Homeಮುಖಪುಟಭಾರತದ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕರಿಸಿದ ಡಿ.ವೈ. ಚಂದ್ರಚೂಡ್

ಭಾರತದ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕರಿಸಿದ ಡಿ.ವೈ. ಚಂದ್ರಚೂಡ್

- Advertisement -
- Advertisement -

ನ್ಯಾಯಮೂರ್ತಿ ಧನಂಜಯ ಯಶವಂತ್ ಚಂದ್ರಚೂಡ್ ಅವರು ಭಾರತದ 50 ನೇ ಮುಖ್ಯ ನ್ಯಾಯಮೂರ್ತಿಯಾಗಿ ನಿರ್ಗಮಿತ ಮುಖ್ಯ ನ್ಯಾಯಮೂರ್ತಿ ಯು.ಯು. ಲಲಿತ್ ಅವರಿಂದ ಬುಧವಾರ ಅಧಿಕಾರವನ್ನು ವಹಿಸಿಕೊಂಡರು.

ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌ ಅವರಿಗೆ ಪ್ರಮಾಣ ವಚನ ಬೋಧಿಸಿದರು. 74 ದಿನಗಳ ಕಾಲ ಸೇವೆ ಸಲ್ಲಿಸಿದ ಲಲಿತ್ ಅವರು ಚಂದ್ರಚೂಡ್ ಅವರನ್ನು ಉತ್ತರಾಧಿಕಾರಿಯಾಗಿ ಅಕ್ಟೋಬರ್ 11 ರಂದು ಶಿಫಾರಸು ಮಾಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಒಕ್ಕೂಟ ಸರ್ಕಾರದ ಕಾನೂನು ಸಚಿವ ಕಿರಣ್ ರಿಜಿಜು ಅವರು ಚಂದ್ರಚೂಡ್‌ ಅವರ ನೇಮಕವನ್ನು ಅಕ್ಟೋಬರ್ 17 ರಂದು ಪ್ರಕಟಿಸಿದ್ದರು. ಈ ನಡುವೆ ಅವರನ್ನು ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಬಾರದು ಎಂದು ಸಲ್ಲಿಸಲಾಗಿದ್ದ ಅರ್ಜಿಯನ್ನು ನವೆಂಬರ್ 2 ರಂದು ಸುಪ್ರೀಂಕೋರ್ಟ್ ವಜಾ ಮಾಡಿತ್ತು.

ಇದನ್ನೂ ಓದಿ: ಬಾಬರಿ ತೀರ್ಪಿತ್ತ ದಿನ ಇತರ ನ್ಯಾಯಮೂರ್ತಿ‌ಗಳನ್ನು ಡಿನ್ನರ್‌ಗೆ ಕರೆದೊಯ್ದು, ಉತ್ತಮ ವೈನ್‌ ಕೊಡಿಸಿದ್ದೆ: ನಿವೃತ್ತ ಸಿಜೆಐ ರಂಜನ್ ಗೊಗೊಯ್

ಚಂದ್ರಚೂಡ್ ಅವರ ಅಧಿಕಾರಾವಧಿಯು ಎರಡು ವರ್ಷಗಳ ಕಾಲ ಇರಲಿದ್ದು, ನವೆಂಬರ್ 10, 2024 ರವರೆಗೆ ಅವರು ಅಧಿಕಾರದಲ್ಲಿ ಇರುತ್ತಾರೆ.

ಎರಡೂವರೆ ವರ್ಷಗಳ ಕಾಲ ಅಲಹಾಬಾದ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ ನಂತರ ಅವರು ಮೇ 13, 2016 ರಂದು ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ನೇಮಕಗೊಂಡರು.

ಇದನ್ನೂ ಓದಿ: ಬಾಬರಿ ಮಸೀದಿ ಧ್ವಂಸ ದಿನ: ರಾಮ್‌ ಕೆ ನಾಮ್ | ರಾಮನ ಹೆಸರಿನಲ್ಲಿ | In the name of god

ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ವೈ.ವಿ. ಚಂದ್ರಚೂಡ್ ಅವರ ಪುತ್ರರಾಗಿರುವ ಡಿ.ವೈ. ಚಂದ್ರಚೂಡ್ ಅವರನ್ನು ಜೂನ್ 1998 ರಲ್ಲಿ ಬಾಂಬೆ ಹೈಕೋರ್ಟ್‌ನಿಂದ ಹಿರಿಯ ವಕೀಲರಾಗಿ ನೇಮಿಸಲಾಯಿತು. 2000ದ ಮಾರ್ಚ್ ತಿಂಗಳಲ್ಲಿ ಅವರು ಹೈಕೋರ್ಟ್‌ ನ್ಯಾಯಾಧೀಶರಾಗಿ ನೇಮಕಗೊಂಡರು.

