Homeಮುಖಪುಟಇ.ಡಿ. ವಶಕ್ಕೆ ತಮಿಳುನಾಡು ಸಚಿವ ಬಾಲಾಜಿ; ದುರುದ್ದೇಶಪೂರಿತ ಎಂದ ಡಿಎಂಕೆ, ಕಾಂಗ್ರೆಸ್

ಇ.ಡಿ. ವಶಕ್ಕೆ ತಮಿಳುನಾಡು ಸಚಿವ ಬಾಲಾಜಿ; ದುರುದ್ದೇಶಪೂರಿತ ಎಂದ ಡಿಎಂಕೆ, ಕಾಂಗ್ರೆಸ್

- Advertisement -
- Advertisement -

ತಮಿಳುನಾಡು ವಿದ್ಯುಚ್ಛಕ್ತಿ ಸಚಿವ ವಿ.ಸೆಂಥಿಲ್ ಬಾಲಾಜಿ ಅವರ ಮನೆ ಮತ್ತು ಚೇಂಬರ್‌ಗಳಲ್ಲಿ ಮಂಗಳವಾರ ಶೋಧ ಕಾರ್ಯ ಆರಂಭಿಸಿದ ನಂತರ ಜಾರಿ ನಿರ್ದೇಶನಾಲಯ (ಇ.ಡಿ.) ಬುಧವಾರ (ಜೂನ್ 14) ಮುಂಜಾನೆ ಬಾಲಾಜಿ ಅವರನ್ನು ಕಸ್ಟಡಿಗೆ ತೆಗೆದುಕೊಂಡಿದೆ.

18 ಗಂಟೆಗಳ ವಿಚಾರಣೆ ನಡೆದಿದೆ. ಚೆನ್ನೈ ಮತ್ತು ಕರೂರ್‌ನಾದ್ಯಂತ ಹತ್ತಾರು ಸ್ಥಳಗಳಲ್ಲಿ ಸಚಿವರು ಮತ್ತು ಅವರ ಕುಟುಂಬಕ್ಕೆ ಸಂಬಂಧಿಸಿದ ಆಸ್ತಿಗೆ ಸಂಬಂಧಿಸಿದಂತೆ ರೈಡ್ ಮಾಡಲಾಗಿದೆ.

ಎಐಎಡಿಎಂಕೆ ಸರ್ಕಾರದಲ್ಲಿ ಬಾಲಾಜಿ ಅವರು ಸಾರಿಗೆ ಸಚಿವರಾಗಿದ್ದರು. 2011 ಮತ್ತು 2016ರ ನಡುವೆ ರಾಜ್ಯದ ಸಾರಿಗೆ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ.

ಬಾಲಾಜಿ ಅವರೀಗ ಡಿಎಂಕೆ ಸದಸ್ಯರಾಗಿದ್ದಾರೆ. 2021ರಲ್ಲಿ ರಾಜ್ಯ ವಿಧಾನಸಭಾ ಚುನಾವಣೆಯ ಮುನ್ನಾದಿನದಂದು ಚೆನ್ನೈ ಪೊಲೀಸರು ಬಾಲಾಜಿ ಮತ್ತು ಇತರ 46 ಮಂದಿ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ್ದರು.

ಮದ್ರಾಸ್ ಹೈಕೋರ್ಟ್ 2022ರಲ್ಲಿ ನೀಡಿದ್ದ ಆದೇಶವನ್ನು ಕಳೆದ ಮೇ ತಿಂಗಳಿನಲ್ಲಿ ರದ್ದುಗೊಳಿಸಿದ್ದ ಸುಪ್ರೀಂಕೋರ್ಟ್, ಈ ಪ್ರಕರಣದ ತನಿಖೆ ನಡೆಸಲು ಜಾರಿ ನಿರ್ದೇಶನಾಲಯಕ್ಕೆ ಅನುಮತಿ ನೀಡಿತ್ತು. ಇದಾದ ಬೆನ್ನಲ್ಲೇ, ಆದಾಯ ತೆರಿಗೆ ಇಲಾಖೆಯು ಬಾಲಾಜಿ ಅವರ ಮನೆ, ಅವರ ಕೆಲವು ಬೆಂಬಲಿಗರ ಮನೆ ಮತ್ತು ಕಚೇರಿಗಳ ಮೇಲೆ ಎಂಟು ದಿನಗಳ ಕಾಲ ದಾಳಿ ನಡೆಸಿತ್ತು.

