Homeಮುಖಪುಟಪ್ರಚಂಡ ಕುಳ್ಳನಿಗೆ ಜಯಣ್ಣ ಜೀವಬೆದರಿಕೆ ಹಾಕಿದರಾ!?

ಪ್ರಚಂಡ ಕುಳ್ಳನಿಗೆ ಜಯಣ್ಣ ಜೀವಬೆದರಿಕೆ ಹಾಕಿದರಾ!?

ವಿಷ್ಣು ಜೊತೆ ದ್ವಾರಕೀ ಹಲವಾರು ಸಿನಿಮಾ ಮಾಡಿ ದುಡ್ಡು ಮಾಡಿಕೊಂಡದ್ದಂತೂ ಸತ್ಯ. ತದನಂತರ ಅದೇ ವಿಷ್ಣು ಜೊತೆಗೂ ಹಣಕಾಸಿನ ವಿಚಾರವಾಗಿ ಸ್ನೇಹ ಕೆಡಿಸಿಕೊಂಡದ್ದೂ ಅಷ್ಟೇ ಸತ್ಯ. ಆದರೆ, ದ್ವಾರ್ಕಿ ಆರ್ಥಿಕ ಮುಗ್ಗಟ್ಟಿಗೆ ಬಿದ್ದಾಗ ಕೊನೆಗೆ ಅದೇ ವಿಷ್ಣು `ಆಪ್ತಮಿತ್ರ’ನಾಗಿ ಬಂದು ನೆರವಾಗಬೇಕಾಯ್ತು.

- Advertisement -
- Advertisement -

ಸಿನಿಮಾರಂಗದಲ್ಲಿ ನಡೆಯುತ್ತಿದ್ದ ಸ್ಟಾರ್‍ವಾರ್ ಈಗ ಹೊಸ ರೂಪ ತಳೆದು ನಿರ್ಮಾಪಕರ ವಾರ್ ಆಗಿ ಬದಲಾಗುತ್ತಿದೆ. ಸ್ಯಾಂಡಲ್‍ವುಡ್ ಹಳೆಯ ಬೇರಿನಂತಿದ್ದ ದ್ವಾರಕೀಶ್ ಮತ್ತು ನಿರ್ಮಾಪಕ ಜಯಣ್ಣನ ನಡುವಿನ ಶೀತಲ ಸಮರ ಈಗ ಬೀದಿಗೆ ಬಂದಿದ್ದು ಬೆಳಗ್ಗೆ ಒಬ್ಬರು, ಸಂಜೆ ಒಬ್ಬರು ಪ್ರೆಸ್‍ಮೀಟ್ ಮಾಡುತ್ತಾ ಆರೋಪ ಪ್ರತ್ಯಾರೋಪಗಳಲ್ಲಿ ಮುಳುಗಿಹೋಗಿದ್ದಾರೆ.

