Homeಕರ್ನಾಟಕಶುಲ್ಕ ಪಾವತಿಸದ ಮಕ್ಕಳ ಆನ್‌ಲೈನ್‌ ತರಗತಿ ಬಂದ್ ಮಾಡಿದ ಖಾಸಗಿ ಶಾಲೆ: ಪೋಷಕರ ಆಕ್ರೋಶ

ಶುಲ್ಕ ಪಾವತಿಸದ ಮಕ್ಕಳ ಆನ್‌ಲೈನ್‌ ತರಗತಿ ಬಂದ್ ಮಾಡಿದ ಖಾಸಗಿ ಶಾಲೆ: ಪೋಷಕರ ಆಕ್ರೋಶ

- Advertisement -
- Advertisement -

ಕೋವಿಡ್‌ ಕಾರಣದಿಂದ ಕಳೆದೊಂದು ವರ್ಷದಿಂದ ಶಾಲೆಗಳು ತೆರೆದಿಲ್ಲ. ಭೌತಿಕ ತರಗತಿಗಳು ನಿಂತಿವೆ. ಆನ್‌ಲೈನ್‌ ಶಿಕ್ಷಣ ವ್ಯವಸ್ಥೆ ಜಾರಿಯಲ್ಲಿದೆ. ಮಕ್ಕಳು ಆನ್‌ಲೈನ್‌ ಮುಖಾಂತರವೇ ತರಗತಿಗಳಿಗೆ ಹಾಜರಾಗುತ್ತಿದ್ದಾರೆ. ಶಾಲೆಗಳನ್ನು ತೆರೆಯದಿದ್ದರೂ ಸಹ ಶುಲ್ಕ ವಸೂಲಿ ಮಾತ್ರ ನಿಂತಿಲ್ಲ. ಮುಖ್ಯವಾಗಿ ಖಾಸಗಿ ಶಾಲೆಗಳು ಕೋವಿಡ್‌ ಸಮಯದಲ್ಲೂ ಸುಲಿಗೆಯಲ್ಲಿ ತೊಡಗಿವೆ ಎಂಬ ಆರೋಪ ಪೋಷಕರದ್ದು. ವಿದ್ಯಾರ್ಥಿ ಸ್ನೇಹಿ ಎಂದು ಹೇಳಿಕೊಳ್ಳುವ ಪ್ರತಿಷ್ಠಿತ ಕಾರ್ಪೊರೇಟ್‌ ಶಿಕ್ಷಣ ಸಂಸ್ಥೆಯೊಂದು ಶುಲ್ಕ ಪಾವತಿಸದ ಮಕ್ಕಳ ಆನ್‌ಲೈನ್ ತರಗತಿ ಬಂದ್ ಮಾಡಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.

ಸರ್ಕಾರ ಶುಲ್ಕ ನೀಡಲು ತಡವಾದರೂ ಮಕ್ಕಳ ತರಗತಿಗಳನ್ನು ನಿಲ್ಲಿಸುವಂತಿಲ್ಲ ಎಂದು ನಿಯಮಗಳನ್ನು ಹೊರಡಿಸಿದೆ. ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಬೆಂಗಳೂರಿನ ಎಬೆನೇಜರ್‌ ಇಂಟರ್‌ನ್ಯಾಷನಲ್‌ ಸ್ಕೂಲ್‌ ಅತಿ ಹೆಚ್ಚಿನ ಶುಲ್ಕವನ್ನು ವಸೂಲಿ ಮಾಡುತ್ತಿದೆ. ಈ ಸಂಬಂಧ ಪೋಷಕರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಶಾಲಾ ಶುಲ್ಕ ವಿಚಾರ: ಸಮಸ್ಯೆ ಬಗೆಹರಿಸುವಂತೆ ಸಿಎಂ ಯಡಿಯೂರಪ್ಪಗೆ ಸಿದ್ದರಾಮಯ್ಯ ಪತ್ರ

