Homeಮುಖಪುಟಜಾರ್ಖಂಡ್‌ ಚುನಾವಣೆಗೆ ಧುಮುಕಿದ ಆದಿವಾಸಿ ಪತ್ರಕರ್ತೆ, ಬುಡಕಟ್ಟು ಹೋರಾಟಗಾರ್ತಿ ಬಾರ್ಲಾ...

ಜಾರ್ಖಂಡ್‌ ಚುನಾವಣೆಗೆ ಧುಮುಕಿದ ಆದಿವಾಸಿ ಪತ್ರಕರ್ತೆ, ಬುಡಕಟ್ಟು ಹೋರಾಟಗಾರ್ತಿ ಬಾರ್ಲಾ…

ಶಾಸಕರು, ಅಧಿಕಾರದಲ್ಲಿರುವವರು ಬುಡಕಟ್ಟು ಜನರ ಹಕ್ಕುಗಳನ್ನು ನಿರ್ಲಕ್ಷಿಸುತ್ತಾರೆ, ಆದ್ದರಿಂದ ನಾನು ಕಾನೂನುಗಳನ್ನು ನಿರ್ಮಿಸುವ ಸ್ಥಳಕ್ಕೆ ಹೋಗಲು ನಿರ್ಧರಿಸಿದ್ದೇನೆ ಎನ್ನುತ್ತಾರೆ ಬಾರ್ಲಾ.

- Advertisement -
- Advertisement -

ಮಾಜಿ ಮುಖ್ಯಮಂತ್ರಿ ಬಾಬುಲಾಲ್ ಮರಂಡಿ ನೇತೃತ್ವದ ಜಾರ್ಖಂಡ್ ವಿಕಾಸ್ ಮೋರ್ಚಾ-ಪ್ರಜಾತಂತ್ರಿಕ್ (ಜೆವಿಎಂ-ಪಿ) ಪಕ್ಷದಿಂದ ಖುಂಟಿ ವಿಧಾನಸಭಾ ಕ್ಷೆತ್ರದ ಅಭ್ಯರ್ಥಿಯಾಗಿ ಬುಡಕಟ್ಟು ಪತ್ರಕರ್ತೆ ಮತ್ತು ಖ್ಯಾತ ಸಾಮಾಜಿಕ ಕಾರ್ಯಕರ್ತೆ ದಯಾಮಣಿ ಬಾರ್ಲಾ ಸ್ಪರ್ಧಿಸಲಿದ್ದಾರೆ.

ದಯಾಮಣಿ ಬಾರ್ಲಾ ದೇಶದ ಪ್ರಸಿದ್ಧ ಬುಡಕಟ್ಟು ಕಾರ್ಯಕರ್ತರಲ್ಲಿ ಒಬ್ಬರಾಗಿದ್ದಾರೆ. ಇವರು ಕಳೆದ 25 ವರ್ಷಗಳಿಂದ, ಪ್ರಭುತ್ವ ಮತ್ತು ಹಲವಾರು ಬಹುರಾಷ್ಟ್ರೀಯ ಕಂಪನಿಗಳ ವಿರುದ್ಧ ಬುಡಕಟ್ಟು ಜನರ ಭೂ ಹಕ್ಕುಗಳು, ಜನಾಂಗದವರ ಅಸ್ಮಿತೆ ಮತ್ತು ಸಂಸ್ಕೃತಿಯ ಬಗ್ಗೆ ಹೋರಾಡುತ್ತಿದ್ದಾರೆ.

ಪೂರ್ವ ಜಾರ್ಖಂಡ್‌ನಲ್ಲಿ ಆರ್ಸೆಲರ್ ಮಿತ್ತಲ್ ಅವರ ಉಕ್ಕಿನ ಸ್ಥಾವರ ಸ್ಥಾಪನೆ ನಡೆದಿತ್ತು. ಸುಮಾರು 12,000 ಎಕರೆ ಕಾಡು ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಯೋಜನೆ ಇದಾಗಿತ್ತು. ಇದರಿಂದಾಗಿ ಹಲವಾರು ಗ್ರಾಮಗಳನ್ನು ಸ್ಥಳಾಂತರಿಸಬೇಕಾದ ಪರಿಸ್ತಿತಿ ಬಂದೊದಗಿತ್ತು. ಮುಂಡಾ ಬುಡಕಟ್ಟು ಗುಂಪಿನ ಸದಸ್ಯರಾಗಿರುವ ಬಾರ್ಲಾ ಆಗ ಉಕ್ಕಿನ ಸ್ಥಾವರ ವಿರೋಧಿ ಹೋರಾಟದ ಮೂಲಕ ಚಿರಪರಿಚಿತರಾದ ಅವರು ಪತ್ರಿಕೋದ್ಯಮಕ್ಕಾಗಿ ಹಲವಾರು ಪ್ರತಿಷ್ಠಿತ ಪ್ರಶಸ್ತಿಗಳನ್ನು ಪಡೆದಿದ್ದಾರೆ.

2014 ರ ಲೋಕಸಭಾ ಚುನಾವಣೆಯಲ್ಲಿ ಅವರು ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಖುಂಟಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋಲುಂಡಿದ್ದರು. ಬಾರ್ಲಾ ಭಾರತೀಯ ಸಾಮಾಜಿಕ ಕ್ರಿಯಾ ವೇದಿಕೆಯ (INSAF) ರಾಷ್ಟ್ರೀಯ ಅಧ್ಯಕ್ಷರಾಗಿದ್ದಾರೆ. ಚಹಾ ಅಂಗಡಿಯೊಂದನ್ನು ನಡೆಸುವುದರ ಜೊತೆಗೆ ಪತ್ರಕರ್ತ ಹುದ್ದೆ ಮತ್ತು ಹೋರಾಟವನ್ನು ಅವರು ಮುನ್ನಡೆಸುತ್ತಿದ್ದಾರೆ.

