Homeಅಂತರಾಷ್ಟ್ರೀಯಹೈಟಿಯಲ್ಲಿ ಭೂಕಂಪ: 1,419 ಸಾವು, 6,000ಕ್ಕೂ ಹೆಚ್ಚು ಜನರಿಗೆ ಗಾಯ

ಹೈಟಿಯಲ್ಲಿ ಭೂಕಂಪ: 1,419 ಸಾವು, 6,000ಕ್ಕೂ ಹೆಚ್ಚು ಜನರಿಗೆ ಗಾಯ

- Advertisement -
- Advertisement -

ಹೈಟಿ ರಾಷ್ಟ್ರದಲ್ಲಿ ಭಯಾನಕ ಭೂಕಂಪ ಸಂಭವಿಸಿದ್ದು, ಇದೂವರೆಗೂ 1,419 ಜನರು ಸಾವನ್ನಪ್ಪಿದ್ದಾರೆ. 6,000ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.

ಭೂಕಂಪದಿಂದಾಗಿ ಮನೆಗಳು, ಅಂಗಡಿಗಳು ಮತ್ತು ಇತರ ಕಟ್ಟಡಗಳನ್ನು ನೆಲಸಮಗೊಂಡಿವೆ. ನೈರುತ್ಯ ಹೈಟಿ ಆಸ್ಪತ್ರೆಯು ರೋಗಿಗಳಿಂದ ತುಂಬಿಹೋಗಿದೆ. ಅನೇಕರು ಜಾಗವಿಲ್ಲದೆ ಒಳಾಂಗಣ, ಕಾರಿಡಾರ್, ವರಾಂಡಾ ಮತ್ತು ಹಜಾರಗಳಲ್ಲಿ ಮಲಗಬೇಕಾದ ಪರಿಸ್ಥಿತಿ ಉಂಟಾಗಿದೆ. ಇದೇ ವೇಳೆ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಆಸ್ಪತ್ರೆಯ ರೋಗಿಗಳನ್ನು ಸ್ಥಳಾಂತರಿಸಲು ಅಧಿಕಾರಿಗಳು ಪರದಾಡುತ್ತಿದ್ದಾರೆ.

ರಾಜಧಾನಿ ಪೋರ್ಟ್-ಔ-ಪ್ರಿನ್ಸ್‌ನಿಂದ ಸುಮಾರು 125 ಕಿಲೋಮೀಟರ್ (80 ಮೈಲಿ) ದೂರದಲ್ಲಿ ಸಂಭವಿಸಿದ ಭೂಕಂಪದಿಂದಾಗಿ ಸುಮಾರು ಕೆಲವು ಪಟ್ಟಣಗಳು ಧ್ವಂಸಗೊಂಡಿವೆ, ಭೂಕುಸಿತ ಉಂಟಾಗಿದೆ. ಅತ್ಯಂತ ಬಡವಾಗಿರುವ ದೇಶವಾಗಿರುವ ಹೈಟಿಯಲ್ಲಿ ರಕ್ಷಣಾ ಕಾರ್ಯಗಳು ತ್ವರಿತವಾಗಿಲ್ಲ.

7.2 ತೀವ್ರತೆಯ ಭೂಕಂಪನದಿಂದಾಗಿ 7,000 ಕ್ಕೂ ಹೆಚ್ಚು ಮನೆಗಳು ನಾಶವಾಗಿವೆ. ಸುಮಾರು 6,000 ಜನರು ಭೂಕಂಪದಿಂದ ಗಾಯಗೊಂಡಿದ್ದಾರೆ. ಸುಮಾರು 30,000 ಕುಟುಂಬಗಳು ನಿರಾಶ್ರಿತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆಸ್ಪತ್ರೆಗಳು, ಶಾಲೆಗಳು, ಕಚೇರಿಗಳು ಮತ್ತು ಚರ್ಚುಗಳು ಸಹ ನಾಶವಾಗಿವೆ.

ಹೈಟಿ ಈಗಾಗಲೇ ಕೊರೊನಾ ಸೋಂಕು, ಗ್ಯಾಂಗ್ ವಾರ್‌, ಹದಗೆಡುತ್ತಿರುವ ಬಡತನದಿಂದ ಕೂಡಿದೆ. ಅಲ್ಲದೆ, ಜುಲೈ 7 ರಂದು ಅಧ್ಯಕ್ಷ ಜೋವೆನೆಲ್ ಮೊಸ್ ಅವರನ್ನು ಹತ್ಯೆ ಮಾಡಿದ ನಂತರ, ರಾಜಕೀಯ ಅನಿಶ್ಚಿತತೆ ಭುಗಿಲೆದ್ದಿದೆ. ಈ ನಡುವೆ, ಭೂಕಂಪ ಅಲ್ಲಿನ ಜನರನ್ನು ಮತ್ತಷ್ಟು ಕಂಗಾಲಾಗಿಸಿದೆ.

ಇದರ ಜೊತೆಗೆ, ಬೀರುಗಾಳಿಯೂ ಅಬ್ಬರಿಸುತ್ತಿದ್ದು, ಭಾರೀ ಮಳೆ, ಮಣ್ಣು ಕುಸಿತ ಮತ್ತು ಪ್ರವಾಹದ ಭೀತಿ ಎದುರಾಗಿದೆ. ಸೋಮವಾರ ಲಘು ಮಳೆಯಾಗಿದೆ. ಆದರೂ, ಇದು ಕೆಲವು ಪ್ರದೇಶಗಳಲ್ಲಿ 15 ಇಂಚು (38 ಸೆಂಟಿಮೀಟರ್)ಗೆ ಏರಿಕೆಯಾಗಬಹುದು ಎಂದು ಸಿವಿಲ್ ಪ್ರೊಟೆಕ್ಷನ್ ಏಜೆನ್ಸಿ ಹೇಳಿದೆ. ಪೋರ್ಟ್-ಔ-ಪ್ರಿನ್ಸ್ ಈಗಾಗಲೇ ಭಾರೀ ಮಳೆಯಾಗುತ್ತಿದೆ.

“ನಮ್ಮಲ್ಲಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಹೆಚ್ಚು ಹಾನಿಗೊಳಗಾದ ಲೆಸ್ ಕೇಸ್ ಮತ್ತು ಜೆರೆಮಿ ಪಟ್ಟಣಗಳು ​​ಮತ್ತು ನಿಪ್ಪೆ ಸ್ಥಳಗಳನ್ನು ತಲುಪಲು ಕೆಲಸ ಮಾಡುತ್ತಿದ್ದೇವೆ” ಎಂದು ಏಜೆನ್ಸಿ ಮುಖ್ಯಸ್ಥ ಜೆರ್ರಿ ಚಾಂಡ್ಲರ್ ಹೇಳಿದ್ದಾರೆ.

ಪ್ರಧಾನ ಮಂತ್ರಿ ಏರಿಯಲ್ ಹೆನ್ರಿ ಇಡೀ ದೇಶಕ್ಕೆ ಒಂದು ತಿಂಗಳ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದಾರೆ.


ಇದನ್ನೂ ಓದಿ: ರಾಜ್ಯಗಳು ಮಾತ್ರವಲ್ಲ ಒಕ್ಕೂಟ ಸರ್ಕಾರ ಕೂಡಾ ನ್ಯಾಯಾಧೀಶರ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕು: ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...