Homeಮುಖಪುಟಜಾರ್ಖಂಡ್‌ ಚುನಾವಣೆಗೆ ಧುಮುಕಿದ ಆದಿವಾಸಿ ಪತ್ರಕರ್ತೆ, ಬುಡಕಟ್ಟು ಹೋರಾಟಗಾರ್ತಿ ಬಾರ್ಲಾ...

ಜಾರ್ಖಂಡ್‌ ಚುನಾವಣೆಗೆ ಧುಮುಕಿದ ಆದಿವಾಸಿ ಪತ್ರಕರ್ತೆ, ಬುಡಕಟ್ಟು ಹೋರಾಟಗಾರ್ತಿ ಬಾರ್ಲಾ…

ಶಾಸಕರು, ಅಧಿಕಾರದಲ್ಲಿರುವವರು ಬುಡಕಟ್ಟು ಜನರ ಹಕ್ಕುಗಳನ್ನು ನಿರ್ಲಕ್ಷಿಸುತ್ತಾರೆ, ಆದ್ದರಿಂದ ನಾನು ಕಾನೂನುಗಳನ್ನು ನಿರ್ಮಿಸುವ ಸ್ಥಳಕ್ಕೆ ಹೋಗಲು ನಿರ್ಧರಿಸಿದ್ದೇನೆ ಎನ್ನುತ್ತಾರೆ ಬಾರ್ಲಾ.

- Advertisement -
- Advertisement -

ಮಾಜಿ ಮುಖ್ಯಮಂತ್ರಿ ಬಾಬುಲಾಲ್ ಮರಂಡಿ ನೇತೃತ್ವದ ಜಾರ್ಖಂಡ್ ವಿಕಾಸ್ ಮೋರ್ಚಾ-ಪ್ರಜಾತಂತ್ರಿಕ್ (ಜೆವಿಎಂ-ಪಿ) ಪಕ್ಷದಿಂದ ಖುಂಟಿ ವಿಧಾನಸಭಾ ಕ್ಷೆತ್ರದ ಅಭ್ಯರ್ಥಿಯಾಗಿ ಬುಡಕಟ್ಟು ಪತ್ರಕರ್ತೆ ಮತ್ತು ಖ್ಯಾತ ಸಾಮಾಜಿಕ ಕಾರ್ಯಕರ್ತೆ ದಯಾಮಣಿ ಬಾರ್ಲಾ ಸ್ಪರ್ಧಿಸಲಿದ್ದಾರೆ.

ದಯಾಮಣಿ ಬಾರ್ಲಾ ದೇಶದ ಪ್ರಸಿದ್ಧ ಬುಡಕಟ್ಟು ಕಾರ್ಯಕರ್ತರಲ್ಲಿ ಒಬ್ಬರಾಗಿದ್ದಾರೆ. ಇವರು ಕಳೆದ 25 ವರ್ಷಗಳಿಂದ, ಪ್ರಭುತ್ವ ಮತ್ತು ಹಲವಾರು ಬಹುರಾಷ್ಟ್ರೀಯ ಕಂಪನಿಗಳ ವಿರುದ್ಧ ಬುಡಕಟ್ಟು ಜನರ ಭೂ ಹಕ್ಕುಗಳು, ಜನಾಂಗದವರ ಅಸ್ಮಿತೆ ಮತ್ತು ಸಂಸ್ಕೃತಿಯ ಬಗ್ಗೆ ಹೋರಾಡುತ್ತಿದ್ದಾರೆ.

ಪೂರ್ವ ಜಾರ್ಖಂಡ್‌ನಲ್ಲಿ ಆರ್ಸೆಲರ್ ಮಿತ್ತಲ್ ಅವರ ಉಕ್ಕಿನ ಸ್ಥಾವರ ಸ್ಥಾಪನೆ ನಡೆದಿತ್ತು. ಸುಮಾರು 12,000 ಎಕರೆ ಕಾಡು ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಯೋಜನೆ ಇದಾಗಿತ್ತು. ಇದರಿಂದಾಗಿ ಹಲವಾರು ಗ್ರಾಮಗಳನ್ನು ಸ್ಥಳಾಂತರಿಸಬೇಕಾದ ಪರಿಸ್ತಿತಿ ಬಂದೊದಗಿತ್ತು. ಮುಂಡಾ ಬುಡಕಟ್ಟು ಗುಂಪಿನ ಸದಸ್ಯರಾಗಿರುವ ಬಾರ್ಲಾ ಆಗ ಉಕ್ಕಿನ ಸ್ಥಾವರ ವಿರೋಧಿ ಹೋರಾಟದ ಮೂಲಕ ಚಿರಪರಿಚಿತರಾದ ಅವರು ಪತ್ರಿಕೋದ್ಯಮಕ್ಕಾಗಿ ಹಲವಾರು ಪ್ರತಿಷ್ಠಿತ ಪ್ರಶಸ್ತಿಗಳನ್ನು ಪಡೆದಿದ್ದಾರೆ.

2014 ರ ಲೋಕಸಭಾ ಚುನಾವಣೆಯಲ್ಲಿ ಅವರು ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಖುಂಟಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋಲುಂಡಿದ್ದರು. ಬಾರ್ಲಾ ಭಾರತೀಯ ಸಾಮಾಜಿಕ ಕ್ರಿಯಾ ವೇದಿಕೆಯ (INSAF) ರಾಷ್ಟ್ರೀಯ ಅಧ್ಯಕ್ಷರಾಗಿದ್ದಾರೆ. ಚಹಾ ಅಂಗಡಿಯೊಂದನ್ನು ನಡೆಸುವುದರ ಜೊತೆಗೆ ಪತ್ರಕರ್ತ ಹುದ್ದೆ ಮತ್ತು ಹೋರಾಟವನ್ನು ಅವರು ಮುನ್ನಡೆಸುತ್ತಿದ್ದಾರೆ.

