Homeಮುಖಪುಟಪ್ರಚಂಡ ಕುಳ್ಳನಿಗೆ ಜಯಣ್ಣ ಜೀವಬೆದರಿಕೆ ಹಾಕಿದರಾ!?

ಪ್ರಚಂಡ ಕುಳ್ಳನಿಗೆ ಜಯಣ್ಣ ಜೀವಬೆದರಿಕೆ ಹಾಕಿದರಾ!?

ವಿಷ್ಣು ಜೊತೆ ದ್ವಾರಕೀ ಹಲವಾರು ಸಿನಿಮಾ ಮಾಡಿ ದುಡ್ಡು ಮಾಡಿಕೊಂಡದ್ದಂತೂ ಸತ್ಯ. ತದನಂತರ ಅದೇ ವಿಷ್ಣು ಜೊತೆಗೂ ಹಣಕಾಸಿನ ವಿಚಾರವಾಗಿ ಸ್ನೇಹ ಕೆಡಿಸಿಕೊಂಡದ್ದೂ ಅಷ್ಟೇ ಸತ್ಯ. ಆದರೆ, ದ್ವಾರ್ಕಿ ಆರ್ಥಿಕ ಮುಗ್ಗಟ್ಟಿಗೆ ಬಿದ್ದಾಗ ಕೊನೆಗೆ ಅದೇ ವಿಷ್ಣು `ಆಪ್ತಮಿತ್ರ’ನಾಗಿ ಬಂದು ನೆರವಾಗಬೇಕಾಯ್ತು.

- Advertisement -
- Advertisement -

ಸಿನಿಮಾರಂಗದಲ್ಲಿ ನಡೆಯುತ್ತಿದ್ದ ಸ್ಟಾರ್‍ವಾರ್ ಈಗ ಹೊಸ ರೂಪ ತಳೆದು ನಿರ್ಮಾಪಕರ ವಾರ್ ಆಗಿ ಬದಲಾಗುತ್ತಿದೆ. ಸ್ಯಾಂಡಲ್‍ವುಡ್ ಹಳೆಯ ಬೇರಿನಂತಿದ್ದ ದ್ವಾರಕೀಶ್ ಮತ್ತು ನಿರ್ಮಾಪಕ ಜಯಣ್ಣನ ನಡುವಿನ ಶೀತಲ ಸಮರ ಈಗ ಬೀದಿಗೆ ಬಂದಿದ್ದು ಬೆಳಗ್ಗೆ ಒಬ್ಬರು, ಸಂಜೆ ಒಬ್ಬರು ಪ್ರೆಸ್‍ಮೀಟ್ ಮಾಡುತ್ತಾ ಆರೋಪ ಪ್ರತ್ಯಾರೋಪಗಳಲ್ಲಿ ಮುಳುಗಿಹೋಗಿದ್ದಾರೆ.

