Homeಮುಖಪುಟಜಾರ್ಖಂಡ್‌ ಚುನಾವಣೆಗೆ ಧುಮುಕಿದ ಆದಿವಾಸಿ ಪತ್ರಕರ್ತೆ, ಬುಡಕಟ್ಟು ಹೋರಾಟಗಾರ್ತಿ ಬಾರ್ಲಾ...

ಜಾರ್ಖಂಡ್‌ ಚುನಾವಣೆಗೆ ಧುಮುಕಿದ ಆದಿವಾಸಿ ಪತ್ರಕರ್ತೆ, ಬುಡಕಟ್ಟು ಹೋರಾಟಗಾರ್ತಿ ಬಾರ್ಲಾ…

ಶಾಸಕರು, ಅಧಿಕಾರದಲ್ಲಿರುವವರು ಬುಡಕಟ್ಟು ಜನರ ಹಕ್ಕುಗಳನ್ನು ನಿರ್ಲಕ್ಷಿಸುತ್ತಾರೆ, ಆದ್ದರಿಂದ ನಾನು ಕಾನೂನುಗಳನ್ನು ನಿರ್ಮಿಸುವ ಸ್ಥಳಕ್ಕೆ ಹೋಗಲು ನಿರ್ಧರಿಸಿದ್ದೇನೆ ಎನ್ನುತ್ತಾರೆ ಬಾರ್ಲಾ.

- Advertisement -
- Advertisement -

ಮಾಜಿ ಮುಖ್ಯಮಂತ್ರಿ ಬಾಬುಲಾಲ್ ಮರಂಡಿ ನೇತೃತ್ವದ ಜಾರ್ಖಂಡ್ ವಿಕಾಸ್ ಮೋರ್ಚಾ-ಪ್ರಜಾತಂತ್ರಿಕ್ (ಜೆವಿಎಂ-ಪಿ) ಪಕ್ಷದಿಂದ ಖುಂಟಿ ವಿಧಾನಸಭಾ ಕ್ಷೆತ್ರದ ಅಭ್ಯರ್ಥಿಯಾಗಿ ಬುಡಕಟ್ಟು ಪತ್ರಕರ್ತೆ ಮತ್ತು ಖ್ಯಾತ ಸಾಮಾಜಿಕ ಕಾರ್ಯಕರ್ತೆ ದಯಾಮಣಿ ಬಾರ್ಲಾ ಸ್ಪರ್ಧಿಸಲಿದ್ದಾರೆ.

ದಯಾಮಣಿ ಬಾರ್ಲಾ ದೇಶದ ಪ್ರಸಿದ್ಧ ಬುಡಕಟ್ಟು ಕಾರ್ಯಕರ್ತರಲ್ಲಿ ಒಬ್ಬರಾಗಿದ್ದಾರೆ. ಇವರು ಕಳೆದ 25 ವರ್ಷಗಳಿಂದ, ಪ್ರಭುತ್ವ ಮತ್ತು ಹಲವಾರು ಬಹುರಾಷ್ಟ್ರೀಯ ಕಂಪನಿಗಳ ವಿರುದ್ಧ ಬುಡಕಟ್ಟು ಜನರ ಭೂ ಹಕ್ಕುಗಳು, ಜನಾಂಗದವರ ಅಸ್ಮಿತೆ ಮತ್ತು ಸಂಸ್ಕೃತಿಯ ಬಗ್ಗೆ ಹೋರಾಡುತ್ತಿದ್ದಾರೆ.

ಪೂರ್ವ ಜಾರ್ಖಂಡ್‌ನಲ್ಲಿ ಆರ್ಸೆಲರ್ ಮಿತ್ತಲ್ ಅವರ ಉಕ್ಕಿನ ಸ್ಥಾವರ ಸ್ಥಾಪನೆ ನಡೆದಿತ್ತು. ಸುಮಾರು 12,000 ಎಕರೆ ಕಾಡು ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಯೋಜನೆ ಇದಾಗಿತ್ತು. ಇದರಿಂದಾಗಿ ಹಲವಾರು ಗ್ರಾಮಗಳನ್ನು ಸ್ಥಳಾಂತರಿಸಬೇಕಾದ ಪರಿಸ್ತಿತಿ ಬಂದೊದಗಿತ್ತು. ಮುಂಡಾ ಬುಡಕಟ್ಟು ಗುಂಪಿನ ಸದಸ್ಯರಾಗಿರುವ ಬಾರ್ಲಾ ಆಗ ಉಕ್ಕಿನ ಸ್ಥಾವರ ವಿರೋಧಿ ಹೋರಾಟದ ಮೂಲಕ ಚಿರಪರಿಚಿತರಾದ ಅವರು ಪತ್ರಿಕೋದ್ಯಮಕ್ಕಾಗಿ ಹಲವಾರು ಪ್ರತಿಷ್ಠಿತ ಪ್ರಶಸ್ತಿಗಳನ್ನು ಪಡೆದಿದ್ದಾರೆ.

2014 ರ ಲೋಕಸಭಾ ಚುನಾವಣೆಯಲ್ಲಿ ಅವರು ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಖುಂಟಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋಲುಂಡಿದ್ದರು. ಬಾರ್ಲಾ ಭಾರತೀಯ ಸಾಮಾಜಿಕ ಕ್ರಿಯಾ ವೇದಿಕೆಯ (INSAF) ರಾಷ್ಟ್ರೀಯ ಅಧ್ಯಕ್ಷರಾಗಿದ್ದಾರೆ. ಚಹಾ ಅಂಗಡಿಯೊಂದನ್ನು ನಡೆಸುವುದರ ಜೊತೆಗೆ ಪತ್ರಕರ್ತ ಹುದ್ದೆ ಮತ್ತು ಹೋರಾಟವನ್ನು ಅವರು ಮುನ್ನಡೆಸುತ್ತಿದ್ದಾರೆ.

