Homeಮುಖಪುಟಮಂದಿರ ಉದ್ಘಾಟನೆ ನಂತರ ರಾಮನ ದರ್ಶನ ಪಡೆಯುವುದು ಸುಲಭ: ಶರದ್ ಪವಾರ್

ಮಂದಿರ ಉದ್ಘಾಟನೆ ನಂತರ ರಾಮನ ದರ್ಶನ ಪಡೆಯುವುದು ಸುಲಭ: ಶರದ್ ಪವಾರ್

- Advertisement -
- Advertisement -

‘ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯುವ ರಾಮಮಂದಿರ ಮಹಾಮಸ್ತಕಾಭಿಷೇಕ ಸಮಾರಂಭದಲ್ಲಿ ಪಾಲ್ಗೊಳ್ಳುವುದಿಲ್ಲ’ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ.

ಆಹ್ವಾನ ನೀಡಿದ್ದಕ್ಕಾಗಿ ಕೃತಜ್ಞತೆಯನ್ನು ವ್ಯಕ್ತಪಡಿಸಿದ ಅವರು, ‘ಅತಿದೊಡ್ಡ ಕಾರ್ಯಕ್ರಮಕ್ಕಾಗಿ ಅಯೋಧ್ಯೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಆದ್ದರಿಂದ, ಜನವರಿ 22ರ ನಂತರ ಅಯೋಧ್ಯೆಗೆ ಭೇಟಿ ನೀಡಿ ದರ್ಶನ ಪಡೆಯಲು ಸುಲಭವಾಗುತ್ತದೆ’ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

‘ಭಗವಾನ್ ರಾಮನು ಪ್ರಪಂಚದಾದ್ಯಂತ ಕೋಟ್ಯಂತರ ಜನರ ನಂಬಿಕೆ ಮತ್ತು ಭಕ್ತಿಯ ಸಂಕೇತವಾಗಿದೆ’ ಎಂದು ಅವರು ಹೇಳಿದರು. “ಅಯೋಧ್ಯೆಯಲ್ಲಿ ನಡೆಯುವ ಕಾರ್ಯಕ್ರಮಕ್ಕಾಗಿ ರಾಮ ಭಕ್ತರಲ್ಲಿ ಅಪಾರ ಉತ್ಸಾಹವಿದೆ ಮತ್ತು ಅವರು ಹೆಚ್ಚಿನ ಸಂಖ್ಯೆಯಲ್ಲಿ ಅಲ್ಲಿಗೆ ತಲುಪುತ್ತಿದ್ದಾರೆ. ಈ ಐತಿಹಾಸಿಕ ಘಟನೆಯ ಸಂತೋಷವು ಅವರ ಮೂಲಕ ನನ್ನನ್ನು ತಲುಪುತ್ತದೆ. ಜನವರಿ 22ರ ಕಾರ್ಯಕ್ರಮದ ನಂತರ ದರ್ಶನವನ್ನು ಪಡೆಯುವುದು ಸುಲಭವಾಗುತ್ತದೆ’ ಎಂದು ಪವಾರ್ ವಿಡಿಯೋ ಹೇಳಿಕೆ ನೀಡಿದ್ದಾರೆ.

ಮುಂದೆ ಅಯೋಧ್ಯೆಗೆ ಭೇಟಿ ನೀಡುವಷ್ಟರೊಳಗೆ ರಾಮಮಂದಿರ ನಿರ್ಮಾಣವೂ ಪೂರ್ಣವಾಗಲಿದೆ. ಆಗ ರಾಮ್ ಲಲ್ಲಾಗೆ ಪ್ರಾರ್ಥಿಸುವುದಾಗಿ’ ಎನ್‌ಸಿಪಿ ಮುಖ್ಯಸ್ಥರು ತಿಳಿಸಿದ್ದಾರೆ.

ಹಿಂದೂ ಧಾರ್ಮಿಕ ನಾಯಕರೆಂದು ಪರಿಗಣಿಸಲ್ಪಟ್ಟಿರುವ ನಾಲ್ವರು ಶಂಕರಾಚಾರ್ಯ ಮಠಗಳ ಮುಖಸ್ಯಸ್ಥರು ಕಾರ್ಯಕ್ರಮವನ್ನು ಬಹಿಷ್ಕರಿಸಿರುವ ವರದಿಗಳ ನಡುವೆಯೇ ಪ್ರಾಣ ಪ್ರತಿಷ್ಠಾ ಸಮಾರಂಭವು ಗದ್ದಲ ಹುಟ್ಟುಹಾಕಿದೆ. ಸಮಾರಂಭದಲ್ಲಿ ಪಾಲ್ಗೊಳ್ಳುವ ಬಗ್ಗೆ ಇಬ್ಬರು ಮೌನವಾಗಿದ್ದರೆ, ಇನ್ನಿಬ್ಬರು ಕಾರ್ಯಕ್ರಮ ಆಯೋಜಿಸುತ್ತಿರುವ ರೀತಿಯನ್ನು ಟೀಕಿಸಿದ್ದಾರೆ. ದೇವಾಲಯವನ್ನು ಸಂಪೂರ್ಣವಾಗಿ ನಿರ್ಮಿಸುವ ಮೊದಲು ಪ್ರಾಣ ಪ್ರತಿಷ್ಠಾ ಸಮಾರಂಭವನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಜನವರಿ 22ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮಕ್ಕೆ ಪ್ರಮುಖ ಸಾರ್ವಜನಿಕ ವ್ಯಕ್ತಿಗಳನ್ನು ಆಹ್ವಾನಿಸಲಾಗಿದೆ. ಜನವರಿ 23 ರಿಂದ ದೇವಾಲಯವು ಸಾರ್ವಜನಿಕರ ದರ್ಶನಕ್ಕೆ ತೆರೆದಿರುತ್ತದೆ.

ಇದನ್ನೂ ಓದಿ; ಸರ್ಕಾರಿ ಬಂಗಲೆ ತೆರವುಗೊಳಿಸುವಂತೆ ಟಿಎಂಸಿ ಮಾಜಿ ಸಂಸದೆಗೆ ಮತ್ತೊಂದು ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...