Homeಮುಖಪುಟಈ ಹಿಂದೆ ಜೆಡಿಯು, ಶಿವಸೇನೆ ಮೋದಿಗೆ ಮಿತ್ರರು, ಈಗ ಭ್ರಷ್ಟರು: ಪ್ರಧಾನಿಗೆ ಸಿಬಲ್‌ ತಿರುಗೇಟು

ಈ ಹಿಂದೆ ಜೆಡಿಯು, ಶಿವಸೇನೆ ಮೋದಿಗೆ ಮಿತ್ರರು, ಈಗ ಭ್ರಷ್ಟರು: ಪ್ರಧಾನಿಗೆ ಸಿಬಲ್‌ ತಿರುಗೇಟು

- Advertisement -
- Advertisement -

ಪ್ರತಿಪಕ್ಷಗಳು ಒಗ್ಗಟ್ಟು ಪ್ರದರ್ಶಿಸುತ್ತಿರುವುದನ್ನು ಟೀಕಿಸಿದ ಪ್ರಧಾನಿ ಮೋದಿ, ‘ಭ್ರಷ್ಟರು ಒಂದೇ ವೇದಿಕೆಯಲ್ಲಿ ಬರುತ್ತಿದ್ದಾರೆ’ ಎಂದು ಹೇಳಿದ್ದಾರೆ. ಈ ಹೇಳಿಕೆಗೆ ಬುಧವಾರ ತಿರುಗೇಟು ನೀಡಿರುವ ರಾಜ್ಯಸಭಾ ಸಂಸದ ಕಪಿಲ್‌ ಸಿಬಲ್‌ ಅವರು, ಜೆಡಿಯು ಮತ್ತು ಶಿವಸೇನೆಯಂತಹ (ಉದ್ಧವ್‌ ಠಾಕ್ರೆ ಬಣ) ಪಕ್ಷಗಳು ಒಂದು ಸಮಯದಲ್ಲಿ ಮೋದಿಯವರ ಮಿತ್ರರಾಗಿದ್ದರು, ಈಗ ಭ್ರಷ್ಟರಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಮಾರ್ಚ್ 28ರಂದು ಬಿಜೆಪಿ ಪ್ರಧಾನ ಕಚೇರಿಯ ವಿಸ್ತರಣೆಯನ್ನು ಉದ್ಘಾಟಿಸಿದ ನಂತರ ಮಾತನಾಡಿದ್ದ ಪ್ರಧಾನಿ ಮೋದಿ ಅವರು, ”ಭ್ರಷ್ಟಚಾರದ ವಿರುದ್ಧ ತಮ್ಮ ಸರ್ಕಾರ ಅಭಿಯಾನವನ್ನು ಕೈಗೊಂಡಿವುದರಿಂದ ಬಿಜೆಪಿ ವಿರುದ್ಧ ವಿರೋಧ ಪಕ್ಷಗಳು ಒಗ್ಗೂಡುತ್ತಿವೆ, ದೇಶದ ಬೆಳವಣಿಗೆಯನ್ನು ತಡೆಯಲು ‘ಭಾರತ ವಿರೋಧಿ’ ಶಕ್ತಿಗಳು ಸಾಂವಿಧಾನಿಕ ಸಂಸ್ಥೆಗಳ ಮೇಲೆ ದಾಳಿ ಮಾಡುತ್ತಿವೆ. ಸ್ವತಂತ್ರ ಭಾರತದ ಇತಿಹಾಸದಲ್ಲಿ ಹಿಂದೆಂದೂ ಭ್ರಷ್ಟಾಚಾರದ ವಿರುದ್ಧ ಇಂತಹ ದೊಡ್ಡ ಅಭಿಯಾನ ನಡೆದು ಭ್ರಷ್ಟರನ್ನು ಬೆಚ್ಚಿ ಬೀಳಿಸಿರಲಿಲ್ಲ. ಭ್ರಷ್ಟಾಚಾರದಲ್ಲಿ ತೊಡಗಿರುವವರೆಲ್ಲರೂ ಒಂದೇ ವೇದಿಕೆಗೆ ಬಂದಿದ್ದಾರೆ” ಎಂದು ಮೋದಿ ಹೇಳಿದ್ದರು.

