Homeಮುಖಪುಟಈ ಹಿಂದೆ ಜೆಡಿಯು, ಶಿವಸೇನೆ ಮೋದಿಗೆ ಮಿತ್ರರು, ಈಗ ಭ್ರಷ್ಟರು: ಪ್ರಧಾನಿಗೆ ಸಿಬಲ್‌ ತಿರುಗೇಟು

ಈ ಹಿಂದೆ ಜೆಡಿಯು, ಶಿವಸೇನೆ ಮೋದಿಗೆ ಮಿತ್ರರು, ಈಗ ಭ್ರಷ್ಟರು: ಪ್ರಧಾನಿಗೆ ಸಿಬಲ್‌ ತಿರುಗೇಟು

- Advertisement -
- Advertisement -

ಪ್ರತಿಪಕ್ಷಗಳು ಒಗ್ಗಟ್ಟು ಪ್ರದರ್ಶಿಸುತ್ತಿರುವುದನ್ನು ಟೀಕಿಸಿದ ಪ್ರಧಾನಿ ಮೋದಿ, ‘ಭ್ರಷ್ಟರು ಒಂದೇ ವೇದಿಕೆಯಲ್ಲಿ ಬರುತ್ತಿದ್ದಾರೆ’ ಎಂದು ಹೇಳಿದ್ದಾರೆ. ಈ ಹೇಳಿಕೆಗೆ ಬುಧವಾರ ತಿರುಗೇಟು ನೀಡಿರುವ ರಾಜ್ಯಸಭಾ ಸಂಸದ ಕಪಿಲ್‌ ಸಿಬಲ್‌ ಅವರು, ಜೆಡಿಯು ಮತ್ತು ಶಿವಸೇನೆಯಂತಹ (ಉದ್ಧವ್‌ ಠಾಕ್ರೆ ಬಣ) ಪಕ್ಷಗಳು ಒಂದು ಸಮಯದಲ್ಲಿ ಮೋದಿಯವರ ಮಿತ್ರರಾಗಿದ್ದರು, ಈಗ ಭ್ರಷ್ಟರಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಮಾರ್ಚ್ 28ರಂದು ಬಿಜೆಪಿ ಪ್ರಧಾನ ಕಚೇರಿಯ ವಿಸ್ತರಣೆಯನ್ನು ಉದ್ಘಾಟಿಸಿದ ನಂತರ ಮಾತನಾಡಿದ್ದ ಪ್ರಧಾನಿ ಮೋದಿ ಅವರು, ”ಭ್ರಷ್ಟಚಾರದ ವಿರುದ್ಧ ತಮ್ಮ ಸರ್ಕಾರ ಅಭಿಯಾನವನ್ನು ಕೈಗೊಂಡಿವುದರಿಂದ ಬಿಜೆಪಿ ವಿರುದ್ಧ ವಿರೋಧ ಪಕ್ಷಗಳು ಒಗ್ಗೂಡುತ್ತಿವೆ, ದೇಶದ ಬೆಳವಣಿಗೆಯನ್ನು ತಡೆಯಲು ‘ಭಾರತ ವಿರೋಧಿ’ ಶಕ್ತಿಗಳು ಸಾಂವಿಧಾನಿಕ ಸಂಸ್ಥೆಗಳ ಮೇಲೆ ದಾಳಿ ಮಾಡುತ್ತಿವೆ. ಸ್ವತಂತ್ರ ಭಾರತದ ಇತಿಹಾಸದಲ್ಲಿ ಹಿಂದೆಂದೂ ಭ್ರಷ್ಟಾಚಾರದ ವಿರುದ್ಧ ಇಂತಹ ದೊಡ್ಡ ಅಭಿಯಾನ ನಡೆದು ಭ್ರಷ್ಟರನ್ನು ಬೆಚ್ಚಿ ಬೀಳಿಸಿರಲಿಲ್ಲ. ಭ್ರಷ್ಟಾಚಾರದಲ್ಲಿ ತೊಡಗಿರುವವರೆಲ್ಲರೂ ಒಂದೇ ವೇದಿಕೆಗೆ ಬಂದಿದ್ದಾರೆ” ಎಂದು ಮೋದಿ ಹೇಳಿದ್ದರು.

