ಸಿನಿಮಾ ಮಾಡಿ ದುಡ್ಡು ಮಾಡಿಕೊಂಡದ್ದಂತೂ ಸತ್ಯ. ತದನಂತರ ಅದೇ ವಿಷ್ಣು ಜೊತೆಗೂ ಹಣಕಾಸಿನ ವಿಚಾರವಾಗಿ ಸ್ನೇಹ ಕೆಡಿಸಿಕೊಂಡದ್ದೂ ಅಷ್ಟೇ ಸತ್ಯ. ಆದರೆ, ದ್ವಾರ್ಕಿ ಆರ್ಥಿಕ ಮುಗ್ಗಟ್ಟಿಗೆ ಬಿದ್ದಾಗ ಕೊನೆಗೆ ಅದೇ ವಿಷ್ಣು `ಆಪ್ತಮಿತ್ರ’ನಾಗಿ ಬಂದು ನೆರವಾಗಬೇಕಾಯ್ತು.

- Advertisement -
- Advertisement -

ಸಿನಿಮಾರಂಗದಲ್ಲಿ ನಡೆಯುತ್ತಿದ್ದ ಸ್ಟಾರ್‍ವಾರ್ ಈಗ ಹೊಸ ರೂಪ ತಳೆದು ನಿರ್ಮಾಪಕರ ವಾರ್ ಆಗಿ ಬದಲಾಗುತ್ತಿದೆ. ಸ್ಯಾಂಡಲ್‍ವುಡ್ ಹಳೆಯ ಬೇರಿನಂತಿದ್ದ ದ್ವಾರಕೀಶ್ ಮತ್ತು ನಿರ್ಮಾಪಕ ಜಯಣ್ಣನ ನಡುವಿನ ಶೀತಲ ಸಮರ ಈಗ ಬೀದಿಗೆ ಬಂದಿದ್ದು ಬೆಳಗ್ಗೆ ಒಬ್ಬರು, ಸಂಜೆ ಒಬ್ಬರು ಪ್ರೆಸ್‍ಮೀಟ್ ಮಾಡುತ್ತಾ ಆರೋಪ ಪ್ರತ್ಯಾರೋಪಗಳಲ್ಲಿ ಮುಳುಗಿಹೋಗಿದ್ದಾರೆ.

