Homeಮುಖಪುಟಜಾರ್ಖಂಡ್‌ ಚುನಾವಣೆಗೆ ಧುಮುಕಿದ ಆದಿವಾಸಿ ಪತ್ರಕರ್ತೆ, ಬುಡಕಟ್ಟು ಹೋರಾಟಗಾರ್ತಿ ಬಾರ್ಲಾ...

ಜಾರ್ಖಂಡ್‌ ಚುನಾವಣೆಗೆ ಧುಮುಕಿದ ಆದಿವಾಸಿ ಪತ್ರಕರ್ತೆ, ಬುಡಕಟ್ಟು ಹೋರಾಟಗಾರ್ತಿ ಬಾರ್ಲಾ…

ಶಾಸಕರು, ಅಧಿಕಾರದಲ್ಲಿರುವವರು ಬುಡಕಟ್ಟು ಜನರ ಹಕ್ಕುಗಳನ್ನು ನಿರ್ಲಕ್ಷಿಸುತ್ತಾರೆ, ಆದ್ದರಿಂದ ನಾನು ಕಾನೂನುಗಳನ್ನು ನಿರ್ಮಿಸುವ ಸ್ಥಳಕ್ಕೆ ಹೋಗಲು ನಿರ್ಧರಿಸಿದ್ದೇನೆ ಎನ್ನುತ್ತಾರೆ ಬಾರ್ಲಾ.

- Advertisement -
- Advertisement -

ಮಾಜಿ ಮುಖ್ಯಮಂತ್ರಿ ಬಾಬುಲಾಲ್ ಮರಂಡಿ ನೇತೃತ್ವದ ಜಾರ್ಖಂಡ್ ವಿಕಾಸ್ ಮೋರ್ಚಾ-ಪ್ರಜಾತಂತ್ರಿಕ್ (ಜೆವಿಎಂ-ಪಿ) ಪಕ್ಷದಿಂದ ಖುಂಟಿ ವಿಧಾನಸಭಾ ಕ್ಷೆತ್ರದ ಅಭ್ಯರ್ಥಿಯಾಗಿ ಬುಡಕಟ್ಟು ಪತ್ರಕರ್ತೆ ಮತ್ತು ಖ್ಯಾತ ಸಾಮಾಜಿಕ ಕಾರ್ಯಕರ್ತೆ ದಯಾಮಣಿ ಬಾರ್ಲಾ ಸ್ಪರ್ಧಿಸಲಿದ್ದಾರೆ.

ದಯಾಮಣಿ ಬಾರ್ಲಾ ದೇಶದ ಪ್ರಸಿದ್ಧ ಬುಡಕಟ್ಟು ಕಾರ್ಯಕರ್ತರಲ್ಲಿ ಒಬ್ಬರಾಗಿದ್ದಾರೆ. ಇವರು ಕಳೆದ 25 ವರ್ಷಗಳಿಂದ, ಪ್ರಭುತ್ವ ಮತ್ತು ಹಲವಾರು ಬಹುರಾಷ್ಟ್ರೀಯ ಕಂಪನಿಗಳ ವಿರುದ್ಧ ಬುಡಕಟ್ಟು ಜನರ ಭೂ ಹಕ್ಕುಗಳು, ಜನಾಂಗದವರ ಅಸ್ಮಿತೆ ಮತ್ತು ಸಂಸ್ಕೃತಿಯ ಬಗ್ಗೆ ಹೋರಾಡುತ್ತಿದ್ದಾರೆ.

ಪೂರ್ವ ಜಾರ್ಖಂಡ್‌ನಲ್ಲಿ ಆರ್ಸೆಲರ್ ಮಿತ್ತಲ್ ಅವರ ಉಕ್ಕಿನ ಸ್ಥಾವರ ಸ್ಥಾಪನೆ ನಡೆದಿತ್ತು. ಸುಮಾರು 12,000 ಎಕರೆ ಕಾಡು ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಯೋಜನೆ ಇದಾಗಿತ್ತು. ಇದರಿಂದಾಗಿ ಹಲವಾರು ಗ್ರಾಮಗಳನ್ನು ಸ್ಥಳಾಂತರಿಸಬೇಕಾದ ಪರಿಸ್ತಿತಿ ಬಂದೊದಗಿತ್ತು. ಮುಂಡಾ ಬುಡಕಟ್ಟು ಗುಂಪಿನ ಸದಸ್ಯರಾಗಿರುವ ಬಾರ್ಲಾ ಆಗ ಉಕ್ಕಿನ ಸ್ಥಾವರ ವಿರೋಧಿ ಹೋರಾಟದ ಮೂಲಕ ಚಿರಪರಿಚಿತರಾದ ಅವರು ಪತ್ರಿಕೋದ್ಯಮಕ್ಕಾಗಿ ಹಲವಾರು ಪ್ರತಿಷ್ಠಿತ ಪ್ರಶಸ್ತಿಗಳನ್ನು ಪಡೆದಿದ್ದಾರೆ.

2014 ರ ಲೋಕಸಭಾ ಚುನಾವಣೆಯಲ್ಲಿ ಅವರು ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಖುಂಟಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋಲುಂಡಿದ್ದರು. ಬಾರ್ಲಾ ಭಾರತೀಯ ಸಾಮಾಜಿಕ ಕ್ರಿಯಾ ವೇದಿಕೆಯ (INSAF) ರಾಷ್ಟ್ರೀಯ ಅಧ್ಯಕ್ಷರಾಗಿದ್ದಾರೆ. ಚಹಾ ಅಂಗಡಿಯೊಂದನ್ನು ನಡೆಸುವುದರ ಜೊತೆಗೆ ಪತ್ರಕರ್ತ ಹುದ್ದೆ ಮತ್ತು ಹೋರಾಟವನ್ನು ಅವರು ಮುನ್ನಡೆಸುತ್ತಿದ್ದಾರೆ.

