Homeಮುಖಪುಟಈ ಹಿಂದೆ ಜೆಡಿಯು, ಶಿವಸೇನೆ ಮೋದಿಗೆ ಮಿತ್ರರು, ಈಗ ಭ್ರಷ್ಟರು: ಪ್ರಧಾನಿಗೆ ಸಿಬಲ್‌ ತಿರುಗೇಟು

ಈ ಹಿಂದೆ ಜೆಡಿಯು, ಶಿವಸೇನೆ ಮೋದಿಗೆ ಮಿತ್ರರು, ಈಗ ಭ್ರಷ್ಟರು: ಪ್ರಧಾನಿಗೆ ಸಿಬಲ್‌ ತಿರುಗೇಟು

- Advertisement -
- Advertisement -

ಪ್ರತಿಪಕ್ಷಗಳು ಒಗ್ಗಟ್ಟು ಪ್ರದರ್ಶಿಸುತ್ತಿರುವುದನ್ನು ಟೀಕಿಸಿದ ಪ್ರಧಾನಿ ಮೋದಿ, ‘ಭ್ರಷ್ಟರು ಒಂದೇ ವೇದಿಕೆಯಲ್ಲಿ ಬರುತ್ತಿದ್ದಾರೆ’ ಎಂದು ಹೇಳಿದ್ದಾರೆ. ಈ ಹೇಳಿಕೆಗೆ ಬುಧವಾರ ತಿರುಗೇಟು ನೀಡಿರುವ ರಾಜ್ಯಸಭಾ ಸಂಸದ ಕಪಿಲ್‌ ಸಿಬಲ್‌ ಅವರು, ಜೆಡಿಯು ಮತ್ತು ಶಿವಸೇನೆಯಂತಹ (ಉದ್ಧವ್‌ ಠಾಕ್ರೆ ಬಣ) ಪಕ್ಷಗಳು ಒಂದು ಸಮಯದಲ್ಲಿ ಮೋದಿಯವರ ಮಿತ್ರರಾಗಿದ್ದರು, ಈಗ ಭ್ರಷ್ಟರಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಮಾರ್ಚ್ 28ರಂದು ಬಿಜೆಪಿ ಪ್ರಧಾನ ಕಚೇರಿಯ ವಿಸ್ತರಣೆಯನ್ನು ಉದ್ಘಾಟಿಸಿದ ನಂತರ ಮಾತನಾಡಿದ್ದ ಪ್ರಧಾನಿ ಮೋದಿ ಅವರು, ”ಭ್ರಷ್ಟಚಾರದ ವಿರುದ್ಧ ತಮ್ಮ ಸರ್ಕಾರ ಅಭಿಯಾನವನ್ನು ಕೈಗೊಂಡಿವುದರಿಂದ ಬಿಜೆಪಿ ವಿರುದ್ಧ ವಿರೋಧ ಪಕ್ಷಗಳು ಒಗ್ಗೂಡುತ್ತಿವೆ, ದೇಶದ ಬೆಳವಣಿಗೆಯನ್ನು ತಡೆಯಲು ‘ಭಾರತ ವಿರೋಧಿ’ ಶಕ್ತಿಗಳು ಸಾಂವಿಧಾನಿಕ ಸಂಸ್ಥೆಗಳ ಮೇಲೆ ದಾಳಿ ಮಾಡುತ್ತಿವೆ. ಸ್ವತಂತ್ರ ಭಾರತದ ಇತಿಹಾಸದಲ್ಲಿ ಹಿಂದೆಂದೂ ಭ್ರಷ್ಟಾಚಾರದ ವಿರುದ್ಧ ಇಂತಹ ದೊಡ್ಡ ಅಭಿಯಾನ ನಡೆದು ಭ್ರಷ್ಟರನ್ನು ಬೆಚ್ಚಿ ಬೀಳಿಸಿರಲಿಲ್ಲ. ಭ್ರಷ್ಟಾಚಾರದಲ್ಲಿ ತೊಡಗಿರುವವರೆಲ್ಲರೂ ಒಂದೇ ವೇದಿಕೆಗೆ ಬಂದಿದ್ದಾರೆ” ಎಂದು ಮೋದಿ ಹೇಳಿದ್ದರು.