ದ್ವಾರಕೀಶ್ ನಟ, ನಿರ್ದೇಶಕರಷ್ಟೇ ಅಲ್ಲ ನಿರ್ಮಾಪಕರೂ ಹೌದು. ಅಂತೆಯೇ ಜಯಣ್ಣನೂ ಇತ್ತೀಚೆಗೆ ಹೆಸರು ಮಾಡುತ್ತಿರುವ ನಿರ್ಮಾಪಕ. ಸ್ಯಾಂಡಲ್‍ವುಡ್‍ನ ನಿರ್ಮಾಪಕರು ನೋಡೋಕೆ ತುಂಬಾ ಆತ್ಮೀಯ ಮಿತ್ರರಂತೆ ಇದ್ದರೂ ಒಳಗಿನ ಜಲಸ್‍ಗೇನೂ ಕಡಿಮೆಯಿಲ್ಲ. ಜಯಣ್ಣ ತಮ್ಮ ಮನೆಗೆ ನುಗ್ಗಿ ತನ್ನ ತಂದೆಗೆ ಜೀವಬೆದರಿಕೆ ಹಾಕಿದ್ದಾರೆ ದ್ವಾರ್ಕಿ ಎಚ್‍ಎಸ್‍ಆರ್ ಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಜಯಣ್ಣನ ಗ್ಯಾಂಗು ನಿಜಕ್ಕೂ ದ್ವಾರಕೀಶ್‍ಗೆ ಜೀವ ತೆಗೆಯುವುದಾಗಿ ಥ್ರೆಟ್ ಮಾಡಿದರಾ? ಎಂದು ಯೋಚಿಸುವುದು ಎಷ್ಟು ಮುಖ್ಯವೋ ಹಣಕಾಸು, ಸ್ನೇಹಸಂಬಂಧಗಳ ವಿಚಾರದಲ್ಲಿ ಕುಳ್ಳನ ಟ್ರ್ಯಾಕ್ ರೆಕಾರ್ಡ್ ಪರಿಶುದ್ಧವಾಗಿದೆಯಾ? ಎಂಬ ಪ್ರಶ್ನೆಯನ್ನೂ ಇಲ್ಲಿ ಕೇಳಿಕೊಳ್ಳಲೇಬೇಕಿದೆ. ಒಂದು ಕಾಲಕ್ಕೆ ಮೇಯರ್ ಮುತ್ತಣ್ಣ ಅನ್ನೋ ಆ ಕಾಲದ ಸೂಪರ್ ಹಿಟ್ ಸಿನಿಮಾ ಮಾಡಿ ರಾಜ್ ಸ್ಟಾರ್‍ವ್ಯಾಲ್ಯೂ ಸೂರೆ ಹೊಡೆದಿದ್ದ ಕುಳ್ಳ, ಆಮೇಲೆ ರಾಜ್-ವಿಷ್ಣು ನಡುವಿನ ಸ್ಟಾರ್‍ವಾರ್ ಅನ್ನೇ ಬಂಡವಾಳ ಮಾಡಿಕೊಂಡು ರಾಜ್‍ಗೆ ಪ್ರತಿಯಾಗಿ ವಿಷ್ಣುವನ್ನು ಕಟೆದು ನಿಲ್ಲಿಸುತ್ತೇನೆ ಅಂತ ಹೊರಟದ್ದು ಹಳೆಯ ಇತಿಹಾಸ. ವಿಷ್ಣು ಜೊತೆ ದ್ವಾರಕೀ ಹಲವಾರು ಸಿನಿಮಾ ಮಾಡಿ ದುಡ್ಡು ಮಾಡಿಕೊಂಡದ್ದಂತೂ ಸತ್ಯ. ತದನಂತರ ಅದೇ ವಿಷ್ಣು ಜೊತೆಗೂ ಹಣಕಾಸಿನ ವಿಚಾರವಾಗಿ ಸ್ನೇಹ ಕೆಡಿಸಿಕೊಂಡ ಪ್ರಚಂಡ ಕುಳ್ಳ, ವಿಷ್ಣುಗೆ ಪ್ರತಿಯಾಗಿ ಹೊಸ ಹೀರೋ ಹುಟ್ಟುಹಾಕುತ್ತೇನೆ ಅಂತ ಶಶಿಕುಮಾರ್‍ರನ್ನು ಹೀರೋ ಆಗಿ ಹಾಕಿಕೊಂಡು `ಹಳೇ ಕುಳ್ಳ ಹೊಸ ಕಳ್ಳ’ ಸಿನಿಮಾ ಮಾಡಿ ಕೈಸುಟ್ಟುಕೊಂಡದ್ದೂ ಉಂಟು. ಒಂದು ಕಾಲಕ್ಕೆ ದುಬಾರಿ ಸಿನಿಮಾಗಳ ಸಾಹಸಿ ನಿರ್ಮಾಪಕ ಅಂತಲೇ ಹೆಸರು ಮಾಡಿದ್ದ ದ್ವಾರ್ಕಿ ಆರ್ಥಿಕ ಮುಗ್ಗಟ್ಟಿಗೆ ಬಿದ್ದಾಗ ಕೊನೆಗೆ ಅದೇ ವಿಷ್ಣು `ಆಪ್ತಮಿತ್ರ’ನಾಗಿ ಬಂದು ನೆರವಾಗಬೇಕಾಯ್ತು. ಆದರೆ ಆ ಸಿನಿಮಾದ ಮೂಲಕ ಕಾಸು ಕಂಡ ದ್ವಾರಕೀಶ್ ಮತ್ತೆ ಹಳೆ ಚಾಳಿಗೆ ಕಟ್ಟುಬಿದ್ದು ಲೇವಾದೇವಿ ವ್ಯವಹಾರದಲ್ಲಿ ವಿಷ್ಣುವಿನಿಂದ ಪುನಾಃ ದೂರಾದರು. ವಿಷ್ಣು ನಿರ್ಗಮಿಸಿದ ನಂತರ ಅದೇ ವಿಷ್ಣು ಹೆಸರಲ್ಲಿ ಸಿನಿಮಾ ಮಾಡಲು ಮುಂದಾಗಿ ಒಂದಷ್ಟು ರಾಡಿ ಮಾಡಿಕೊಂಡದ್ದೂ ಉಂಟು. ತಮ್ಮ ಬ್ಯಾನರ್‍ನಲ್ಲಿ ಕೆಲಸ ಮಾಡಿದ ಕಲಾವಿದರು, ತಂತ್ರಜ್ಞರಿಗೆ ಬಾಕಿ ಉಳಿಸಿಕೊಂಡು ಸತಾಯಿಸಿದ ಉದಾಹರಣೆಗಳೂ ಇವೆ.

