Homeಮುಖಪುಟಇ.ಡಿ. ವಶಕ್ಕೆ ತಮಿಳುನಾಡು ಸಚಿವ ಬಾಲಾಜಿ; ದುರುದ್ದೇಶಪೂರಿತ ಎಂದ ಡಿಎಂಕೆ, ಕಾಂಗ್ರೆಸ್

ಇ.ಡಿ. ವಶಕ್ಕೆ ತಮಿಳುನಾಡು ಸಚಿವ ಬಾಲಾಜಿ; ದುರುದ್ದೇಶಪೂರಿತ ಎಂದ ಡಿಎಂಕೆ, ಕಾಂಗ್ರೆಸ್

- Advertisement -
- Advertisement -

ತಮಿಳುನಾಡು ವಿದ್ಯುಚ್ಛಕ್ತಿ ಸಚಿವ ವಿ.ಸೆಂಥಿಲ್ ಬಾಲಾಜಿ ಅವರ ಮನೆ ಮತ್ತು ಚೇಂಬರ್‌ಗಳಲ್ಲಿ ಮಂಗಳವಾರ ಶೋಧ ಕಾರ್ಯ ಆರಂಭಿಸಿದ ನಂತರ ಜಾರಿ ನಿರ್ದೇಶನಾಲಯ (ಇ.ಡಿ.) ಬುಧವಾರ (ಜೂನ್ 14) ಮುಂಜಾನೆ ಬಾಲಾಜಿ ಅವರನ್ನು ಕಸ್ಟಡಿಗೆ ತೆಗೆದುಕೊಂಡಿದೆ.

18 ಗಂಟೆಗಳ ವಿಚಾರಣೆ ನಡೆದಿದೆ. ಚೆನ್ನೈ ಮತ್ತು ಕರೂರ್‌ನಾದ್ಯಂತ ಹತ್ತಾರು ಸ್ಥಳಗಳಲ್ಲಿ ಸಚಿವರು ಮತ್ತು ಅವರ ಕುಟುಂಬಕ್ಕೆ ಸಂಬಂಧಿಸಿದ ಆಸ್ತಿಗೆ ಸಂಬಂಧಿಸಿದಂತೆ ರೈಡ್ ಮಾಡಲಾಗಿದೆ.

ಎಐಎಡಿಎಂಕೆ ಸರ್ಕಾರದಲ್ಲಿ ಬಾಲಾಜಿ ಅವರು ಸಾರಿಗೆ ಸಚಿವರಾಗಿದ್ದರು. 2011 ಮತ್ತು 2016ರ ನಡುವೆ ರಾಜ್ಯದ ಸಾರಿಗೆ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ.

ಬಾಲಾಜಿ ಅವರೀಗ ಡಿಎಂಕೆ ಸದಸ್ಯರಾಗಿದ್ದಾರೆ. 2021ರಲ್ಲಿ ರಾಜ್ಯ ವಿಧಾನಸಭಾ ಚುನಾವಣೆಯ ಮುನ್ನಾದಿನದಂದು ಚೆನ್ನೈ ಪೊಲೀಸರು ಬಾಲಾಜಿ ಮತ್ತು ಇತರ 46 ಮಂದಿ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ್ದರು.

ಮದ್ರಾಸ್ ಹೈಕೋರ್ಟ್ 2022ರಲ್ಲಿ ನೀಡಿದ್ದ ಆದೇಶವನ್ನು ಕಳೆದ ಮೇ ತಿಂಗಳಿನಲ್ಲಿ ರದ್ದುಗೊಳಿಸಿದ್ದ ಸುಪ್ರೀಂಕೋರ್ಟ್, ಈ ಪ್ರಕರಣದ ತನಿಖೆ ನಡೆಸಲು ಜಾರಿ ನಿರ್ದೇಶನಾಲಯಕ್ಕೆ ಅನುಮತಿ ನೀಡಿತ್ತು. ಇದಾದ ಬೆನ್ನಲ್ಲೇ, ಆದಾಯ ತೆರಿಗೆ ಇಲಾಖೆಯು ಬಾಲಾಜಿ ಅವರ ಮನೆ, ಅವರ ಕೆಲವು ಬೆಂಬಲಿಗರ ಮನೆ ಮತ್ತು ಕಚೇರಿಗಳ ಮೇಲೆ ಎಂಟು ದಿನಗಳ ಕಾಲ ದಾಳಿ ನಡೆಸಿತ್ತು.