ದ್ವಾರಕೀಶ್ ನಟ, ನಿರ್ದೇಶಕರಷ್ಟೇ ಅಲ್ಲ ನಿರ್ಮಾಪಕರೂ ಹೌದು. ಅಂತೆಯೇ ಜಯಣ್ಣನೂ ಇತ್ತೀಚೆಗೆ ಹೆಸರು ಮಾಡುತ್ತಿರುವ ನಿರ್ಮಾಪಕ. ಸ್ಯಾಂಡಲ್‍ವುಡ್‍ನ ನಿರ್ಮಾಪಕರು ನೋಡೋಕೆ ತುಂಬಾ ಆತ್ಮೀಯ ಮಿತ್ರರಂತೆ ಇದ್ದರೂ ಒಳಗಿನ ಜಲಸ್‍ಗೇನೂ ಕಡಿಮೆಯಿಲ್ಲ. ಜಯಣ್ಣ ತಮ್ಮ ಮನೆಗೆ ನುಗ್ಗಿ ತನ್ನ ತಂದೆಗೆ ಜೀವಬೆದರಿಕೆ ಹಾಕಿದ್ದಾರೆ ದ್ವಾರ್ಕಿ ಎಚ್‍ಎಸ್‍ಆರ್ ಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಜಯಣ್ಣನ ಗ್ಯಾಂಗು ನಿಜಕ್ಕೂ ದ್ವಾರಕೀಶ್‍ಗೆ ಜೀವ ತೆಗೆಯುವುದಾಗಿ ಥ್ರೆಟ್ ಮಾಡಿದರಾ? ಎಂದು ಯೋಚಿಸುವುದು ಎಷ್ಟು ಮುಖ್ಯವೋ ಹಣಕಾಸು, ಸ್ನೇಹಸಂಬಂಧಗಳ ವಿಚಾರದಲ್ಲಿ ಕುಳ್ಳನ ಟ್ರ್ಯಾಕ್ ರೆಕಾರ್ಡ್ ಪರಿಶುದ್ಧವಾಗಿದೆಯಾ? ಎಂಬ ಪ್ರಶ್ನೆಯನ್ನೂ ಇಲ್ಲಿ ಕೇಳಿಕೊಳ್ಳಲೇಬೇಕಿದೆ. ಒಂದು ಕಾಲಕ್ಕೆ ಮೇಯರ್ ಮುತ್ತಣ್ಣ ಅನ್ನೋ ಆ ಕಾಲದ ಸೂಪರ್ ಹಿಟ್ ಸಿನಿಮಾ ಮಾಡಿ ರಾಜ್ ಸ್ಟಾರ್‍ವ್ಯಾಲ್ಯೂ ಸೂರೆ ಹೊಡೆದಿದ್ದ ಕುಳ್ಳ, ಆಮೇಲೆ ರಾಜ್-ವಿಷ್ಣು ನಡುವಿನ ಸ್ಟಾರ್‍ವಾರ್ ಅನ್ನೇ ಬಂಡವಾಳ ಮಾಡಿಕೊಂಡು ರಾಜ್‍ಗೆ ಪ್ರತಿಯಾಗಿ ವಿಷ್ಣುವನ್ನು ಕಟೆದು ನಿಲ್ಲಿಸುತ್ತೇನೆ ಅಂತ ಹೊರಟದ್ದು ಹಳೆಯ ಇತಿಹಾಸ. ವಿಷ್ಣು ಜೊತೆ ದ್ವಾರಕೀ ಹಲವಾರು ಸಿನಿಮಾ ಮಾಡಿ ದುಡ್ಡು ಮಾಡಿಕೊಂಡದ್ದಂತೂ ಸತ್ಯ. ತದನಂತರ ಅದೇ ವಿಷ್ಣು ಜೊತೆಗೂ ಹಣಕಾಸಿನ ವಿಚಾರವಾಗಿ ಸ್ನೇಹ ಕೆಡಿಸಿಕೊಂಡ ಪ್ರಚಂಡ ಕುಳ್ಳ, ವಿಷ್ಣುಗೆ ಪ್ರತಿಯಾಗಿ ಹೊಸ ಹೀರೋ ಹುಟ್ಟುಹಾಕುತ್ತೇನೆ ಅಂತ ಶಶಿಕುಮಾರ್‍ರನ್ನು ಹೀರೋ ಆಗಿ ಹಾಕಿಕೊಂಡು `ಹಳೇ ಕುಳ್ಳ ಹೊಸ ಕಳ್ಳ’ ಸಿನಿಮಾ ಮಾಡಿ ಕೈಸುಟ್ಟುಕೊಂಡದ್ದೂ ಉಂಟು. ಒಂದು ಕಾಲಕ್ಕೆ ದುಬಾರಿ ಸಿನಿಮಾಗಳ ಸಾಹಸಿ ನಿರ್ಮಾಪಕ ಅಂತಲೇ ಹೆಸರು ಮಾಡಿದ್ದ ದ್ವಾರ್ಕಿ ಆರ್ಥಿಕ ಮುಗ್ಗಟ್ಟಿಗೆ ಬಿದ್ದಾಗ ಕೊನೆಗೆ ಅದೇ ವಿಷ್ಣು `ಆಪ್ತಮಿತ್ರ’ನಾಗಿ ಬಂದು ನೆರವಾಗಬೇಕಾಯ್ತು. ಆದರೆ ಆ ಸಿನಿಮಾದ ಮೂಲಕ ಕಾಸು ಕಂಡ ದ್ವಾರಕೀಶ್ ಮತ್ತೆ ಹಳೆ ಚಾಳಿಗೆ ಕಟ್ಟುಬಿದ್ದು ಲೇವಾದೇವಿ ವ್ಯವಹಾರದಲ್ಲಿ ವಿಷ್ಣುವಿನಿಂದ ಪುನಾಃ ದೂರಾದರು. ವಿಷ್ಣು ನಿರ್ಗಮಿಸಿದ ನಂತರ ಅದೇ ವಿಷ್ಣು ಹೆಸರಲ್ಲಿ ಸಿನಿಮಾ ಮಾಡಲು ಮುಂದಾಗಿ ಒಂದಷ್ಟು ರಾಡಿ ಮಾಡಿಕೊಂಡದ್ದೂ ಉಂಟು. ತಮ್ಮ ಬ್ಯಾನರ್‍ನಲ್ಲಿ ಕೆಲಸ ಮಾಡಿದ ಕಲಾವಿದರು, ತಂತ್ರಜ್ಞರಿಗೆ ಬಾಕಿ ಉಳಿಸಿಕೊಂಡು ಸತಾಯಿಸಿದ ಉದಾಹರಣೆಗಳೂ ಇವೆ.

