Homeಕರ್ನಾಟಕಶುಲ್ಕ ಪಾವತಿಸದ ಮಕ್ಕಳ ಆನ್‌ಲೈನ್‌ ತರಗತಿ ಬಂದ್ ಮಾಡಿದ ಖಾಸಗಿ ಶಾಲೆ: ಪೋಷಕರ ಆಕ್ರೋಶ

ಶುಲ್ಕ ಪಾವತಿಸದ ಮಕ್ಕಳ ಆನ್‌ಲೈನ್‌ ತರಗತಿ ಬಂದ್ ಮಾಡಿದ ಖಾಸಗಿ ಶಾಲೆ: ಪೋಷಕರ ಆಕ್ರೋಶ

- Advertisement -
- Advertisement -

ಕೋವಿಡ್‌ ಕಾರಣದಿಂದ ಕಳೆದೊಂದು ವರ್ಷದಿಂದ ಶಾಲೆಗಳು ತೆರೆದಿಲ್ಲ. ಭೌತಿಕ ತರಗತಿಗಳು ನಿಂತಿವೆ. ಆನ್‌ಲೈನ್‌ ಶಿಕ್ಷಣ ವ್ಯವಸ್ಥೆ ಜಾರಿಯಲ್ಲಿದೆ. ಮಕ್ಕಳು ಆನ್‌ಲೈನ್‌ ಮುಖಾಂತರವೇ ತರಗತಿಗಳಿಗೆ ಹಾಜರಾಗುತ್ತಿದ್ದಾರೆ. ಶಾಲೆಗಳನ್ನು ತೆರೆಯದಿದ್ದರೂ ಸಹ ಶುಲ್ಕ ವಸೂಲಿ ಮಾತ್ರ ನಿಂತಿಲ್ಲ. ಮುಖ್ಯವಾಗಿ ಖಾಸಗಿ ಶಾಲೆಗಳು ಕೋವಿಡ್‌ ಸಮಯದಲ್ಲೂ ಸುಲಿಗೆಯಲ್ಲಿ ತೊಡಗಿವೆ ಎಂಬ ಆರೋಪ ಪೋಷಕರದ್ದು. ವಿದ್ಯಾರ್ಥಿ ಸ್ನೇಹಿ ಎಂದು ಹೇಳಿಕೊಳ್ಳುವ ಪ್ರತಿಷ್ಠಿತ ಕಾರ್ಪೊರೇಟ್‌ ಶಿಕ್ಷಣ ಸಂಸ್ಥೆಯೊಂದು ಶುಲ್ಕ ಪಾವತಿಸದ ಮಕ್ಕಳ ಆನ್‌ಲೈನ್ ತರಗತಿ ಬಂದ್ ಮಾಡಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.

ಸರ್ಕಾರ ಶುಲ್ಕ ನೀಡಲು ತಡವಾದರೂ ಮಕ್ಕಳ ತರಗತಿಗಳನ್ನು ನಿಲ್ಲಿಸುವಂತಿಲ್ಲ ಎಂದು ನಿಯಮಗಳನ್ನು ಹೊರಡಿಸಿದೆ. ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಬೆಂಗಳೂರಿನ ಎಬೆನೇಜರ್‌ ಇಂಟರ್‌ನ್ಯಾಷನಲ್‌ ಸ್ಕೂಲ್‌ ಅತಿ ಹೆಚ್ಚಿನ ಶುಲ್ಕವನ್ನು ವಸೂಲಿ ಮಾಡುತ್ತಿದೆ. ಈ ಸಂಬಂಧ ಪೋಷಕರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಶಾಲಾ ಶುಲ್ಕ ವಿಚಾರ: ಸಮಸ್ಯೆ ಬಗೆಹರಿಸುವಂತೆ ಸಿಎಂ ಯಡಿಯೂರಪ್ಪಗೆ ಸಿದ್ದರಾಮಯ್ಯ ಪತ್ರ