“ನನ್ನ ಜೀವನವು ಹೋರಾಟಗಳಿಂದ ತುಂಬಿದೆ. ನನ್ನ ಹೆತ್ತವರ ಒಡೆತನದ ಜಮೀನನ್ನು ಜನರು ಕಸಿದುಕೊಳ್ಳುವುದನ್ನು ನಾನು ನೋಡಿದೆ. ನನ್ನ ಹೆತ್ತವರನ್ನು ನಂತರ ಬಂಧಿತ ಕಾರ್ಮಿಕರನ್ನಾಗಿ ಮಾಡಲಾಯಿತು. ಅವರು ನಮ್ಮಿಂದ ಭೂಮಿಯನ್ನು ತೆಗೆದುಕೊಂಡಾಗ, ನಮ್ಮ ಇಡೀ ಕುಟುಂಬವು ಚದುರಿಹೋಯಿತು. ನಮಗೆ ಆಹಾರವನ್ನು ಪಡೆಯಲು ಸಾಧ್ಯವಾಗಲಿಲ್ಲ. ಆದರೆ ನಾನು ನನ್ನ ಶಿಕ್ಷಣವನ್ನು ಬಿಡಲಿಲ್ಲ. ನಾನು ಕೂಲಿಯಾಗಿ ಕೆಲಸ ಮಾಡುವ ಮೂಲಕ ಹಣವನ್ನು ಸಂಗ್ರಹಿಸಬೇಕಾಗಿದ್ದಾಗಲೂ ಅದನ್ನು ಮುಂದುವರಿಸಿದೆ. ನಾನು ಬ್ರೆಡ್ ತುಂಡುಗಾಗಿ ಪರದಾಡಿದ ಸಮಯಗಳನ್ನು ನೋಡಿದ್ದೇನೆ” ಎನ್ನುತ್ತಾರೆ ಬಾರ್ಲಾ.

ಅವರು ಪೂರ್ಣಪ್ರಮಾಣದಲ್ಲಿ ಹೋರಾಟಕ್ಕೆ ಧುಮುಕಿದ್ದು 1995 ರಲ್ಲಿ. “ಟೊರ್ಪಾದ ಕೊಯೆಲ್ ಕರೋದಲ್ಲಿ ಅಣೆಕಟ್ಟು ನಿರ್ಮಿಸುವ ಯೋಜನೆಯನ್ನು ಸರ್ಕಾರ ಘೋಷಿಸಿತ್ತು. ಅಣೆಕಟ್ಟು 245 ಹಳ್ಳಿಗಳ ಅಸ್ತಿತ್ವಕ್ಕೆ ಧಕ್ಕೆ ತಂದಿತು. ಸುಮಾರು 2.5 ಲಕ್ಷ ಜನರು ಸ್ಥಳಾಂತರಗೊಳ್ಳುತ್ತಿದ್ದರು ಮತ್ತು 27,000 ಎಕರೆ ಕಾಡು ಭೂಮಿಯನ್ನು ಮುಳುಗಿಸಬಹುದಿತ್ತು. ಆಗ ಇದರ ಅರ್ಥವೇನೆಂದು ನನಗೆ ತಿಳಿಯಿತು. ನಮ್ಮ ಭೂಮಿಯನ್ನು ಕಳೆದುಕೊಳ್ಳುವ ದೊಡ್ಡ ಹುನ್ನಾರ ನಡೆಯುತ್ತಿತ್ತು. ನಿಮ್ಮ ಸಂಸ್ಕೃತಿ, ನಿಮ್ಮ ಪರಂಪರೆ, ನಿಮ್ಮ ಗುರುತನ್ನು ನೀವು ಕಳೆದುಕೊಳ್ಳುತ್ತೀರಿ. ಇದು ನಿಮ್ಮ ವೈಯಕ್ತಿಕ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂಬುದು ಅರಿವಿಗೆ ಬಂತು. ಅಂದಿನಿಂದ, ನಾನು ಸ್ಥಳಾಂತರದ ವಿರುದ್ಧ, ಬುಡಕಟ್ಟು ಹಕ್ಕುಗಳಿಗಾಗಿ, ಜಾರ್ಖಂಡ್ ಮತ್ತು ಹೊರಗಡೆ ಅನೇಕ ಚಳುವಳಿಗಳಲ್ಲಿ ಭಾಗವಾಗಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಶಾಸಕರು, ಅಧಿಕಾರದಲ್ಲಿರುವವರು ಬುಡಕಟ್ಟು ಜನರ ಹಕ್ಕುಗಳನ್ನು ನಿರ್ಲಕ್ಷಿಸುತ್ತಾರೆ, ಆದ್ದರಿಂದ ನಾನು ಕಾನೂನುಗಳನ್ನು ನಿರ್ಮಿಸುವ ಸ್ಥಳಕ್ಕೆ ಹೋಗಲು ನಿರ್ಧರಿಸಿದ್ದೇನೆ ಎಂದು ಅವರು ತಮ್ಮ ಚುನಾವಣಾ ಉದ್ದೇಶವನ್ನು ಬಿಡಿಸಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...