“ನನ್ನ ಜೀವನವು ಹೋರಾಟಗಳಿಂದ ತುಂಬಿದೆ. ನನ್ನ ಹೆತ್ತವರ ಒಡೆತನದ ಜಮೀನನ್ನು ಜನರು ಕಸಿದುಕೊಳ್ಳುವುದನ್ನು ನಾನು ನೋಡಿದೆ. ನನ್ನ ಹೆತ್ತವರನ್ನು ನಂತರ ಬಂಧಿತ ಕಾರ್ಮಿಕರನ್ನಾಗಿ ಮಾಡಲಾಯಿತು. ಅವರು ನಮ್ಮಿಂದ ಭೂಮಿಯನ್ನು ತೆಗೆದುಕೊಂಡಾಗ, ನಮ್ಮ ಇಡೀ ಕುಟುಂಬವು ಚದುರಿಹೋಯಿತು. ನಮಗೆ ಆಹಾರವನ್ನು ಪಡೆಯಲು ಸಾಧ್ಯವಾಗಲಿಲ್ಲ. ಆದರೆ ನಾನು ನನ್ನ ಶಿಕ್ಷಣವನ್ನು ಬಿಡಲಿಲ್ಲ. ನಾನು ಕೂಲಿಯಾಗಿ ಕೆಲಸ ಮಾಡುವ ಮೂಲಕ ಹಣವನ್ನು ಸಂಗ್ರಹಿಸಬೇಕಾಗಿದ್ದಾಗಲೂ ಅದನ್ನು ಮುಂದುವರಿಸಿದೆ. ನಾನು ಬ್ರೆಡ್ ತುಂಡುಗಾಗಿ ಪರದಾಡಿದ ಸಮಯಗಳನ್ನು ನೋಡಿದ್ದೇನೆ” ಎನ್ನುತ್ತಾರೆ ಬಾರ್ಲಾ.

ಅವರು ಪೂರ್ಣಪ್ರಮಾಣದಲ್ಲಿ ಹೋರಾಟಕ್ಕೆ ಧುಮುಕಿದ್ದು 1995 ರಲ್ಲಿ. “ಟೊರ್ಪಾದ ಕೊಯೆಲ್ ಕರೋದಲ್ಲಿ ಅಣೆಕಟ್ಟು ನಿರ್ಮಿಸುವ ಯೋಜನೆಯನ್ನು ಸರ್ಕಾರ ಘೋಷಿಸಿತ್ತು. ಅಣೆಕಟ್ಟು 245 ಹಳ್ಳಿಗಳ ಅಸ್ತಿತ್ವಕ್ಕೆ ಧಕ್ಕೆ ತಂದಿತು. ಸುಮಾರು 2.5 ಲಕ್ಷ ಜನರು ಸ್ಥಳಾಂತರಗೊಳ್ಳುತ್ತಿದ್ದರು ಮತ್ತು 27,000 ಎಕರೆ ಕಾಡು ಭೂಮಿಯನ್ನು ಮುಳುಗಿಸಬಹುದಿತ್ತು. ಆಗ ಇದರ ಅರ್ಥವೇನೆಂದು ನನಗೆ ತಿಳಿಯಿತು. ನಮ್ಮ ಭೂಮಿಯನ್ನು ಕಳೆದುಕೊಳ್ಳುವ ದೊಡ್ಡ ಹುನ್ನಾರ ನಡೆಯುತ್ತಿತ್ತು. ನಿಮ್ಮ ಸಂಸ್ಕೃತಿ, ನಿಮ್ಮ ಪರಂಪರೆ, ನಿಮ್ಮ ಗುರುತನ್ನು ನೀವು ಕಳೆದುಕೊಳ್ಳುತ್ತೀರಿ. ಇದು ನಿಮ್ಮ ವೈಯಕ್ತಿಕ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂಬುದು ಅರಿವಿಗೆ ಬಂತು. ಅಂದಿನಿಂದ, ನಾನು ಸ್ಥಳಾಂತರದ ವಿರುದ್ಧ, ಬುಡಕಟ್ಟು ಹಕ್ಕುಗಳಿಗಾಗಿ, ಜಾರ್ಖಂಡ್ ಮತ್ತು ಹೊರಗಡೆ ಅನೇಕ ಚಳುವಳಿಗಳಲ್ಲಿ ಭಾಗವಾಗಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಶಾಸಕರು, ಅಧಿಕಾರದಲ್ಲಿರುವವರು ಬುಡಕಟ್ಟು ಜನರ ಹಕ್ಕುಗಳನ್ನು ನಿರ್ಲಕ್ಷಿಸುತ್ತಾರೆ, ಆದ್ದರಿಂದ ನಾನು ಕಾನೂನುಗಳನ್ನು ನಿರ್ಮಿಸುವ ಸ್ಥಳಕ್ಕೆ ಹೋಗಲು ನಿರ್ಧರಿಸಿದ್ದೇನೆ ಎಂದು ಅವರು ತಮ್ಮ ಚುನಾವಣಾ ಉದ್ದೇಶವನ್ನು ಬಿಡಿಸಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...