HomeಮುಖಪುಟE20 ಪೆಟ್ರೋಲ್ ಪ್ರಕರಣ : 'ಗ್ರ್ಯಾಂಡ್ ವಿಟಾರಾ' ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

- Advertisement -
- Advertisement -

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ ‘ಗ್ರಾಂಡ್ ವಿಟಾರಾ’ ಕಾರನ್ನು ನೀಡುವಂತೆ ಕಾರು ತಯಾರಿಕಾ ಕಂಪನಿ ಮಾರುತಿ ಸುಝುಕಿಗೆ ಆದೇಶಿಸಿದೆ. ಗ್ರಾಹಕನಿಗೆ ನೀಡುವ ಹೊಸ ಕಾರು ಕಡ್ಡಾಯವಾಗಿ E20 ಇಂಧನಕ್ಕೆ ಹೊಂದಿಕೊಳ್ಳುವಂತಹ (E20-compatible) ಇಂಜಿನ್ ಹೊಂದಿರಬೇಕು ಎಂದು ಗ್ರಾಹಕ ನ್ಯಾಯಾಲಯ ತನ್ನ ತೀರ್ಪಿನಲ್ಲಿ ಸ್ಪಷ್ಟಪಡಿಸಿದೆ.

ಈ ಆದೇಶವನ್ನು ಜುಲೈ 14 ರಂದು ಡಿಸಿಡಿಆರ್‌ಸಿ ಅಧ್ಯಕ್ಷ ಪ್ರಶಾಂತ್ ಕುಂದು ಮತ್ತು ಸದಸ್ಯ ಡಾ. ಆನಂದ್ ಎ. ವರ್ಗೀಸ್ ಅವರನ್ನೊಳಗೊಂಡ ಪೀಠ ಹೊರಡಿಸಿದೆ. ಮಾರುತಿ ಸುಝುಕಿ ಸಂಸ್ಥೆ ಮತ್ತು ಅದರ ಅಧಿಕೃತ ಡೀಲರ್ ಆದ ‘ನೆಕ್ಸಾ ಮ್ಯಾಗ್ನೆಟೋ’ ವಿರುದ್ಧ ಡಾ. ಪ್ರೇಮರಾಜ್ ದೇವಂಗನ್ ಅವರು ಸಲ್ಲಿಸಿದ್ದ ಗ್ರಾಹಕ ದೂರನ್ನು ಪುರಸ್ಕರಿಸಿ ಈ ತೀರ್ಪು ನೀಡಲಾಗಿದೆ.

ಆದೇಶ ಹೊರಡಿಸಿದ 45 ದಿನಗಳ ಒಳಗಾಗಿ ಡಾ. ದೇವಂಗನ್ ಅವರ ಗ್ರಾಂಡ್ ವಿಟಾರಾ ಕಾರಿನ ಬದಲಿಗೆ, ಅದೇ ಮಾಡೆಲ್‌ನ ಹಾಗೂ ಕಡ್ಡಾಯವಾಗಿ E20 ಇಂಧನಕ್ಕೆ ಹೊಂದಿಕೊಳ್ಳುವಂತಹ ಇಂಜಿನ್ ಹೊಂದಿರುವ ಹೊಸ ಕಾರನ್ನು ನೀಡಬೇಕು ಎಂದು ಗ್ರಾಹಕ ಆಯೋಗವು ಮಾರುತಿ ಸುಝುಕಿ ಮತ್ತು ನೆಕ್ಸಾ ಮ್ಯಾಗ್ನೆಟೋಗೆ ನಿರ್ದೇಶನ ನೀಡಿದೆ.

ಒಂದು ವೇಳೆ ನಿಗದಿತ ಅವಧಿಯಲ್ಲಿ ಕಾರನ್ನು ಬದಲಾಯಿಸಿಕೊಡದಿದ್ದರೆ, ಮಾರುತಿ ಸುಝುಕಿ ಮತ್ತು ನೆಕ್ಸಾ ಮ್ಯಾಗ್ನೆಟೋ ಡಾ. ದೇವಂಗನ್ ಅವರು 2023ರಲ್ಲಿ ಕಾರಿಗಾಗಿ ಪಾವತಿಸಿದ್ದ 18.29 ಲಕ್ಷ ರೂಪಾಯಿ ಮಾರಾಟದ ಮೊತ್ತವನ್ನು ಮಾತ್ರವಲ್ಲದೆ, ಅವರು ವಾಹನಕ್ಕಾಗಿ ಪಾವತಿಸಿದ್ದ 1,86,850 ರೂಪಾಯಿ ಆರ್‌ಟಿಒ ಶುಲ್ಕ ಮತ್ತು 34,644 ರೂಪಾಯಿ ವಿಮಾ ಪ್ರೀಮಿಯಂ ಮೊತ್ತವನ್ನು ಸಹ ಮರುಪಾವತಿಸಬೇಕು. ಈ ಒಟ್ಟು ಮೊತ್ತವು 20,50,494 ರೂಪಾಯಿ ಆಗಿರುತ್ತದೆ ಎಂದು ಆಯೋಗ ತಿಳಿಸಿದೆ.

