Homeಮುಖಪುಟಮುಂಚೆ 'ಅಬ್ಬ ಜಾನ್' ಎನ್ನುವವರಿಗೆ ಮಾತ್ರ ರೇಷನ್ ಸಿಗುತ್ತಿತ್ತು: ಯುಪಿ ಸಿಎಂ ಆದಿತ್ಯನಾಥ್ ಹೇಳಿಕೆಗೆ ಭಾರೀ...

ಮುಂಚೆ ‘ಅಬ್ಬ ಜಾನ್’ ಎನ್ನುವವರಿಗೆ ಮಾತ್ರ ರೇಷನ್ ಸಿಗುತ್ತಿತ್ತು: ಯುಪಿ ಸಿಎಂ ಆದಿತ್ಯನಾಥ್ ಹೇಳಿಕೆಗೆ ಭಾರೀ ವಿರೋಧ – ದೂರು ದಾಖಲು

ಟ್ವಿಟರ್‌ನಲ್ಲಿ ಹಲವು ಜನರು ತಮ್ಮ ತಂದೆಯ ಚಿತ್ರವನ್ನು ಪೋಸ್ಟ್ ಮಾಡಿ ಇವರು ನನ್ನ ಅಬ್ಬ ಜಾನ್ ಎಂದು ಬರೆದು ಹಮಾರೆ ಅಬ್ಬ ಜಾನ್ ಎಂದು ಟ್ರೆಂಡ್ ಮಾಡುತ್ತಿದ್ದಾರೆ.

- Advertisement -
- Advertisement -

ಸದಾ ಪ್ರಚೋದಾತ್ಮಕ ಹೇಳಿಕೆಗಳನ್ನು ನೀಡಿ ವಿವಾದಕ್ಕೆ ಕಾರಣವಾಗುವ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಈಗ ಮತ್ತೊಂದು ಅಂತಹುದೇ ಹೇಳಿಕೆ ನೀಡಿ ವಿವಾದವೊಂದನ್ನು ಮೈಮೆಲೆ ಎಳೆದುಕೊಂಡಿದ್ದಾರೆ. 2017ಕ್ಕೆ ಮೊದಲು ‘ಅಬ್ಬ ಜಾನ್’ ಎನ್ನುವವರಿಗೆ ಮಾತ್ರ ರೇಷನ್ ಸಿಗುತ್ತಿತ್ತು ಎಂಬ ಅವರ ಕೋಮು ಪ್ರಚೋದನಾ ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಬಿಹಾರದಲ್ಲಿ ಅವರ ವಿರುದ್ಧ ದೂರು ಸಹ ದಾಖಲಾಗಿದೆ.

ಉತ್ತರ ಪ್ರದೇಶದ ಖುಷಿ ನಗರದಲ್ಲಿ ಆಯೋಜಿಸಿದ್ದ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ಯೋಗಿ ಆದಿತ್ಯನಾಥ್ “2017ಕ್ಕೆ ಮುಂಚೆ ನಿಮಗೆ ರೇಷನ್ ಸಿಗುತ್ತಿತ್ತೆ? ಆಗ ಕೇವಲ ಅಬ್ಬ ಜಾನ್ (ಸಾಮಾನ್ಯವಾಗಿ ಮುಸ್ಲಿಂ ಸಮುದಾಯದಲ್ಲಿ ತಂದೆಯನ್ನು ಕರೆಯುವ ಪರಿ) ಎಂದು ಕರೆಯುವವರು ಎಲ್ಲಾ ರೇಷನ್ ತಿಂದುಹಾಕುತ್ತಿದ್ದರು. ಆಗ ಶ್ರೀನಗರಕ್ಕೆ ನೀಡಲಾಗುವ ಪಡಿತರವು ನೇಪಾಳ ಮತ್ತು ಬಾಂಗ್ಲಾದೇಶಕ್ಕೆ ಹೋಗಿತ್ತು” ಎಂದಿದ್ದಾರೆ.

2017ರವರೆಗೆ ಇದ್ದ ಅಖಿಲೇಶ್ ಯಾದವ್ ನೇತೃತ್ವದ ಸರ್ಕಾರವನ್ನು ಸಹ ಗುರಿಯಾಗಿಸಿ ಟೀಕಿಸಿರುವ ಆದಿತ್ಯನಾಥ್ “ನಮ್ಮ ಸರ್ಕಾರದಲ್ಲಿ ಬಡವರ ಪಾಲಿನ ರೇಷನ್ ಕದಿಯುವವರನ್ನು ಜೈಲಿಗೆ ಅಟ್ಟುತ್ತೇವೆ” ಎಂದಿದ್ದಾರೆ.

ಯೋಗಿ ಆದಿತ್ಯನಾಥ್‌ರವರ ಈ ಹೇಳಿಕೆ ಭಾರೀ ಕೋಲಾಹಲಕ್ಕೆ ಕಾರಣವಾಗಿದೆ. ಅಬ್ಬ ಜಾನ್ ಹೇಳಿಕೆಯ ಮೂಲಕ ಯೋಗಿ ಆದಿತ್ಯನಾಥ್ ಮುಸ್ಲಿಂ ಸಮುದಾಯವನ್ನು ಹೀಯಾಳಿದ್ದಾರೆ ಎಂದು ಆರೋಪಿಸಿ ಬಿಹಾರದ ಮುಜಾಫರ್‌ಪುರ ಜಿಲ್ಲಾ ನ್ಯಾಯಾಲಯದಲ್ಲಿ ತಮನ್ನಾ ಹಶ್ಮಿ ಎಂಬ ಸಾಮಾಜಿಕ ಕಾರ್ಯಕರ್ತರು ದೂರು ದಾಖಲಿಸಿದ್ದಾರೆ.

