ನ್ಯಾಯಮೂರ್ತಿ ಧನಂಜಯ ಯಶವಂತ್ ಚಂದ್ರಚೂಡ್ ಅವರು ಭಾರತದ 50 ನೇ ಮುಖ್ಯ ನ್ಯಾಯಮೂರ್ತಿಯಾಗಿ ನಿರ್ಗಮಿತ ಮುಖ್ಯ ನ್ಯಾಯಮೂರ್ತಿ ಯು.ಯು. ಲಲಿತ್ ಅವರಿಂದ ಬುಧವಾರ ಅಧಿಕಾರವನ್ನು ವಹಿಸಿಕೊಂಡರು.
ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. 74 ದಿನಗಳ ಕಾಲ ಸೇವೆ ಸಲ್ಲಿಸಿದ ಲಲಿತ್ ಅವರು ಚಂದ್ರಚೂಡ್ ಅವರನ್ನು ಉತ್ತರಾಧಿಕಾರಿಯಾಗಿ ಅಕ್ಟೋಬರ್ 11 ರಂದು ಶಿಫಾರಸು ಮಾಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಒಕ್ಕೂಟ ಸರ್ಕಾರದ ಕಾನೂನು ಸಚಿವ ಕಿರಣ್ ರಿಜಿಜು ಅವರು ಚಂದ್ರಚೂಡ್ ಅವರ ನೇಮಕವನ್ನು ಅಕ್ಟೋಬರ್ 17 ರಂದು ಪ್ರಕಟಿಸಿದ್ದರು. ಈ ನಡುವೆ ಅವರನ್ನು ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಬಾರದು ಎಂದು ಸಲ್ಲಿಸಲಾಗಿದ್ದ ಅರ್ಜಿಯನ್ನು ನವೆಂಬರ್ 2 ರಂದು ಸುಪ್ರೀಂಕೋರ್ಟ್ ವಜಾ ಮಾಡಿತ್ತು.
President #DroupadiMurmu administers oath of office to Justice #DYChandrachud as 50th Chief Justice of India pic.twitter.com/WVmAruvIm4
— DD News (@DDNewslive) November 9, 2022
ಚಂದ್ರಚೂಡ್ ಅವರ ಅಧಿಕಾರಾವಧಿಯು ಎರಡು ವರ್ಷಗಳ ಕಾಲ ಇರಲಿದ್ದು, ನವೆಂಬರ್ 10, 2024 ರವರೆಗೆ ಅವರು ಅಧಿಕಾರದಲ್ಲಿ ಇರುತ್ತಾರೆ.
Justice Chandrachud signing the oath statement. pic.twitter.com/4yoKxCRp17
— Live Law (@LiveLawIndia) November 9, 2022
ಎರಡೂವರೆ ವರ್ಷಗಳ ಕಾಲ ಅಲಹಾಬಾದ್ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ ನಂತರ ಅವರು ಮೇ 13, 2016 ರಂದು ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ನೇಮಕಗೊಂಡರು.
ಇದನ್ನೂ ಓದಿ: ಬಾಬರಿ ಮಸೀದಿ ಧ್ವಂಸ ದಿನ: ರಾಮ್ ಕೆ ನಾಮ್ | ರಾಮನ ಹೆಸರಿನಲ್ಲಿ | In the name of god
ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ವೈ.ವಿ. ಚಂದ್ರಚೂಡ್ ಅವರ ಪುತ್ರರಾಗಿರುವ ಡಿ.ವೈ. ಚಂದ್ರಚೂಡ್ ಅವರನ್ನು ಜೂನ್ 1998 ರಲ್ಲಿ ಬಾಂಬೆ ಹೈಕೋರ್ಟ್ನಿಂದ ಹಿರಿಯ ವಕೀಲರಾಗಿ ನೇಮಿಸಲಾಯಿತು. 2000ದ ಮಾರ್ಚ್ ತಿಂಗಳಲ್ಲಿ ಅವರು ಹೈಕೋರ್ಟ್ ನ್ಯಾಯಾಧೀಶರಾಗಿ ನೇಮಕಗೊಂಡರು.
ಸುಪ್ರೀಂಕೋರ್ಟ್ ನ್ಯಾಯಾಧೀಶರಾಗಿದ್ದ ಅವಧಿಯಲ್ಲಿ, ಚಂದ್ರಚೂಡ್ ಅವರು ಖಾಸಗಿತನವನ್ನು ಮೂಲಭೂತ ಹಕ್ಕು ಎಂದು ಘೋಷಿಸುವುದು ಸೇರಿದಂತೆ ಹಲವು ಮಹತ್ವದ ತೀರ್ಪುಗಳನ್ನು ನೀಡಿದ್ದಾರೆ.
ವಯಸ್ಕರ ನಡುವಿನ ಒಪ್ಪಿತ ಸಲಿಂಗಕಾಮ ಚಟುವಟಿಕೆಯು ಅಪರಾಧವಲ್ಲ ಎಂದು ಸರ್ವಾನುಮತದಿಂದ ತೀರ್ಪು ನೀಡಿದ್ದ ಐದು ನ್ಯಾಯಾಧೀಶರ ಪೀಠದಲ್ಲಿ ಚಂದ್ರಚೂಡ್ ಕೂಡಾ ಒಬ್ಬರಾಗಿದ್ದರು. ಈ ತೀರ್ಪಿನ ಮೂಲಕ, ಶಾಸಕಾಂಗ ಮಾತ್ರ ಕಾನೂನುಗಳನ್ನು ಬದಲಾಯಿಸಬಹುದು ಎಂದು ಹೇಳಿದ ನ್ಯಾಯಾಲಯವು 2013 ರಿಂದ ಇದ್ದ ತನ್ನದೇ ಆದೇಶವನ್ನು ತಿರಸ್ಕರಿಸಿತು.
ಇದನ್ನೂ ಓದಿ: ಬಾಬರಿ ಮಸೀದಿ ಒಡೆದ ಆರೋಪಿಗಳನ್ನು ಖುಲಾಸೆಗೊಳಿಸಿ ತೀರ್ಪು ನೀಡಿದ್ದ ನ್ಯಾಯಾಧೀಶ ಯುಪಿ ಉಪಲೋಕಾಯುಕ್ತರಾಗಿ ನೇಮಕ
2019ರ ನವೆಂಬರ್ನಲ್ಲಿ, ಬಾಬರಿ ಮಸೀದಿ ದ್ವಂಸ ಪ್ರಕರಣದಲ್ಲಿ ಮಸೀದಿ ಇದ್ದ ಪ್ರದೇಶದಲ್ಲಿ ರಾಮ ಮಂದಿರ ನಿರ್ಮಿಸಲು ಟ್ರಸ್ಟ್ಗೆ ಹಸ್ತಾಂತರಿಸಬೇಕೆಂದು ಸರ್ವಾನುಮತದಿಂದ ನಿರ್ಧರಿಸಿದ ಐವರು ನ್ಯಾಯಾಧೀಶರಲ್ಲಿ ಚಂದ್ರಚೂಡ್ ಕೂಡ ಒಬ್ಬರು. ಮಸೀದಿ ನಿರ್ಮಾಣಕ್ಕಾಗಿ ಮುಸ್ಲಿಮರಿಗೆ ಅಯೋಧ್ಯೆಯಲ್ಲಿ ಪ್ರತ್ಯೇಕ ಐದು ಎಕರೆ ಜಾಗವನ್ನು ನೀಡಬೇಕು ಎಂದು ಪೀಠವು ತೀರ್ಪು ನೀಡಿತ್ತು.