Homeಮುಖಪುಟದ್ವಾರಕಾ ಎಕ್ಸ್‌ಪ್ರೆಸ್‌ವೇ ವೆಚ್ಚ ಅನುಮೋದಿತ ಮೊತ್ತಕ್ಕಿಂತ 14 ಪಟ್ಟು ಹೆಚ್ಚು: ಸಿಎಜಿ

ದ್ವಾರಕಾ ಎಕ್ಸ್‌ಪ್ರೆಸ್‌ವೇ ವೆಚ್ಚ ಅನುಮೋದಿತ ಮೊತ್ತಕ್ಕಿಂತ 14 ಪಟ್ಟು ಹೆಚ್ಚು: ಸಿಎಜಿ

- Advertisement -
- Advertisement -

ಕೇಂದ್ರದ ಭಾರತ ಮಾಲಾ ಪರಿಯೋಜನಾ ಹಂತ-1 ರ ಅಡಿಯಲ್ಲಿ ನಿರ್ಮಿಸಲಾದ ದ್ವಾರಕಾ ಹೆದ್ದಾರಿಯ ವೆಚ್ಚವು 2017 ರಲ್ಲಿ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿ ಅನುಮೋದಿಸಿದ ಮೊತ್ತವನ್ನು 14 ಪಟ್ಟು ಮೀರಿದೆ ಎಂದು ಕಂಟ್ರೋಲರ್ ಮತ್ತು ಆಡಿಟರ್ ಜನರಲ್( ಸಿಎಜಿ) ತಿಳಿಸಿದೆ.

ದೆಹಲಿ ಮತ್ತು ಗುರುಗ್ರಾಮ್ ನಡುವೆ 14-ಲೇನ್ ನ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಪಡಿಸುವ ಮೂಲಕ ಸಂಚಾರಿ ದಟ್ಟಣೆಯನ್ನು ಕಡಿಮೆ ಮಾಡಲು ಆದ್ಯತೆ ನೀಡುವ ಉದ್ದೇಶದಿಂದ ಹೆದ್ದಾರಿ ನಿರ್ಮಿಸಲು ಯೋಜನೆ ಹಾಕಲಾಗಿತ್ತು.

CCEA ಅನುಮೋದನೆ ಮಾಡಿದ ಪ್ರತಿ ಕಿಮೀ ವೆಚ್ಚ  18.20 ಕೋಟಿ ವೆಚ್ಚಕ್ಕೆ ಬದಲಾಗಿ ಎಕ್ಸ್‌ಪ್ರೆಸ್‌ವೇ ನ್ನು ಪ್ರತಿ ಕಿಮೀಗೆ 250.77 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ.

ಏಪ್ರಿಲ್ 2022ರಲ್ಲಿನ ಈ ಕುರಿತು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಪ್ರತಿಕ್ರಿಯೆಯನ್ನು ವರದಿ ಉಲ್ಲೇಖಿಸಿದೆ. ದ್ವಾರಕಾ ಎಕ್ಸ್‌ಪ್ರೆಸ್‌ವೇಯನ್ನು ಎಂಟು ಪಥಗಳ ಎಲಿವೇಟೆಡ್ ಕಾರಿಡಾರ್ ಆಗಿ ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ. ಇದಕ್ಕೆ ಹೆಚ್ಚು ವೆಚ್ಚ ತಗುಲಲಿದೆ ಎಂದು ಹೇಳಿದೆ.

ಸರಿಸುಮಾರು 55,432 ಪ್ರಯಾಣಿಕ ವಾಹನಗಳ ಸರಾಸರಿ ದೈನಂದಿನ ಸಂಚಾರಕ್ಕಾಗಿ ಎಂಟು ಲೇನ್‌ಗಳ (ಎಲಿವೇಟೆಡ್ ಲೇನ್‌ಗಳು) ಹೆದ್ದಾರಿಯ ಯೋಜನೆ ನಿರ್ಮಾಣಕ್ಕೆ ದಾಖಲೆಯಲ್ಲಿ ಯಾವುದೇ ಸಮರ್ಥನೆ ಇಲ್ಲ ಎಂದು ಭಾರತದ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ಹೇಳಿದ್ದಾರೆ. 2,32,959 ಪ್ರಯಾಣಿಕ ವಾಹನಗಳ ಸರಾಸರಿ ವಾರ್ಷಿಕ ದೈನಂದಿನ ಸಂಚಾರಕ್ಕಾಗಿ ಕೇವಲ ಆರು ಲೇನ್‌ಗಳನ್ನು ನಿರ್ಮಿಸಲಾಗುತ್ತದೆ ಎಂದು ಹೇಳಿದ್ದಾರೆ.

ಈ ರೀತಿ ವೆಚ್ಚ ಮೀರಿರುವುದು ಇದು ಒಂದೇ ಹೆದ್ದಾರಿಯ ನಿರ್ಮಾಣದಲ್ಲಿ ಅಲ್ಲ. ದೇಶದಾದ್ಯಂತ ಕೇಂದ್ರದ ಭಾರತ ಮಾಲಾ ಪರಿಯೋಜನೆಯಡಿ ನಿರ್ಮಾಣ ವಾಗುತ್ತಿರುವ ಹೆದ್ದಾರಿಗಳ ವೆಚ್ಚ ನಿಗದಿತ ವೆಚ್ಚಕ್ಕಿಂತ ಶೇಕಡಾ 58 ರಷ್ಟು ಹೆಚ್ಚಾಗಿದೆ ಎಂದು ವರದಿ ಬಹಿರಂಗಪಡಿಸಿದೆ.

26,316 ಕಿಮೀ ಯೋಜನೆಯ ಉದ್ದದ ಹೆದ್ದಾರಿಗೆ ಮಂಜೂರಾದ ವೆಚ್ಚ  8,46,588 ಕೋಟಿ (ರೂ 32.17 ಕೋಟಿ/ಕಿಮೀ) ಆಗಿದೆ. ಆದರೆ ಸಿಸಿಇಎ ಅನುಮೋದಿಸಿದ್ದು 34,800 ಕಿಮೀ ಉದ್ದಕ್ಕೆ 5,35,000 ಕೋಟಿ (ರೂ. 15.37 ಕೋಟಿ/ಕಿಮೀ) ವೆಚ್ಚವಾಗಿದೆ.

ವೆಚ್ಚದ ಹೆಚ್ಚಳದ  ಹೊರತಾಗಿ, 34,800 ಕಿಮೀ ರಾಷ್ಟ್ರೀಯ ಹೆದ್ದಾರಿಗಳನ್ನು ಪೂರ್ಣಗೊಳಿಸಲು 2022ರ ಗಡುವನ್ನು ನೀಡಲಾಗಿತ್ತು. ಆದರೆ 31 ಮಾರ್ಚ್ 2023 ರವರೆಗೆ ಕೇವಲ 13,499 ಕಿಮೀ ಉದ್ದದ ರಾಷ್ಟ್ರೀಯ ಹೆದ್ದಾರಿಗಳು ಪೂರ್ಣಗೊಂಡಿವೆ ಎಂದು ವರದಿ ಹೇಳಿದೆ.

ಇದನ್ನು ಓದಿ: ದಲಿತ ಸಮುದಾಯಕ್ಕೆ ಅವಮಾನ: ನಟ ಉಪೇಂದ್ರ ವಿರುದ್ಧ ಎರಡನೇ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...