ಬಂಧನದ ನಂತರದಲ್ಲಿ ಬಾಲಾಜಿ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಆಸ್ಪತ್ರೆಗೆ ಕರೆದೊಯ್ಯಲಾಯಿತು. ಬಾಲಾಜಿಯವರನ್ನು ಆಂಬ್ಯುಲೆನ್ಸ್‌ನಲ್ಲಿ ಕರೆತರಲಾಯಿತು. ಚೆನ್ನೈನ ಒಮಂದೂರಾರ್ ಸರ್ಕಾರಿ ಆಸ್ಪತ್ರೆಯ ಹೊರಗೆ ನಾಟಕೀಯ ದೃಶ್ಯಗಳು ಕಂಡುಬಂದವು. ಅವರು ಕುಸಿದುಬಿದ್ದರು ಎಂದು ವರದಿಯಾಗಿದೆ, ಬಾಲಾಜಿ ಬೆಂಬಲಿಗರು ಒಗ್ಗಟ್ಟು ಪ್ರದರ್ಶಿಸಲು ಜಮಾಯಿಸಿದ್ದರು.

ಡಿಎಂಕೆ ನಾಯಕರು ಬಾಲಾಜಿ ಬೆಂಬಲಕ್ಕೆ ನಿಂತಿದ್ದಾರೆ. ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸಿಕೊಳ್ಳಲಾಗಿದೆ ಎಂದು ಟೀಕಿಸಿದ್ದಾರೆ.

ಡಿಎಂಕೆಯ ಸಂಘಟನಾ ಕಾರ್ಯದರ್ಶಿ ಆರ್.ಎಸ್.ಭಾರತಿ ಪ್ರತಿಕ್ರಿಯಿಸಿ, “ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಚೆನ್ನೈ ಪ್ರವಾಸ ಮುಗಿಸಿದ ನಂತರ ಈ ಬೆಳವಣಿಗೆಯಾಗಿದೆ. ಇದು ಅಮಿತ್ ಶಾ ಭೇಟಿಯ ನಂತರ ನಡೆಯುತ್ತಿದೆ. ಇದರಲ್ಲಿ ದುರುದ್ದೇಶವಿದೆ” ಎಂದಿದ್ದಾರೆ.

ಬಿಜೆಪಿಯೊಂದಿಗಿನ ಮೈತ್ರಿಯನ್ನು ಕೊನೆಗೊಳಿಸಲು ಎಐಎಡಿಎಂಕೆಯು ಯೋಚಿಸುತ್ತಿದೆ. ಈ ಕಾರಣ ಬಿಜೆಪಿ ಕೂಡ ಹಲವು ತಿರುವುಗಳನ್ನು ಸೃಷ್ಟಿಸಲು ಬಯಸಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಡಿಎಂಕೆ ಸಂಸದ, ವಕೀಲ ಎನ್.ಆರ್.ಎಳಂಗೋ ಪ್ರತಿಕ್ರಿಯಿಸಿ, “ಬಾಲಾಜಿಯವರನ್ನು ಐಸಿಯುಗೆ ಸ್ಥಳಾಂತರಿಸಲಾಗಿದೆ. ಅವರ ಬಂಧನವನ್ನು ಇಡಿ ಅಧಿಕೃತವಾಗಿ ದೃಢಪಡಿಸಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

“ಇಡಿ ಅವರನ್ನು ಬಂಧಿಸಿದೆಯೇ ಎಂಬ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ. ಯಾವುದೇ ಬಂಧನ ಮಾರ್ಗಸೂಚಿಗಳನ್ನು ಅನುಸರಿಸಿಲ್ಲ” ಎಂದು ಪ್ರತಿಕ್ರಿಯಿಸಿದ್ದಾರೆ.

