Homeಮುಖಪುಟಇ.ಡಿ. ವಶಕ್ಕೆ ತಮಿಳುನಾಡು ಸಚಿವ ಬಾಲಾಜಿ; ದುರುದ್ದೇಶಪೂರಿತ ಎಂದ ಡಿಎಂಕೆ, ಕಾಂಗ್ರೆಸ್

ಇ.ಡಿ. ವಶಕ್ಕೆ ತಮಿಳುನಾಡು ಸಚಿವ ಬಾಲಾಜಿ; ದುರುದ್ದೇಶಪೂರಿತ ಎಂದ ಡಿಎಂಕೆ, ಕಾಂಗ್ರೆಸ್

- Advertisement -
- Advertisement -

ತಮಿಳುನಾಡು ವಿದ್ಯುಚ್ಛಕ್ತಿ ಸಚಿವ ವಿ.ಸೆಂಥಿಲ್ ಬಾಲಾಜಿ ಅವರ ಮನೆ ಮತ್ತು ಚೇಂಬರ್‌ಗಳಲ್ಲಿ ಮಂಗಳವಾರ ಶೋಧ ಕಾರ್ಯ ಆರಂಭಿಸಿದ ನಂತರ ಜಾರಿ ನಿರ್ದೇಶನಾಲಯ (ಇ.ಡಿ.) ಬುಧವಾರ (ಜೂನ್ 14) ಮುಂಜಾನೆ ಬಾಲಾಜಿ ಅವರನ್ನು ಕಸ್ಟಡಿಗೆ ತೆಗೆದುಕೊಂಡಿದೆ.

18 ಗಂಟೆಗಳ ವಿಚಾರಣೆ ನಡೆದಿದೆ. ಚೆನ್ನೈ ಮತ್ತು ಕರೂರ್‌ನಾದ್ಯಂತ ಹತ್ತಾರು ಸ್ಥಳಗಳಲ್ಲಿ ಸಚಿವರು ಮತ್ತು ಅವರ ಕುಟುಂಬಕ್ಕೆ ಸಂಬಂಧಿಸಿದ ಆಸ್ತಿಗೆ ಸಂಬಂಧಿಸಿದಂತೆ ರೈಡ್ ಮಾಡಲಾಗಿದೆ.

ಎಐಎಡಿಎಂಕೆ ಸರ್ಕಾರದಲ್ಲಿ ಬಾಲಾಜಿ ಅವರು ಸಾರಿಗೆ ಸಚಿವರಾಗಿದ್ದರು. 2011 ಮತ್ತು 2016ರ ನಡುವೆ ರಾಜ್ಯದ ಸಾರಿಗೆ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ.

ಬಾಲಾಜಿ ಅವರೀಗ ಡಿಎಂಕೆ ಸದಸ್ಯರಾಗಿದ್ದಾರೆ. 2021ರಲ್ಲಿ ರಾಜ್ಯ ವಿಧಾನಸಭಾ ಚುನಾವಣೆಯ ಮುನ್ನಾದಿನದಂದು ಚೆನ್ನೈ ಪೊಲೀಸರು ಬಾಲಾಜಿ ಮತ್ತು ಇತರ 46 ಮಂದಿ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ್ದರು.

ಮದ್ರಾಸ್ ಹೈಕೋರ್ಟ್ 2022ರಲ್ಲಿ ನೀಡಿದ್ದ ಆದೇಶವನ್ನು ಕಳೆದ ಮೇ ತಿಂಗಳಿನಲ್ಲಿ ರದ್ದುಗೊಳಿಸಿದ್ದ ಸುಪ್ರೀಂಕೋರ್ಟ್, ಈ ಪ್ರಕರಣದ ತನಿಖೆ ನಡೆಸಲು ಜಾರಿ ನಿರ್ದೇಶನಾಲಯಕ್ಕೆ ಅನುಮತಿ ನೀಡಿತ್ತು. ಇದಾದ ಬೆನ್ನಲ್ಲೇ, ಆದಾಯ ತೆರಿಗೆ ಇಲಾಖೆಯು ಬಾಲಾಜಿ ಅವರ ಮನೆ, ಅವರ ಕೆಲವು ಬೆಂಬಲಿಗರ ಮನೆ ಮತ್ತು ಕಚೇರಿಗಳ ಮೇಲೆ ಎಂಟು ದಿನಗಳ ಕಾಲ ದಾಳಿ ನಡೆಸಿತ್ತು.

