Homeಮುಖಪುಟಇ.ಡಿ. ವಶಕ್ಕೆ ತಮಿಳುನಾಡು ಸಚಿವ ಬಾಲಾಜಿ; ದುರುದ್ದೇಶಪೂರಿತ ಎಂದ ಡಿಎಂಕೆ, ಕಾಂಗ್ರೆಸ್

ಇ.ಡಿ. ವಶಕ್ಕೆ ತಮಿಳುನಾಡು ಸಚಿವ ಬಾಲಾಜಿ; ದುರುದ್ದೇಶಪೂರಿತ ಎಂದ ಡಿಎಂಕೆ, ಕಾಂಗ್ರೆಸ್

- Advertisement -
- Advertisement -

ತಮಿಳುನಾಡು ವಿದ್ಯುಚ್ಛಕ್ತಿ ಸಚಿವ ವಿ.ಸೆಂಥಿಲ್ ಬಾಲಾಜಿ ಅವರ ಮನೆ ಮತ್ತು ಚೇಂಬರ್‌ಗಳಲ್ಲಿ ಮಂಗಳವಾರ ಶೋಧ ಕಾರ್ಯ ಆರಂಭಿಸಿದ ನಂತರ ಜಾರಿ ನಿರ್ದೇಶನಾಲಯ (ಇ.ಡಿ.) ಬುಧವಾರ (ಜೂನ್ 14) ಮುಂಜಾನೆ ಬಾಲಾಜಿ ಅವರನ್ನು ಕಸ್ಟಡಿಗೆ ತೆಗೆದುಕೊಂಡಿದೆ.

18 ಗಂಟೆಗಳ ವಿಚಾರಣೆ ನಡೆದಿದೆ. ಚೆನ್ನೈ ಮತ್ತು ಕರೂರ್‌ನಾದ್ಯಂತ ಹತ್ತಾರು ಸ್ಥಳಗಳಲ್ಲಿ ಸಚಿವರು ಮತ್ತು ಅವರ ಕುಟುಂಬಕ್ಕೆ ಸಂಬಂಧಿಸಿದ ಆಸ್ತಿಗೆ ಸಂಬಂಧಿಸಿದಂತೆ ರೈಡ್ ಮಾಡಲಾಗಿದೆ.

ಎಐಎಡಿಎಂಕೆ ಸರ್ಕಾರದಲ್ಲಿ ಬಾಲಾಜಿ ಅವರು ಸಾರಿಗೆ ಸಚಿವರಾಗಿದ್ದರು. 2011 ಮತ್ತು 2016ರ ನಡುವೆ ರಾಜ್ಯದ ಸಾರಿಗೆ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ.

ಬಾಲಾಜಿ ಅವರೀಗ ಡಿಎಂಕೆ ಸದಸ್ಯರಾಗಿದ್ದಾರೆ. 2021ರಲ್ಲಿ ರಾಜ್ಯ ವಿಧಾನಸಭಾ ಚುನಾವಣೆಯ ಮುನ್ನಾದಿನದಂದು ಚೆನ್ನೈ ಪೊಲೀಸರು ಬಾಲಾಜಿ ಮತ್ತು ಇತರ 46 ಮಂದಿ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ್ದರು.

ಮದ್ರಾಸ್ ಹೈಕೋರ್ಟ್ 2022ರಲ್ಲಿ ನೀಡಿದ್ದ ಆದೇಶವನ್ನು ಕಳೆದ ಮೇ ತಿಂಗಳಿನಲ್ಲಿ ರದ್ದುಗೊಳಿಸಿದ್ದ ಸುಪ್ರೀಂಕೋರ್ಟ್, ಈ ಪ್ರಕರಣದ ತನಿಖೆ ನಡೆಸಲು ಜಾರಿ ನಿರ್ದೇಶನಾಲಯಕ್ಕೆ ಅನುಮತಿ ನೀಡಿತ್ತು. ಇದಾದ ಬೆನ್ನಲ್ಲೇ, ಆದಾಯ ತೆರಿಗೆ ಇಲಾಖೆಯು ಬಾಲಾಜಿ ಅವರ ಮನೆ, ಅವರ ಕೆಲವು ಬೆಂಬಲಿಗರ ಮನೆ ಮತ್ತು ಕಚೇರಿಗಳ ಮೇಲೆ ಎಂಟು ದಿನಗಳ ಕಾಲ ದಾಳಿ ನಡೆಸಿತ್ತು.

