Homeಮುಖಪುಟಜಾರ್ಖಂಡ್‌ ಚುನಾವಣೆಗೆ ಧುಮುಕಿದ ಆದಿವಾಸಿ ಪತ್ರಕರ್ತೆ, ಬುಡಕಟ್ಟು ಹೋರಾಟಗಾರ್ತಿ ಬಾರ್ಲಾ...

ಜಾರ್ಖಂಡ್‌ ಚುನಾವಣೆಗೆ ಧುಮುಕಿದ ಆದಿವಾಸಿ ಪತ್ರಕರ್ತೆ, ಬುಡಕಟ್ಟು ಹೋರಾಟಗಾರ್ತಿ ಬಾರ್ಲಾ…

ಶಾಸಕರು, ಅಧಿಕಾರದಲ್ಲಿರುವವರು ಬುಡಕಟ್ಟು ಜನರ ಹಕ್ಕುಗಳನ್ನು ನಿರ್ಲಕ್ಷಿಸುತ್ತಾರೆ, ಆದ್ದರಿಂದ ನಾನು ಕಾನೂನುಗಳನ್ನು ನಿರ್ಮಿಸುವ ಸ್ಥಳಕ್ಕೆ ಹೋಗಲು ನಿರ್ಧರಿಸಿದ್ದೇನೆ ಎನ್ನುತ್ತಾರೆ ಬಾರ್ಲಾ.

- Advertisement -
- Advertisement -

ಮಾಜಿ ಮುಖ್ಯಮಂತ್ರಿ ಬಾಬುಲಾಲ್ ಮರಂಡಿ ನೇತೃತ್ವದ ಜಾರ್ಖಂಡ್ ವಿಕಾಸ್ ಮೋರ್ಚಾ-ಪ್ರಜಾತಂತ್ರಿಕ್ (ಜೆವಿಎಂ-ಪಿ) ಪಕ್ಷದಿಂದ ಖುಂಟಿ ವಿಧಾನಸಭಾ ಕ್ಷೆತ್ರದ ಅಭ್ಯರ್ಥಿಯಾಗಿ ಬುಡಕಟ್ಟು ಪತ್ರಕರ್ತೆ ಮತ್ತು ಖ್ಯಾತ ಸಾಮಾಜಿಕ ಕಾರ್ಯಕರ್ತೆ ದಯಾಮಣಿ ಬಾರ್ಲಾ ಸ್ಪರ್ಧಿಸಲಿದ್ದಾರೆ.

ದಯಾಮಣಿ ಬಾರ್ಲಾ ದೇಶದ ಪ್ರಸಿದ್ಧ ಬುಡಕಟ್ಟು ಕಾರ್ಯಕರ್ತರಲ್ಲಿ ಒಬ್ಬರಾಗಿದ್ದಾರೆ. ಇವರು ಕಳೆದ 25 ವರ್ಷಗಳಿಂದ, ಪ್ರಭುತ್ವ ಮತ್ತು ಹಲವಾರು ಬಹುರಾಷ್ಟ್ರೀಯ ಕಂಪನಿಗಳ ವಿರುದ್ಧ ಬುಡಕಟ್ಟು ಜನರ ಭೂ ಹಕ್ಕುಗಳು, ಜನಾಂಗದವರ ಅಸ್ಮಿತೆ ಮತ್ತು ಸಂಸ್ಕೃತಿಯ ಬಗ್ಗೆ ಹೋರಾಡುತ್ತಿದ್ದಾರೆ.

ಪೂರ್ವ ಜಾರ್ಖಂಡ್‌ನಲ್ಲಿ ಆರ್ಸೆಲರ್ ಮಿತ್ತಲ್ ಅವರ ಉಕ್ಕಿನ ಸ್ಥಾವರ ಸ್ಥಾಪನೆ ನಡೆದಿತ್ತು. ಸುಮಾರು 12,000 ಎಕರೆ ಕಾಡು ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಯೋಜನೆ ಇದಾಗಿತ್ತು. ಇದರಿಂದಾಗಿ ಹಲವಾರು ಗ್ರಾಮಗಳನ್ನು ಸ್ಥಳಾಂತರಿಸಬೇಕಾದ ಪರಿಸ್ತಿತಿ ಬಂದೊದಗಿತ್ತು. ಮುಂಡಾ ಬುಡಕಟ್ಟು ಗುಂಪಿನ ಸದಸ್ಯರಾಗಿರುವ ಬಾರ್ಲಾ ಆಗ ಉಕ್ಕಿನ ಸ್ಥಾವರ ವಿರೋಧಿ ಹೋರಾಟದ ಮೂಲಕ ಚಿರಪರಿಚಿತರಾದ ಅವರು ಪತ್ರಿಕೋದ್ಯಮಕ್ಕಾಗಿ ಹಲವಾರು ಪ್ರತಿಷ್ಠಿತ ಪ್ರಶಸ್ತಿಗಳನ್ನು ಪಡೆದಿದ್ದಾರೆ.

2014 ರ ಲೋಕಸಭಾ ಚುನಾವಣೆಯಲ್ಲಿ ಅವರು ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಖುಂಟಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋಲುಂಡಿದ್ದರು. ಬಾರ್ಲಾ ಭಾರತೀಯ ಸಾಮಾಜಿಕ ಕ್ರಿಯಾ ವೇದಿಕೆಯ (INSAF) ರಾಷ್ಟ್ರೀಯ ಅಧ್ಯಕ್ಷರಾಗಿದ್ದಾರೆ. ಚಹಾ ಅಂಗಡಿಯೊಂದನ್ನು ನಡೆಸುವುದರ ಜೊತೆಗೆ ಪತ್ರಕರ್ತ ಹುದ್ದೆ ಮತ್ತು ಹೋರಾಟವನ್ನು ಅವರು ಮುನ್ನಡೆಸುತ್ತಿದ್ದಾರೆ.

