Homeಮುಖಪುಟಪೂಜಾಸ್ಥಳಗಳ ಕಾಯ್ದೆ ಕುರಿತು ಚಂದ್ರಚೂಡ್ ಹೇಳಿಕೆ ಎಲ್ಲಾ ವಿವಾದಗಳಿಗೆ ಮೂಲ : ಕಾಂಗ್ರೆಸ್ ನಾಯಕ ಜೈರಾಮ್...

ಪೂಜಾಸ್ಥಳಗಳ ಕಾಯ್ದೆ ಕುರಿತು ಚಂದ್ರಚೂಡ್ ಹೇಳಿಕೆ ಎಲ್ಲಾ ವಿವಾದಗಳಿಗೆ ಮೂಲ : ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್

- Advertisement -
- Advertisement -

ಪೂಜಾ ಸ್ಥಳಗಳ ಕಾಯ್ದೆ ಕುರಿತು ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ಅವರು ಮೇ 2022ರಲ್ಲಿ ನೀಡಿರುವ ಹೇಳಿಕೆಗಳು ಮಸೀದಿ-ಮಂದಿರ ಕುರಿತ ಎಲ್ಲಾ ವಿವಾದಗಳಿಗೆ ಮೂಲ ಕಾರಣ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಶನಿವಾರ (ನ.30) ಹೇಳಿದ್ದಾರೆ.

“ಪೂಜಾ ಸ್ಥಳಗಳ ಕಾಯ್ದೆಯು ಧಾರ್ಮಿಕ ಸ್ಥಳದ ಸ್ವರೂಪ ಬದಲಾವಣೆಯನ್ನು ನಿಷೇಧಿಸಿದ್ದರೂ, ಕೇವಲ ಸ್ಥಳವೊಂದರ ಧಾರ್ಮಿಕ ಲಕ್ಷಣವನ್ನು ಖಚಿತಪಡಿಸಿಕೊಳ್ಳುವುದು ಕಾಯ್ದೆಯನ್ನು ಉಲ್ಲಂಘಿಸುವುದಿಲ್ಲ” ಎಂದು ಚಂದ್ರಚೂಡ್ 2022ರಲ್ಲಿ ಮೌಖಿವಾಗಿ ಹೇಳಿದ್ದರು.

ಲೇಖಕ ಹಾಗೂ ಮಾಜಿ ರಾಜ್ಯಸಭಾ ಸದಸ್ಯ ರಾಜ್ ಮೋಹನ್ ಗಾಂಧಿಯವರು ಸದನದಲ್ಲಿ ಪೂಜಾ ಸ್ಥಳಗಳ ಮಸೂದೆ -1991ರ ಕುರಿತು ಮಾಡಿದ್ದ ಭಾಷಣವನ್ನು ನೆನಪಿಸಿಕೊಂಡಿರುವ ಜೈರಾಮ್ ರಮೇಶ್, “ಇತಿಹಾಸದ ತಪ್ಪುಗಳನ್ನು ಸೇಡಿನ ಭಾವನೆಯೊಂದಿಗೆ ಸರಿಪಡಿಸಲು ಬಯಸುವವರು ಹೆಚ್ಚೆಚ್ಚು ವಿನಾಶವನ್ನುಂಟು ಮಾಡುತ್ತಾರೆ ಎನ್ನುವುದು ಹಿಂದು ಮಹಾಕಾವ್ಯ ಮಹಾಭಾರತದ ಪ್ರಮುಖ ಪಾಠವಾಗಿದೆ” ಎಂದು ಗಾಂಧಿ ಆಗ ಹೇಳಿದ್ದರು ಎಂದಿದ್ದಾರೆ.

ಗಾಂಧಿಯವರ ಭಾಷಣವು ಭಾರತೀಯ ಸಂಸ್ಕೃತಿ, ಸಂಪ್ರದಾಯಗಳು, ಇತಿಹಾಸ ಮತ್ತು ರಾಜಕೀಯ ಕುರಿತಂತೆ ಶ್ರೇಷ್ಠ ಭಾಷಣವಾಗಿತ್ತು ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ಕಾಂಗ್ರೆಸ್ ಪೂಜಾ ಸ್ಥಳಗಳ ಕಾಯ್ದೆಗೆ ತಾನು ಬದ್ಧವಾಗಿದ್ದೇನೆ ಎಂದು ಶುಕ್ರವಾರ (ನ.29) ಹೇಳಿದೆ. ಆಡಳಿತ ಬಿಜೆಪಿ ಈ ಕಾಯ್ದೆಯನ್ನು ನಿರ್ಲಜ್ಜವಾಗಿ ಉಲ್ಲಂಘಿಸುತ್ತಿದೆ ಎಂದು ಅದು ಆರೋಪಿಸಿದೆ.

ಉತ್ತರ ಪ್ರದೇಶ ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ನ್ಯಾಯಾಲಯ ಸೂಚಿಸಿರುವುದು, ಆ ಬಳಿಕ ನಡೆದ ಹಿಂಸಾಚಾರ ಮತ್ತು ಸೂಫಿ ಸಂತ ಖ್ವಾಜಾ ಮುಈನುದ್ದೀನ್ ಚಿಸ್ತಿಯವರ ಅಜ್ಮೀರ್ ದರ್ಗಾ ದೇವಾಯಲಯ ಎಂದು ವಾದಿಸಿರುವ ಅರ್ಜಿಯ ವಿಚಾರಣೆಗೆ ನ್ಯಾಯಾಲಯ ಒಪ್ಪಿರುವ ಬೆನ್ನಲ್ಲೇ ಕಾಂಗ್ರೆಸ್ ತನ್ನ ನಿಲುವು ವ್ಯಕ್ತಪಡಿಸಿದೆ.

1991ರ ಪೂಜಾ ಸ್ಥಳಗಳ ಕಾಯ್ದೆಯು ಸ್ವತಂತ್ರ ಭಾರತದಲ್ಲಿ ಪೂಜಾ ಸ್ಥಳಗಳ ಸ್ವರೂಪ ಬದಲಾವಣೆಯನ್ನು ನಿಷೇಧಿಸುತ್ತದೆ. ಅಯೋಧ್ಯೆಯ ಬಾಬರಿ ಮಸೀದಿಯ ಸ್ಥಳ ಮಾತ್ರ ಈ ಕಾನೂನಿನಿಂದ ಹೊರತಾಗಿತ್ತು. ಅಲ್ಲಿ ಈಗ ಸುಪ್ರೀಂ ಕೋರ್ಟ್‌ ಆದೇಶದಂತೆ ಮಸೀದಿ ತೆರವುಗೊಳಿಸಿ ರಾಮ ಮಂದಿರ ನಿರ್ಮಿಸಲಾಗಿದೆ.

ಇದನ್ನೂ ಓದಿ : ನಾಗರಿಕ ಹಕ್ಕುಗಳ ಹೋರಾಟಗಾರ ನದೀಮ್ ಖಾನ್ ಅಕ್ರಮ ಬಂಧನ ಯತ್ನ; ದೆಹಲಿ ಪೊಲೀಸರ ವಿರುದ್ಧ ಬೆಂಗಳೂರಿನಲ್ಲಿ ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...