Homeಮುಖಪುಟಜಾರ್ಖಂಡ್‌ ಚುನಾವಣೆಗೆ ಧುಮುಕಿದ ಆದಿವಾಸಿ ಪತ್ರಕರ್ತೆ, ಬುಡಕಟ್ಟು ಹೋರಾಟಗಾರ್ತಿ ಬಾರ್ಲಾ...

ಜಾರ್ಖಂಡ್‌ ಚುನಾವಣೆಗೆ ಧುಮುಕಿದ ಆದಿವಾಸಿ ಪತ್ರಕರ್ತೆ, ಬುಡಕಟ್ಟು ಹೋರಾಟಗಾರ್ತಿ ಬಾರ್ಲಾ…

ಶಾಸಕರು, ಅಧಿಕಾರದಲ್ಲಿರುವವರು ಬುಡಕಟ್ಟು ಜನರ ಹಕ್ಕುಗಳನ್ನು ನಿರ್ಲಕ್ಷಿಸುತ್ತಾರೆ, ಆದ್ದರಿಂದ ನಾನು ಕಾನೂನುಗಳನ್ನು ನಿರ್ಮಿಸುವ ಸ್ಥಳಕ್ಕೆ ಹೋಗಲು ನಿರ್ಧರಿಸಿದ್ದೇನೆ ಎನ್ನುತ್ತಾರೆ ಬಾರ್ಲಾ.

- Advertisement -
- Advertisement -

ಮಾಜಿ ಮುಖ್ಯಮಂತ್ರಿ ಬಾಬುಲಾಲ್ ಮರಂಡಿ ನೇತೃತ್ವದ ಜಾರ್ಖಂಡ್ ವಿಕಾಸ್ ಮೋರ್ಚಾ-ಪ್ರಜಾತಂತ್ರಿಕ್ (ಜೆವಿಎಂ-ಪಿ) ಪಕ್ಷದಿಂದ ಖುಂಟಿ ವಿಧಾನಸಭಾ ಕ್ಷೆತ್ರದ ಅಭ್ಯರ್ಥಿಯಾಗಿ ಬುಡಕಟ್ಟು ಪತ್ರಕರ್ತೆ ಮತ್ತು ಖ್ಯಾತ ಸಾಮಾಜಿಕ ಕಾರ್ಯಕರ್ತೆ ದಯಾಮಣಿ ಬಾರ್ಲಾ ಸ್ಪರ್ಧಿಸಲಿದ್ದಾರೆ.

ದಯಾಮಣಿ ಬಾರ್ಲಾ ದೇಶದ ಪ್ರಸಿದ್ಧ ಬುಡಕಟ್ಟು ಕಾರ್ಯಕರ್ತರಲ್ಲಿ ಒಬ್ಬರಾಗಿದ್ದಾರೆ. ಇವರು ಕಳೆದ 25 ವರ್ಷಗಳಿಂದ, ಪ್ರಭುತ್ವ ಮತ್ತು ಹಲವಾರು ಬಹುರಾಷ್ಟ್ರೀಯ ಕಂಪನಿಗಳ ವಿರುದ್ಧ ಬುಡಕಟ್ಟು ಜನರ ಭೂ ಹಕ್ಕುಗಳು, ಜನಾಂಗದವರ ಅಸ್ಮಿತೆ ಮತ್ತು ಸಂಸ್ಕೃತಿಯ ಬಗ್ಗೆ ಹೋರಾಡುತ್ತಿದ್ದಾರೆ.

ಪೂರ್ವ ಜಾರ್ಖಂಡ್‌ನಲ್ಲಿ ಆರ್ಸೆಲರ್ ಮಿತ್ತಲ್ ಅವರ ಉಕ್ಕಿನ ಸ್ಥಾವರ ಸ್ಥಾಪನೆ ನಡೆದಿತ್ತು. ಸುಮಾರು 12,000 ಎಕರೆ ಕಾಡು ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಯೋಜನೆ ಇದಾಗಿತ್ತು. ಇದರಿಂದಾಗಿ ಹಲವಾರು ಗ್ರಾಮಗಳನ್ನು ಸ್ಥಳಾಂತರಿಸಬೇಕಾದ ಪರಿಸ್ತಿತಿ ಬಂದೊದಗಿತ್ತು. ಮುಂಡಾ ಬುಡಕಟ್ಟು ಗುಂಪಿನ ಸದಸ್ಯರಾಗಿರುವ ಬಾರ್ಲಾ ಆಗ ಉಕ್ಕಿನ ಸ್ಥಾವರ ವಿರೋಧಿ ಹೋರಾಟದ ಮೂಲಕ ಚಿರಪರಿಚಿತರಾದ ಅವರು ಪತ್ರಿಕೋದ್ಯಮಕ್ಕಾಗಿ ಹಲವಾರು ಪ್ರತಿಷ್ಠಿತ ಪ್ರಶಸ್ತಿಗಳನ್ನು ಪಡೆದಿದ್ದಾರೆ.

2014 ರ ಲೋಕಸಭಾ ಚುನಾವಣೆಯಲ್ಲಿ ಅವರು ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಖುಂಟಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋಲುಂಡಿದ್ದರು. ಬಾರ್ಲಾ ಭಾರತೀಯ ಸಾಮಾಜಿಕ ಕ್ರಿಯಾ ವೇದಿಕೆಯ (INSAF) ರಾಷ್ಟ್ರೀಯ ಅಧ್ಯಕ್ಷರಾಗಿದ್ದಾರೆ. ಚಹಾ ಅಂಗಡಿಯೊಂದನ್ನು ನಡೆಸುವುದರ ಜೊತೆಗೆ ಪತ್ರಕರ್ತ ಹುದ್ದೆ ಮತ್ತು ಹೋರಾಟವನ್ನು ಅವರು ಮುನ್ನಡೆಸುತ್ತಿದ್ದಾರೆ.