ಆದರೆ ಈಗ ದ್ವಾರಕೀಶ್ ಮತ್ತು ಜಯಣ್ಣರ ನಡುವಿನ ಈ ಬೀದಿ ಕಾಳಗಕ್ಕೆ ಕಾರಣವಾಗಿರೋದು ದ್ವಾರಕೀಶ್ ಮಗ ಯೋಗೀಶ್ ಮಾಡಿಕೊಂಡಿರುವ ಸಾಲ. ಆತ `ಅಮ್ಮಾ ಐ ಲವ್ ಯೂ’ ಸಿನಿಮಾ ಮಾಡಿದಾಗ ಅದರ ಡಿಸ್ಟ್ರಿಬ್ಯೂಷನ್‍ಗಾಗಿ ಜಯಣ್ಣನ ಬಳಿ 80 ಲಕ್ಷ ಸಾಲ ಪಡೆದಿದ್ದರು. ಅಲ್ಲದೆ ಆಯುಶ್‍ಮಾನ್ ಭವ ಸಿನಿಮಾ ಸೆಟ್ಟೇರಿದಾಗಲೂ ಜಯಣ್ಣನ ಬಳಿ 3 ಕೋಟಿ ಹಣ ಪಡೆದಿದ್ದರಂತೆ. ಹೀಗೆ ಬೇರೆಬೇರೆ ಸಮಯದಲ್ಲಿ ಒಟ್ಟು ಆರು ಕೋಟಿ ಸಾಲ ತನ್ನಿಂದ ಯೋಗೀಶ್ ಪಡೆದಿದ್ದಾರೆ ಅನ್ನೋದು ಜಯಣ್ಣನ ಅಂಬೋಣ.

ಆದರೆ ಕೊಟ್ಟ ಸಾಲ ವಾಪಸ್ ಕೇಳಿದಾಗ ತಾನು ತುಂಬಾ ಸಮಸ್ಯೆಯಲ್ಲಿದ್ದು ಜನವರಿ 30ರೊಳಗೆ ಹಣ ಕೊಡುವುದಾಗಿ ಯೋಗೀಶ್ ವಾಯಿದೆ ಪಡೆದುಕೊಂಡಿದ್ದರಂತೆ. ಈ ಮಧ್ಯೆ ಹಲವು ಬಾರಿ ಇದೇ ವಿಚಾರ ತನ್ನ ಹಾಗೂ ಯೋಗೀಶ್ ಸ್ನೇಹಿತರ ನಡುವೆ ಹಲವು ಬಾರಿ ಮೀಟಿಂಗ್ ನಡೆದು ಒಂದಷ್ಟು ಹಣವನ್ನೂ ಕೈಬಿಟ್ಟಿದ್ದೇನೆ ಎಂದು ಜಯಣ್ಣ ಹೇಳುತ್ತಿದ್ದಾರೆ.

ಜನವರಿ 30ರೊಳಗೆ ಹಣ ವಾಪಸ್ ನೀಡುವುದಾಗಿ ಹೇಳಿದ್ದ ಯೋಗೀಶ್ ಜನವರಿ 27ರಂದೇ ಜಯಣ್ಣ ಫೋನ್ ನಂಬರನ್ನು ಬ್ಲಾಕ್ ಮಾಡಿದ್ದರಂತೆ. ಫೋನ್ ಕರೆಗೆ ಯೋಗೀಶ್ ಸಿಗದಿದ್ದಾಗ ಮನೆಗೇ ಹೋಗಿ ಹಣ ಕೇಳೋ ಪ್ರಯತ್ನಕ್ಕೆ ಜಯಣ್ಣನ ಗ್ಯಾಂಗು ಮುಂದಾಗಿತ್ತು. ಅವಾಗಲೂ ದ್ವಾರಕೀಶ್ ಸಮಸ್ಯೆಯಲ್ಲಿದ್ದೇವೆ ಕಾಲಾವಕಾಶ ಕೊಡಿ ಎಂದು ಕೇಳಿದ್ದಾರೆ. ಆದರೆ, ಫೋನ್‍ಗೆ ಸಿಗದ ದ್ವಾರಕೀ ಮಗನ ಅವಾಂತರಕ್ಕೆ ಬೇಸತ್ತಿದ್ದ ಜಯಣ್ಣ ಇದಕ್ಕೆ ಒಪ್ಪಿಲ್ಲ. ಈ ಸಂದರ್ಭದಲ್ಲಿ ಫೈನಾನ್ಶಿಯರ್ ರಮೇಶ್ ಏರುಧ್ವನಿಯಲ್ಲಿ ಕೂಗಾಡಿದ್ದಾರೆ.

