Homeಮುಖಪುಟಜಾರ್ಖಂಡ್‌ ಚುನಾವಣೆಗೆ ಧುಮುಕಿದ ಆದಿವಾಸಿ ಪತ್ರಕರ್ತೆ, ಬುಡಕಟ್ಟು ಹೋರಾಟಗಾರ್ತಿ ಬಾರ್ಲಾ...

ಜಾರ್ಖಂಡ್‌ ಚುನಾವಣೆಗೆ ಧುಮುಕಿದ ಆದಿವಾಸಿ ಪತ್ರಕರ್ತೆ, ಬುಡಕಟ್ಟು ಹೋರಾಟಗಾರ್ತಿ ಬಾರ್ಲಾ…

ಶಾಸಕರು, ಅಧಿಕಾರದಲ್ಲಿರುವವರು ಬುಡಕಟ್ಟು ಜನರ ಹಕ್ಕುಗಳನ್ನು ನಿರ್ಲಕ್ಷಿಸುತ್ತಾರೆ, ಆದ್ದರಿಂದ ನಾನು ಕಾನೂನುಗಳನ್ನು ನಿರ್ಮಿಸುವ ಸ್ಥಳಕ್ಕೆ ಹೋಗಲು ನಿರ್ಧರಿಸಿದ್ದೇನೆ ಎನ್ನುತ್ತಾರೆ ಬಾರ್ಲಾ.

- Advertisement -
- Advertisement -

ಮಾಜಿ ಮುಖ್ಯಮಂತ್ರಿ ಬಾಬುಲಾಲ್ ಮರಂಡಿ ನೇತೃತ್ವದ ಜಾರ್ಖಂಡ್ ವಿಕಾಸ್ ಮೋರ್ಚಾ-ಪ್ರಜಾತಂತ್ರಿಕ್ (ಜೆವಿಎಂ-ಪಿ) ಪಕ್ಷದಿಂದ ಖುಂಟಿ ವಿಧಾನಸಭಾ ಕ್ಷೆತ್ರದ ಅಭ್ಯರ್ಥಿಯಾಗಿ ಬುಡಕಟ್ಟು ಪತ್ರಕರ್ತೆ ಮತ್ತು ಖ್ಯಾತ ಸಾಮಾಜಿಕ ಕಾರ್ಯಕರ್ತೆ ದಯಾಮಣಿ ಬಾರ್ಲಾ ಸ್ಪರ್ಧಿಸಲಿದ್ದಾರೆ.

ದಯಾಮಣಿ ಬಾರ್ಲಾ ದೇಶದ ಪ್ರಸಿದ್ಧ ಬುಡಕಟ್ಟು ಕಾರ್ಯಕರ್ತರಲ್ಲಿ ಒಬ್ಬರಾಗಿದ್ದಾರೆ. ಇವರು ಕಳೆದ 25 ವರ್ಷಗಳಿಂದ, ಪ್ರಭುತ್ವ ಮತ್ತು ಹಲವಾರು ಬಹುರಾಷ್ಟ್ರೀಯ ಕಂಪನಿಗಳ ವಿರುದ್ಧ ಬುಡಕಟ್ಟು ಜನರ ಭೂ ಹಕ್ಕುಗಳು, ಜನಾಂಗದವರ ಅಸ್ಮಿತೆ ಮತ್ತು ಸಂಸ್ಕೃತಿಯ ಬಗ್ಗೆ ಹೋರಾಡುತ್ತಿದ್ದಾರೆ.

ಪೂರ್ವ ಜಾರ್ಖಂಡ್‌ನಲ್ಲಿ ಆರ್ಸೆಲರ್ ಮಿತ್ತಲ್ ಅವರ ಉಕ್ಕಿನ ಸ್ಥಾವರ ಸ್ಥಾಪನೆ ನಡೆದಿತ್ತು. ಸುಮಾರು 12,000 ಎಕರೆ ಕಾಡು ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಯೋಜನೆ ಇದಾಗಿತ್ತು. ಇದರಿಂದಾಗಿ ಹಲವಾರು ಗ್ರಾಮಗಳನ್ನು ಸ್ಥಳಾಂತರಿಸಬೇಕಾದ ಪರಿಸ್ತಿತಿ ಬಂದೊದಗಿತ್ತು. ಮುಂಡಾ ಬುಡಕಟ್ಟು ಗುಂಪಿನ ಸದಸ್ಯರಾಗಿರುವ ಬಾರ್ಲಾ ಆಗ ಉಕ್ಕಿನ ಸ್ಥಾವರ ವಿರೋಧಿ ಹೋರಾಟದ ಮೂಲಕ ಚಿರಪರಿಚಿತರಾದ ಅವರು ಪತ್ರಿಕೋದ್ಯಮಕ್ಕಾಗಿ ಹಲವಾರು ಪ್ರತಿಷ್ಠಿತ ಪ್ರಶಸ್ತಿಗಳನ್ನು ಪಡೆದಿದ್ದಾರೆ.

2014 ರ ಲೋಕಸಭಾ ಚುನಾವಣೆಯಲ್ಲಿ ಅವರು ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಖುಂಟಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋಲುಂಡಿದ್ದರು. ಬಾರ್ಲಾ ಭಾರತೀಯ ಸಾಮಾಜಿಕ ಕ್ರಿಯಾ ವೇದಿಕೆಯ (INSAF) ರಾಷ್ಟ್ರೀಯ ಅಧ್ಯಕ್ಷರಾಗಿದ್ದಾರೆ. ಚಹಾ ಅಂಗಡಿಯೊಂದನ್ನು ನಡೆಸುವುದರ ಜೊತೆಗೆ ಪತ್ರಕರ್ತ ಹುದ್ದೆ ಮತ್ತು ಹೋರಾಟವನ್ನು ಅವರು ಮುನ್ನಡೆಸುತ್ತಿದ್ದಾರೆ.