ಎಬೆನೆಜರ್ ಇಂಟರ್‌ನ್ಯಾಷನಲ್ ಸ್ಕೂಲ್ ಬೆಂಗಳೂರು(EISB) ರಾಜಧಾನಿಯ ಪ್ರತಿಷ್ಠಿತ ಶಾಲೆಗಳಲ್ಲಿ ಒಂದು. ಅಂತರಾಷ್ಟ್ರೀಯ ಪಠ್ಯಕ್ರಮವನ್ನು ಅಳವಡಿಸಿಕೊಂಡಿರುವ ಈ ಶಾಲೆಯಲ್ಲಿ ಸುಮಾರು 800ಕ್ಕೂ ಅಧಿಕ ವಿದ್ಯಾರ್ಥಿಗಳು ಓದುತ್ತಿದ್ದು ಕಳೆದ ಒಂದು ವರ್ಷದಿಂದ ಆನ್‌ಲೈನ್‌ ಮೂಲಕ ತರಗತಿಗಳನ್ನು ಮತ್ತು ಶೈಕ್ಷಣಿಕ ಚಟುವಟಿಕೆಗಳನ್ನು ನಡೆಸುತ್ತಿದೆ. ಭೌತಿಕ ತರಗತಿಗಳನ್ನು ನಡೆಸದ ಕಾರಣ ಶಾಲೆಯು ಸ್ವಾಭಾವಿಕವಾಗಿ ಶುಲ್ಕವನ್ನು ಕಡಿತಗೊಳಿಸಬೇಕಿತ್ತು. ಭೋದನಾ ಶುಲ್ಕವನ್ನು ಮಾತ್ರ ವಿದ್ಯಾರ್ಥಿಗಳಿಂದ ಕಟ್ಟಿಸಿಕೊಳ್ಳಬೇಕೆಂಬ ಸರ್ಕಾರದ ನಿಯಮದನುಸಾರ ಶಾಲೆಯ ಶುಲ್ಕ ಕಳೆದ ವರ್ಷಕ್ಕಿಂತ ಈ ವರ್ಷ ಕಡಿಮೆಯಾಗಬೇಕಿತ್ತು. ಆದರೆ ಶಾಲಾ ಅಡಳಿತ ಈ ವರ್ಷ ಕಳೆದ ವರ್ಷಕ್ಕಿಂತ ಶೇ 30% ಶುಲ್ಕವನ್ನು ಹೆಚ್ಚಿಸಿದೆ ಎಂದು ಶಾಲೆಯ ಈ ನಡೆಯಿಂದ ಬೇಸರಗೊಂಡ ಪೋಷಕರು ತಿಳಿಸಿದ್ದಾರೆ.

ಬೊಮ್ಮಸಂದ್ರದ ಅನ್ವಿತಾ (ಹೆಸರು ಬದಲಾಯಿಸಲಾಗಿದೆ) ಎಲೆಕ್ಟ್ರಾನಿಕ್‌ ಸಿಟಿಯ ಎಬೆನೇಜರ್‌ ಇಂಟರ್‌ನ್ಯಾಷನಲ್‌ ಸ್ಕೂಲ್‌ನಲ್ಲಿ 6 ತರಗತಿಯ ಐಸಿಎಸ್‌ಸಿ ಪಠ್ಯಕ್ರಮದಲ್ಲಿ ಓದುತ್ತಿದ್ದಾರೆ. ಆಕೆಯ ತಮ್ಮ ಅನುಷ್‌ (ಹೆಸರು ಬದಲಾಯಿಸಲಾಗಿದೆ) ಅದೇ ಸ್ಕೂಲ್‌ನಲ್ಲಿ 5 ನೇ ತರಗತಿಯಲ್ಲಿ ಓದುತ್ತಿದ್ದಾನೆ. ಶಾಲೆ ಆಡಳಿತ ಮಂಡಳಿ ಶುಲ್ಕ ಪಾವತಿಸಿಲ್ಲ ಎಂಬ ಕಾರಣದಿಂದ ಜುಲೈ 1 ರಿಂದ ಇವರಿಬ್ಬರ ಆನ್‌ಲೈನ್‌ ತರಗತಿಗಳನ್ನು ನಿಲ್ಲಿಸಿದೆ. ಪೋಷಕರಾದ ಜಗಮೋಹನ್‌ ರೆಡ್ಡಿ (ಹೆಸರು ಬದಲಾಯಿಸಲಾಗಿದೆ) ಸ್ಕೂಲ್ ಆಡಳಿತವನ್ನು ಈ ಕುರಿತು ಸಂಪರ್ಕಿಸಿದರೂ ಸರಿಯಾದ ಸ್ಪಂದನೆ ದೊರೆತಿಲ್ಲ. ಕಳೆದ 12 ದಿನಗಳಿಂದ ಮಕ್ಕಳ ತರಗತಿಗಳು ನಿಂತು ಹೋಗಿವೆ. ತಾಂತ್ರಿಕ ಕಾರಣಗಳದಿಂದ ತರಗತಿ ನಡೆಯುತ್ತಿಲ್ಲವೆಂದು ಶಾಲೆ ಆಡಳಿತ ನಮಗೆ ಹೇಳುತ್ತಿದೆ. ಆದರೆ ನಮ್ಮ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಳೆದ ವರ್ಷ 1,40,000 ರೂ. ಗಳಷ್ಟಿದ್ದ ಶಾಲಾ ಶುಲ್ಕ ಈ ವರ್ಷ 1,70,000 ರೂಗೆ ಹೆಚ್ಚಳವಾಗಿದೆ. ಬೋಧನಾ ಶುಲ್ಕವನ್ನೇ 1,70,000 ಕ್ಕೆ ಹೆಚ್ಚಿಸುವ ಮೂಲಕ ಶಾಲೆ ಆಡಳಿತ ಸರ್ಕಾರಿ ನಿಯಮಗಳನ್ನು ಉಲ್ಲಂಘಿಸಿದೆ ಎಂದು ಪೋಷಕರು ಆರೋಪಿಸಿದ್ದಾರೆ.

