Homeಮುಖಪುಟಪೂಜಾಸ್ಥಳಗಳ ಕಾಯ್ದೆ ಕುರಿತು ಚಂದ್ರಚೂಡ್ ಹೇಳಿಕೆ ಎಲ್ಲಾ ವಿವಾದಗಳಿಗೆ ಮೂಲ : ಕಾಂಗ್ರೆಸ್ ನಾಯಕ ಜೈರಾಮ್...

ಪೂಜಾಸ್ಥಳಗಳ ಕಾಯ್ದೆ ಕುರಿತು ಚಂದ್ರಚೂಡ್ ಹೇಳಿಕೆ ಎಲ್ಲಾ ವಿವಾದಗಳಿಗೆ ಮೂಲ : ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್

- Advertisement -
- Advertisement -

ಪೂಜಾ ಸ್ಥಳಗಳ ಕಾಯ್ದೆ ಕುರಿತು ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ಅವರು ಮೇ 2022ರಲ್ಲಿ ನೀಡಿರುವ ಹೇಳಿಕೆಗಳು ಮಸೀದಿ-ಮಂದಿರ ಕುರಿತ ಎಲ್ಲಾ ವಿವಾದಗಳಿಗೆ ಮೂಲ ಕಾರಣ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಶನಿವಾರ (ನ.30) ಹೇಳಿದ್ದಾರೆ.

“ಪೂಜಾ ಸ್ಥಳಗಳ ಕಾಯ್ದೆಯು ಧಾರ್ಮಿಕ ಸ್ಥಳದ ಸ್ವರೂಪ ಬದಲಾವಣೆಯನ್ನು ನಿಷೇಧಿಸಿದ್ದರೂ, ಕೇವಲ ಸ್ಥಳವೊಂದರ ಧಾರ್ಮಿಕ ಲಕ್ಷಣವನ್ನು ಖಚಿತಪಡಿಸಿಕೊಳ್ಳುವುದು ಕಾಯ್ದೆಯನ್ನು ಉಲ್ಲಂಘಿಸುವುದಿಲ್ಲ” ಎಂದು ಚಂದ್ರಚೂಡ್ 2022ರಲ್ಲಿ ಮೌಖಿವಾಗಿ ಹೇಳಿದ್ದರು.

ಲೇಖಕ ಹಾಗೂ ಮಾಜಿ ರಾಜ್ಯಸಭಾ ಸದಸ್ಯ ರಾಜ್ ಮೋಹನ್ ಗಾಂಧಿಯವರು ಸದನದಲ್ಲಿ ಪೂಜಾ ಸ್ಥಳಗಳ ಮಸೂದೆ -1991ರ ಕುರಿತು ಮಾಡಿದ್ದ ಭಾಷಣವನ್ನು ನೆನಪಿಸಿಕೊಂಡಿರುವ ಜೈರಾಮ್ ರಮೇಶ್, “ಇತಿಹಾಸದ ತಪ್ಪುಗಳನ್ನು ಸೇಡಿನ ಭಾವನೆಯೊಂದಿಗೆ ಸರಿಪಡಿಸಲು ಬಯಸುವವರು ಹೆಚ್ಚೆಚ್ಚು ವಿನಾಶವನ್ನುಂಟು ಮಾಡುತ್ತಾರೆ ಎನ್ನುವುದು ಹಿಂದು ಮಹಾಕಾವ್ಯ ಮಹಾಭಾರತದ ಪ್ರಮುಖ ಪಾಠವಾಗಿದೆ” ಎಂದು ಗಾಂಧಿ ಆಗ ಹೇಳಿದ್ದರು ಎಂದಿದ್ದಾರೆ.

ಗಾಂಧಿಯವರ ಭಾಷಣವು ಭಾರತೀಯ ಸಂಸ್ಕೃತಿ, ಸಂಪ್ರದಾಯಗಳು, ಇತಿಹಾಸ ಮತ್ತು ರಾಜಕೀಯ ಕುರಿತಂತೆ ಶ್ರೇಷ್ಠ ಭಾಷಣವಾಗಿತ್ತು ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ಕಾಂಗ್ರೆಸ್ ಪೂಜಾ ಸ್ಥಳಗಳ ಕಾಯ್ದೆಗೆ ತಾನು ಬದ್ಧವಾಗಿದ್ದೇನೆ ಎಂದು ಶುಕ್ರವಾರ (ನ.29) ಹೇಳಿದೆ. ಆಡಳಿತ ಬಿಜೆಪಿ ಈ ಕಾಯ್ದೆಯನ್ನು ನಿರ್ಲಜ್ಜವಾಗಿ ಉಲ್ಲಂಘಿಸುತ್ತಿದೆ ಎಂದು ಅದು ಆರೋಪಿಸಿದೆ.

ಉತ್ತರ ಪ್ರದೇಶ ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ನ್ಯಾಯಾಲಯ ಸೂಚಿಸಿರುವುದು, ಆ ಬಳಿಕ ನಡೆದ ಹಿಂಸಾಚಾರ ಮತ್ತು ಸೂಫಿ ಸಂತ ಖ್ವಾಜಾ ಮುಈನುದ್ದೀನ್ ಚಿಸ್ತಿಯವರ ಅಜ್ಮೀರ್ ದರ್ಗಾ ದೇವಾಯಲಯ ಎಂದು ವಾದಿಸಿರುವ ಅರ್ಜಿಯ ವಿಚಾರಣೆಗೆ ನ್ಯಾಯಾಲಯ ಒಪ್ಪಿರುವ ಬೆನ್ನಲ್ಲೇ ಕಾಂಗ್ರೆಸ್ ತನ್ನ ನಿಲುವು ವ್ಯಕ್ತಪಡಿಸಿದೆ.

1991ರ ಪೂಜಾ ಸ್ಥಳಗಳ ಕಾಯ್ದೆಯು ಸ್ವತಂತ್ರ ಭಾರತದಲ್ಲಿ ಪೂಜಾ ಸ್ಥಳಗಳ ಸ್ವರೂಪ ಬದಲಾವಣೆಯನ್ನು ನಿಷೇಧಿಸುತ್ತದೆ. ಅಯೋಧ್ಯೆಯ ಬಾಬರಿ ಮಸೀದಿಯ ಸ್ಥಳ ಮಾತ್ರ ಈ ಕಾನೂನಿನಿಂದ ಹೊರತಾಗಿತ್ತು. ಅಲ್ಲಿ ಈಗ ಸುಪ್ರೀಂ ಕೋರ್ಟ್‌ ಆದೇಶದಂತೆ ಮಸೀದಿ ತೆರವುಗೊಳಿಸಿ ರಾಮ ಮಂದಿರ ನಿರ್ಮಿಸಲಾಗಿದೆ.

ಇದನ್ನೂ ಓದಿ : ನಾಗರಿಕ ಹಕ್ಕುಗಳ ಹೋರಾಟಗಾರ ನದೀಮ್ ಖಾನ್ ಅಕ್ರಮ ಬಂಧನ ಯತ್ನ; ದೆಹಲಿ ಪೊಲೀಸರ ವಿರುದ್ಧ ಬೆಂಗಳೂರಿನಲ್ಲಿ ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...