“ನನ್ನ ಜೀವನವು ಹೋರಾಟಗಳಿಂದ ತುಂಬಿದೆ. ನನ್ನ ಹೆತ್ತವರ ಒಡೆತನದ ಜಮೀನನ್ನು ಜನರು ಕಸಿದುಕೊಳ್ಳುವುದನ್ನು ನಾನು ನೋಡಿದೆ. ನನ್ನ ಹೆತ್ತವರನ್ನು ನಂತರ ಬಂಧಿತ ಕಾರ್ಮಿಕರನ್ನಾಗಿ ಮಾಡಲಾಯಿತು. ಅವರು ನಮ್ಮಿಂದ ಭೂಮಿಯನ್ನು ತೆಗೆದುಕೊಂಡಾಗ, ನಮ್ಮ ಇಡೀ ಕುಟುಂಬವು ಚದುರಿಹೋಯಿತು. ನಮಗೆ ಆಹಾರವನ್ನು ಪಡೆಯಲು ಸಾಧ್ಯವಾಗಲಿಲ್ಲ. ಆದರೆ ನಾನು ನನ್ನ ಶಿಕ್ಷಣವನ್ನು ಬಿಡಲಿಲ್ಲ. ನಾನು ಕೂಲಿಯಾಗಿ ಕೆಲಸ ಮಾಡುವ ಮೂಲಕ ಹಣವನ್ನು ಸಂಗ್ರಹಿಸಬೇಕಾಗಿದ್ದಾಗಲೂ ಅದನ್ನು ಮುಂದುವರಿಸಿದೆ. ನಾನು ಬ್ರೆಡ್ ತುಂಡುಗಾಗಿ ಪರದಾಡಿದ ಸಮಯಗಳನ್ನು ನೋಡಿದ್ದೇನೆ” ಎನ್ನುತ್ತಾರೆ ಬಾರ್ಲಾ.

ಅವರು ಪೂರ್ಣಪ್ರಮಾಣದಲ್ಲಿ ಹೋರಾಟಕ್ಕೆ ಧುಮುಕಿದ್ದು 1995 ರಲ್ಲಿ. “ಟೊರ್ಪಾದ ಕೊಯೆಲ್ ಕರೋದಲ್ಲಿ ಅಣೆಕಟ್ಟು ನಿರ್ಮಿಸುವ ಯೋಜನೆಯನ್ನು ಸರ್ಕಾರ ಘೋಷಿಸಿತ್ತು. ಅಣೆಕಟ್ಟು 245 ಹಳ್ಳಿಗಳ ಅಸ್ತಿತ್ವಕ್ಕೆ ಧಕ್ಕೆ ತಂದಿತು. ಸುಮಾರು 2.5 ಲಕ್ಷ ಜನರು ಸ್ಥಳಾಂತರಗೊಳ್ಳುತ್ತಿದ್ದರು ಮತ್ತು 27,000 ಎಕರೆ ಕಾಡು ಭೂಮಿಯನ್ನು ಮುಳುಗಿಸಬಹುದಿತ್ತು. ಆಗ ಇದರ ಅರ್ಥವೇನೆಂದು ನನಗೆ ತಿಳಿಯಿತು. ನಮ್ಮ ಭೂಮಿಯನ್ನು ಕಳೆದುಕೊಳ್ಳುವ ದೊಡ್ಡ ಹುನ್ನಾರ ನಡೆಯುತ್ತಿತ್ತು. ನಿಮ್ಮ ಸಂಸ್ಕೃತಿ, ನಿಮ್ಮ ಪರಂಪರೆ, ನಿಮ್ಮ ಗುರುತನ್ನು ನೀವು ಕಳೆದುಕೊಳ್ಳುತ್ತೀರಿ. ಇದು ನಿಮ್ಮ ವೈಯಕ್ತಿಕ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂಬುದು ಅರಿವಿಗೆ ಬಂತು. ಅಂದಿನಿಂದ, ನಾನು ಸ್ಥಳಾಂತರದ ವಿರುದ್ಧ, ಬುಡಕಟ್ಟು ಹಕ್ಕುಗಳಿಗಾಗಿ, ಜಾರ್ಖಂಡ್ ಮತ್ತು ಹೊರಗಡೆ ಅನೇಕ ಚಳುವಳಿಗಳಲ್ಲಿ ಭಾಗವಾಗಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಶಾಸಕರು, ಅಧಿಕಾರದಲ್ಲಿರುವವರು ಬುಡಕಟ್ಟು ಜನರ ಹಕ್ಕುಗಳನ್ನು ನಿರ್ಲಕ್ಷಿಸುತ್ತಾರೆ, ಆದ್ದರಿಂದ ನಾನು ಕಾನೂನುಗಳನ್ನು ನಿರ್ಮಿಸುವ ಸ್ಥಳಕ್ಕೆ ಹೋಗಲು ನಿರ್ಧರಿಸಿದ್ದೇನೆ ಎಂದು ಅವರು ತಮ್ಮ ಚುನಾವಣಾ ಉದ್ದೇಶವನ್ನು ಬಿಡಿಸಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...