ಈ ಹಿಂದೆ ಹಲವು ರಾಜಕಾರಣಿಗಳ ವಿವಾದಾತ್ಮಕ ಹೇಳಿಕೆಗಳ ವಿರುದ್ಧ ದೂರು ನೀಡಿರುವ ಹಶ್ಮಿಯವರು ‘ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಯೋಗಿ ಆದಿತ್ಯನಾಥ್ ವಿರುದ್ಧ ಐಪಿಸಿ ಸೆಕ್ಷನ್ ಅಡಿಯಲ್ಲಿ ವಿಚಾರಣೆ ನಡೆಸಬೇಕೆಂದು’ ಕೋರಿದ್ದಾರೆ.

ಮುಸ್ಲಿಂ ಸಮುದಾಯದ ವಿರುದ್ಧ ಕೋಮುವಾದಿ ಹೇಳಿಕೆಗಳು, ದ್ವೇಷಭಾಷಣ ಬಿಟ್ಟು ಬಿಜೆಪಿ ಎಂದೂ ಜನರ ಸಮಸ್ಯೆಗಳನ್ನು ಮುಂದಿಟ್ಟು ಚುನಾವಣೆ ಎದುರಿಸಿಲ್ಲ. ಮುಂದಿನ ವರ್ಷ ಚುನಾವಣೆಯಿರುವುದರಿಂದ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಓಮರ್ ಅಬ್ದುಲ್ಲಾ ಕಿಡಿಕಾರಿದ್ದಾರೆ.

ಟ್ವಿಟರ್‌ನಲ್ಲಿಯೂ ಯೋಗಿ ಆದಿತ್ಯನಾಥ್ ಹೇಳಿಕೆ ಖಂಡಿಸಿ “ನಾನು ನನ್ನ ತಂದೆಯನ್ನು ಅಬ್ಬ ಜಾನ್ ಎಂದೇ ಕರೆಯುತ್ತೇನೆ” ಎಂಬ ಅಭಿಯಾನ ಆರಂಭವಾಗಿದೆ. ಎಲ್ಲಾ ಸಮುದಾಯದ ಬಹಳಷ್ಟು ಜನರು ತಮ್ಮ ತಂದೆಯ ಫೋಟೊವನ್ನು ಟ್ವಿಟರ್‌ನಲ್ಲಿ ಅಪ್‌ಲೋಡ್ ಮಾಡಿ ನಮ್ಮ ತಂದೆಯನ್ನು ಅಬ್ಬ ಜಾನ್ ಎಂದೇ ಕರೆಯುತ್ತೇವೆ ಎಂದು ಬರೆಯುವ ಮೂಲಕ ಯೋಗಿಗೆ ಸೆಡ್ಡು ಹೊಡೆದಿದ್ದಾರೆ. ಚಿತ್ರ ನಿರ್ದೇಶಕ ಹನ್ಸಲ್ ಮೆಹ್ತಾ ನಾನು ನನ್ನ ಅಬ್ಬ ಜಾನ್‌ ರನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದು ಪೋಸ್ಟ್ ಮಾಡಿದ್ದಾರೆ.

ನನ್ನ ಅಬ್ಬ ಜಾನ್ ಒಬ್ಬ ಅತ್ಯುತ್ತಮ ಬ್ಯಾಂಕರ್ ಆಗಿದ್ದರು. ನನ್ನ ಅಬ್ಬ ಜಾನ್ ನಿವೃತ್ತ ನ್ಯಾಯಾಧೀಶರು, ನನ್ನ ಅಬ್ಬಾ ಜಾನ್ ಕೆಲಸ ಮಾಡುತ್ತಿದ್ದ ಸ್ಥಳ ಎಂದೆಲ್ಲಾ ಬರೆದಿರುವ ನೆಟ್ಟಿಗರು ‘ಹಮಾರೆ ಅಬ್ಬ ಜಾನ್‘ ಎಂಬ ಹ್ಯಾಸ್‌ಟ್ಯಾಗ್ ಅನ್ನು ಟ್ರೆಂಡ್ ಮಾಡಿದ್ದಾರೆ. ಅಂತಹ ಕೆಲವು ಟ್ವೀಟ್‌ಗಳು ಇಲ್ಲಿವೆ.

ಒಟ್ಟಿನಲ್ಲಿ ಮುಂದಿನ ವರ್ಷ ಉತ್ತರ ಪ್ರದೇಶದಲ್ಲಿ ನಡೆಯಲಿರುವ ಚುನಾವಣೆ ಗೆಲ್ಲುವುದಕ್ಕಾಗಿ ಸಿಎಂ ಯೋಗಿ ಆದಿತ್ಯನಾಥ್ ನೀಡಿದ ಹೇಳಿಕೆಗಳು ಅವರಿಗೆ ತಿರುಗುಬಾಣವಾಗಿವೆ. ಬಹಳಷ್ಟು ಜನ ಸೌಹಾರ್ದತೆಯನ್ನು ಒಡೆಯಬೇಡಿ ಎಂಬ ಸಂದೇಶಗಳನ್ನು ಕಳುಹಿಸಿದ್ದಾರೆ.


ಇದನ್ನೂ ಓದಿ: ಯುಪಿ: 3 ಗಂಟೆ ಕಾದರೂ ದಾಖಲಿಸದ ಆಸ್ಪತ್ರೆ, ಹೆತ್ತವರ ಕಣ್ಣು ಮುಂದೆ 5 ವರ್ಷದ ಬಾಲಕಿ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...