Homeಅಂತರಾಷ್ಟ್ರೀಯಮ್ಯಾನ್ಮಾರ್, ಥೈಲ್ಯಾಂಡ್ ಭೂಕಂಪ: 700ಕ್ಕೂ ಅಧಿಕ ಸಾವು, ಸಾವಿರಾರು ಜನರಿಗೆ ಗಾಯ

ಮ್ಯಾನ್ಮಾರ್, ಥೈಲ್ಯಾಂಡ್ ಭೂಕಂಪ: 700ಕ್ಕೂ ಅಧಿಕ ಸಾವು, ಸಾವಿರಾರು ಜನರಿಗೆ ಗಾಯ

- Advertisement -
- Advertisement -

ಶುಕ್ರವಾರ (ಮಾ.28) ಸಂಭವಿಸಿದ 7.7 ತೀವ್ರತೆಯ ಪ್ರಬಲ ಭೂಕಂಪದದಿಂದ ಮ್ಯಾನ್ಮಾರ್‌ನಲ್ಲಿ ಸಾವಿಗೀಡಾದವರ ಸಂಖ್ಯೆ 694ಕ್ಕೆ ಏರಿಕೆಯಾಗಿದ್ದು, ಸುಮಾರು 1,670 ಜನರು ಗಾಯಗೊಂಡಿದ್ದಾರೆ ಎಂದು ಸರ್ಕಾರಿ ಸ್ವಾಮ್ಯದ ಎಂಆರ್‌ಟಿವಿ ತನ್ನ ಟೆಲಿಗ್ರಾಮ್ ಮೆಸೇಜಿಂಗ್ ಅಪ್ಲಿಕೇಶನ್‌ನಲ್ಲಿ ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ. (ಈ ಸುದ್ದಿ ಬರೆಯುವ ವೇಳೆಗೆ-ಮಾ.29 ಬೆಳಿಗ್ಗೆ 9 ಗಂಟೆ)

ಥೈಲ್ಯಾಂಡ್ ರಾಜಧಾನಿ ಬ್ಯಾಂಕಾಕ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲೂ ಶುಕ್ರವಾರ ಭೂಕಂಪ ಉಂಟಾಗಿತ್ತು. ಮ್ಯಾನ್ಮಾರ್‌ನಲ್ಲಿ ಸಂಭವಿಸಿದ ಭೂಕಂಪ ಬ್ಯಾಕಾಂಕ್‌ನಲ್ಲಿ ಪರಿಣಾಮ ಬೀರಿದೆ ಎನ್ನಲಾಗಿದೆ.

ಕಂಪನದಿಂದ ಬ್ಯಾಂಕಾಕ್‌ನಲ್ಲಿ ಸರ್ಕಾರಿ ಕಚೇರಿಗಳಿಗಾಗಿ ನಿರ್ಮಾಣ ಹಂತದಲ್ಲಿದ್ದ ಬಹುಮಹಡಿ ಕಟ್ಟಡ ಕುಸಿದು ಕನಿಷ್ಠ 8 ಮಂದಿ ಸಾವನ್ನಪ್ಪಿದ್ದಾರೆ ಮತ್ತು 117ಕ್ಕೂ ಹೆಚ್ಚು ಜನರು ಕಾಣೆಯಾಗಿದ್ದಾರೆ. ಕಟ್ಟಡ ಕುಸಿದಾಗ ಸುಮಾರು 43 ಕಾರ್ಮಿಕರು ಅವಶೇಷಗಳಡಿ ಸಿಲುಕೊಂಡಿರುವ ಶಂಕೆ ವ್ಯಕ್ತವಾಗಿತ್ತು. ಭೂಕಂಪದ ಬಳಿಕ ಬ್ಯಾಂಕಾಕ್‌ ಅನ್ನು ‘ವಿಪತ್ತು ಪ್ರದೇಶ’ವೆಂದು ಘೋಷಿಸಲಾಗಿದೆ.

ಮ್ಯಾನ್ಮಾರ್‌ನ ಮಿಲಿಟರಿ ಸರ್ಕಾರ ದೇಶದ ಹಲವು ಪ್ರದೇಶಗಳಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದೆ. ಸರ್ಕಾರದ ದೂರದರ್ಶನದಲ್ಲಿ ಮಾತನಾಡಿರುವ ಮಿಲಿಟರಿ ಮುಖ್ಯಸ್ಥ ಮಿನ್ ಆಂಗ್ ಹ್ಲೈಂಗ್, “ಹೆಚ್ಚಿನ ಸಾವು-ನೋವುಗಳು ಸಂಭವಿಸುವ ಸಾಧ್ಯತೆಯಿದೆ. ಯಾವುದಾದರು ದೇಶ ಸಹಾಯ ನೀಡುವಂತೆ ಕೋರಿದ್ದೇನೆ” ಎಂದಿದ್ದಾರೆ.

ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೇ (ಯುಎಸ್‌ಜಿಎಸ್‌) ಭೂಕಂಪದ ಕೇಂದ್ರ ಬಿಂದು ಮ್ಯಾನ್ಮಾರ್‌ನ ಎರಡನೇ ಅತಿದೊಡ್ಡ ನಗರವಾದ ಮಂಡಲೆಯಿಂದ ಸುಮಾರು 17.2 ಕಿ.ಮೀ ದೂರದಲ್ಲಿ ಭೂಮಿಯ 10 ಕಿ.ಮೀ ಆಳದಲ್ಲಿ ಪತ್ತೆಯಾಗಿದೆ ಎಂದು ತಿಳಿಸಿದೆ. ಮಂಡಲೆ ಸುಮಾರು 1.2 ಮಿಲಿಯನ್ ಜನಸಂಖ್ಯೆಯನ್ನು ಹೊಂದಿರುವ ನಗರವಾಗಿದೆ. ಶುಕ್ರವಾರ ಇಲ್ಲಿ 7.7 ತೀವ್ರತೆಯ ಮೊದಲ ಭೂಕಂಪ ಸಂಭವಿಸಿದ ಸ್ವಲ್ಪ ಸಮಯದ ನಂತರ 6.4 ತೀವ್ರತೆಯ ಮತ್ತೊಂದು ಭೂಕಂಪ ಸಂಭವಿಸಿದೆ.

ಮ್ಯಾನ್ಮಾರ್‌ನಲ್ಲಿ, ದೇಶದ ಅತಿದೊಡ್ಡ ಧಾರ್ಮಿಕ ಕೇಂದ್ರಗಳಲ್ಲಿ ಒಂದಾದ ಮಾ ಸೋ ಯಾನೆಯ ಕಟ್ಟಡ ಸೇರಿದಂತೆ ಹಲವು ಕಟ್ಟಡಗಳು ಕುಸಿದಿವೆ. ನೇಪಿಡಾವ್‌ನಲ್ಲಿರುವ ಹಿಂದಿನ ರಾಜಭವನ ಮತ್ತು ಸರ್ಕಾರಿ ವಸತಿ ಕಟ್ಟಡಗಳಿಗೆ ಹಾನಿಯಾಗಿದೆ. ರಸ್ತೆಗಳು ಬಿರುಕು ಬಿಟ್ಟಿದ್ದು, ಸೇತುವೆಗಳು ಕುಸಿದು ಬಿದ್ದಿವೆ. ಅಣೆಕಟ್ಟು ಒಡೆದು ತಗ್ಗು ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿದೆ ಎಂದು ಸುದ್ದಿ ಸಂಸ್ಥೆ ಎಪಿ ವರದಿ ಮಾಡಿದೆ.

ನೇಪಿಡಾವ್‌ ನಗರದ ನೈಋತ್ಯದಲ್ಲಿರುವ ಸಾಗೈಂಗ್ ಪ್ರದೇಶದಲ್ಲಿ, 90 ವರ್ಷ ಹಳೆಯ ಸೇತುವೆ ಕುಸಿದಿದ್ದು, ಮಂಡಲೆ ಮತ್ತು ಮ್ಯಾನ್ಮಾರ್‌ನ ಅತಿದೊಡ್ಡ ನಗರವಾದ ಯಾಂಗೊನ್ ಅನ್ನು ಸಂಪರ್ಕಿಸುವ ಹೆದ್ದಾರಿಯ ಕೆಲವು ಭಾಗಗಳು ಕೂಡ ಹಾನಿಗೊಳಗಾಗಿವೆ.

ಥೈಲ್ಯಾಂಡ್‌ ರಾಜಧಾನಿ ಬ್ಯಾಂಕಾಕ್‌ನಲ್ಲಿ ನಿರ್ಮಾಣ ಹಂತದಲ್ಲಿದ್ದ 33 ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದೆ. ಇದರಿಂದ ಕನಿಷ್ಠ 8 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ರಕ್ಷಣಾ ತಂಡಗಳು ಅವಶೇಷಗಳ ಅಡಿಯಿಂದ ಏಳು ಜನರನ್ನು ಜೀವಂತ ಹೊರತೆಗೆದಿದ್ದಾರೆ. ಇನ್ನೂ ಅನೇಕರು ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ.

ಭೂಕಂಪದ ಸಂಭವಿಸುತ್ತಿದ್ದಂತೆ ಬ್ಯಾಂಕಾಕ್‌ ನಗರದಾದ್ಯಂತ ಸೈರನ್‌ಗಳು ಮೊಳಗಿಸಿ ಜನರಿಗೆ ಎಚ್ಚರಿಕೆ ನೀಡಲಾಗಿತ್ತು. ಸುರಂಗಮಾರ್ಗ ಮತ್ತು ಎತ್ತರದ ಸಾರಿಗೆ ವ್ಯವಸ್ಥೆಗಳನ್ನು ಸ್ಥಗಿತಗೊಳಿಸಲಾಗಿತ್ತು. ಇದರಿಂದ ಹೆಚ್ಚಿನ ಅನಾಹುತಗಳು ತಪ್ಪಿದೆ ಎಂದು ಎಪಿ ವರದಿ ತಿಳಿಸಿದೆ.

ಸ್ಥಳೀಯ ಬುಡಕಟ್ಟು ಸಮುದಾಯದ ಭೂಮಿ ವಶಕ್ಕೆ ಯತ್ನ | ನಿತ್ಯಾನಂದನ ಕೈಲಾಸದ ಸದಸ್ಯರನ್ನು ಗಡೀಪಾರು ಮಾಡಿದ ಬೊಲಿವಿಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...