“ನನ್ನ ಜೀವನವು ಹೋರಾಟಗಳಿಂದ ತುಂಬಿದೆ. ನನ್ನ ಹೆತ್ತವರ ಒಡೆತನದ ಜಮೀನನ್ನು ಜನರು ಕಸಿದುಕೊಳ್ಳುವುದನ್ನು ನಾನು ನೋಡಿದೆ. ನನ್ನ ಹೆತ್ತವರನ್ನು ನಂತರ ಬಂಧಿತ ಕಾರ್ಮಿಕರನ್ನಾಗಿ ಮಾಡಲಾಯಿತು. ಅವರು ನಮ್ಮಿಂದ ಭೂಮಿಯನ್ನು ತೆಗೆದುಕೊಂಡಾಗ, ನಮ್ಮ ಇಡೀ ಕುಟುಂಬವು ಚದುರಿಹೋಯಿತು. ನಮಗೆ ಆಹಾರವನ್ನು ಪಡೆಯಲು ಸಾಧ್ಯವಾಗಲಿಲ್ಲ. ಆದರೆ ನಾನು ನನ್ನ ಶಿಕ್ಷಣವನ್ನು ಬಿಡಲಿಲ್ಲ. ನಾನು ಕೂಲಿಯಾಗಿ ಕೆಲಸ ಮಾಡುವ ಮೂಲಕ ಹಣವನ್ನು ಸಂಗ್ರಹಿಸಬೇಕಾಗಿದ್ದಾಗಲೂ ಅದನ್ನು ಮುಂದುವರಿಸಿದೆ. ನಾನು ಬ್ರೆಡ್ ತುಂಡುಗಾಗಿ ಪರದಾಡಿದ ಸಮಯಗಳನ್ನು ನೋಡಿದ್ದೇನೆ” ಎನ್ನುತ್ತಾರೆ ಬಾರ್ಲಾ.

ಅವರು ಪೂರ್ಣಪ್ರಮಾಣದಲ್ಲಿ ಹೋರಾಟಕ್ಕೆ ಧುಮುಕಿದ್ದು 1995 ರಲ್ಲಿ. “ಟೊರ್ಪಾದ ಕೊಯೆಲ್ ಕರೋದಲ್ಲಿ ಅಣೆಕಟ್ಟು ನಿರ್ಮಿಸುವ ಯೋಜನೆಯನ್ನು ಸರ್ಕಾರ ಘೋಷಿಸಿತ್ತು. ಅಣೆಕಟ್ಟು 245 ಹಳ್ಳಿಗಳ ಅಸ್ತಿತ್ವಕ್ಕೆ ಧಕ್ಕೆ ತಂದಿತು. ಸುಮಾರು 2.5 ಲಕ್ಷ ಜನರು ಸ್ಥಳಾಂತರಗೊಳ್ಳುತ್ತಿದ್ದರು ಮತ್ತು 27,000 ಎಕರೆ ಕಾಡು ಭೂಮಿಯನ್ನು ಮುಳುಗಿಸಬಹುದಿತ್ತು. ಆಗ ಇದರ ಅರ್ಥವೇನೆಂದು ನನಗೆ ತಿಳಿಯಿತು. ನಮ್ಮ ಭೂಮಿಯನ್ನು ಕಳೆದುಕೊಳ್ಳುವ ದೊಡ್ಡ ಹುನ್ನಾರ ನಡೆಯುತ್ತಿತ್ತು. ನಿಮ್ಮ ಸಂಸ್ಕೃತಿ, ನಿಮ್ಮ ಪರಂಪರೆ, ನಿಮ್ಮ ಗುರುತನ್ನು ನೀವು ಕಳೆದುಕೊಳ್ಳುತ್ತೀರಿ. ಇದು ನಿಮ್ಮ ವೈಯಕ್ತಿಕ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂಬುದು ಅರಿವಿಗೆ ಬಂತು. ಅಂದಿನಿಂದ, ನಾನು ಸ್ಥಳಾಂತರದ ವಿರುದ್ಧ, ಬುಡಕಟ್ಟು ಹಕ್ಕುಗಳಿಗಾಗಿ, ಜಾರ್ಖಂಡ್ ಮತ್ತು ಹೊರಗಡೆ ಅನೇಕ ಚಳುವಳಿಗಳಲ್ಲಿ ಭಾಗವಾಗಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಶಾಸಕರು, ಅಧಿಕಾರದಲ್ಲಿರುವವರು ಬುಡಕಟ್ಟು ಜನರ ಹಕ್ಕುಗಳನ್ನು ನಿರ್ಲಕ್ಷಿಸುತ್ತಾರೆ, ಆದ್ದರಿಂದ ನಾನು ಕಾನೂನುಗಳನ್ನು ನಿರ್ಮಿಸುವ ಸ್ಥಳಕ್ಕೆ ಹೋಗಲು ನಿರ್ಧರಿಸಿದ್ದೇನೆ ಎಂದು ಅವರು ತಮ್ಮ ಚುನಾವಣಾ ಉದ್ದೇಶವನ್ನು ಬಿಡಿಸಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...