ಎಬೆನೆಜರ್ ಇಂಟರ್‌ನ್ಯಾಷನಲ್ ಸ್ಕೂಲ್ ಬೆಂಗಳೂರು(EISB) ರಾಜಧಾನಿಯ ಪ್ರತಿಷ್ಠಿತ ಶಾಲೆಗಳಲ್ಲಿ ಒಂದು. ಅಂತರಾಷ್ಟ್ರೀಯ ಪಠ್ಯಕ್ರಮವನ್ನು ಅಳವಡಿಸಿಕೊಂಡಿರುವ ಈ ಶಾಲೆಯಲ್ಲಿ ಸುಮಾರು 800ಕ್ಕೂ ಅಧಿಕ ವಿದ್ಯಾರ್ಥಿಗಳು ಓದುತ್ತಿದ್ದು ಕಳೆದ ಒಂದು ವರ್ಷದಿಂದ ಆನ್‌ಲೈನ್‌ ಮೂಲಕ ತರಗತಿಗಳನ್ನು ಮತ್ತು ಶೈಕ್ಷಣಿಕ ಚಟುವಟಿಕೆಗಳನ್ನು ನಡೆಸುತ್ತಿದೆ. ಭೌತಿಕ ತರಗತಿಗಳನ್ನು ನಡೆಸದ ಕಾರಣ ಶಾಲೆಯು ಸ್ವಾಭಾವಿಕವಾಗಿ ಶುಲ್ಕವನ್ನು ಕಡಿತಗೊಳಿಸಬೇಕಿತ್ತು. ಭೋದನಾ ಶುಲ್ಕವನ್ನು ಮಾತ್ರ ವಿದ್ಯಾರ್ಥಿಗಳಿಂದ ಕಟ್ಟಿಸಿಕೊಳ್ಳಬೇಕೆಂಬ ಸರ್ಕಾರದ ನಿಯಮದನುಸಾರ ಶಾಲೆಯ ಶುಲ್ಕ ಕಳೆದ ವರ್ಷಕ್ಕಿಂತ ಈ ವರ್ಷ ಕಡಿಮೆಯಾಗಬೇಕಿತ್ತು. ಆದರೆ ಶಾಲಾ ಅಡಳಿತ ಈ ವರ್ಷ ಕಳೆದ ವರ್ಷಕ್ಕಿಂತ ಶೇ 30% ಶುಲ್ಕವನ್ನು ಹೆಚ್ಚಿಸಿದೆ ಎಂದು ಶಾಲೆಯ ಈ ನಡೆಯಿಂದ ಬೇಸರಗೊಂಡ ಪೋಷಕರು ತಿಳಿಸಿದ್ದಾರೆ.

ಬೊಮ್ಮಸಂದ್ರದ ಅನ್ವಿತಾ (ಹೆಸರು ಬದಲಾಯಿಸಲಾಗಿದೆ) ಎಲೆಕ್ಟ್ರಾನಿಕ್‌ ಸಿಟಿಯ ಎಬೆನೇಜರ್‌ ಇಂಟರ್‌ನ್ಯಾಷನಲ್‌ ಸ್ಕೂಲ್‌ನಲ್ಲಿ 6 ತರಗತಿಯ ಐಸಿಎಸ್‌ಸಿ ಪಠ್ಯಕ್ರಮದಲ್ಲಿ ಓದುತ್ತಿದ್ದಾರೆ. ಆಕೆಯ ತಮ್ಮ ಅನುಷ್‌ (ಹೆಸರು ಬದಲಾಯಿಸಲಾಗಿದೆ) ಅದೇ ಸ್ಕೂಲ್‌ನಲ್ಲಿ 5 ನೇ ತರಗತಿಯಲ್ಲಿ ಓದುತ್ತಿದ್ದಾನೆ. ಶಾಲೆ ಆಡಳಿತ ಮಂಡಳಿ ಶುಲ್ಕ ಪಾವತಿಸಿಲ್ಲ ಎಂಬ ಕಾರಣದಿಂದ ಜುಲೈ 1 ರಿಂದ ಇವರಿಬ್ಬರ ಆನ್‌ಲೈನ್‌ ತರಗತಿಗಳನ್ನು ನಿಲ್ಲಿಸಿದೆ. ಪೋಷಕರಾದ ಜಗಮೋಹನ್‌ ರೆಡ್ಡಿ (ಹೆಸರು ಬದಲಾಯಿಸಲಾಗಿದೆ) ಸ್ಕೂಲ್ ಆಡಳಿತವನ್ನು ಈ ಕುರಿತು ಸಂಪರ್ಕಿಸಿದರೂ ಸರಿಯಾದ ಸ್ಪಂದನೆ ದೊರೆತಿಲ್ಲ. ಕಳೆದ 12 ದಿನಗಳಿಂದ ಮಕ್ಕಳ ತರಗತಿಗಳು ನಿಂತು ಹೋಗಿವೆ. ತಾಂತ್ರಿಕ ಕಾರಣಗಳದಿಂದ ತರಗತಿ ನಡೆಯುತ್ತಿಲ್ಲವೆಂದು ಶಾಲೆ ಆಡಳಿತ ನಮಗೆ ಹೇಳುತ್ತಿದೆ. ಆದರೆ ನಮ್ಮ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಳೆದ ವರ್ಷ 1,40,000 ರೂ. ಗಳಷ್ಟಿದ್ದ ಶಾಲಾ ಶುಲ್ಕ ಈ ವರ್ಷ 1,70,000 ರೂಗೆ ಹೆಚ್ಚಳವಾಗಿದೆ. ಬೋಧನಾ ಶುಲ್ಕವನ್ನೇ 1,70,000 ಕ್ಕೆ ಹೆಚ್ಚಿಸುವ ಮೂಲಕ ಶಾಲೆ ಆಡಳಿತ ಸರ್ಕಾರಿ ನಿಯಮಗಳನ್ನು ಉಲ್ಲಂಘಿಸಿದೆ ಎಂದು ಪೋಷಕರು ಆರೋಪಿಸಿದ್ದಾರೆ.