ಯಾವ ಪರಿಸ್ಥಿತಿಯೇ ಇರಲಿ (ಕಾರು ಬದಲಾಯಿಸಿಕೊಡುವುದು ಅಥವಾ ಹಣ ಮರುಪಾವತಿಸುವುದು), ಗ್ರಾಹಕರಿಗೆ ಉಂಟಾದ ಮಾನಸಿಕ ತೊಂದರೆ ಮತ್ತು ಕಿರುಕುಳಕ್ಕೆ ಪರಿಹಾರವಾಗಿ 1 ಲಕ್ಷ ರೂಪಾಯಿ ಹಾಗೂ ನ್ಯಾಯಾಲಯದ ವೆಚ್ಚಕ್ಕಾಗಿ 10,000 ರೂಪಾಯಿ ಮೊತ್ತವನ್ನು ಪಾವತಿಸುವಂತೆ ಮಾರುತಿ ಸುಝುಕಿ ಮತ್ತು ನೆಕ್ಸಾ ಮ್ಯಾಗ್ನೆಟೋಗೆ ಆದೇಶಿಸಲಾಗಿದೆ. ಈ ಪಾವತಿಯನ್ನು ಸಹ ಆದೇಶದ ದಿನಾಂಕದಿಂದ 45 ದಿನಗಳ ಒಳಗಾಗಿ ಮಾಡಬೇಕಾಗಿದೆ.

ಡಾ. ದೇವಂಗನ್ ಅವರು ತಾವು 2023ರಲ್ಲಿ ಮಾರುತಿ ಗ್ರಾಂಡ್ ವಿಟಾರಾ ಐಇ ಸ್ಟ್ರಾಂಗ್ ಹೈಬ್ರಿಡ್ ಝೆಟಾ ಪ್ಲಸ್ ಕಾರನ್ನು ಖರೀದಿಸಿದ್ದಾಗಿ ಆಯೋಗಕ್ಕೆ ತಿಳಿಸಿದ್ದರು. ಆದರೆ, ಈ ಕಾರು E20 ಇಂಧನಕ್ಕೆ ಹೊಂದಿಕೊಳ್ಳುವ ತಂತ್ರಜ್ಞಾನ ಹೊಂದಿಲ್ಲದ ಕಾರಣ, ನಂತರದ ದಿನಗಳಲ್ಲಿ ಪದೇ ಪದೇ ತಾಂತ್ರಿಕ ಸಮಸ್ಯೆಗಳನ್ನು ಎದುರಿಸಬೇಕಾಯಿತು ಎಂದು ಆರೋಪಿಸಿದ್ದರು.

E20 ಪೆಟ್ರೋಲ್ ಎನ್ನುವುದು ಶೇಕಡಾ 20 ರಷ್ಟು ಎಥನಾಲ್ ಮತ್ತು ಶೇಕಡಾ 80 ರಷ್ಟು ಪೆಟ್ರೋಲ್‌ನ ಮಿಶ್ರಣವಾಗಿದೆ. ಇದು ಕಚ್ಚಾ ತೈಲ ಆಮದನ್ನು ಕಡಿಮೆ ಮಾಡಲು, ಮಾಲಿನ್ಯವನ್ನು ತಗ್ಗಿಸಲು ಮತ್ತು ದೇಶೀಯವಾಗಿ ಉತ್ಪಾದಿಸುವ ಜೈವಿಕ ಇಂಧನಗಳ ಬಳಕೆಯನ್ನು ಉತ್ತೇಜಿಸಲು ಭಾರತ ಸರ್ಕಾರ ರೂಪಿಸಿರುವ ಕಾರ್ಯತಂತ್ರದ ಪ್ರಮುಖ ಭಾಗವಾಗಿದೆ.

ಆದರೆ, E20 ಇಂಧನ ಪರಿಚಯವು ಒಂದು ಆತಂಕವನ್ನು ಹುಟ್ಟುಹಾಕಿದೆ. ವಿಶೇಷವಾಗಿ E20 ಇಂಧನಕ್ಕೆ ತಕ್ಕಂತೆ ವಿನ್ಯಾಸಗೊಳಿಸದ ಹಳೆಯ ವಾಹನಗಳಲ್ಲಿ ಹೊಂದಾಣಿಕೆಯ ಸಮಸ್ಯೆಗಳು ಇಂಧನ ವ್ಯವಸ್ಥೆ ತುಕ್ಕು ಹಿಡಿಯುವುದು (fuel system corrosion) ಮತ್ತು ಮೈಲೇಜ್ ಅಥವಾ ಇಂಧನ ದಕ್ಷತೆ ಕಡಿಮೆಯಾಗುವ (reduced fuel efficiency) ಸಾಧ್ಯತೆಗಳಿವೆ ಎಂಬ ಕಳಕಳಿ ವ್ಯಕ್ತವಾಗಿದೆ.