ಎಬೆನೇಜರ್‌ ಶಾಲೆಯ ಶುಲ್ಕ ವಿವರ

ಶಾಲೆಯ ಆಡಳಿತ ಒಟ್ಟು ಶುಲ್ಕದಲ್ಲಿ ಬೇರೆ ಬೇರೆ ವಿಭಾಗಗಳನ್ನು ಮಾಡದೇ ಬೋಧನಾ ಶುಲ್ಕದ ಹೆಸರಿನಲ್ಲಿ ಕಳೆದ ವರ್ಷಕ್ಕಿಂತ ಹೆಚ್ಚು ಫೀಸ್‌ ವಿಧಿಸಿದೆ.

ಇದನ್ನೂ ಓದಿ: ಶಾಲಾ ಶುಲ್ಕ ಮನ್ನಾ ಮಾಡುವ ಪಿಐಎಲ್ ತಿರಸ್ಕರಿಸಿದ ದೆಹಲಿ ಹೈಕೋರ್ಟ್

“ಆನ್‌ಲೈನ್‌ ತರಗತಿಗಳನ್ನು ನಿಲ್ಲಿಸಿರುವುದೇಕೆ? ಎಂಬ ಪ್ರಶ್ನೆಗೆ ಶಾಲೆ ಇದುವರೆಗೆ ಉತ್ತರಿಸುತ್ತಿಲ್ಲ. ಫೀಸ್‌ ಕಟ್ಟದ ಕಾರಣಕ್ಕೇ ತರಗತಿಯನ್ನು ನೀಡುತ್ತಿಲ್ಲವೆ ಎಂಬ ಪ್ರಶ್ನೆಗೆ ಉತ್ತರಿಸಲು ಶಾಲೆ ಸಿದ್ಧವಿಲ್ಲ. ಶಾಲೆಗೆ ಬನ್ನಿ ಮಾತನಾಡೋಣ, ಸಮಸ್ಯೆಯನ್ನು ಬಗೆಹರಿಸಿಕೊಳ್ಳೋಣ ಎಂಬ ಉತ್ತರ ಶಾಲೆ ಕಡೆಯಿಂದ ಪ್ರತಿ ಸಾರಿ ಕೇಳಿ ಬರುತ್ತಿದೆ” ಎಂದು ಪೋಷಕರು ದೂರಿದ್ದಾರೆ.

ಪೋಷಕರ ಆರೋಪದ ಕುರಿತು ಶಾಲೆ ಆಡಳಿತ ಮಂಡಳಿಯ ಪ್ರತಿಕ್ರಿಯೆ ಪಡೆಯಲು ನಾನುಗೌರಿ.ಕಾಂ ಪ್ರಯತ್ನಿಸಿತು. “ನಾವು ಯಾವುದೇ ಮಕ್ಕಳ ಆನ್‌ಲೈನ್ ತರಗತಿಗಳನ್ನು ನಿಲ್ಲಿಸಿಲ್ಲ. ಕೆಲವು ತಾಂತ್ರಿಕ ಕಾರಣಗಳಿಂದ ತರಗತಿಗಳು ಆರಂಭವಾಗಿಲ್ಲ. ಶೀ‍ಘ್ರದಲ್ಲಿ ಸಮಸ್ಯೆ ಬಗೆಹರಿಸಲಾಗುತ್ತದೆ. ಬೋಧನಾ ಶುಲ್ಕದಲ್ಲಿ ಹೆಚ್ಚಳ ಮಾಡಿರುವುದು ಶಾಲಾ ಆಡಳಿತದ ನಿರ್ಧಾರ.” ಎಂದು ಹೇಳಿದ್ದಾರೆ.