ದ್ವಾರಕೀಶ್ ನಟ, ನಿರ್ದೇಶಕರಷ್ಟೇ ಅಲ್ಲ ನಿರ್ಮಾಪಕರೂ ಹೌದು. ಅಂತೆಯೇ ಜಯಣ್ಣನೂ ಇತ್ತೀಚೆಗೆ ಹೆಸರು ಮಾಡುತ್ತಿರುವ ನಿರ್ಮಾಪಕ. ಸ್ಯಾಂಡಲ್‍ವುಡ್‍ನ ನಿರ್ಮಾಪಕರು ನೋಡೋಕೆ ತುಂಬಾ ಆತ್ಮೀಯ ಮಿತ್ರರಂತೆ ಇದ್ದರೂ ಒಳಗಿನ ಜಲಸ್‍ಗೇನೂ ಕಡಿಮೆಯಿಲ್ಲ. ಜಯಣ್ಣ ತಮ್ಮ ಮನೆಗೆ ನುಗ್ಗಿ ತನ್ನ ತಂದೆಗೆ ಜೀವಬೆದರಿಕೆ ಹಾಕಿದ್ದಾರೆ ದ್ವಾರ್ಕಿ ಎಚ್‍ಎಸ್‍ಆರ್ ಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಜಯಣ್ಣನ ಗ್ಯಾಂಗು ನಿಜಕ್ಕೂ ದ್ವಾರಕೀಶ್‍ಗೆ ಜೀವ ತೆಗೆಯುವುದಾಗಿ ಥ್ರೆಟ್ ಮಾಡಿದರಾ? ಎಂದು ಯೋಚಿಸುವುದು ಎಷ್ಟು ಮುಖ್ಯವೋ ಹಣಕಾಸು, ಸ್ನೇಹಸಂಬಂಧಗಳ ವಿಚಾರದಲ್ಲಿ ಕುಳ್ಳನ ಟ್ರ್ಯಾಕ್ ರೆಕಾರ್ಡ್ ಪರಿಶುದ್ಧವಾಗಿದೆಯಾ? ಎಂಬ ಪ್ರಶ್ನೆಯನ್ನೂ ಇಲ್ಲಿ ಕೇಳಿಕೊಳ್ಳಲೇಬೇಕಿದೆ. ಒಂದು ಕಾಲಕ್ಕೆ ಮೇಯರ್ ಮುತ್ತಣ್ಣ ಅನ್ನೋ ಆ ಕಾಲದ ಸೂಪರ್ ಹಿಟ್ ಸಿನಿಮಾ ಮಾಡಿ ರಾಜ್ ಸ್ಟಾರ್‍ವ್ಯಾಲ್ಯೂ ಸೂರೆ ಹೊಡೆದಿದ್ದ ಕುಳ್ಳ, ಆಮೇಲೆ ರಾಜ್-ವಿಷ್ಣು ನಡುವಿನ ಸ್ಟಾರ್‍ವಾರ್ ಅನ್ನೇ ಬಂಡವಾಳ ಮಾಡಿಕೊಂಡು ರಾಜ್‍ಗೆ ಪ್ರತಿಯಾಗಿ ವಿಷ್ಣುವನ್ನು ಕಟೆದು ನಿಲ್ಲಿಸುತ್ತೇನೆ ಅಂತ ಹೊರಟದ್ದು ಹಳೆಯ ಇತಿಹಾಸ. ವಿಷ್ಣು ಜೊತೆ ದ್ವಾರಕೀ ಹಲವಾರು ಸಿನಿಮಾ ಮಾಡಿ ದುಡ್ಡು ಮಾಡಿಕೊಂಡದ್ದಂತೂ ಸತ್ಯ. ತದನಂತರ ಅದೇ ವಿಷ್ಣು ಜೊತೆಗೂ ಹಣಕಾಸಿನ ವಿಚಾರವಾಗಿ ಸ್ನೇಹ ಕೆಡಿಸಿಕೊಂಡ ಪ್ರಚಂಡ ಕುಳ್ಳ, ವಿಷ್ಣುಗೆ ಪ್ರತಿಯಾಗಿ ಹೊಸ ಹೀರೋ ಹುಟ್ಟುಹಾಕುತ್ತೇನೆ ಅಂತ ಶಶಿಕುಮಾರ್‍ರನ್ನು ಹೀರೋ ಆಗಿ ಹಾಕಿಕೊಂಡು `ಹಳೇ ಕುಳ್ಳ ಹೊಸ ಕಳ್ಳ’ ಸಿನಿಮಾ ಮಾಡಿ ಕೈಸುಟ್ಟುಕೊಂಡದ್ದೂ ಉಂಟು. ಒಂದು ಕಾಲಕ್ಕೆ ದುಬಾರಿ ಸಿನಿಮಾಗಳ ಸಾಹಸಿ ನಿರ್ಮಾಪಕ ಅಂತಲೇ ಹೆಸರು ಮಾಡಿದ್ದ ದ್ವಾರ್ಕಿ ಆರ್ಥಿಕ ಮುಗ್ಗಟ್ಟಿಗೆ ಬಿದ್ದಾಗ ಕೊನೆಗೆ ಅದೇ ವಿಷ್ಣು `ಆಪ್ತಮಿತ್ರ’ನಾಗಿ ಬಂದು ನೆರವಾಗಬೇಕಾಯ್ತು. ಆದರೆ ಆ ಸಿನಿಮಾದ ಮೂಲಕ ಕಾಸು ಕಂಡ ದ್ವಾರಕೀಶ್ ಮತ್ತೆ ಹಳೆ ಚಾಳಿಗೆ ಕಟ್ಟುಬಿದ್ದು ಲೇವಾದೇವಿ ವ್ಯವಹಾರದಲ್ಲಿ ವಿಷ್ಣುವಿನಿಂದ ಪುನಾಃ ದೂರಾದರು. ವಿಷ್ಣು ನಿರ್ಗಮಿಸಿದ ನಂತರ ಅದೇ ವಿಷ್ಣು ಹೆಸರಲ್ಲಿ ಸಿನಿಮಾ ಮಾಡಲು ಮುಂದಾಗಿ ಒಂದಷ್ಟು ರಾಡಿ ಮಾಡಿಕೊಂಡದ್ದೂ ಉಂಟು. ತಮ್ಮ ಬ್ಯಾನರ್‍ನಲ್ಲಿ ಕೆಲಸ ಮಾಡಿದ ಕಲಾವಿದರು, ತಂತ್ರಜ್ಞರಿಗೆ ಬಾಕಿ ಉಳಿಸಿಕೊಂಡು ಸತಾಯಿಸಿದ ಉದಾಹರಣೆಗಳೂ ಇವೆ.