ಸುಪ್ರೀಂಕೋರ್ಟ್ ನ್ಯಾಯಾಧೀಶರಾಗಿದ್ದ ಅವಧಿಯಲ್ಲಿ, ಚಂದ್ರಚೂಡ್ ಅವರು ಖಾಸಗಿತನವನ್ನು ಮೂಲಭೂತ ಹಕ್ಕು ಎಂದು ಘೋಷಿಸುವುದು ಸೇರಿದಂತೆ ಹಲವು ಮಹತ್ವದ ತೀರ್ಪುಗಳನ್ನು ನೀಡಿದ್ದಾರೆ.

ವಯಸ್ಕರ ನಡುವಿನ ಒಪ್ಪಿತ ಸಲಿಂಗಕಾಮ ಚಟುವಟಿಕೆಯು ಅಪರಾಧವಲ್ಲ ಎಂದು ಸರ್ವಾನುಮತದಿಂದ ತೀರ್ಪು ನೀಡಿದ್ದ ಐದು ನ್ಯಾಯಾಧೀಶರ ಪೀಠದಲ್ಲಿ ಚಂದ್ರಚೂಡ್‌ ಕೂಡಾ ಒಬ್ಬರಾಗಿದ್ದರು. ಈ ತೀರ್ಪಿನ ಮೂಲಕ, ಶಾಸಕಾಂಗ ಮಾತ್ರ ಕಾನೂನುಗಳನ್ನು ಬದಲಾಯಿಸಬಹುದು ಎಂದು ಹೇಳಿದ ನ್ಯಾಯಾಲಯವು 2013 ರಿಂದ ಇದ್ದ ತನ್ನದೇ ಆದೇಶವನ್ನು ತಿರಸ್ಕರಿಸಿತು.

ಇದನ್ನೂ ಓದಿ: ಬಾಬರಿ ಮಸೀದಿ ಒಡೆದ ಆರೋಪಿಗಳನ್ನು ಖುಲಾಸೆಗೊಳಿಸಿ ತೀರ್ಪು ನೀಡಿದ್ದ ನ್ಯಾಯಾಧೀಶ ಯುಪಿ ಉಪಲೋಕಾಯುಕ್ತರಾಗಿ ನೇಮಕ

2019ರ ನವೆಂಬರ್‌ನಲ್ಲಿ, ಬಾಬರಿ ಮಸೀದಿ ದ್ವಂಸ ಪ್ರಕರಣದಲ್ಲಿ ಮಸೀದಿ ಇದ್ದ ಪ್ರದೇಶದಲ್ಲಿ ರಾಮ ಮಂದಿರ ನಿರ್ಮಿಸಲು ಟ್ರಸ್ಟ್‌ಗೆ ಹಸ್ತಾಂತರಿಸಬೇಕೆಂದು ಸರ್ವಾನುಮತದಿಂದ ನಿರ್ಧರಿಸಿದ ಐವರು ನ್ಯಾಯಾಧೀಶರಲ್ಲಿ ಚಂದ್ರಚೂಡ್ ಕೂಡ ಒಬ್ಬರು. ಮಸೀದಿ ನಿರ್ಮಾಣಕ್ಕಾಗಿ ಮುಸ್ಲಿಮರಿಗೆ ಅಯೋಧ್ಯೆಯಲ್ಲಿ ಪ್ರತ್ಯೇಕ ಐದು ಎಕರೆ ಜಾಗವನ್ನು ನೀಡಬೇಕು ಎಂದು ಪೀಠವು ತೀರ್ಪು ನೀಡಿತ್ತು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ‘ರೋಹಿತ್ ವೇಮುಲಾ ಕಾಯ್ದೆ’ ಜಾರಿ: ಕೆ.ಸಿ ವೇಣುಗೋಪಾಲ್

0
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಶಿಕ್ಷಣ ಸಂಸ್ಥೆಗಳಲ್ಲಿನ ಜಾತಿ ಮತ್ತು ಕೋಮು ದೌರ್ಜನ್ಯ ತಡೆಯಲು 'ರೋಹಿತ್ ವೇಮುಲಾ ಕಾಯ್ದೆ ಜಾರಿಗೊಳಿಸಲಾಗುವುದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಭರವಸೆ ನೀಡಿದ್ದಾರೆ. ಸಾಮಾಜಿಕ ಮತ್ತು...