“ನನ್ನ ಜೀವನವು ಹೋರಾಟಗಳಿಂದ ತುಂಬಿದೆ. ನನ್ನ ಹೆತ್ತವರ ಒಡೆತನದ ಜಮೀನನ್ನು ಜನರು ಕಸಿದುಕೊಳ್ಳುವುದನ್ನು ನಾನು ನೋಡಿದೆ. ನನ್ನ ಹೆತ್ತವರನ್ನು ನಂತರ ಬಂಧಿತ ಕಾರ್ಮಿಕರನ್ನಾಗಿ ಮಾಡಲಾಯಿತು. ಅವರು ನಮ್ಮಿಂದ ಭೂಮಿಯನ್ನು ತೆಗೆದುಕೊಂಡಾಗ, ನಮ್ಮ ಇಡೀ ಕುಟುಂಬವು ಚದುರಿಹೋಯಿತು. ನಮಗೆ ಆಹಾರವನ್ನು ಪಡೆಯಲು ಸಾಧ್ಯವಾಗಲಿಲ್ಲ. ಆದರೆ ನಾನು ನನ್ನ ಶಿಕ್ಷಣವನ್ನು ಬಿಡಲಿಲ್ಲ. ನಾನು ಕೂಲಿಯಾಗಿ ಕೆಲಸ ಮಾಡುವ ಮೂಲಕ ಹಣವನ್ನು ಸಂಗ್ರಹಿಸಬೇಕಾಗಿದ್ದಾಗಲೂ ಅದನ್ನು ಮುಂದುವರಿಸಿದೆ. ನಾನು ಬ್ರೆಡ್ ತುಂಡುಗಾಗಿ ಪರದಾಡಿದ ಸಮಯಗಳನ್ನು ನೋಡಿದ್ದೇನೆ” ಎನ್ನುತ್ತಾರೆ ಬಾರ್ಲಾ.

ಅವರು ಪೂರ್ಣಪ್ರಮಾಣದಲ್ಲಿ ಹೋರಾಟಕ್ಕೆ ಧುಮುಕಿದ್ದು 1995 ರಲ್ಲಿ. “ಟೊರ್ಪಾದ ಕೊಯೆಲ್ ಕರೋದಲ್ಲಿ ಅಣೆಕಟ್ಟು ನಿರ್ಮಿಸುವ ಯೋಜನೆಯನ್ನು ಸರ್ಕಾರ ಘೋಷಿಸಿತ್ತು. ಅಣೆಕಟ್ಟು 245 ಹಳ್ಳಿಗಳ ಅಸ್ತಿತ್ವಕ್ಕೆ ಧಕ್ಕೆ ತಂದಿತು. ಸುಮಾರು 2.5 ಲಕ್ಷ ಜನರು ಸ್ಥಳಾಂತರಗೊಳ್ಳುತ್ತಿದ್ದರು ಮತ್ತು 27,000 ಎಕರೆ ಕಾಡು ಭೂಮಿಯನ್ನು ಮುಳುಗಿಸಬಹುದಿತ್ತು. ಆಗ ಇದರ ಅರ್ಥವೇನೆಂದು ನನಗೆ ತಿಳಿಯಿತು. ನಮ್ಮ ಭೂಮಿಯನ್ನು ಕಳೆದುಕೊಳ್ಳುವ ದೊಡ್ಡ ಹುನ್ನಾರ ನಡೆಯುತ್ತಿತ್ತು. ನಿಮ್ಮ ಸಂಸ್ಕೃತಿ, ನಿಮ್ಮ ಪರಂಪರೆ, ನಿಮ್ಮ ಗುರುತನ್ನು ನೀವು ಕಳೆದುಕೊಳ್ಳುತ್ತೀರಿ. ಇದು ನಿಮ್ಮ ವೈಯಕ್ತಿಕ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂಬುದು ಅರಿವಿಗೆ ಬಂತು. ಅಂದಿನಿಂದ, ನಾನು ಸ್ಥಳಾಂತರದ ವಿರುದ್ಧ, ಬುಡಕಟ್ಟು ಹಕ್ಕುಗಳಿಗಾಗಿ, ಜಾರ್ಖಂಡ್ ಮತ್ತು ಹೊರಗಡೆ ಅನೇಕ ಚಳುವಳಿಗಳಲ್ಲಿ ಭಾಗವಾಗಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಶಾಸಕರು, ಅಧಿಕಾರದಲ್ಲಿರುವವರು ಬುಡಕಟ್ಟು ಜನರ ಹಕ್ಕುಗಳನ್ನು ನಿರ್ಲಕ್ಷಿಸುತ್ತಾರೆ, ಆದ್ದರಿಂದ ನಾನು ಕಾನೂನುಗಳನ್ನು ನಿರ್ಮಿಸುವ ಸ್ಥಳಕ್ಕೆ ಹೋಗಲು ನಿರ್ಧರಿಸಿದ್ದೇನೆ ಎಂದು ಅವರು ತಮ್ಮ ಚುನಾವಣಾ ಉದ್ದೇಶವನ್ನು ಬಿಡಿಸಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...