Homeಮುಖಪುಟದ್ವಾರಕಾ ಎಕ್ಸ್‌ಪ್ರೆಸ್‌ವೇ ವೆಚ್ಚ ಅನುಮೋದಿತ ಮೊತ್ತಕ್ಕಿಂತ 14 ಪಟ್ಟು ಹೆಚ್ಚು: ಸಿಎಜಿ

ದ್ವಾರಕಾ ಎಕ್ಸ್‌ಪ್ರೆಸ್‌ವೇ ವೆಚ್ಚ ಅನುಮೋದಿತ ಮೊತ್ತಕ್ಕಿಂತ 14 ಪಟ್ಟು ಹೆಚ್ಚು: ಸಿಎಜಿ

- Advertisement -
- Advertisement -

ಕೇಂದ್ರದ ಭಾರತ ಮಾಲಾ ಪರಿಯೋಜನಾ ಹಂತ-1 ರ ಅಡಿಯಲ್ಲಿ ನಿರ್ಮಿಸಲಾದ ದ್ವಾರಕಾ ಹೆದ್ದಾರಿಯ ವೆಚ್ಚವು 2017 ರಲ್ಲಿ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿ ಅನುಮೋದಿಸಿದ ಮೊತ್ತವನ್ನು 14 ಪಟ್ಟು ಮೀರಿದೆ ಎಂದು ಕಂಟ್ರೋಲರ್ ಮತ್ತು ಆಡಿಟರ್ ಜನರಲ್( ಸಿಎಜಿ) ತಿಳಿಸಿದೆ.

ದೆಹಲಿ ಮತ್ತು ಗುರುಗ್ರಾಮ್ ನಡುವೆ 14-ಲೇನ್ ನ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಪಡಿಸುವ ಮೂಲಕ ಸಂಚಾರಿ ದಟ್ಟಣೆಯನ್ನು ಕಡಿಮೆ ಮಾಡಲು ಆದ್ಯತೆ ನೀಡುವ ಉದ್ದೇಶದಿಂದ ಹೆದ್ದಾರಿ ನಿರ್ಮಿಸಲು ಯೋಜನೆ ಹಾಕಲಾಗಿತ್ತು.

CCEA ಅನುಮೋದನೆ ಮಾಡಿದ ಪ್ರತಿ ಕಿಮೀ ವೆಚ್ಚ  18.20 ಕೋಟಿ ವೆಚ್ಚಕ್ಕೆ ಬದಲಾಗಿ ಎಕ್ಸ್‌ಪ್ರೆಸ್‌ವೇ ನ್ನು ಪ್ರತಿ ಕಿಮೀಗೆ 250.77 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ.

ಏಪ್ರಿಲ್ 2022ರಲ್ಲಿನ ಈ ಕುರಿತು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಪ್ರತಿಕ್ರಿಯೆಯನ್ನು ವರದಿ ಉಲ್ಲೇಖಿಸಿದೆ. ದ್ವಾರಕಾ ಎಕ್ಸ್‌ಪ್ರೆಸ್‌ವೇಯನ್ನು ಎಂಟು ಪಥಗಳ ಎಲಿವೇಟೆಡ್ ಕಾರಿಡಾರ್ ಆಗಿ ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ. ಇದಕ್ಕೆ ಹೆಚ್ಚು ವೆಚ್ಚ ತಗುಲಲಿದೆ ಎಂದು ಹೇಳಿದೆ.

ಸರಿಸುಮಾರು 55,432 ಪ್ರಯಾಣಿಕ ವಾಹನಗಳ ಸರಾಸರಿ ದೈನಂದಿನ ಸಂಚಾರಕ್ಕಾಗಿ ಎಂಟು ಲೇನ್‌ಗಳ (ಎಲಿವೇಟೆಡ್ ಲೇನ್‌ಗಳು) ಹೆದ್ದಾರಿಯ ಯೋಜನೆ ನಿರ್ಮಾಣಕ್ಕೆ ದಾಖಲೆಯಲ್ಲಿ ಯಾವುದೇ ಸಮರ್ಥನೆ ಇಲ್ಲ ಎಂದು ಭಾರತದ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ಹೇಳಿದ್ದಾರೆ. 2,32,959 ಪ್ರಯಾಣಿಕ ವಾಹನಗಳ ಸರಾಸರಿ ವಾರ್ಷಿಕ ದೈನಂದಿನ ಸಂಚಾರಕ್ಕಾಗಿ ಕೇವಲ ಆರು ಲೇನ್‌ಗಳನ್ನು ನಿರ್ಮಿಸಲಾಗುತ್ತದೆ ಎಂದು ಹೇಳಿದ್ದಾರೆ.

ಈ ರೀತಿ ವೆಚ್ಚ ಮೀರಿರುವುದು ಇದು ಒಂದೇ ಹೆದ್ದಾರಿಯ ನಿರ್ಮಾಣದಲ್ಲಿ ಅಲ್ಲ. ದೇಶದಾದ್ಯಂತ ಕೇಂದ್ರದ ಭಾರತ ಮಾಲಾ ಪರಿಯೋಜನೆಯಡಿ ನಿರ್ಮಾಣ ವಾಗುತ್ತಿರುವ ಹೆದ್ದಾರಿಗಳ ವೆಚ್ಚ ನಿಗದಿತ ವೆಚ್ಚಕ್ಕಿಂತ ಶೇಕಡಾ 58 ರಷ್ಟು ಹೆಚ್ಚಾಗಿದೆ ಎಂದು ವರದಿ ಬಹಿರಂಗಪಡಿಸಿದೆ.

26,316 ಕಿಮೀ ಯೋಜನೆಯ ಉದ್ದದ ಹೆದ್ದಾರಿಗೆ ಮಂಜೂರಾದ ವೆಚ್ಚ  8,46,588 ಕೋಟಿ (ರೂ 32.17 ಕೋಟಿ/ಕಿಮೀ) ಆಗಿದೆ. ಆದರೆ ಸಿಸಿಇಎ ಅನುಮೋದಿಸಿದ್ದು 34,800 ಕಿಮೀ ಉದ್ದಕ್ಕೆ 5,35,000 ಕೋಟಿ (ರೂ. 15.37 ಕೋಟಿ/ಕಿಮೀ) ವೆಚ್ಚವಾಗಿದೆ.

ವೆಚ್ಚದ ಹೆಚ್ಚಳದ  ಹೊರತಾಗಿ, 34,800 ಕಿಮೀ ರಾಷ್ಟ್ರೀಯ ಹೆದ್ದಾರಿಗಳನ್ನು ಪೂರ್ಣಗೊಳಿಸಲು 2022ರ ಗಡುವನ್ನು ನೀಡಲಾಗಿತ್ತು. ಆದರೆ 31 ಮಾರ್ಚ್ 2023 ರವರೆಗೆ ಕೇವಲ 13,499 ಕಿಮೀ ಉದ್ದದ ರಾಷ್ಟ್ರೀಯ ಹೆದ್ದಾರಿಗಳು ಪೂರ್ಣಗೊಂಡಿವೆ ಎಂದು ವರದಿ ಹೇಳಿದೆ.

ಇದನ್ನು ಓದಿ: ದಲಿತ ಸಮುದಾಯಕ್ಕೆ ಅವಮಾನ: ನಟ ಉಪೇಂದ್ರ ವಿರುದ್ಧ ಎರಡನೇ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...