ಬಂಧನದ ನಂತರದಲ್ಲಿ ಬಾಲಾಜಿ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಆಸ್ಪತ್ರೆಗೆ ಕರೆದೊಯ್ಯಲಾಯಿತು. ಬಾಲಾಜಿಯವರನ್ನು ಆಂಬ್ಯುಲೆನ್ಸ್‌ನಲ್ಲಿ ಕರೆತರಲಾಯಿತು. ಚೆನ್ನೈನ ಒಮಂದೂರಾರ್ ಸರ್ಕಾರಿ ಆಸ್ಪತ್ರೆಯ ಹೊರಗೆ ನಾಟಕೀಯ ದೃಶ್ಯಗಳು ಕಂಡುಬಂದವು. ಅವರು ಕುಸಿದುಬಿದ್ದರು ಎಂದು ವರದಿಯಾಗಿದೆ, ಬಾಲಾಜಿ ಬೆಂಬಲಿಗರು ಒಗ್ಗಟ್ಟು ಪ್ರದರ್ಶಿಸಲು ಜಮಾಯಿಸಿದ್ದರು.

ಡಿಎಂಕೆ ನಾಯಕರು ಬಾಲಾಜಿ ಬೆಂಬಲಕ್ಕೆ ನಿಂತಿದ್ದಾರೆ. ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸಿಕೊಳ್ಳಲಾಗಿದೆ ಎಂದು ಟೀಕಿಸಿದ್ದಾರೆ.

ಡಿಎಂಕೆಯ ಸಂಘಟನಾ ಕಾರ್ಯದರ್ಶಿ ಆರ್.ಎಸ್.ಭಾರತಿ ಪ್ರತಿಕ್ರಿಯಿಸಿ, “ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಚೆನ್ನೈ ಪ್ರವಾಸ ಮುಗಿಸಿದ ನಂತರ ಈ ಬೆಳವಣಿಗೆಯಾಗಿದೆ. ಇದು ಅಮಿತ್ ಶಾ ಭೇಟಿಯ ನಂತರ ನಡೆಯುತ್ತಿದೆ. ಇದರಲ್ಲಿ ದುರುದ್ದೇಶವಿದೆ” ಎಂದಿದ್ದಾರೆ.

ಬಿಜೆಪಿಯೊಂದಿಗಿನ ಮೈತ್ರಿಯನ್ನು ಕೊನೆಗೊಳಿಸಲು ಎಐಎಡಿಎಂಕೆಯು ಯೋಚಿಸುತ್ತಿದೆ. ಈ ಕಾರಣ ಬಿಜೆಪಿ ಕೂಡ ಹಲವು ತಿರುವುಗಳನ್ನು ಸೃಷ್ಟಿಸಲು ಬಯಸಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಡಿಎಂಕೆ ಸಂಸದ, ವಕೀಲ ಎನ್.ಆರ್.ಎಳಂಗೋ ಪ್ರತಿಕ್ರಿಯಿಸಿ, “ಬಾಲಾಜಿಯವರನ್ನು ಐಸಿಯುಗೆ ಸ್ಥಳಾಂತರಿಸಲಾಗಿದೆ. ಅವರ ಬಂಧನವನ್ನು ಇಡಿ ಅಧಿಕೃತವಾಗಿ ದೃಢಪಡಿಸಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

“ಇಡಿ ಅವರನ್ನು ಬಂಧಿಸಿದೆಯೇ ಎಂಬ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ. ಯಾವುದೇ ಬಂಧನ ಮಾರ್ಗಸೂಚಿಗಳನ್ನು ಅನುಸರಿಸಿಲ್ಲ” ಎಂದು ಪ್ರತಿಕ್ರಿಯಿಸಿದ್ದಾರೆ.