ಆದರೆ ಈಗ ದ್ವಾರಕೀಶ್ ಮತ್ತು ಜಯಣ್ಣರ ನಡುವಿನ ಈ ಬೀದಿ ಕಾಳಗಕ್ಕೆ ಕಾರಣವಾಗಿರೋದು ದ್ವಾರಕೀಶ್ ಮಗ ಯೋಗೀಶ್ ಮಾಡಿಕೊಂಡಿರುವ ಸಾಲ. ಆತ `ಅಮ್ಮಾ ಐ ಲವ್ ಯೂ’ ಸಿನಿಮಾ ಮಾಡಿದಾಗ ಅದರ ಡಿಸ್ಟ್ರಿಬ್ಯೂಷನ್‍ಗಾಗಿ ಜಯಣ್ಣನ ಬಳಿ 80 ಲಕ್ಷ ಸಾಲ ಪಡೆದಿದ್ದರು. ಅಲ್ಲದೆ ಆಯುಶ್‍ಮಾನ್ ಭವ ಸಿನಿಮಾ ಸೆಟ್ಟೇರಿದಾಗಲೂ ಜಯಣ್ಣನ ಬಳಿ 3 ಕೋಟಿ ಹಣ ಪಡೆದಿದ್ದರಂತೆ. ಹೀಗೆ ಬೇರೆಬೇರೆ ಸಮಯದಲ್ಲಿ ಒಟ್ಟು ಆರು ಕೋಟಿ ಸಾಲ ತನ್ನಿಂದ ಯೋಗೀಶ್ ಪಡೆದಿದ್ದಾರೆ ಅನ್ನೋದು ಜಯಣ್ಣನ ಅಂಬೋಣ.

ಆದರೆ ಕೊಟ್ಟ ಸಾಲ ವಾಪಸ್ ಕೇಳಿದಾಗ ತಾನು ತುಂಬಾ ಸಮಸ್ಯೆಯಲ್ಲಿದ್ದು ಜನವರಿ 30ರೊಳಗೆ ಹಣ ಕೊಡುವುದಾಗಿ ಯೋಗೀಶ್ ವಾಯಿದೆ ಪಡೆದುಕೊಂಡಿದ್ದರಂತೆ. ಈ ಮಧ್ಯೆ ಹಲವು ಬಾರಿ ಇದೇ ವಿಚಾರ ತನ್ನ ಹಾಗೂ ಯೋಗೀಶ್ ಸ್ನೇಹಿತರ ನಡುವೆ ಹಲವು ಬಾರಿ ಮೀಟಿಂಗ್ ನಡೆದು ಒಂದಷ್ಟು ಹಣವನ್ನೂ ಕೈಬಿಟ್ಟಿದ್ದೇನೆ ಎಂದು ಜಯಣ್ಣ ಹೇಳುತ್ತಿದ್ದಾರೆ.

ಜನವರಿ 30ರೊಳಗೆ ಹಣ ವಾಪಸ್ ನೀಡುವುದಾಗಿ ಹೇಳಿದ್ದ ಯೋಗೀಶ್ ಜನವರಿ 27ರಂದೇ ಜಯಣ್ಣ ಫೋನ್ ನಂಬರನ್ನು ಬ್ಲಾಕ್ ಮಾಡಿದ್ದರಂತೆ. ಫೋನ್ ಕರೆಗೆ ಯೋಗೀಶ್ ಸಿಗದಿದ್ದಾಗ ಮನೆಗೇ ಹೋಗಿ ಹಣ ಕೇಳೋ ಪ್ರಯತ್ನಕ್ಕೆ ಜಯಣ್ಣನ ಗ್ಯಾಂಗು ಮುಂದಾಗಿತ್ತು. ಅವಾಗಲೂ ದ್ವಾರಕೀಶ್ ಸಮಸ್ಯೆಯಲ್ಲಿದ್ದೇವೆ ಕಾಲಾವಕಾಶ ಕೊಡಿ ಎಂದು ಕೇಳಿದ್ದಾರೆ. ಆದರೆ, ಫೋನ್‍ಗೆ ಸಿಗದ ದ್ವಾರಕೀ ಮಗನ ಅವಾಂತರಕ್ಕೆ ಬೇಸತ್ತಿದ್ದ ಜಯಣ್ಣ ಇದಕ್ಕೆ ಒಪ್ಪಿಲ್ಲ. ಈ ಸಂದರ್ಭದಲ್ಲಿ ಫೈನಾನ್ಶಿಯರ್ ರಮೇಶ್ ಏರುಧ್ವನಿಯಲ್ಲಿ ಕೂಗಾಡಿದ್ದಾರೆ.

