Homeಅಂತರಾಷ್ಟ್ರೀಯಇಂಡೋನೇಷ್ಯಾದ ಜಾವಾ ದ್ವೀಪದಲ್ಲಿ ಭೂಕಂಪ; ಕನಿಷ್ಠ 46 ಸಾವು

ಇಂಡೋನೇಷ್ಯಾದ ಜಾವಾ ದ್ವೀಪದಲ್ಲಿ ಭೂಕಂಪ; ಕನಿಷ್ಠ 46 ಸಾವು

- Advertisement -
- Advertisement -

ಇಂಡೋನೇಷ್ಯಾದ ಪ್ರಮುಖ ದ್ವೀಪವಾದ ಜಾವಾದಲ್ಲಿ ಸೋಮವಾರ ಭೂಕಂಪ ಸಂಭವಿಸಿದ್ದು, ಕನಿಷ್ಠ 46 ಜನರು ಸಾವನ್ನಪ್ಪಿದ್ದಾರೆ. ಭೂಕಂಪದಿಂದ ಹಲವಾರು ಕಟ್ಟಡಗಳು ಹಾನಿಯಾಗಿದ್ದು, ಸುರಕ್ಷತೆಗಾಗಿ ನಿವಾಸಿಗಳನ್ನು ರಾಜಧಾನಿಯ ಬೀದಿಗಳಿಗೆ ಕಳುಹಿಸಲಾಗಿದೆ ಎಂದು ವರದಿಯಾಗಿದೆ. 5.6 ತೀವ್ರತೆಯ ಭೂಕಂಪವು ಪಶ್ಚಿಮ ಜಾವಾ ಪ್ರಾಂತ್ಯದ ಸಿಯಾಂಜೂರ್ ಪ್ರದೇಶದಲ್ಲಿ 10 ಕಿಲೋಮೀಟರ್ (6.2 ಮೈಲಿ) ಆಳದಲ್ಲಿ ಕೇಂದ್ರೀಕೃತವಾಗಿದೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ಹೇಳಿದೆ.

“ಸಿಯಾಂಜೂರ್ ಪ್ರಾದೇಶಿಕ ಆಸ್ಪತ್ರೆಯಲ್ಲಿ 46 ಮಂದಿ ಮೃತಪಟ್ಟಿದ್ದಾರೆ ಮತ್ತು ಸುಮಾರು 700 ಮಂದಿ ಗಾಯಗೊಂಡಿದ್ದಾರೆ. ಕಟ್ಟಡಗಳು ಕುಸಿದು ಬಿದ್ದಿದ್ದರಿಂದ ಹಲವರು ಗಾಯಗೊಂಡಿದ್ದಾರೆ” ಎಂದು ರಾಷ್ಟ್ರೀಯ ವಿಪತ್ತು ನಿವಾರಣಾ ಏಜೆನ್ಸಿ ಮುಖ್ಯಸ್ಥ ಸುಹರ್ಯಾಂತೋ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜಾವಾದ ಸಿಯಾಂಜೂರ್ ಪ್ರದೇಶದ ಸುತ್ತಮುತ್ತ ಹಲವಾರು ಭೂಕುಸಿತ ಸಂಭವಿಸಿದ್ದು ವರದಿಯಾಗಿದ್ದು, ಇಸ್ಲಾಮಿಕ್ ಬೋರ್ಡಿಂಗ್ ಶಾಲೆ, ಆಸ್ಪತ್ರೆ ಮತ್ತು ಇತರ ಸಾರ್ವಜನಿಕ ಸೌಲಭ್ಯಗಳು ಸೇರಿದಂತೆ ಹತ್ತಾರು ಕಟ್ಟಡಗಳು ಹಾನಿಗೊಳಗಾಗಿವೆ ಎಂದು ರಾಷ್ಟ್ರೀಯ ವಿಪತ್ತು ನಿವಾರಣಾ ಸಂಸ್ಥೆ ತಿಳಿಸಿದೆ. ಸಾವು-ನೋವು ಮತ್ತು ಹಾನಿಯ ಪ್ರಮಾಣದ ಬಗ್ಗೆ ಇನ್ನೂ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ ಎಂದು ಅದು ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಬೆಳ್ಳಿಚುಕ್ಕಿ; ಭೂಮಿಯು ವೇಗವಾಗಿ ತಿರುಗಿದ್ದು ನಿಮಗೇನಾದರೂ ಭಾಸವಾಯಿತೇ?

