Homeಮುಖಪುಟಜಾರ್ಖಂಡ್‌ ಚುನಾವಣೆಗೆ ಧುಮುಕಿದ ಆದಿವಾಸಿ ಪತ್ರಕರ್ತೆ, ಬುಡಕಟ್ಟು ಹೋರಾಟಗಾರ್ತಿ ಬಾರ್ಲಾ...

ಜಾರ್ಖಂಡ್‌ ಚುನಾವಣೆಗೆ ಧುಮುಕಿದ ಆದಿವಾಸಿ ಪತ್ರಕರ್ತೆ, ಬುಡಕಟ್ಟು ಹೋರಾಟಗಾರ್ತಿ ಬಾರ್ಲಾ…

ಶಾಸಕರು, ಅಧಿಕಾರದಲ್ಲಿರುವವರು ಬುಡಕಟ್ಟು ಜನರ ಹಕ್ಕುಗಳನ್ನು ನಿರ್ಲಕ್ಷಿಸುತ್ತಾರೆ, ಆದ್ದರಿಂದ ನಾನು ಕಾನೂನುಗಳನ್ನು ನಿರ್ಮಿಸುವ ಸ್ಥಳಕ್ಕೆ ಹೋಗಲು ನಿರ್ಧರಿಸಿದ್ದೇನೆ ಎನ್ನುತ್ತಾರೆ ಬಾರ್ಲಾ.

- Advertisement -
- Advertisement -

ಮಾಜಿ ಮುಖ್ಯಮಂತ್ರಿ ಬಾಬುಲಾಲ್ ಮರಂಡಿ ನೇತೃತ್ವದ ಜಾರ್ಖಂಡ್ ವಿಕಾಸ್ ಮೋರ್ಚಾ-ಪ್ರಜಾತಂತ್ರಿಕ್ (ಜೆವಿಎಂ-ಪಿ) ಪಕ್ಷದಿಂದ ಖುಂಟಿ ವಿಧಾನಸಭಾ ಕ್ಷೆತ್ರದ ಅಭ್ಯರ್ಥಿಯಾಗಿ ಬುಡಕಟ್ಟು ಪತ್ರಕರ್ತೆ ಮತ್ತು ಖ್ಯಾತ ಸಾಮಾಜಿಕ ಕಾರ್ಯಕರ್ತೆ ದಯಾಮಣಿ ಬಾರ್ಲಾ ಸ್ಪರ್ಧಿಸಲಿದ್ದಾರೆ.

ದಯಾಮಣಿ ಬಾರ್ಲಾ ದೇಶದ ಪ್ರಸಿದ್ಧ ಬುಡಕಟ್ಟು ಕಾರ್ಯಕರ್ತರಲ್ಲಿ ಒಬ್ಬರಾಗಿದ್ದಾರೆ. ಇವರು ಕಳೆದ 25 ವರ್ಷಗಳಿಂದ, ಪ್ರಭುತ್ವ ಮತ್ತು ಹಲವಾರು ಬಹುರಾಷ್ಟ್ರೀಯ ಕಂಪನಿಗಳ ವಿರುದ್ಧ ಬುಡಕಟ್ಟು ಜನರ ಭೂ ಹಕ್ಕುಗಳು, ಜನಾಂಗದವರ ಅಸ್ಮಿತೆ ಮತ್ತು ಸಂಸ್ಕೃತಿಯ ಬಗ್ಗೆ ಹೋರಾಡುತ್ತಿದ್ದಾರೆ.

ಪೂರ್ವ ಜಾರ್ಖಂಡ್‌ನಲ್ಲಿ ಆರ್ಸೆಲರ್ ಮಿತ್ತಲ್ ಅವರ ಉಕ್ಕಿನ ಸ್ಥಾವರ ಸ್ಥಾಪನೆ ನಡೆದಿತ್ತು. ಸುಮಾರು 12,000 ಎಕರೆ ಕಾಡು ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಯೋಜನೆ ಇದಾಗಿತ್ತು. ಇದರಿಂದಾಗಿ ಹಲವಾರು ಗ್ರಾಮಗಳನ್ನು ಸ್ಥಳಾಂತರಿಸಬೇಕಾದ ಪರಿಸ್ತಿತಿ ಬಂದೊದಗಿತ್ತು. ಮುಂಡಾ ಬುಡಕಟ್ಟು ಗುಂಪಿನ ಸದಸ್ಯರಾಗಿರುವ ಬಾರ್ಲಾ ಆಗ ಉಕ್ಕಿನ ಸ್ಥಾವರ ವಿರೋಧಿ ಹೋರಾಟದ ಮೂಲಕ ಚಿರಪರಿಚಿತರಾದ ಅವರು ಪತ್ರಿಕೋದ್ಯಮಕ್ಕಾಗಿ ಹಲವಾರು ಪ್ರತಿಷ್ಠಿತ ಪ್ರಶಸ್ತಿಗಳನ್ನು ಪಡೆದಿದ್ದಾರೆ.

2014 ರ ಲೋಕಸಭಾ ಚುನಾವಣೆಯಲ್ಲಿ ಅವರು ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಖುಂಟಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋಲುಂಡಿದ್ದರು. ಬಾರ್ಲಾ ಭಾರತೀಯ ಸಾಮಾಜಿಕ ಕ್ರಿಯಾ ವೇದಿಕೆಯ (INSAF) ರಾಷ್ಟ್ರೀಯ ಅಧ್ಯಕ್ಷರಾಗಿದ್ದಾರೆ. ಚಹಾ ಅಂಗಡಿಯೊಂದನ್ನು ನಡೆಸುವುದರ ಜೊತೆಗೆ ಪತ್ರಕರ್ತ ಹುದ್ದೆ ಮತ್ತು ಹೋರಾಟವನ್ನು ಅವರು ಮುನ್ನಡೆಸುತ್ತಿದ್ದಾರೆ.