ಬಂಧನದ ನಂತರದಲ್ಲಿ ಬಾಲಾಜಿ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಆಸ್ಪತ್ರೆಗೆ ಕರೆದೊಯ್ಯಲಾಯಿತು. ಬಾಲಾಜಿಯವರನ್ನು ಆಂಬ್ಯುಲೆನ್ಸ್‌ನಲ್ಲಿ ಕರೆತರಲಾಯಿತು. ಚೆನ್ನೈನ ಒಮಂದೂರಾರ್ ಸರ್ಕಾರಿ ಆಸ್ಪತ್ರೆಯ ಹೊರಗೆ ನಾಟಕೀಯ ದೃಶ್ಯಗಳು ಕಂಡುಬಂದವು. ಅವರು ಕುಸಿದುಬಿದ್ದರು ಎಂದು ವರದಿಯಾಗಿದೆ, ಬಾಲಾಜಿ ಬೆಂಬಲಿಗರು ಒಗ್ಗಟ್ಟು ಪ್ರದರ್ಶಿಸಲು ಜಮಾಯಿಸಿದ್ದರು.

ಡಿಎಂಕೆ ನಾಯಕರು ಬಾಲಾಜಿ ಬೆಂಬಲಕ್ಕೆ ನಿಂತಿದ್ದಾರೆ. ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸಿಕೊಳ್ಳಲಾಗಿದೆ ಎಂದು ಟೀಕಿಸಿದ್ದಾರೆ.

ಡಿಎಂಕೆಯ ಸಂಘಟನಾ ಕಾರ್ಯದರ್ಶಿ ಆರ್.ಎಸ್.ಭಾರತಿ ಪ್ರತಿಕ್ರಿಯಿಸಿ, “ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಚೆನ್ನೈ ಪ್ರವಾಸ ಮುಗಿಸಿದ ನಂತರ ಈ ಬೆಳವಣಿಗೆಯಾಗಿದೆ. ಇದು ಅಮಿತ್ ಶಾ ಭೇಟಿಯ ನಂತರ ನಡೆಯುತ್ತಿದೆ. ಇದರಲ್ಲಿ ದುರುದ್ದೇಶವಿದೆ” ಎಂದಿದ್ದಾರೆ.

ಬಿಜೆಪಿಯೊಂದಿಗಿನ ಮೈತ್ರಿಯನ್ನು ಕೊನೆಗೊಳಿಸಲು ಎಐಎಡಿಎಂಕೆಯು ಯೋಚಿಸುತ್ತಿದೆ. ಈ ಕಾರಣ ಬಿಜೆಪಿ ಕೂಡ ಹಲವು ತಿರುವುಗಳನ್ನು ಸೃಷ್ಟಿಸಲು ಬಯಸಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಡಿಎಂಕೆ ಸಂಸದ, ವಕೀಲ ಎನ್.ಆರ್.ಎಳಂಗೋ ಪ್ರತಿಕ್ರಿಯಿಸಿ, “ಬಾಲಾಜಿಯವರನ್ನು ಐಸಿಯುಗೆ ಸ್ಥಳಾಂತರಿಸಲಾಗಿದೆ. ಅವರ ಬಂಧನವನ್ನು ಇಡಿ ಅಧಿಕೃತವಾಗಿ ದೃಢಪಡಿಸಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

“ಇಡಿ ಅವರನ್ನು ಬಂಧಿಸಿದೆಯೇ ಎಂಬ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ. ಯಾವುದೇ ಬಂಧನ ಮಾರ್ಗಸೂಚಿಗಳನ್ನು ಅನುಸರಿಸಿಲ್ಲ” ಎಂದು ಪ್ರತಿಕ್ರಿಯಿಸಿದ್ದಾರೆ.