ಎಬೆನೇಜರ್‌ ಶಾಲೆಯ ಶುಲ್ಕ ವಿವರ

ಶಾಲೆಯ ಆಡಳಿತ ಒಟ್ಟು ಶುಲ್ಕದಲ್ಲಿ ಬೇರೆ ಬೇರೆ ವಿಭಾಗಗಳನ್ನು ಮಾಡದೇ ಬೋಧನಾ ಶುಲ್ಕದ ಹೆಸರಿನಲ್ಲಿ ಕಳೆದ ವರ್ಷಕ್ಕಿಂತ ಹೆಚ್ಚು ಫೀಸ್‌ ವಿಧಿಸಿದೆ.

ಇದನ್ನೂ ಓದಿ: ಶಾಲಾ ಶುಲ್ಕ ಮನ್ನಾ ಮಾಡುವ ಪಿಐಎಲ್ ತಿರಸ್ಕರಿಸಿದ ದೆಹಲಿ ಹೈಕೋರ್ಟ್

“ಆನ್‌ಲೈನ್‌ ತರಗತಿಗಳನ್ನು ನಿಲ್ಲಿಸಿರುವುದೇಕೆ? ಎಂಬ ಪ್ರಶ್ನೆಗೆ ಶಾಲೆ ಇದುವರೆಗೆ ಉತ್ತರಿಸುತ್ತಿಲ್ಲ. ಫೀಸ್‌ ಕಟ್ಟದ ಕಾರಣಕ್ಕೇ ತರಗತಿಯನ್ನು ನೀಡುತ್ತಿಲ್ಲವೆ ಎಂಬ ಪ್ರಶ್ನೆಗೆ ಉತ್ತರಿಸಲು ಶಾಲೆ ಸಿದ್ಧವಿಲ್ಲ. ಶಾಲೆಗೆ ಬನ್ನಿ ಮಾತನಾಡೋಣ, ಸಮಸ್ಯೆಯನ್ನು ಬಗೆಹರಿಸಿಕೊಳ್ಳೋಣ ಎಂಬ ಉತ್ತರ ಶಾಲೆ ಕಡೆಯಿಂದ ಪ್ರತಿ ಸಾರಿ ಕೇಳಿ ಬರುತ್ತಿದೆ” ಎಂದು ಪೋಷಕರು ದೂರಿದ್ದಾರೆ.

ಪೋಷಕರ ಆರೋಪದ ಕುರಿತು ಶಾಲೆ ಆಡಳಿತ ಮಂಡಳಿಯ ಪ್ರತಿಕ್ರಿಯೆ ಪಡೆಯಲು ನಾನುಗೌರಿ.ಕಾಂ ಪ್ರಯತ್ನಿಸಿತು. “ನಾವು ಯಾವುದೇ ಮಕ್ಕಳ ಆನ್‌ಲೈನ್ ತರಗತಿಗಳನ್ನು ನಿಲ್ಲಿಸಿಲ್ಲ. ಕೆಲವು ತಾಂತ್ರಿಕ ಕಾರಣಗಳಿಂದ ತರಗತಿಗಳು ಆರಂಭವಾಗಿಲ್ಲ. ಶೀ‍ಘ್ರದಲ್ಲಿ ಸಮಸ್ಯೆ ಬಗೆಹರಿಸಲಾಗುತ್ತದೆ. ಬೋಧನಾ ಶುಲ್ಕದಲ್ಲಿ ಹೆಚ್ಚಳ ಮಾಡಿರುವುದು ಶಾಲಾ ಆಡಳಿತದ ನಿರ್ಧಾರ.” ಎಂದು ಹೇಳಿದ್ದಾರೆ.