ಆದರೆ ಈಗ ದ್ವಾರಕೀಶ್ ಮತ್ತು ಜಯಣ್ಣರ ನಡುವಿನ ಈ ಬೀದಿ ಕಾಳಗಕ್ಕೆ ಕಾರಣವಾಗಿರೋದು ದ್ವಾರಕೀಶ್ ಮಗ ಯೋಗೀಶ್ ಮಾಡಿಕೊಂಡಿರುವ ಸಾಲ. ಆತ `ಅಮ್ಮಾ ಐ ಲವ್ ಯೂ’ ಸಿನಿಮಾ ಮಾಡಿದಾಗ ಅದರ ಡಿಸ್ಟ್ರಿಬ್ಯೂಷನ್‍ಗಾಗಿ ಜಯಣ್ಣನ ಬಳಿ 80 ಲಕ್ಷ ಸಾಲ ಪಡೆದಿದ್ದರು. ಅಲ್ಲದೆ ಆಯುಶ್‍ಮಾನ್ ಭವ ಸಿನಿಮಾ ಸೆಟ್ಟೇರಿದಾಗಲೂ ಜಯಣ್ಣನ ಬಳಿ 3 ಕೋಟಿ ಹಣ ಪಡೆದಿದ್ದರಂತೆ. ಹೀಗೆ ಬೇರೆಬೇರೆ ಸಮಯದಲ್ಲಿ ಒಟ್ಟು ಆರು ಕೋಟಿ ಸಾಲ ತನ್ನಿಂದ ಯೋಗೀಶ್ ಪಡೆದಿದ್ದಾರೆ ಅನ್ನೋದು ಜಯಣ್ಣನ ಅಂಬೋಣ.

ಆದರೆ ಕೊಟ್ಟ ಸಾಲ ವಾಪಸ್ ಕೇಳಿದಾಗ ತಾನು ತುಂಬಾ ಸಮಸ್ಯೆಯಲ್ಲಿದ್ದು ಜನವರಿ 30ರೊಳಗೆ ಹಣ ಕೊಡುವುದಾಗಿ ಯೋಗೀಶ್ ವಾಯಿದೆ ಪಡೆದುಕೊಂಡಿದ್ದರಂತೆ. ಈ ಮಧ್ಯೆ ಹಲವು ಬಾರಿ ಇದೇ ವಿಚಾರ ತನ್ನ ಹಾಗೂ ಯೋಗೀಶ್ ಸ್ನೇಹಿತರ ನಡುವೆ ಹಲವು ಬಾರಿ ಮೀಟಿಂಗ್ ನಡೆದು ಒಂದಷ್ಟು ಹಣವನ್ನೂ ಕೈಬಿಟ್ಟಿದ್ದೇನೆ ಎಂದು ಜಯಣ್ಣ ಹೇಳುತ್ತಿದ್ದಾರೆ.

ಜನವರಿ 30ರೊಳಗೆ ಹಣ ವಾಪಸ್ ನೀಡುವುದಾಗಿ ಹೇಳಿದ್ದ ಯೋಗೀಶ್ ಜನವರಿ 27ರಂದೇ ಜಯಣ್ಣ ಫೋನ್ ನಂಬರನ್ನು ಬ್ಲಾಕ್ ಮಾಡಿದ್ದರಂತೆ. ಫೋನ್ ಕರೆಗೆ ಯೋಗೀಶ್ ಸಿಗದಿದ್ದಾಗ ಮನೆಗೇ ಹೋಗಿ ಹಣ ಕೇಳೋ ಪ್ರಯತ್ನಕ್ಕೆ ಜಯಣ್ಣನ ಗ್ಯಾಂಗು ಮುಂದಾಗಿತ್ತು. ಅವಾಗಲೂ ದ್ವಾರಕೀಶ್ ಸಮಸ್ಯೆಯಲ್ಲಿದ್ದೇವೆ ಕಾಲಾವಕಾಶ ಕೊಡಿ ಎಂದು ಕೇಳಿದ್ದಾರೆ. ಆದರೆ, ಫೋನ್‍ಗೆ ಸಿಗದ ದ್ವಾರಕೀ ಮಗನ ಅವಾಂತರಕ್ಕೆ ಬೇಸತ್ತಿದ್ದ ಜಯಣ್ಣ ಇದಕ್ಕೆ ಒಪ್ಪಿಲ್ಲ. ಈ ಸಂದರ್ಭದಲ್ಲಿ ಫೈನಾನ್ಶಿಯರ್ ರಮೇಶ್ ಏರುಧ್ವನಿಯಲ್ಲಿ ಕೂಗಾಡಿದ್ದಾರೆ.