ಬಂಧನದ ನಂತರದಲ್ಲಿ ಬಾಲಾಜಿ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಆಸ್ಪತ್ರೆಗೆ ಕರೆದೊಯ್ಯಲಾಯಿತು. ಬಾಲಾಜಿಯವರನ್ನು ಆಂಬ್ಯುಲೆನ್ಸ್‌ನಲ್ಲಿ ಕರೆತರಲಾಯಿತು. ಚೆನ್ನೈನ ಒಮಂದೂರಾರ್ ಸರ್ಕಾರಿ ಆಸ್ಪತ್ರೆಯ ಹೊರಗೆ ನಾಟಕೀಯ ದೃಶ್ಯಗಳು ಕಂಡುಬಂದವು. ಅವರು ಕುಸಿದುಬಿದ್ದರು ಎಂದು ವರದಿಯಾಗಿದೆ, ಬಾಲಾಜಿ ಬೆಂಬಲಿಗರು ಒಗ್ಗಟ್ಟು ಪ್ರದರ್ಶಿಸಲು ಜಮಾಯಿಸಿದ್ದರು.

ಡಿಎಂಕೆ ನಾಯಕರು ಬಾಲಾಜಿ ಬೆಂಬಲಕ್ಕೆ ನಿಂತಿದ್ದಾರೆ. ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸಿಕೊಳ್ಳಲಾಗಿದೆ ಎಂದು ಟೀಕಿಸಿದ್ದಾರೆ.

ಡಿಎಂಕೆಯ ಸಂಘಟನಾ ಕಾರ್ಯದರ್ಶಿ ಆರ್.ಎಸ್.ಭಾರತಿ ಪ್ರತಿಕ್ರಿಯಿಸಿ, “ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಚೆನ್ನೈ ಪ್ರವಾಸ ಮುಗಿಸಿದ ನಂತರ ಈ ಬೆಳವಣಿಗೆಯಾಗಿದೆ. ಇದು ಅಮಿತ್ ಶಾ ಭೇಟಿಯ ನಂತರ ನಡೆಯುತ್ತಿದೆ. ಇದರಲ್ಲಿ ದುರುದ್ದೇಶವಿದೆ” ಎಂದಿದ್ದಾರೆ.

ಬಿಜೆಪಿಯೊಂದಿಗಿನ ಮೈತ್ರಿಯನ್ನು ಕೊನೆಗೊಳಿಸಲು ಎಐಎಡಿಎಂಕೆಯು ಯೋಚಿಸುತ್ತಿದೆ. ಈ ಕಾರಣ ಬಿಜೆಪಿ ಕೂಡ ಹಲವು ತಿರುವುಗಳನ್ನು ಸೃಷ್ಟಿಸಲು ಬಯಸಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಡಿಎಂಕೆ ಸಂಸದ, ವಕೀಲ ಎನ್.ಆರ್.ಎಳಂಗೋ ಪ್ರತಿಕ್ರಿಯಿಸಿ, “ಬಾಲಾಜಿಯವರನ್ನು ಐಸಿಯುಗೆ ಸ್ಥಳಾಂತರಿಸಲಾಗಿದೆ. ಅವರ ಬಂಧನವನ್ನು ಇಡಿ ಅಧಿಕೃತವಾಗಿ ದೃಢಪಡಿಸಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

“ಇಡಿ ಅವರನ್ನು ಬಂಧಿಸಿದೆಯೇ ಎಂಬ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ. ಯಾವುದೇ ಬಂಧನ ಮಾರ್ಗಸೂಚಿಗಳನ್ನು ಅನುಸರಿಸಿಲ್ಲ” ಎಂದು ಪ್ರತಿಕ್ರಿಯಿಸಿದ್ದಾರೆ.