ಇದನ್ನೂ ಓದಿ: 30% ಶುಲ್ಕ ಕಡಿತ: ಸರ್ಕಾರದ ವಿರುದ್ಧ ಬೀದಿಗಿಳಿದ ಖಾಸಗಿ ಶಾಲಾ ಶಿಕ್ಷಕರು, ಸಿಬ್ಬಂದಿಗಳು

ಒಂದು ಕಡೆ ಮಕ್ಕಳಿಂದ ಹೆಚ್ಚು ಶುಲ್ಕ ವಸೂಲಿ ಮಾಡುವ ಶಾಲೆ ತನ್ನ ಸಿಬ್ಬಂದಿಗೆ ಮಾತ್ರ ವೇತನ ಕಡಿತಗೊಳಿಸಿ ಶೇ. 50% ಹಣ ನೀಡುತ್ತಿದ್ದಾರೆ ಎಂದು ಹೆಸರು ಹೇಳಲಿಚ್ಚಿಸದ ಸಿಬ್ಬಂದಿಯೊಬ್ಬರು ಎಬೆನೆಜರ್ ಶಾಲೆ ಆಡಳಿತದಿಂದ ವಿರುದ್ಧ ಆರೋಪಿಸಿದ್ದಾರೆ. ಇದನ್ನೂ ಸಹ ಶಾಲೆಯ ಆಡಳಿತಾಧಿಕಾರಿ ನಿರಾಕರಿಸಿದ್ದಾರೆ.

ತದನಂತರ “ಶಾಲೆಯ ಆಡಳಿತ  ತಮ್ಮನ್ನು ಕರೆಸಿ ಮಾತನಾಡಿದ್ದು, ಸಮಸ್ಯೆ ಬಗೆಹರಿಸಿರುವುದಾಗಿ ಭರವಸೆ ನೀಡಿದ್ದು, ಎರಡು ದಿನದಲ್ಲಿ ಆನ್‌ಲೈನ್ ಶಿಕ್ಷಣ ಆರಂಭಿಸಲಾಗುವುದು. ಶುಲ್ಕವನ್ನು ಸಾಧ್ಯವಾದಾಗ ಕಟ್ಟಿ ಎಂದಿದ್ದಾರೆ” ಎಂದು ಪೋಷಕರು ತಿಳಿಸಿದ್ದಾರೆ.

ಬೋಧನಾ ಶುಲ್ಕದ ಹೆಸರಿನಲ್ಲಿ ಖಾಸಗಿ ಶಾಲೆಗಳು ಲಕ್ಷಾಂತರ ಹಣವನ್ನು ವಸೂಲಿ ಮಾಡುತ್ತಿರುವುದು ಇನ್ನೂ ಅನೇಕ ಕಡೆ ಬೆಳಕಿಗೆ ಬಂದಿದೆ. ಮಕ್ಕಳ ಆನ್‌ಲೈನ್‌ ತರಗತಿಗಳನ್ನು ನಿಲ್ಲಿಸುವ ಭಯದಿಂದ ಪೋಷಕರು ದೂರು ನೀಡಲು ಈ ಸಂಬಂಧ ಮುಂದೆ ಬರುತ್ತಿಲ್ಲ. ಸರ್ಕಾರ ಮತ್ತು ಶಿಕ್ಷಣ ಸಚಿವರು ಈ ಸಂಬಂಧ ಗಮನಹರಿಸಿ ಖಾಸಗಿ ಶಾಲೆಗಳ ಸುಲಿಗೆಯಿಂದ ಪೋಷಕರನ್ನು ರಕ್ಷಿಸಬೇಕಿದೆ. ಹಾಗೇ ಖಾಸಗಿ ಶಾಲೆಗಳು ಸಿಬ್ಬಂದಿಗಳಿಗೆ ಸರಿಯಾಗಿ ವೇತನ ನೀಡುವಂತೆ ಎಚ್ಚರಿಕೆ ನೀಡಬೇಕಿದೆ.

-ರಾಜೇಶ್‌ ಹೆಬ್ಬಾರ್‌


ಇದನ್ನೂ ಓದಿ: ಶಾಲಾ ಶುಲ್ಕ ವಿಚಾರ: ಸರ್ಕಾರ ನಿಗದಿಪಡಿಸುವ ಶುಲ್ಕಕ್ಕೆ ಬದ್ಧ ಎಂದ ಆಡಳಿತ ಮಂಡಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...