“ನನ್ನ ಜೀವನವು ಹೋರಾಟಗಳಿಂದ ತುಂಬಿದೆ. ನನ್ನ ಹೆತ್ತವರ ಒಡೆತನದ ಜಮೀನನ್ನು ಜನರು ಕಸಿದುಕೊಳ್ಳುವುದನ್ನು ನಾನು ನೋಡಿದೆ. ನನ್ನ ಹೆತ್ತವರನ್ನು ನಂತರ ಬಂಧಿತ ಕಾರ್ಮಿಕರನ್ನಾಗಿ ಮಾಡಲಾಯಿತು. ಅವರು ನಮ್ಮಿಂದ ಭೂಮಿಯನ್ನು ತೆಗೆದುಕೊಂಡಾಗ, ನಮ್ಮ ಇಡೀ ಕುಟುಂಬವು ಚದುರಿಹೋಯಿತು. ನಮಗೆ ಆಹಾರವನ್ನು ಪಡೆಯಲು ಸಾಧ್ಯವಾಗಲಿಲ್ಲ. ಆದರೆ ನಾನು ನನ್ನ ಶಿಕ್ಷಣವನ್ನು ಬಿಡಲಿಲ್ಲ. ನಾನು ಕೂಲಿಯಾಗಿ ಕೆಲಸ ಮಾಡುವ ಮೂಲಕ ಹಣವನ್ನು ಸಂಗ್ರಹಿಸಬೇಕಾಗಿದ್ದಾಗಲೂ ಅದನ್ನು ಮುಂದುವರಿಸಿದೆ. ನಾನು ಬ್ರೆಡ್ ತುಂಡುಗಾಗಿ ಪರದಾಡಿದ ಸಮಯಗಳನ್ನು ನೋಡಿದ್ದೇನೆ” ಎನ್ನುತ್ತಾರೆ ಬಾರ್ಲಾ.

ಅವರು ಪೂರ್ಣಪ್ರಮಾಣದಲ್ಲಿ ಹೋರಾಟಕ್ಕೆ ಧುಮುಕಿದ್ದು 1995 ರಲ್ಲಿ. “ಟೊರ್ಪಾದ ಕೊಯೆಲ್ ಕರೋದಲ್ಲಿ ಅಣೆಕಟ್ಟು ನಿರ್ಮಿಸುವ ಯೋಜನೆಯನ್ನು ಸರ್ಕಾರ ಘೋಷಿಸಿತ್ತು. ಅಣೆಕಟ್ಟು 245 ಹಳ್ಳಿಗಳ ಅಸ್ತಿತ್ವಕ್ಕೆ ಧಕ್ಕೆ ತಂದಿತು. ಸುಮಾರು 2.5 ಲಕ್ಷ ಜನರು ಸ್ಥಳಾಂತರಗೊಳ್ಳುತ್ತಿದ್ದರು ಮತ್ತು 27,000 ಎಕರೆ ಕಾಡು ಭೂಮಿಯನ್ನು ಮುಳುಗಿಸಬಹುದಿತ್ತು. ಆಗ ಇದರ ಅರ್ಥವೇನೆಂದು ನನಗೆ ತಿಳಿಯಿತು. ನಮ್ಮ ಭೂಮಿಯನ್ನು ಕಳೆದುಕೊಳ್ಳುವ ದೊಡ್ಡ ಹುನ್ನಾರ ನಡೆಯುತ್ತಿತ್ತು. ನಿಮ್ಮ ಸಂಸ್ಕೃತಿ, ನಿಮ್ಮ ಪರಂಪರೆ, ನಿಮ್ಮ ಗುರುತನ್ನು ನೀವು ಕಳೆದುಕೊಳ್ಳುತ್ತೀರಿ. ಇದು ನಿಮ್ಮ ವೈಯಕ್ತಿಕ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂಬುದು ಅರಿವಿಗೆ ಬಂತು. ಅಂದಿನಿಂದ, ನಾನು ಸ್ಥಳಾಂತರದ ವಿರುದ್ಧ, ಬುಡಕಟ್ಟು ಹಕ್ಕುಗಳಿಗಾಗಿ, ಜಾರ್ಖಂಡ್ ಮತ್ತು ಹೊರಗಡೆ ಅನೇಕ ಚಳುವಳಿಗಳಲ್ಲಿ ಭಾಗವಾಗಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಶಾಸಕರು, ಅಧಿಕಾರದಲ್ಲಿರುವವರು ಬುಡಕಟ್ಟು ಜನರ ಹಕ್ಕುಗಳನ್ನು ನಿರ್ಲಕ್ಷಿಸುತ್ತಾರೆ, ಆದ್ದರಿಂದ ನಾನು ಕಾನೂನುಗಳನ್ನು ನಿರ್ಮಿಸುವ ಸ್ಥಳಕ್ಕೆ ಹೋಗಲು ನಿರ್ಧರಿಸಿದ್ದೇನೆ ಎಂದು ಅವರು ತಮ್ಮ ಚುನಾವಣಾ ಉದ್ದೇಶವನ್ನು ಬಿಡಿಸಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...