ಅಲ್ಲದೆ, ಐ ಲವ್ ಯೂ ಸಿನಿಮಾ ಮಾಡುವಾಗ ಯೋಗೀಶ್ ನಿರ್ಮಾಪಕ ಮನೋಹರ್ ಬಳಿ 50 ಲಕ್ಷ ಪಡೆದಿದ್ದು, ಅದನ್ನೂ ಇನ್ನೂ ತೀರಿಸಿಲ್ಲ. ಅದಷ್ಟೇ ಅಲ್ಲದೆ, ಆಯುಷ್‍ಮಾನ್ ಭವ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದ ರಚಿತಾರಾಮ್ ಅವರಿಗೂ ಇನ್ನೂ 75% ಸಂಭಾವನೆ ಕೊಟ್ಟೇ ಇಲ್ಲ, ಶಿವರಾಜ್‍ಕುಮಾರ್‍ಗೂ ಕೂಡ ಪೂರ್ತಿ ಸಂಭಾವನೆ ನೀಡಿಲ್ಲ, ಅದೇ ಸಿನಿಮಾದ ಸ್ಟಂಟ್ ಮಾಡಿದ್ದ ರವಿವರ್ಮ ಹಾಗೂ ಕೊರಿಯೋಗ್ರಫಿ ಮಾಡಿದ್ದ ಹರ್ಷ ಅವರಿಗೂ ಇನ್ನೂ ಪೇಮೆಂಟ್ ಮಾಡಿಲ್ಲ. ಇದಲ್ಲದೆ 11 ಕೋಟಿ ಬಜೆಟ್‍ನ ಸಿನಿಮಾಕ್ಕೆ 20 ಕೋಟಿ ಖರ್ಚು ತೋರಿಸಿದ್ದೀರಿ ಅಂತ ಅವರೆಲ್ಲ ರೇಗಾಡಿದ್ದಾರೆ.

ಈ ರೇಗಾಟ ಕೂಗಾಟದಲ್ಲಿ ನಿಜಕ್ಕೂ ದ್ವಾರ್ಕಿಗೆ ಜಯಣ್ಣನ ಗ್ಯಾಂಗಿನಿಂದ ಜೀವಬೆದರಿಕೆ ಹೊರಬಂತಾ? ನಿಜಕ್ಕೂ ದ್ವಾರ್ಕಿಯನ್ನು ಕೊಲ್ಲುವ ಇರಾದೆ ಜಯಣ್ಣನ ಗ್ಯಾಂಗಿದೆಯಾ? ಕೊಂದರೆ ಅವರ ದುಡ್ಡು ವಾಪಾಸ್ಸು ಬರುತ್ತಾ? ಈ ಪ್ರಶ್ನೆಗೆ ಉತ್ತರ ಸುಲಭಕ್ಕೆ ಗೊತ್ತಾಗುವಂತದ್ದಲ್ಲ. ಆದರೆ ದ್ವಾರಕೀಶ್ ಸದ್ಯಕ್ಕೆ ಆರ್ಥಿಕ ಮುಗ್ಗಟ್ಟಿನಲ್ಲಿರುವುದಂತೂ ಸತ್ಯ. ವರ್ತನೆಗಳು ಎಂತದ್ದೇ ಇರಲಿ, ಕನ್ನಡ ಸಿನಿಮಾರಂಗದಲ್ಲಿ ತನ್ನದೇ ಛಾಪು ಮೂಡಿಸಿದ ನಟ ಕಂ ನಿರ್ದೇಶಕ ಕಂ ನಿರ್ಮಾಪಕನಾದ ಹಿರಿವಯಸ್ಸಿನ ದ್ವಾರಕೀಶ್‍ಗೆ ಒಂದೊಮ್ಮೆ ನಿಜಕ್ಕೂ ಜೀವಬೆದರಿಕೆ ಹಾಕಿದ್ದರೆ ಅದು ಖಂಡಿತ ತಪ್ಪು. ಆದರೆ ಕುಳ್ಳನ ಹಳೇ ವರಸೆಗಳು ಒಂದು ಕ್ಷಣ ಈ ಆರೋಪವನ್ನು ಅನುಮಾನಿಸುವಂತೆ ಮಾಡುತ್ತಿರುವುದೂ ಸುಳ್ಳಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...