“ನಾನು ಅವರನ್ನು (ಶ್ರೀ ಬಾಲಾಜಿ) ಐಸಿಯುಗೆ ಸ್ಥಳಾಂತರಿಸಿದಾಗ ನೋಡಿದೆ. ಅವರ ಆರೋಗ್ಯ ಸ್ಥಿತಿಯನ್ನು ವೈದ್ಯರು ಚೆಕ್‌ ಮಾಡುತ್ತಿದ್ದಾರೆ. ಹಲ್ಲೆ ನಡೆದಿದೆ ಎಂದು ವ್ಯಕ್ತಿಯೊಬ್ಬರು ತಿಳಿಸಿದಾಗ ವೈದ್ಯರು ಎಲ್ಲಾ ಗಾಯಗಳನ್ನು ಗಮನಿಸಬೇಕು. ವರದಿಯನ್ನು ನೋಡಿದ ನಂತರ ಅದು ತಿಳಿಯುತ್ತದೆ. ಅವರನ್ನು ಬಂಧಿಸಲಾಗಿದೆ ಎಂದು ಅಧಿಕೃತವಾಗಿ ನಮಗೆ (ಇಡಿಯಿಂದ) ತಿಳಿಸಲಾಗಿಲ್ಲ” ಎಂದಿದ್ದಾರೆ.

ಇದನ್ನೂ ಓದಿರಿ: ಕುಸ್ತಿ ಫೆಡರೇಶನ್‌ ಚುನಾವಣೆಯಲ್ಲಿ ಲೈಂಗಿಕ ಕಿರುಕುಳದ ಆರೋಪಿ ಬ್ರಿಜ್‌ಭೂಷಣ್ ಸಂಬಂಧಿಗಳು ಸ್ಪರ್ಧೆ ಮಾಡದಿರಲು ನಿರ್ಧಾರ: ವರದಿ

ತಮಿಳುನಾಡು ಕಾನೂನು ಸಚಿವ ಎಸ್.ರೇಗುಪತಿ ಕೂಡ ಪ್ರತಿಕ್ರಿಯಿಸಿ, “ಬಂಧನದ ಕಾರ್ಯವಿಧಾನಗಳನ್ನು ಅನುಸರಿಸಿಲ್ಲ” ಎಂದು ತಿಳಿಸಿದ್ದಾರೆ.

ಆಸ್ಪತ್ರೆಗೆ ತೆರಳಿದ ಡಿಎಂಕೆ ನಾಯಕರಲ್ಲಿ ಅವರು ಒಬ್ಬರಾಗಿದ್ದರು, ಆದರೆ ಬಾಲಾಜಿ ಅವರನ್ನು ಭೇಟಿ ಮಾಡಲು ಅವಕಾಶ ನೀಡಲಿಲ್ಲ ಎನ್ನಲಾಗಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಡಿ ಕ್ರಮವನ್ನು ಖಂಡಿಸಿದ್ದಾರೆ. “ಇದು ಕಿರುಕುಳ ಮತ್ತು ಬೆದರಿಕೆ ನೀಡುವ ಮೋದಿ ಸರ್ಕಾರದ ಲಜ್ಜೆಗೆಟ್ಟ ಪ್ರಯತ್ನಗಳು. ರಾಜಕೀಯ ವಿರೋಧಿಗಳ ವಿರುದ್ಧ ತನಿಖಾ ಸಂಸ್ಥೆಗಳ ಇಂತಹ ದುರುಪಯೋಗ ಮೋದಿ ಸರ್ಕಾರದ ವಿಶಿಷ್ಟ ಲಕ್ಷಣವಾಗಿದೆ” ಎಂದು ಟೀಕಿಸಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಪ್ರತಿಕ್ರಿಯಿಸಿ, “ಪ್ರತಿಪಕ್ಷಗಳನ್ನು ಮೌನಗೊಳಿಸಲು ಮತ್ತು ಫೆಡರಲಿಸಂನ ಮೇಲೆ ದಾಳಿ ಮಾಡಲು ಬಿಜೆಪಿ ನಡೆಸಿರುವ ಮತ್ತೊಂದು ಪ್ರಯತ್ನ ಇದಾಗಿದೆ” ಎಂದು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...