“ನಾನು ಅವರನ್ನು (ಶ್ರೀ ಬಾಲಾಜಿ) ಐಸಿಯುಗೆ ಸ್ಥಳಾಂತರಿಸಿದಾಗ ನೋಡಿದೆ. ಅವರ ಆರೋಗ್ಯ ಸ್ಥಿತಿಯನ್ನು ವೈದ್ಯರು ಚೆಕ್‌ ಮಾಡುತ್ತಿದ್ದಾರೆ. ಹಲ್ಲೆ ನಡೆದಿದೆ ಎಂದು ವ್ಯಕ್ತಿಯೊಬ್ಬರು ತಿಳಿಸಿದಾಗ ವೈದ್ಯರು ಎಲ್ಲಾ ಗಾಯಗಳನ್ನು ಗಮನಿಸಬೇಕು. ವರದಿಯನ್ನು ನೋಡಿದ ನಂತರ ಅದು ತಿಳಿಯುತ್ತದೆ. ಅವರನ್ನು ಬಂಧಿಸಲಾಗಿದೆ ಎಂದು ಅಧಿಕೃತವಾಗಿ ನಮಗೆ (ಇಡಿಯಿಂದ) ತಿಳಿಸಲಾಗಿಲ್ಲ” ಎಂದಿದ್ದಾರೆ.

ಇದನ್ನೂ ಓದಿರಿ: ಕುಸ್ತಿ ಫೆಡರೇಶನ್‌ ಚುನಾವಣೆಯಲ್ಲಿ ಲೈಂಗಿಕ ಕಿರುಕುಳದ ಆರೋಪಿ ಬ್ರಿಜ್‌ಭೂಷಣ್ ಸಂಬಂಧಿಗಳು ಸ್ಪರ್ಧೆ ಮಾಡದಿರಲು ನಿರ್ಧಾರ: ವರದಿ

ತಮಿಳುನಾಡು ಕಾನೂನು ಸಚಿವ ಎಸ್.ರೇಗುಪತಿ ಕೂಡ ಪ್ರತಿಕ್ರಿಯಿಸಿ, “ಬಂಧನದ ಕಾರ್ಯವಿಧಾನಗಳನ್ನು ಅನುಸರಿಸಿಲ್ಲ” ಎಂದು ತಿಳಿಸಿದ್ದಾರೆ.

ಆಸ್ಪತ್ರೆಗೆ ತೆರಳಿದ ಡಿಎಂಕೆ ನಾಯಕರಲ್ಲಿ ಅವರು ಒಬ್ಬರಾಗಿದ್ದರು, ಆದರೆ ಬಾಲಾಜಿ ಅವರನ್ನು ಭೇಟಿ ಮಾಡಲು ಅವಕಾಶ ನೀಡಲಿಲ್ಲ ಎನ್ನಲಾಗಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಡಿ ಕ್ರಮವನ್ನು ಖಂಡಿಸಿದ್ದಾರೆ. “ಇದು ಕಿರುಕುಳ ಮತ್ತು ಬೆದರಿಕೆ ನೀಡುವ ಮೋದಿ ಸರ್ಕಾರದ ಲಜ್ಜೆಗೆಟ್ಟ ಪ್ರಯತ್ನಗಳು. ರಾಜಕೀಯ ವಿರೋಧಿಗಳ ವಿರುದ್ಧ ತನಿಖಾ ಸಂಸ್ಥೆಗಳ ಇಂತಹ ದುರುಪಯೋಗ ಮೋದಿ ಸರ್ಕಾರದ ವಿಶಿಷ್ಟ ಲಕ್ಷಣವಾಗಿದೆ” ಎಂದು ಟೀಕಿಸಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಪ್ರತಿಕ್ರಿಯಿಸಿ, “ಪ್ರತಿಪಕ್ಷಗಳನ್ನು ಮೌನಗೊಳಿಸಲು ಮತ್ತು ಫೆಡರಲಿಸಂನ ಮೇಲೆ ದಾಳಿ ಮಾಡಲು ಬಿಜೆಪಿ ನಡೆಸಿರುವ ಮತ್ತೊಂದು ಪ್ರಯತ್ನ ಇದಾಗಿದೆ” ಎಂದು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...