“ನನ್ನ ಜೀವನವು ಹೋರಾಟಗಳಿಂದ ತುಂಬಿದೆ. ನನ್ನ ಹೆತ್ತವರ ಒಡೆತನದ ಜಮೀನನ್ನು ಜನರು ಕಸಿದುಕೊಳ್ಳುವುದನ್ನು ನಾನು ನೋಡಿದೆ. ನನ್ನ ಹೆತ್ತವರನ್ನು ನಂತರ ಬಂಧಿತ ಕಾರ್ಮಿಕರನ್ನಾಗಿ ಮಾಡಲಾಯಿತು. ಅವರು ನಮ್ಮಿಂದ ಭೂಮಿಯನ್ನು ತೆಗೆದುಕೊಂಡಾಗ, ನಮ್ಮ ಇಡೀ ಕುಟುಂಬವು ಚದುರಿಹೋಯಿತು. ನಮಗೆ ಆಹಾರವನ್ನು ಪಡೆಯಲು ಸಾಧ್ಯವಾಗಲಿಲ್ಲ. ಆದರೆ ನಾನು ನನ್ನ ಶಿಕ್ಷಣವನ್ನು ಬಿಡಲಿಲ್ಲ. ನಾನು ಕೂಲಿಯಾಗಿ ಕೆಲಸ ಮಾಡುವ ಮೂಲಕ ಹಣವನ್ನು ಸಂಗ್ರಹಿಸಬೇಕಾಗಿದ್ದಾಗಲೂ ಅದನ್ನು ಮುಂದುವರಿಸಿದೆ. ನಾನು ಬ್ರೆಡ್ ತುಂಡುಗಾಗಿ ಪರದಾಡಿದ ಸಮಯಗಳನ್ನು ನೋಡಿದ್ದೇನೆ” ಎನ್ನುತ್ತಾರೆ ಬಾರ್ಲಾ.

ಅವರು ಪೂರ್ಣಪ್ರಮಾಣದಲ್ಲಿ ಹೋರಾಟಕ್ಕೆ ಧುಮುಕಿದ್ದು 1995 ರಲ್ಲಿ. “ಟೊರ್ಪಾದ ಕೊಯೆಲ್ ಕರೋದಲ್ಲಿ ಅಣೆಕಟ್ಟು ನಿರ್ಮಿಸುವ ಯೋಜನೆಯನ್ನು ಸರ್ಕಾರ ಘೋಷಿಸಿತ್ತು. ಅಣೆಕಟ್ಟು 245 ಹಳ್ಳಿಗಳ ಅಸ್ತಿತ್ವಕ್ಕೆ ಧಕ್ಕೆ ತಂದಿತು. ಸುಮಾರು 2.5 ಲಕ್ಷ ಜನರು ಸ್ಥಳಾಂತರಗೊಳ್ಳುತ್ತಿದ್ದರು ಮತ್ತು 27,000 ಎಕರೆ ಕಾಡು ಭೂಮಿಯನ್ನು ಮುಳುಗಿಸಬಹುದಿತ್ತು. ಆಗ ಇದರ ಅರ್ಥವೇನೆಂದು ನನಗೆ ತಿಳಿಯಿತು. ನಮ್ಮ ಭೂಮಿಯನ್ನು ಕಳೆದುಕೊಳ್ಳುವ ದೊಡ್ಡ ಹುನ್ನಾರ ನಡೆಯುತ್ತಿತ್ತು. ನಿಮ್ಮ ಸಂಸ್ಕೃತಿ, ನಿಮ್ಮ ಪರಂಪರೆ, ನಿಮ್ಮ ಗುರುತನ್ನು ನೀವು ಕಳೆದುಕೊಳ್ಳುತ್ತೀರಿ. ಇದು ನಿಮ್ಮ ವೈಯಕ್ತಿಕ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂಬುದು ಅರಿವಿಗೆ ಬಂತು. ಅಂದಿನಿಂದ, ನಾನು ಸ್ಥಳಾಂತರದ ವಿರುದ್ಧ, ಬುಡಕಟ್ಟು ಹಕ್ಕುಗಳಿಗಾಗಿ, ಜಾರ್ಖಂಡ್ ಮತ್ತು ಹೊರಗಡೆ ಅನೇಕ ಚಳುವಳಿಗಳಲ್ಲಿ ಭಾಗವಾಗಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಶಾಸಕರು, ಅಧಿಕಾರದಲ್ಲಿರುವವರು ಬುಡಕಟ್ಟು ಜನರ ಹಕ್ಕುಗಳನ್ನು ನಿರ್ಲಕ್ಷಿಸುತ್ತಾರೆ, ಆದ್ದರಿಂದ ನಾನು ಕಾನೂನುಗಳನ್ನು ನಿರ್ಮಿಸುವ ಸ್ಥಳಕ್ಕೆ ಹೋಗಲು ನಿರ್ಧರಿಸಿದ್ದೇನೆ ಎಂದು ಅವರು ತಮ್ಮ ಚುನಾವಣಾ ಉದ್ದೇಶವನ್ನು ಬಿಡಿಸಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...