Homeಮುಖಪುಟದ್ವಾರಕಾ ಎಕ್ಸ್‌ಪ್ರೆಸ್‌ವೇ ವೆಚ್ಚ ಅನುಮೋದಿತ ಮೊತ್ತಕ್ಕಿಂತ 14 ಪಟ್ಟು ಹೆಚ್ಚು: ಸಿಎಜಿ

ದ್ವಾರಕಾ ಎಕ್ಸ್‌ಪ್ರೆಸ್‌ವೇ ವೆಚ್ಚ ಅನುಮೋದಿತ ಮೊತ್ತಕ್ಕಿಂತ 14 ಪಟ್ಟು ಹೆಚ್ಚು: ಸಿಎಜಿ

- Advertisement -
- Advertisement -

ಕೇಂದ್ರದ ಭಾರತ ಮಾಲಾ ಪರಿಯೋಜನಾ ಹಂತ-1 ರ ಅಡಿಯಲ್ಲಿ ನಿರ್ಮಿಸಲಾದ ದ್ವಾರಕಾ ಹೆದ್ದಾರಿಯ ವೆಚ್ಚವು 2017 ರಲ್ಲಿ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿ ಅನುಮೋದಿಸಿದ ಮೊತ್ತವನ್ನು 14 ಪಟ್ಟು ಮೀರಿದೆ ಎಂದು ಕಂಟ್ರೋಲರ್ ಮತ್ತು ಆಡಿಟರ್ ಜನರಲ್( ಸಿಎಜಿ) ತಿಳಿಸಿದೆ.

ದೆಹಲಿ ಮತ್ತು ಗುರುಗ್ರಾಮ್ ನಡುವೆ 14-ಲೇನ್ ನ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಪಡಿಸುವ ಮೂಲಕ ಸಂಚಾರಿ ದಟ್ಟಣೆಯನ್ನು ಕಡಿಮೆ ಮಾಡಲು ಆದ್ಯತೆ ನೀಡುವ ಉದ್ದೇಶದಿಂದ ಹೆದ್ದಾರಿ ನಿರ್ಮಿಸಲು ಯೋಜನೆ ಹಾಕಲಾಗಿತ್ತು.

CCEA ಅನುಮೋದನೆ ಮಾಡಿದ ಪ್ರತಿ ಕಿಮೀ ವೆಚ್ಚ  18.20 ಕೋಟಿ ವೆಚ್ಚಕ್ಕೆ ಬದಲಾಗಿ ಎಕ್ಸ್‌ಪ್ರೆಸ್‌ವೇ ನ್ನು ಪ್ರತಿ ಕಿಮೀಗೆ 250.77 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ.

ಏಪ್ರಿಲ್ 2022ರಲ್ಲಿನ ಈ ಕುರಿತು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಪ್ರತಿಕ್ರಿಯೆಯನ್ನು ವರದಿ ಉಲ್ಲೇಖಿಸಿದೆ. ದ್ವಾರಕಾ ಎಕ್ಸ್‌ಪ್ರೆಸ್‌ವೇಯನ್ನು ಎಂಟು ಪಥಗಳ ಎಲಿವೇಟೆಡ್ ಕಾರಿಡಾರ್ ಆಗಿ ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ. ಇದಕ್ಕೆ ಹೆಚ್ಚು ವೆಚ್ಚ ತಗುಲಲಿದೆ ಎಂದು ಹೇಳಿದೆ.

ಸರಿಸುಮಾರು 55,432 ಪ್ರಯಾಣಿಕ ವಾಹನಗಳ ಸರಾಸರಿ ದೈನಂದಿನ ಸಂಚಾರಕ್ಕಾಗಿ ಎಂಟು ಲೇನ್‌ಗಳ (ಎಲಿವೇಟೆಡ್ ಲೇನ್‌ಗಳು) ಹೆದ್ದಾರಿಯ ಯೋಜನೆ ನಿರ್ಮಾಣಕ್ಕೆ ದಾಖಲೆಯಲ್ಲಿ ಯಾವುದೇ ಸಮರ್ಥನೆ ಇಲ್ಲ ಎಂದು ಭಾರತದ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ಹೇಳಿದ್ದಾರೆ. 2,32,959 ಪ್ರಯಾಣಿಕ ವಾಹನಗಳ ಸರಾಸರಿ ವಾರ್ಷಿಕ ದೈನಂದಿನ ಸಂಚಾರಕ್ಕಾಗಿ ಕೇವಲ ಆರು ಲೇನ್‌ಗಳನ್ನು ನಿರ್ಮಿಸಲಾಗುತ್ತದೆ ಎಂದು ಹೇಳಿದ್ದಾರೆ.

ಈ ರೀತಿ ವೆಚ್ಚ ಮೀರಿರುವುದು ಇದು ಒಂದೇ ಹೆದ್ದಾರಿಯ ನಿರ್ಮಾಣದಲ್ಲಿ ಅಲ್ಲ. ದೇಶದಾದ್ಯಂತ ಕೇಂದ್ರದ ಭಾರತ ಮಾಲಾ ಪರಿಯೋಜನೆಯಡಿ ನಿರ್ಮಾಣ ವಾಗುತ್ತಿರುವ ಹೆದ್ದಾರಿಗಳ ವೆಚ್ಚ ನಿಗದಿತ ವೆಚ್ಚಕ್ಕಿಂತ ಶೇಕಡಾ 58 ರಷ್ಟು ಹೆಚ್ಚಾಗಿದೆ ಎಂದು ವರದಿ ಬಹಿರಂಗಪಡಿಸಿದೆ.

26,316 ಕಿಮೀ ಯೋಜನೆಯ ಉದ್ದದ ಹೆದ್ದಾರಿಗೆ ಮಂಜೂರಾದ ವೆಚ್ಚ  8,46,588 ಕೋಟಿ (ರೂ 32.17 ಕೋಟಿ/ಕಿಮೀ) ಆಗಿದೆ. ಆದರೆ ಸಿಸಿಇಎ ಅನುಮೋದಿಸಿದ್ದು 34,800 ಕಿಮೀ ಉದ್ದಕ್ಕೆ 5,35,000 ಕೋಟಿ (ರೂ. 15.37 ಕೋಟಿ/ಕಿಮೀ) ವೆಚ್ಚವಾಗಿದೆ.

ವೆಚ್ಚದ ಹೆಚ್ಚಳದ  ಹೊರತಾಗಿ, 34,800 ಕಿಮೀ ರಾಷ್ಟ್ರೀಯ ಹೆದ್ದಾರಿಗಳನ್ನು ಪೂರ್ಣಗೊಳಿಸಲು 2022ರ ಗಡುವನ್ನು ನೀಡಲಾಗಿತ್ತು. ಆದರೆ 31 ಮಾರ್ಚ್ 2023 ರವರೆಗೆ ಕೇವಲ 13,499 ಕಿಮೀ ಉದ್ದದ ರಾಷ್ಟ್ರೀಯ ಹೆದ್ದಾರಿಗಳು ಪೂರ್ಣಗೊಂಡಿವೆ ಎಂದು ವರದಿ ಹೇಳಿದೆ.

ಇದನ್ನು ಓದಿ: ದಲಿತ ಸಮುದಾಯಕ್ಕೆ ಅವಮಾನ: ನಟ ಉಪೇಂದ್ರ ವಿರುದ್ಧ ಎರಡನೇ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...