“ನನ್ನ ಜೀವನವು ಹೋರಾಟಗಳಿಂದ ತುಂಬಿದೆ. ನನ್ನ ಹೆತ್ತವರ ಒಡೆತನದ ಜಮೀನನ್ನು ಜನರು ಕಸಿದುಕೊಳ್ಳುವುದನ್ನು ನಾನು ನೋಡಿದೆ. ನನ್ನ ಹೆತ್ತವರನ್ನು ನಂತರ ಬಂಧಿತ ಕಾರ್ಮಿಕರನ್ನಾಗಿ ಮಾಡಲಾಯಿತು. ಅವರು ನಮ್ಮಿಂದ ಭೂಮಿಯನ್ನು ತೆಗೆದುಕೊಂಡಾಗ, ನಮ್ಮ ಇಡೀ ಕುಟುಂಬವು ಚದುರಿಹೋಯಿತು. ನಮಗೆ ಆಹಾರವನ್ನು ಪಡೆಯಲು ಸಾಧ್ಯವಾಗಲಿಲ್ಲ. ಆದರೆ ನಾನು ನನ್ನ ಶಿಕ್ಷಣವನ್ನು ಬಿಡಲಿಲ್ಲ. ನಾನು ಕೂಲಿಯಾಗಿ ಕೆಲಸ ಮಾಡುವ ಮೂಲಕ ಹಣವನ್ನು ಸಂಗ್ರಹಿಸಬೇಕಾಗಿದ್ದಾಗಲೂ ಅದನ್ನು ಮುಂದುವರಿಸಿದೆ. ನಾನು ಬ್ರೆಡ್ ತುಂಡುಗಾಗಿ ಪರದಾಡಿದ ಸಮಯಗಳನ್ನು ನೋಡಿದ್ದೇನೆ” ಎನ್ನುತ್ತಾರೆ ಬಾರ್ಲಾ.

ಅವರು ಪೂರ್ಣಪ್ರಮಾಣದಲ್ಲಿ ಹೋರಾಟಕ್ಕೆ ಧುಮುಕಿದ್ದು 1995 ರಲ್ಲಿ. “ಟೊರ್ಪಾದ ಕೊಯೆಲ್ ಕರೋದಲ್ಲಿ ಅಣೆಕಟ್ಟು ನಿರ್ಮಿಸುವ ಯೋಜನೆಯನ್ನು ಸರ್ಕಾರ ಘೋಷಿಸಿತ್ತು. ಅಣೆಕಟ್ಟು 245 ಹಳ್ಳಿಗಳ ಅಸ್ತಿತ್ವಕ್ಕೆ ಧಕ್ಕೆ ತಂದಿತು. ಸುಮಾರು 2.5 ಲಕ್ಷ ಜನರು ಸ್ಥಳಾಂತರಗೊಳ್ಳುತ್ತಿದ್ದರು ಮತ್ತು 27,000 ಎಕರೆ ಕಾಡು ಭೂಮಿಯನ್ನು ಮುಳುಗಿಸಬಹುದಿತ್ತು. ಆಗ ಇದರ ಅರ್ಥವೇನೆಂದು ನನಗೆ ತಿಳಿಯಿತು. ನಮ್ಮ ಭೂಮಿಯನ್ನು ಕಳೆದುಕೊಳ್ಳುವ ದೊಡ್ಡ ಹುನ್ನಾರ ನಡೆಯುತ್ತಿತ್ತು. ನಿಮ್ಮ ಸಂಸ್ಕೃತಿ, ನಿಮ್ಮ ಪರಂಪರೆ, ನಿಮ್ಮ ಗುರುತನ್ನು ನೀವು ಕಳೆದುಕೊಳ್ಳುತ್ತೀರಿ. ಇದು ನಿಮ್ಮ ವೈಯಕ್ತಿಕ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂಬುದು ಅರಿವಿಗೆ ಬಂತು. ಅಂದಿನಿಂದ, ನಾನು ಸ್ಥಳಾಂತರದ ವಿರುದ್ಧ, ಬುಡಕಟ್ಟು ಹಕ್ಕುಗಳಿಗಾಗಿ, ಜಾರ್ಖಂಡ್ ಮತ್ತು ಹೊರಗಡೆ ಅನೇಕ ಚಳುವಳಿಗಳಲ್ಲಿ ಭಾಗವಾಗಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಶಾಸಕರು, ಅಧಿಕಾರದಲ್ಲಿರುವವರು ಬುಡಕಟ್ಟು ಜನರ ಹಕ್ಕುಗಳನ್ನು ನಿರ್ಲಕ್ಷಿಸುತ್ತಾರೆ, ಆದ್ದರಿಂದ ನಾನು ಕಾನೂನುಗಳನ್ನು ನಿರ್ಮಿಸುವ ಸ್ಥಳಕ್ಕೆ ಹೋಗಲು ನಿರ್ಧರಿಸಿದ್ದೇನೆ ಎಂದು ಅವರು ತಮ್ಮ ಚುನಾವಣಾ ಉದ್ದೇಶವನ್ನು ಬಿಡಿಸಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...