ವಾಹನ ತಯಾರಕರು ಈಗ ಹೆಚ್ಚೆಚ್ಚು E20-ಹೊಂದಾಣಿಕೆಯ ವಾಹನಗಳನ್ನು ಮಾರುಕಟ್ಟೆಗೆ ಪರಿಚಯಿಸುತ್ತಿದ್ದಾರೆ, ಆದರೆ 2023ಕ್ಕಿಂತ ಮೊದಲು ಮಾರಾಟವಾದ ವಾಹನಗಳ ಹೊಂದಾಣಿಕೆಯ ಬಗ್ಗೆ ಇನ್ನೂ ಹಲವು ಪ್ರಶ್ನೆಗಳು ಉಳಿದಿವೆ.

ಡಾ. ದೇವಂಗನ್ ಅವರ ಪ್ರಕರಣದಲ್ಲಿ, ಅವರು ಇಂಧನವನ್ನು ಸಂಪೂರ್ಣವಾಗಿ ಹೊರಹಾಕಿ (drain), ಇಂಧನ ಟ್ಯಾಂಕ್ ಅನ್ನು ಸ್ವಚ್ಛಗೊಳಿಸಿ, ನಂತರ ಮತ್ತೆ ಹೊಸ ಪೆಟ್ರೋಲ್ ಅನ್ನು ತುಂಬಿಸಿದ್ದೇನೆ. ಆದಾಗ್ಯೂ, ವಾಹನ ಪದೇ ಪದೇ ಮಧ್ಯದಲ್ಲೇ ನಿಂತುಹೋಗುವ ತಾಂತ್ರಿಕ ಸಮಸ್ಯೆಯನ್ನು ಎದುರಿಸುತ್ತಲೇ ಇತ್ತು ಹೇಳಿದ್ದರು.

ಇಂತಹ ಮರುಕಳಿಸುವ ದೋಷಗಳಿಂದಾಗಿ ಅವರು ತಮ್ಮ ವಾಹನವನ್ನು ಪದೇ ಪದೇ ರಿಪೇರಿಗಾಗಿ ಮಾರುತಿ ಸೇವಾ ಕೇಂದ್ರಕ್ಕೆ ತೆಗೆದುಕೊಂಡು ಹೋಗಬೇಕಾಯಿತು ಎಂದು ಗ್ರಾಹಕ ನ್ಯಾಯಾಲಯದ ಆದೇಶದಲ್ಲಿ ದಾಖಲಿಸಲಾಗಿದೆ.

ವಾಹನದಲ್ಲಿ ಕಾಣಿಸಿಕೊಂಡ ಸಮಸ್ಯೆಗೆ ಕಳಪೆ ಗುಣಮಟ್ಟದ ಇಂಧನ ಬಳಕೆಯೇ ಕಾರಣ ಎಂದು ಮಾರುತಿ ಸುಝುಕಿ ಮತ್ತು ನೆಕ್ಸಾ ಮ್ಯಾಗ್ನೆಟೋ ವಾದಿಸಿದ್ದರು. ಅಲ್ಲದೆ, ಹೊಸ E20 ಇಂಧನ ಸ್ನೇಹಿ ಮಾಡೆಲ್ ನೀಡಲು ನಿರಾಕರಿಸಿದ್ದರು. ಇದರಿಂದಾಗಿ ಡಾ. ದೇವಂಗನ್ ಅವರು ನ್ಯಾಯ ಮತ್ತು ಪರಿಹಾರಕ್ಕಾಗಿ ಗ್ರಾಹಕ ಆಯೋಗದ ಮೊರೆ ಹೋಗಿದ್ದರು.

ಜುಲೈ 14 ರಂದು ನೀಡಿದ ತನ್ನ ತೀರ್ಪಿನಲ್ಲಿ, ಮಾರುತಿ ಸುಝುಕಿ ಕಂಪನಿ ಮತ್ತು ಅದರ ಡೀಲರ್ ಗ್ರಾಹಕ ಸೇವೆ ಹಾಗೂ ನ್ಯಾಯೋಚಿತ ವ್ಯಾಪಾರ ಪದ್ಧತಿಯಲ್ಲಿ ಲೋಪ ಎಸಗಿದ್ದಾರೆ ಎಂಬುದನ್ನು ಸಾಬೀತುಪಡಿಸುವಲ್ಲಿ ಡಾ. ದೇವಂಗನ್ ಯಶಸ್ವಿಯಾಗಿದ್ದಾರೆ ಎಂದು ಗ್ರಾಹಕ ಆಯೋಗವು ತೀರ್ಪು ನೀಡಿದೆ.

ಅದರಂತೆ, ಡಾ. ದೇವಂಗನ್ ಅವರಿಗೆ ಸೂಕ್ತ ಪರಿಹಾರವನ್ನು ನೀಡಬೇಕು ಮತ್ತು ಅವರ ಕಾರನ್ನು ಬದಲಾಯಿಸಿಕೊಡಬೇಕು ಅಥವಾ ಅವರು ಕಾರಿನ ಖರೀದಿಗೆ ಸಂಬಂಧಿಸಿದಂತೆ ಭರಿಸಿದ ಸಂಪೂರ್ಣ ವೆಚ್ಚವನ್ನು ಮರುಪಾವತಿಸಬೇಕು ಎಂದು ಆದೇಶಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...