Homeಮುಖಪುಟದ್ವಾರಕಾ ಎಕ್ಸ್‌ಪ್ರೆಸ್‌ವೇ ವೆಚ್ಚ ಅನುಮೋದಿತ ಮೊತ್ತಕ್ಕಿಂತ 14 ಪಟ್ಟು ಹೆಚ್ಚು: ಸಿಎಜಿ

ದ್ವಾರಕಾ ಎಕ್ಸ್‌ಪ್ರೆಸ್‌ವೇ ವೆಚ್ಚ ಅನುಮೋದಿತ ಮೊತ್ತಕ್ಕಿಂತ 14 ಪಟ್ಟು ಹೆಚ್ಚು: ಸಿಎಜಿ

- Advertisement -
- Advertisement -

ಕೇಂದ್ರದ ಭಾರತ ಮಾಲಾ ಪರಿಯೋಜನಾ ಹಂತ-1 ರ ಅಡಿಯಲ್ಲಿ ನಿರ್ಮಿಸಲಾದ ದ್ವಾರಕಾ ಹೆದ್ದಾರಿಯ ವೆಚ್ಚವು 2017 ರಲ್ಲಿ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿ ಅನುಮೋದಿಸಿದ ಮೊತ್ತವನ್ನು 14 ಪಟ್ಟು ಮೀರಿದೆ ಎಂದು ಕಂಟ್ರೋಲರ್ ಮತ್ತು ಆಡಿಟರ್ ಜನರಲ್( ಸಿಎಜಿ) ತಿಳಿಸಿದೆ.

ದೆಹಲಿ ಮತ್ತು ಗುರುಗ್ರಾಮ್ ನಡುವೆ 14-ಲೇನ್ ನ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಪಡಿಸುವ ಮೂಲಕ ಸಂಚಾರಿ ದಟ್ಟಣೆಯನ್ನು ಕಡಿಮೆ ಮಾಡಲು ಆದ್ಯತೆ ನೀಡುವ ಉದ್ದೇಶದಿಂದ ಹೆದ್ದಾರಿ ನಿರ್ಮಿಸಲು ಯೋಜನೆ ಹಾಕಲಾಗಿತ್ತು.

CCEA ಅನುಮೋದನೆ ಮಾಡಿದ ಪ್ರತಿ ಕಿಮೀ ವೆಚ್ಚ  18.20 ಕೋಟಿ ವೆಚ್ಚಕ್ಕೆ ಬದಲಾಗಿ ಎಕ್ಸ್‌ಪ್ರೆಸ್‌ವೇ ನ್ನು ಪ್ರತಿ ಕಿಮೀಗೆ 250.77 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ.

ಏಪ್ರಿಲ್ 2022ರಲ್ಲಿನ ಈ ಕುರಿತು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಪ್ರತಿಕ್ರಿಯೆಯನ್ನು ವರದಿ ಉಲ್ಲೇಖಿಸಿದೆ. ದ್ವಾರಕಾ ಎಕ್ಸ್‌ಪ್ರೆಸ್‌ವೇಯನ್ನು ಎಂಟು ಪಥಗಳ ಎಲಿವೇಟೆಡ್ ಕಾರಿಡಾರ್ ಆಗಿ ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ. ಇದಕ್ಕೆ ಹೆಚ್ಚು ವೆಚ್ಚ ತಗುಲಲಿದೆ ಎಂದು ಹೇಳಿದೆ.

ಸರಿಸುಮಾರು 55,432 ಪ್ರಯಾಣಿಕ ವಾಹನಗಳ ಸರಾಸರಿ ದೈನಂದಿನ ಸಂಚಾರಕ್ಕಾಗಿ ಎಂಟು ಲೇನ್‌ಗಳ (ಎಲಿವೇಟೆಡ್ ಲೇನ್‌ಗಳು) ಹೆದ್ದಾರಿಯ ಯೋಜನೆ ನಿರ್ಮಾಣಕ್ಕೆ ದಾಖಲೆಯಲ್ಲಿ ಯಾವುದೇ ಸಮರ್ಥನೆ ಇಲ್ಲ ಎಂದು ಭಾರತದ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ಹೇಳಿದ್ದಾರೆ. 2,32,959 ಪ್ರಯಾಣಿಕ ವಾಹನಗಳ ಸರಾಸರಿ ವಾರ್ಷಿಕ ದೈನಂದಿನ ಸಂಚಾರಕ್ಕಾಗಿ ಕೇವಲ ಆರು ಲೇನ್‌ಗಳನ್ನು ನಿರ್ಮಿಸಲಾಗುತ್ತದೆ ಎಂದು ಹೇಳಿದ್ದಾರೆ.

ಈ ರೀತಿ ವೆಚ್ಚ ಮೀರಿರುವುದು ಇದು ಒಂದೇ ಹೆದ್ದಾರಿಯ ನಿರ್ಮಾಣದಲ್ಲಿ ಅಲ್ಲ. ದೇಶದಾದ್ಯಂತ ಕೇಂದ್ರದ ಭಾರತ ಮಾಲಾ ಪರಿಯೋಜನೆಯಡಿ ನಿರ್ಮಾಣ ವಾಗುತ್ತಿರುವ ಹೆದ್ದಾರಿಗಳ ವೆಚ್ಚ ನಿಗದಿತ ವೆಚ್ಚಕ್ಕಿಂತ ಶೇಕಡಾ 58 ರಷ್ಟು ಹೆಚ್ಚಾಗಿದೆ ಎಂದು ವರದಿ ಬಹಿರಂಗಪಡಿಸಿದೆ.

26,316 ಕಿಮೀ ಯೋಜನೆಯ ಉದ್ದದ ಹೆದ್ದಾರಿಗೆ ಮಂಜೂರಾದ ವೆಚ್ಚ  8,46,588 ಕೋಟಿ (ರೂ 32.17 ಕೋಟಿ/ಕಿಮೀ) ಆಗಿದೆ. ಆದರೆ ಸಿಸಿಇಎ ಅನುಮೋದಿಸಿದ್ದು 34,800 ಕಿಮೀ ಉದ್ದಕ್ಕೆ 5,35,000 ಕೋಟಿ (ರೂ. 15.37 ಕೋಟಿ/ಕಿಮೀ) ವೆಚ್ಚವಾಗಿದೆ.

ವೆಚ್ಚದ ಹೆಚ್ಚಳದ  ಹೊರತಾಗಿ, 34,800 ಕಿಮೀ ರಾಷ್ಟ್ರೀಯ ಹೆದ್ದಾರಿಗಳನ್ನು ಪೂರ್ಣಗೊಳಿಸಲು 2022ರ ಗಡುವನ್ನು ನೀಡಲಾಗಿತ್ತು. ಆದರೆ 31 ಮಾರ್ಚ್ 2023 ರವರೆಗೆ ಕೇವಲ 13,499 ಕಿಮೀ ಉದ್ದದ ರಾಷ್ಟ್ರೀಯ ಹೆದ್ದಾರಿಗಳು ಪೂರ್ಣಗೊಂಡಿವೆ ಎಂದು ವರದಿ ಹೇಳಿದೆ.

ಇದನ್ನು ಓದಿ: ದಲಿತ ಸಮುದಾಯಕ್ಕೆ ಅವಮಾನ: ನಟ ಉಪೇಂದ್ರ ವಿರುದ್ಧ ಎರಡನೇ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...