ಅಲ್ಲದೆ, ಐ ಲವ್ ಯೂ ಸಿನಿಮಾ ಮಾಡುವಾಗ ಯೋಗೀಶ್ ನಿರ್ಮಾಪಕ ಮನೋಹರ್ ಬಳಿ 50 ಲಕ್ಷ ಪಡೆದಿದ್ದು, ಅದನ್ನೂ ಇನ್ನೂ ತೀರಿಸಿಲ್ಲ. ಅದಷ್ಟೇ ಅಲ್ಲದೆ, ಆಯುಷ್‍ಮಾನ್ ಭವ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದ ರಚಿತಾರಾಮ್ ಅವರಿಗೂ ಇನ್ನೂ 75% ಸಂಭಾವನೆ ಕೊಟ್ಟೇ ಇಲ್ಲ, ಶಿವರಾಜ್‍ಕುಮಾರ್‍ಗೂ ಕೂಡ ಪೂರ್ತಿ ಸಂಭಾವನೆ ನೀಡಿಲ್ಲ, ಅದೇ ಸಿನಿಮಾದ ಸ್ಟಂಟ್ ಮಾಡಿದ್ದ ರವಿವರ್ಮ ಹಾಗೂ ಕೊರಿಯೋಗ್ರಫಿ ಮಾಡಿದ್ದ ಹರ್ಷ ಅವರಿಗೂ ಇನ್ನೂ ಪೇಮೆಂಟ್ ಮಾಡಿಲ್ಲ. ಇದಲ್ಲದೆ 11 ಕೋಟಿ ಬಜೆಟ್‍ನ ಸಿನಿಮಾಕ್ಕೆ 20 ಕೋಟಿ ಖರ್ಚು ತೋರಿಸಿದ್ದೀರಿ ಅಂತ ಅವರೆಲ್ಲ ರೇಗಾಡಿದ್ದಾರೆ.

ಈ ರೇಗಾಟ ಕೂಗಾಟದಲ್ಲಿ ನಿಜಕ್ಕೂ ದ್ವಾರ್ಕಿಗೆ ಜಯಣ್ಣನ ಗ್ಯಾಂಗಿನಿಂದ ಜೀವಬೆದರಿಕೆ ಹೊರಬಂತಾ? ನಿಜಕ್ಕೂ ದ್ವಾರ್ಕಿಯನ್ನು ಕೊಲ್ಲುವ ಇರಾದೆ ಜಯಣ್ಣನ ಗ್ಯಾಂಗಿದೆಯಾ? ಕೊಂದರೆ ಅವರ ದುಡ್ಡು ವಾಪಾಸ್ಸು ಬರುತ್ತಾ? ಈ ಪ್ರಶ್ನೆಗೆ ಉತ್ತರ ಸುಲಭಕ್ಕೆ ಗೊತ್ತಾಗುವಂತದ್ದಲ್ಲ. ಆದರೆ ದ್ವಾರಕೀಶ್ ಸದ್ಯಕ್ಕೆ ಆರ್ಥಿಕ ಮುಗ್ಗಟ್ಟಿನಲ್ಲಿರುವುದಂತೂ ಸತ್ಯ. ವರ್ತನೆಗಳು ಎಂತದ್ದೇ ಇರಲಿ, ಕನ್ನಡ ಸಿನಿಮಾರಂಗದಲ್ಲಿ ತನ್ನದೇ ಛಾಪು ಮೂಡಿಸಿದ ನಟ ಕಂ ನಿರ್ದೇಶಕ ಕಂ ನಿರ್ಮಾಪಕನಾದ ಹಿರಿವಯಸ್ಸಿನ ದ್ವಾರಕೀಶ್‍ಗೆ ಒಂದೊಮ್ಮೆ ನಿಜಕ್ಕೂ ಜೀವಬೆದರಿಕೆ ಹಾಕಿದ್ದರೆ ಅದು ಖಂಡಿತ ತಪ್ಪು. ಆದರೆ ಕುಳ್ಳನ ಹಳೇ ವರಸೆಗಳು ಒಂದು ಕ್ಷಣ ಈ ಆರೋಪವನ್ನು ಅನುಮಾನಿಸುವಂತೆ ಮಾಡುತ್ತಿರುವುದೂ ಸುಳ್ಳಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...