“ನಾನು ಅವರನ್ನು (ಶ್ರೀ ಬಾಲಾಜಿ) ಐಸಿಯುಗೆ ಸ್ಥಳಾಂತರಿಸಿದಾಗ ನೋಡಿದೆ. ಅವರ ಆರೋಗ್ಯ ಸ್ಥಿತಿಯನ್ನು ವೈದ್ಯರು ಚೆಕ್‌ ಮಾಡುತ್ತಿದ್ದಾರೆ. ಹಲ್ಲೆ ನಡೆದಿದೆ ಎಂದು ವ್ಯಕ್ತಿಯೊಬ್ಬರು ತಿಳಿಸಿದಾಗ ವೈದ್ಯರು ಎಲ್ಲಾ ಗಾಯಗಳನ್ನು ಗಮನಿಸಬೇಕು. ವರದಿಯನ್ನು ನೋಡಿದ ನಂತರ ಅದು ತಿಳಿಯುತ್ತದೆ. ಅವರನ್ನು ಬಂಧಿಸಲಾಗಿದೆ ಎಂದು ಅಧಿಕೃತವಾಗಿ ನಮಗೆ (ಇಡಿಯಿಂದ) ತಿಳಿಸಲಾಗಿಲ್ಲ” ಎಂದಿದ್ದಾರೆ.

ಇದನ್ನೂ ಓದಿರಿ: ಕುಸ್ತಿ ಫೆಡರೇಶನ್‌ ಚುನಾವಣೆಯಲ್ಲಿ ಲೈಂಗಿಕ ಕಿರುಕುಳದ ಆರೋಪಿ ಬ್ರಿಜ್‌ಭೂಷಣ್ ಸಂಬಂಧಿಗಳು ಸ್ಪರ್ಧೆ ಮಾಡದಿರಲು ನಿರ್ಧಾರ: ವರದಿ

ತಮಿಳುನಾಡು ಕಾನೂನು ಸಚಿವ ಎಸ್.ರೇಗುಪತಿ ಕೂಡ ಪ್ರತಿಕ್ರಿಯಿಸಿ, “ಬಂಧನದ ಕಾರ್ಯವಿಧಾನಗಳನ್ನು ಅನುಸರಿಸಿಲ್ಲ” ಎಂದು ತಿಳಿಸಿದ್ದಾರೆ.

ಆಸ್ಪತ್ರೆಗೆ ತೆರಳಿದ ಡಿಎಂಕೆ ನಾಯಕರಲ್ಲಿ ಅವರು ಒಬ್ಬರಾಗಿದ್ದರು, ಆದರೆ ಬಾಲಾಜಿ ಅವರನ್ನು ಭೇಟಿ ಮಾಡಲು ಅವಕಾಶ ನೀಡಲಿಲ್ಲ ಎನ್ನಲಾಗಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಡಿ ಕ್ರಮವನ್ನು ಖಂಡಿಸಿದ್ದಾರೆ. “ಇದು ಕಿರುಕುಳ ಮತ್ತು ಬೆದರಿಕೆ ನೀಡುವ ಮೋದಿ ಸರ್ಕಾರದ ಲಜ್ಜೆಗೆಟ್ಟ ಪ್ರಯತ್ನಗಳು. ರಾಜಕೀಯ ವಿರೋಧಿಗಳ ವಿರುದ್ಧ ತನಿಖಾ ಸಂಸ್ಥೆಗಳ ಇಂತಹ ದುರುಪಯೋಗ ಮೋದಿ ಸರ್ಕಾರದ ವಿಶಿಷ್ಟ ಲಕ್ಷಣವಾಗಿದೆ” ಎಂದು ಟೀಕಿಸಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಪ್ರತಿಕ್ರಿಯಿಸಿ, “ಪ್ರತಿಪಕ್ಷಗಳನ್ನು ಮೌನಗೊಳಿಸಲು ಮತ್ತು ಫೆಡರಲಿಸಂನ ಮೇಲೆ ದಾಳಿ ಮಾಡಲು ಬಿಜೆಪಿ ನಡೆಸಿರುವ ಮತ್ತೊಂದು ಪ್ರಯತ್ನ ಇದಾಗಿದೆ” ಎಂದು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...