ಇದನ್ನೂ ಓದಿ: 30% ಶುಲ್ಕ ಕಡಿತ: ಸರ್ಕಾರದ ವಿರುದ್ಧ ಬೀದಿಗಿಳಿದ ಖಾಸಗಿ ಶಾಲಾ ಶಿಕ್ಷಕರು, ಸಿಬ್ಬಂದಿಗಳು

ಒಂದು ಕಡೆ ಮಕ್ಕಳಿಂದ ಹೆಚ್ಚು ಶುಲ್ಕ ವಸೂಲಿ ಮಾಡುವ ಶಾಲೆ ತನ್ನ ಸಿಬ್ಬಂದಿಗೆ ಮಾತ್ರ ವೇತನ ಕಡಿತಗೊಳಿಸಿ ಶೇ. 50% ಹಣ ನೀಡುತ್ತಿದ್ದಾರೆ ಎಂದು ಹೆಸರು ಹೇಳಲಿಚ್ಚಿಸದ ಸಿಬ್ಬಂದಿಯೊಬ್ಬರು ಎಬೆನೆಜರ್ ಶಾಲೆ ಆಡಳಿತದಿಂದ ವಿರುದ್ಧ ಆರೋಪಿಸಿದ್ದಾರೆ. ಇದನ್ನೂ ಸಹ ಶಾಲೆಯ ಆಡಳಿತಾಧಿಕಾರಿ ನಿರಾಕರಿಸಿದ್ದಾರೆ.

ತದನಂತರ “ಶಾಲೆಯ ಆಡಳಿತ  ತಮ್ಮನ್ನು ಕರೆಸಿ ಮಾತನಾಡಿದ್ದು, ಸಮಸ್ಯೆ ಬಗೆಹರಿಸಿರುವುದಾಗಿ ಭರವಸೆ ನೀಡಿದ್ದು, ಎರಡು ದಿನದಲ್ಲಿ ಆನ್‌ಲೈನ್ ಶಿಕ್ಷಣ ಆರಂಭಿಸಲಾಗುವುದು. ಶುಲ್ಕವನ್ನು ಸಾಧ್ಯವಾದಾಗ ಕಟ್ಟಿ ಎಂದಿದ್ದಾರೆ” ಎಂದು ಪೋಷಕರು ತಿಳಿಸಿದ್ದಾರೆ.

ಬೋಧನಾ ಶುಲ್ಕದ ಹೆಸರಿನಲ್ಲಿ ಖಾಸಗಿ ಶಾಲೆಗಳು ಲಕ್ಷಾಂತರ ಹಣವನ್ನು ವಸೂಲಿ ಮಾಡುತ್ತಿರುವುದು ಇನ್ನೂ ಅನೇಕ ಕಡೆ ಬೆಳಕಿಗೆ ಬಂದಿದೆ. ಮಕ್ಕಳ ಆನ್‌ಲೈನ್‌ ತರಗತಿಗಳನ್ನು ನಿಲ್ಲಿಸುವ ಭಯದಿಂದ ಪೋಷಕರು ದೂರು ನೀಡಲು ಈ ಸಂಬಂಧ ಮುಂದೆ ಬರುತ್ತಿಲ್ಲ. ಸರ್ಕಾರ ಮತ್ತು ಶಿಕ್ಷಣ ಸಚಿವರು ಈ ಸಂಬಂಧ ಗಮನಹರಿಸಿ ಖಾಸಗಿ ಶಾಲೆಗಳ ಸುಲಿಗೆಯಿಂದ ಪೋಷಕರನ್ನು ರಕ್ಷಿಸಬೇಕಿದೆ. ಹಾಗೇ ಖಾಸಗಿ ಶಾಲೆಗಳು ಸಿಬ್ಬಂದಿಗಳಿಗೆ ಸರಿಯಾಗಿ ವೇತನ ನೀಡುವಂತೆ ಎಚ್ಚರಿಕೆ ನೀಡಬೇಕಿದೆ.

-ರಾಜೇಶ್‌ ಹೆಬ್ಬಾರ್‌


ಇದನ್ನೂ ಓದಿ: ಶಾಲಾ ಶುಲ್ಕ ವಿಚಾರ: ಸರ್ಕಾರ ನಿಗದಿಪಡಿಸುವ ಶುಲ್ಕಕ್ಕೆ ಬದ್ಧ ಎಂದ ಆಡಳಿತ ಮಂಡಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...