ನರೇಂದ್ರ ಮೋದಿ ಅವರ ಮಾತಿಗೆ ಪ್ರತಿಕ್ರಿಯಿಸಿರುವ ಸಿಬಲ್, ”ಪ್ರಧಾನಿಯವರೇ, ಪ್ರತಿಪಕ್ಷಗಳು ಈಗ ಒಂದಾಗಿರುವುದನ್ನು ನೀವು ಭ್ರಷ್ಟರೆಲ್ಲಾ ಒಂದೇ ವೇದಿಕೆಯಲ್ಲಿ ಸೇರಿದ್ದಾರೆ ಎಂದು ಹೇಳುತ್ತಿದ್ದೀರಿ, ಆದರೆ ಶಿವಸೇನೆ, ಅಕಾಲಿ ದಳ, ಜೆಡಿಯು, ಪಿಡಿಪಿ, ಬಿಎಸ್‌ಪಿ, ಒಂದು ಕಾಲದಲ್ಲಿ ನಿಮ್ಮ ಮಿತ್ರಪಕ್ಷಗಳಾಗಿದ್ದವು ಮತ್ತು ನೀವು ಅವರೊಂದಿಗೆ ಸರ್ಕಾರವನ್ನು ರಚಿಸಿದ್ದೀರಿ! ಈಗ ಅವರು ಭ್ರಷ್ಟರಾಗಿದ್ದಾರೆ, ಆಗ ಅವರು ಭ್ರಷ್ಟರಾಗಿರಲಿಲ್ಲವೇ? ಎಂದು ಮಾಜಿ ಕೇಂದ್ರ ಸಚಿವರು ಪ್ರಶ್ನಿಸಿದ್ದಾರೆ.

ರಾಹುಲ್ ಗಾಂಧಿಗೆ 19 ಪಕ್ಷಗಳ ಬೆಂಬಲ:

ಕಾಂಗ್ರೆಸ್ ನೇತೃತ್ವದಲ್ಲಿ ದೇಶಾದ್ಯಂತ ”ಪ್ರಜಾತಂತ್ರ ಉಳಿಸಿ ಆಂದೋಲನ” ಆರಂಭಿಸುತ್ತಿದ್ದು, ಇದಕ್ಕೆ 19 ವಿರೋಧ ಪಕ್ಷಗಳು ಬೆಂಬಲ ನೀಡಿವೆ. ಸಾವರ್ಕರ್ ವಿಷಯದಲ್ಲಿ ಉದ್ಧವ್ ಠಾಕ್ರೆಯವರಿಗೆ ಭಿನ್ನಾಭಿಪ್ರಾಯವಿದ್ದರೂ ಸಹ ಅವರು ಬೆಂಬಲ ನೀಡಿದ್ದಾರೆ. ನಾವೆಲ್ಲ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ‘ಭ್ರಷ್ಟ ಶಕ್ತಿಗಳು ಒಂದೇ ವೇದಿಕೆಗೆ ಬರುತ್ತಿವೆ’: ವಿಪಕ್ಷಗಳ ಒಗ್ಗಟ್ಟಿಗೆ ಮೋದಿ ಕುಹಕ

ಈ ಬಗ್ಗೆ ಟ್ವೀಟ್ ಮಾಡಿದ್ದ ಕಾಂಗ್ರೆಸ್ ಮುಖಂಡ ಜೈರಾಂ ರಮೇಶ್ ಅವರು, ”ನಮ್ಮ ಹೋರಾಟವಿರುವುದು ರಾಹುಲ್ ಗಾಂಧಿಯನ್ನು ಉಳಿಸುವುದಕ್ಕಾಗಿ ಅಲ್ಲ. ಬದಲಿಗೆ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸುವುದಕ್ಕಾಗಿ. ಅದಾನಿ ಮತ್ತು ನರೇಂದ್ರ ಮೋದಿ ನಡುವೆ ಏನು ಸಂಬಂಧ ಎಂಬುದು ನಮ್ಮ ಪ್ರಶ್ನೆಯಾಗಿದೆ. ಜಂಟಿ ಸಂಸದೀಯ ತನಿಖೆಗೆ ಸರ್ಕಾರ ಏಕೆ ಹೆದರುತ್ತಿದೆ?” ಎಂದು ಪ್ರಶ್ನಿಸಿದ್ದಾರೆ.

”ರಾಹುಲ್ ವಿರುದ್ಧ ಬಂದಿರುವ ತೀರ್ಪಿನ ಬಗ್ಗೆ ನಮ್ಮ ಕಾನೂನು ತಂಡವು ಕೆಲಸ ಮಾಡುತ್ತಿದ್ದು, ಸೂರತ್ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುತ್ತೇವೆ. ಒಂದು ತಿಂಗಳ ಕಾಲಾವಕಾಶವಿರುವುದರಿಂದ ಅಷ್ಟರಲ್ಲಿ ಮೇಲ್ಮನವಿ ಸಲ್ಲಿಸುತ್ತೇವೆ” ಎಂದು ಜೈರಾಂ ರಮೇಶ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...