ಜಕಾರ್ತದ ಹೆಚ್ಚಿನ ಪ್ರದೇಶದಲ್ಲಿ ಭೂಕಂಪನದ ಅನುಭವವಾಗಿದೆ. “ಕಂಪನವು ತುಂಬಾ ಪ್ರಬಲವಾಗಿದೆ. ನನ್ನ ಸಹೋದ್ಯೋಗಿಗಳು ಮತ್ತು ನಾನು ತುರ್ತು ಮೆಟ್ಟಿಲುಗಳನ್ನು ಬಳಸಿಕೊಂಡು ಒಂಬತ್ತನೇ ಮಹಡಿಯಲ್ಲಿರುವ ನಮ್ಮ ಕಚೇರಿಯಿಂದ ಹೊರಬರಲು ನಿರ್ಧರಿಸಿದೆವು ” ಎಂದು ದಕ್ಷಿಣ ಜಕಾರ್ತಾದ ಉದ್ಯೋಗಿ ವಿದಿ ಪ್ರಿಮಧಾನಿಯಾ ಹೇಳಿದ್ದಾರೆ.

ವಿಶಾಲವಾದ ದ್ವೀಪಸಮೂಹ ರಾಷ್ಟ್ರವಾಗಿರುವ ಇಂಡೋನೇಷ್ಯಾದಲ್ಲಿ ಭೂಕಂಪಗಳು ಆಗಾಗ್ಗೆ ಸಂಭವಿಸುತ್ತವೆ. ಆದರೆ ರಾಜಧಾನಿ ಜಕಾರ್ತಾ ಇರುವ ಜಾವಾ ದ್ವೀಪದಲ್ಲಿ ಭೂಕಂಪ ಸಂಭವಿಸುವುದು ಅಪರೂಪವಾಗಿದೆ. 27 ಕೋಟಿಗೂ ಹೆಚ್ಚು ಜನಸಂಖ್ಯೆಯಿರುವ ಇಂಡೋನೇಷ್ಯಾದಲ್ಲಿ ಭೂಕಂಪಗಳು, ಜ್ವಾಲಾಮುಖಿ ಸ್ಫೋಟಗಳು ಮತ್ತು ಸುನಾಮಿಗಳು ಆಗಾಗ್ಗೆ ಸಂಭವಿಸುತ್ತಲೆ ಇರುತ್ತವೆ.

ಫೆಬ್ರವರಿಯಲ್ಲಿ, ಪಶ್ಚಿಮ ಸುಮಾತ್ರಾ ಪ್ರಾಂತ್ಯದಲ್ಲಿ ಸಂಭವಿಸಿದ್ದ 6.2 ತೀವ್ರತೆಯ ಭೂಕಂಪದಲ್ಲಿ ಕನಿಷ್ಠ 25 ಜನರು ಸಾವನ್ನಪ್ಪಿದರು ಮತ್ತು 460 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. 2021 ರ  ಜನವರಿಯಲ್ಲಿ ಪಶ್ಚಿಮ ಸುಲವೆಸಿ ಪ್ರಾಂತ್ಯದಲ್ಲಿ 6.2 ತೀವ್ರತೆಯ ಭೂಕಂಪ ಸಂಭವಿಸಿ 100 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದರು ಮತ್ತು ಸುಮಾರು 6,500 ಜನರು ಗಾಯಗೊಂಡಿದ್ದರು.

ಇದನ್ನೂ ಓದಿ: ನೇಪಾಳದಲ್ಲಿ ಭೂಕಂಪ: ಆರು ಮಂದಿ ಮೃತ | ದೆಹಲಿಯಲ್ಲೂ ಕಂಪನದ ಅನುಭವ!

2004 ರಲ್ಲಿ ಹಿಂದೂ ಮಹಾಸಾಗರದಲ್ಲಿ ಸಂಭವಿಸಿದ ಭೂಕಂಪ ಮತ್ತು ಸುನಾಮಿ ಒಂದು ಹಲವಾರು ದೇಶಗಳಲ್ಲಿ ಸುಮಾರು 2,30,000 ಜನರನ್ನು ಕೊಂದಿತ್ತು. ಈ ಸಂಖ್ಯೆಯಲ್ಲಿ ಹೆಚ್ಚಿನ ಸಾವು ನೋವು ಇಂಡೋನೇಷ್ಯಾದಲ್ಲಿ ಸಂಭವಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...