ನರೇಂದ್ರ ಮೋದಿ ಅವರ ಮಾತಿಗೆ ಪ್ರತಿಕ್ರಿಯಿಸಿರುವ ಸಿಬಲ್, ”ಪ್ರಧಾನಿಯವರೇ, ಪ್ರತಿಪಕ್ಷಗಳು ಈಗ ಒಂದಾಗಿರುವುದನ್ನು ನೀವು ಭ್ರಷ್ಟರೆಲ್ಲಾ ಒಂದೇ ವೇದಿಕೆಯಲ್ಲಿ ಸೇರಿದ್ದಾರೆ ಎಂದು ಹೇಳುತ್ತಿದ್ದೀರಿ, ಆದರೆ ಶಿವಸೇನೆ, ಅಕಾಲಿ ದಳ, ಜೆಡಿಯು, ಪಿಡಿಪಿ, ಬಿಎಸ್‌ಪಿ, ಒಂದು ಕಾಲದಲ್ಲಿ ನಿಮ್ಮ ಮಿತ್ರಪಕ್ಷಗಳಾಗಿದ್ದವು ಮತ್ತು ನೀವು ಅವರೊಂದಿಗೆ ಸರ್ಕಾರವನ್ನು ರಚಿಸಿದ್ದೀರಿ! ಈಗ ಅವರು ಭ್ರಷ್ಟರಾಗಿದ್ದಾರೆ, ಆಗ ಅವರು ಭ್ರಷ್ಟರಾಗಿರಲಿಲ್ಲವೇ? ಎಂದು ಮಾಜಿ ಕೇಂದ್ರ ಸಚಿವರು ಪ್ರಶ್ನಿಸಿದ್ದಾರೆ.

ರಾಹುಲ್ ಗಾಂಧಿಗೆ 19 ಪಕ್ಷಗಳ ಬೆಂಬಲ:

ಕಾಂಗ್ರೆಸ್ ನೇತೃತ್ವದಲ್ಲಿ ದೇಶಾದ್ಯಂತ ”ಪ್ರಜಾತಂತ್ರ ಉಳಿಸಿ ಆಂದೋಲನ” ಆರಂಭಿಸುತ್ತಿದ್ದು, ಇದಕ್ಕೆ 19 ವಿರೋಧ ಪಕ್ಷಗಳು ಬೆಂಬಲ ನೀಡಿವೆ. ಸಾವರ್ಕರ್ ವಿಷಯದಲ್ಲಿ ಉದ್ಧವ್ ಠಾಕ್ರೆಯವರಿಗೆ ಭಿನ್ನಾಭಿಪ್ರಾಯವಿದ್ದರೂ ಸಹ ಅವರು ಬೆಂಬಲ ನೀಡಿದ್ದಾರೆ. ನಾವೆಲ್ಲ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ‘ಭ್ರಷ್ಟ ಶಕ್ತಿಗಳು ಒಂದೇ ವೇದಿಕೆಗೆ ಬರುತ್ತಿವೆ’: ವಿಪಕ್ಷಗಳ ಒಗ್ಗಟ್ಟಿಗೆ ಮೋದಿ ಕುಹಕ

ಈ ಬಗ್ಗೆ ಟ್ವೀಟ್ ಮಾಡಿದ್ದ ಕಾಂಗ್ರೆಸ್ ಮುಖಂಡ ಜೈರಾಂ ರಮೇಶ್ ಅವರು, ”ನಮ್ಮ ಹೋರಾಟವಿರುವುದು ರಾಹುಲ್ ಗಾಂಧಿಯನ್ನು ಉಳಿಸುವುದಕ್ಕಾಗಿ ಅಲ್ಲ. ಬದಲಿಗೆ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸುವುದಕ್ಕಾಗಿ. ಅದಾನಿ ಮತ್ತು ನರೇಂದ್ರ ಮೋದಿ ನಡುವೆ ಏನು ಸಂಬಂಧ ಎಂಬುದು ನಮ್ಮ ಪ್ರಶ್ನೆಯಾಗಿದೆ. ಜಂಟಿ ಸಂಸದೀಯ ತನಿಖೆಗೆ ಸರ್ಕಾರ ಏಕೆ ಹೆದರುತ್ತಿದೆ?” ಎಂದು ಪ್ರಶ್ನಿಸಿದ್ದಾರೆ.

”ರಾಹುಲ್ ವಿರುದ್ಧ ಬಂದಿರುವ ತೀರ್ಪಿನ ಬಗ್ಗೆ ನಮ್ಮ ಕಾನೂನು ತಂಡವು ಕೆಲಸ ಮಾಡುತ್ತಿದ್ದು, ಸೂರತ್ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುತ್ತೇವೆ. ಒಂದು ತಿಂಗಳ ಕಾಲಾವಕಾಶವಿರುವುದರಿಂದ ಅಷ್ಟರಲ್ಲಿ ಮೇಲ್ಮನವಿ ಸಲ್ಲಿಸುತ್ತೇವೆ” ಎಂದು ಜೈರಾಂ ರಮೇಶ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...