ನರೇಂದ್ರ ಮೋದಿ ಅವರ ಮಾತಿಗೆ ಪ್ರತಿಕ್ರಿಯಿಸಿರುವ ಸಿಬಲ್, ”ಪ್ರಧಾನಿಯವರೇ, ಪ್ರತಿಪಕ್ಷಗಳು ಈಗ ಒಂದಾಗಿರುವುದನ್ನು ನೀವು ಭ್ರಷ್ಟರೆಲ್ಲಾ ಒಂದೇ ವೇದಿಕೆಯಲ್ಲಿ ಸೇರಿದ್ದಾರೆ ಎಂದು ಹೇಳುತ್ತಿದ್ದೀರಿ, ಆದರೆ ಶಿವಸೇನೆ, ಅಕಾಲಿ ದಳ, ಜೆಡಿಯು, ಪಿಡಿಪಿ, ಬಿಎಸ್‌ಪಿ, ಒಂದು ಕಾಲದಲ್ಲಿ ನಿಮ್ಮ ಮಿತ್ರಪಕ್ಷಗಳಾಗಿದ್ದವು ಮತ್ತು ನೀವು ಅವರೊಂದಿಗೆ ಸರ್ಕಾರವನ್ನು ರಚಿಸಿದ್ದೀರಿ! ಈಗ ಅವರು ಭ್ರಷ್ಟರಾಗಿದ್ದಾರೆ, ಆಗ ಅವರು ಭ್ರಷ್ಟರಾಗಿರಲಿಲ್ಲವೇ? ಎಂದು ಮಾಜಿ ಕೇಂದ್ರ ಸಚಿವರು ಪ್ರಶ್ನಿಸಿದ್ದಾರೆ.

ರಾಹುಲ್ ಗಾಂಧಿಗೆ 19 ಪಕ್ಷಗಳ ಬೆಂಬಲ:

ಕಾಂಗ್ರೆಸ್ ನೇತೃತ್ವದಲ್ಲಿ ದೇಶಾದ್ಯಂತ ”ಪ್ರಜಾತಂತ್ರ ಉಳಿಸಿ ಆಂದೋಲನ” ಆರಂಭಿಸುತ್ತಿದ್ದು, ಇದಕ್ಕೆ 19 ವಿರೋಧ ಪಕ್ಷಗಳು ಬೆಂಬಲ ನೀಡಿವೆ. ಸಾವರ್ಕರ್ ವಿಷಯದಲ್ಲಿ ಉದ್ಧವ್ ಠಾಕ್ರೆಯವರಿಗೆ ಭಿನ್ನಾಭಿಪ್ರಾಯವಿದ್ದರೂ ಸಹ ಅವರು ಬೆಂಬಲ ನೀಡಿದ್ದಾರೆ. ನಾವೆಲ್ಲ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ‘ಭ್ರಷ್ಟ ಶಕ್ತಿಗಳು ಒಂದೇ ವೇದಿಕೆಗೆ ಬರುತ್ತಿವೆ’: ವಿಪಕ್ಷಗಳ ಒಗ್ಗಟ್ಟಿಗೆ ಮೋದಿ ಕುಹಕ

ಈ ಬಗ್ಗೆ ಟ್ವೀಟ್ ಮಾಡಿದ್ದ ಕಾಂಗ್ರೆಸ್ ಮುಖಂಡ ಜೈರಾಂ ರಮೇಶ್ ಅವರು, ”ನಮ್ಮ ಹೋರಾಟವಿರುವುದು ರಾಹುಲ್ ಗಾಂಧಿಯನ್ನು ಉಳಿಸುವುದಕ್ಕಾಗಿ ಅಲ್ಲ. ಬದಲಿಗೆ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸುವುದಕ್ಕಾಗಿ. ಅದಾನಿ ಮತ್ತು ನರೇಂದ್ರ ಮೋದಿ ನಡುವೆ ಏನು ಸಂಬಂಧ ಎಂಬುದು ನಮ್ಮ ಪ್ರಶ್ನೆಯಾಗಿದೆ. ಜಂಟಿ ಸಂಸದೀಯ ತನಿಖೆಗೆ ಸರ್ಕಾರ ಏಕೆ ಹೆದರುತ್ತಿದೆ?” ಎಂದು ಪ್ರಶ್ನಿಸಿದ್ದಾರೆ.

”ರಾಹುಲ್ ವಿರುದ್ಧ ಬಂದಿರುವ ತೀರ್ಪಿನ ಬಗ್ಗೆ ನಮ್ಮ ಕಾನೂನು ತಂಡವು ಕೆಲಸ ಮಾಡುತ್ತಿದ್ದು, ಸೂರತ್ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುತ್ತೇವೆ. ಒಂದು ತಿಂಗಳ ಕಾಲಾವಕಾಶವಿರುವುದರಿಂದ ಅಷ್ಟರಲ್ಲಿ ಮೇಲ್ಮನವಿ ಸಲ್ಲಿಸುತ್ತೇವೆ” ಎಂದು ಜೈರಾಂ ರಮೇಶ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...