“ನಾನು ಅವರನ್ನು (ಶ್ರೀ ಬಾಲಾಜಿ) ಐಸಿಯುಗೆ ಸ್ಥಳಾಂತರಿಸಿದಾಗ ನೋಡಿದೆ. ಅವರ ಆರೋಗ್ಯ ಸ್ಥಿತಿಯನ್ನು ವೈದ್ಯರು ಚೆಕ್‌ ಮಾಡುತ್ತಿದ್ದಾರೆ. ಹಲ್ಲೆ ನಡೆದಿದೆ ಎಂದು ವ್ಯಕ್ತಿಯೊಬ್ಬರು ತಿಳಿಸಿದಾಗ ವೈದ್ಯರು ಎಲ್ಲಾ ಗಾಯಗಳನ್ನು ಗಮನಿಸಬೇಕು. ವರದಿಯನ್ನು ನೋಡಿದ ನಂತರ ಅದು ತಿಳಿಯುತ್ತದೆ. ಅವರನ್ನು ಬಂಧಿಸಲಾಗಿದೆ ಎಂದು ಅಧಿಕೃತವಾಗಿ ನಮಗೆ (ಇಡಿಯಿಂದ) ತಿಳಿಸಲಾಗಿಲ್ಲ” ಎಂದಿದ್ದಾರೆ.

ಇದನ್ನೂ ಓದಿರಿ: ಕುಸ್ತಿ ಫೆಡರೇಶನ್‌ ಚುನಾವಣೆಯಲ್ಲಿ ಲೈಂಗಿಕ ಕಿರುಕುಳದ ಆರೋಪಿ ಬ್ರಿಜ್‌ಭೂಷಣ್ ಸಂಬಂಧಿಗಳು ಸ್ಪರ್ಧೆ ಮಾಡದಿರಲು ನಿರ್ಧಾರ: ವರದಿ

ತಮಿಳುನಾಡು ಕಾನೂನು ಸಚಿವ ಎಸ್.ರೇಗುಪತಿ ಕೂಡ ಪ್ರತಿಕ್ರಿಯಿಸಿ, “ಬಂಧನದ ಕಾರ್ಯವಿಧಾನಗಳನ್ನು ಅನುಸರಿಸಿಲ್ಲ” ಎಂದು ತಿಳಿಸಿದ್ದಾರೆ.

ಆಸ್ಪತ್ರೆಗೆ ತೆರಳಿದ ಡಿಎಂಕೆ ನಾಯಕರಲ್ಲಿ ಅವರು ಒಬ್ಬರಾಗಿದ್ದರು, ಆದರೆ ಬಾಲಾಜಿ ಅವರನ್ನು ಭೇಟಿ ಮಾಡಲು ಅವಕಾಶ ನೀಡಲಿಲ್ಲ ಎನ್ನಲಾಗಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಡಿ ಕ್ರಮವನ್ನು ಖಂಡಿಸಿದ್ದಾರೆ. “ಇದು ಕಿರುಕುಳ ಮತ್ತು ಬೆದರಿಕೆ ನೀಡುವ ಮೋದಿ ಸರ್ಕಾರದ ಲಜ್ಜೆಗೆಟ್ಟ ಪ್ರಯತ್ನಗಳು. ರಾಜಕೀಯ ವಿರೋಧಿಗಳ ವಿರುದ್ಧ ತನಿಖಾ ಸಂಸ್ಥೆಗಳ ಇಂತಹ ದುರುಪಯೋಗ ಮೋದಿ ಸರ್ಕಾರದ ವಿಶಿಷ್ಟ ಲಕ್ಷಣವಾಗಿದೆ” ಎಂದು ಟೀಕಿಸಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಪ್ರತಿಕ್ರಿಯಿಸಿ, “ಪ್ರತಿಪಕ್ಷಗಳನ್ನು ಮೌನಗೊಳಿಸಲು ಮತ್ತು ಫೆಡರಲಿಸಂನ ಮೇಲೆ ದಾಳಿ ಮಾಡಲು ಬಿಜೆಪಿ ನಡೆಸಿರುವ ಮತ್ತೊಂದು ಪ್ರಯತ್ನ ಇದಾಗಿದೆ” ಎಂದು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...