ಅಲ್ಲದೆ, ಐ ಲವ್ ಯೂ ಸಿನಿಮಾ ಮಾಡುವಾಗ ಯೋಗೀಶ್ ನಿರ್ಮಾಪಕ ಮನೋಹರ್ ಬಳಿ 50 ಲಕ್ಷ ಪಡೆದಿದ್ದು, ಅದನ್ನೂ ಇನ್ನೂ ತೀರಿಸಿಲ್ಲ. ಅದಷ್ಟೇ ಅಲ್ಲದೆ, ಆಯುಷ್‍ಮಾನ್ ಭವ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದ ರಚಿತಾರಾಮ್ ಅವರಿಗೂ ಇನ್ನೂ 75% ಸಂಭಾವನೆ ಕೊಟ್ಟೇ ಇಲ್ಲ, ಶಿವರಾಜ್‍ಕುಮಾರ್‍ಗೂ ಕೂಡ ಪೂರ್ತಿ ಸಂಭಾವನೆ ನೀಡಿಲ್ಲ, ಅದೇ ಸಿನಿಮಾದ ಸ್ಟಂಟ್ ಮಾಡಿದ್ದ ರವಿವರ್ಮ ಹಾಗೂ ಕೊರಿಯೋಗ್ರಫಿ ಮಾಡಿದ್ದ ಹರ್ಷ ಅವರಿಗೂ ಇನ್ನೂ ಪೇಮೆಂಟ್ ಮಾಡಿಲ್ಲ. ಇದಲ್ಲದೆ 11 ಕೋಟಿ ಬಜೆಟ್‍ನ ಸಿನಿಮಾಕ್ಕೆ 20 ಕೋಟಿ ಖರ್ಚು ತೋರಿಸಿದ್ದೀರಿ ಅಂತ ಅವರೆಲ್ಲ ರೇಗಾಡಿದ್ದಾರೆ.

ಈ ರೇಗಾಟ ಕೂಗಾಟದಲ್ಲಿ ನಿಜಕ್ಕೂ ದ್ವಾರ್ಕಿಗೆ ಜಯಣ್ಣನ ಗ್ಯಾಂಗಿನಿಂದ ಜೀವಬೆದರಿಕೆ ಹೊರಬಂತಾ? ನಿಜಕ್ಕೂ ದ್ವಾರ್ಕಿಯನ್ನು ಕೊಲ್ಲುವ ಇರಾದೆ ಜಯಣ್ಣನ ಗ್ಯಾಂಗಿದೆಯಾ? ಕೊಂದರೆ ಅವರ ದುಡ್ಡು ವಾಪಾಸ್ಸು ಬರುತ್ತಾ? ಈ ಪ್ರಶ್ನೆಗೆ ಉತ್ತರ ಸುಲಭಕ್ಕೆ ಗೊತ್ತಾಗುವಂತದ್ದಲ್ಲ. ಆದರೆ ದ್ವಾರಕೀಶ್ ಸದ್ಯಕ್ಕೆ ಆರ್ಥಿಕ ಮುಗ್ಗಟ್ಟಿನಲ್ಲಿರುವುದಂತೂ ಸತ್ಯ. ವರ್ತನೆಗಳು ಎಂತದ್ದೇ ಇರಲಿ, ಕನ್ನಡ ಸಿನಿಮಾರಂಗದಲ್ಲಿ ತನ್ನದೇ ಛಾಪು ಮೂಡಿಸಿದ ನಟ ಕಂ ನಿರ್ದೇಶಕ ಕಂ ನಿರ್ಮಾಪಕನಾದ ಹಿರಿವಯಸ್ಸಿನ ದ್ವಾರಕೀಶ್‍ಗೆ ಒಂದೊಮ್ಮೆ ನಿಜಕ್ಕೂ ಜೀವಬೆದರಿಕೆ ಹಾಕಿದ್ದರೆ ಅದು ಖಂಡಿತ ತಪ್ಪು. ಆದರೆ ಕುಳ್ಳನ ಹಳೇ ವರಸೆಗಳು ಒಂದು ಕ್ಷಣ ಈ ಆರೋಪವನ್ನು ಅನುಮಾನಿಸುವಂತೆ ಮಾಡುತ್ತಿರುವುದೂ ಸುಳ್ಳಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...