Homeಕರ್ನಾಟಕಶುಲ್ಕ ಪಾವತಿಸದ ಮಕ್ಕಳ ಆನ್‌ಲೈನ್‌ ತರಗತಿ ಬಂದ್ ಮಾಡಿದ ಖಾಸಗಿ ಶಾಲೆ: ಪೋಷಕರ ಆಕ್ರೋಶ

ಶುಲ್ಕ ಪಾವತಿಸದ ಮಕ್ಕಳ ಆನ್‌ಲೈನ್‌ ತರಗತಿ ಬಂದ್ ಮಾಡಿದ ಖಾಸಗಿ ಶಾಲೆ: ಪೋಷಕರ ಆಕ್ರೋಶ

- Advertisement -
- Advertisement -

ಕೋವಿಡ್‌ ಕಾರಣದಿಂದ ಕಳೆದೊಂದು ವರ್ಷದಿಂದ ಶಾಲೆಗಳು ತೆರೆದಿಲ್ಲ. ಭೌತಿಕ ತರಗತಿಗಳು ನಿಂತಿವೆ. ಆನ್‌ಲೈನ್‌ ಶಿಕ್ಷಣ ವ್ಯವಸ್ಥೆ ಜಾರಿಯಲ್ಲಿದೆ. ಮಕ್ಕಳು ಆನ್‌ಲೈನ್‌ ಮುಖಾಂತರವೇ ತರಗತಿಗಳಿಗೆ ಹಾಜರಾಗುತ್ತಿದ್ದಾರೆ. ಶಾಲೆಗಳನ್ನು ತೆರೆಯದಿದ್ದರೂ ಸಹ ಶುಲ್ಕ ವಸೂಲಿ ಮಾತ್ರ ನಿಂತಿಲ್ಲ. ಮುಖ್ಯವಾಗಿ ಖಾಸಗಿ ಶಾಲೆಗಳು ಕೋವಿಡ್‌ ಸಮಯದಲ್ಲೂ ಸುಲಿಗೆಯಲ್ಲಿ ತೊಡಗಿವೆ ಎಂಬ ಆರೋಪ ಪೋಷಕರದ್ದು. ವಿದ್ಯಾರ್ಥಿ ಸ್ನೇಹಿ ಎಂದು ಹೇಳಿಕೊಳ್ಳುವ ಪ್ರತಿಷ್ಠಿತ ಕಾರ್ಪೊರೇಟ್‌ ಶಿಕ್ಷಣ ಸಂಸ್ಥೆಯೊಂದು ಶುಲ್ಕ ಪಾವತಿಸದ ಮಕ್ಕಳ ಆನ್‌ಲೈನ್ ತರಗತಿ ಬಂದ್ ಮಾಡಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.

ಸರ್ಕಾರ ಶುಲ್ಕ ನೀಡಲು ತಡವಾದರೂ ಮಕ್ಕಳ ತರಗತಿಗಳನ್ನು ನಿಲ್ಲಿಸುವಂತಿಲ್ಲ ಎಂದು ನಿಯಮಗಳನ್ನು ಹೊರಡಿಸಿದೆ. ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಬೆಂಗಳೂರಿನ ಎಬೆನೇಜರ್‌ ಇಂಟರ್‌ನ್ಯಾಷನಲ್‌ ಸ್ಕೂಲ್‌ ಅತಿ ಹೆಚ್ಚಿನ ಶುಲ್ಕವನ್ನು ವಸೂಲಿ ಮಾಡುತ್ತಿದೆ. ಈ ಸಂಬಂಧ ಪೋಷಕರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಶಾಲಾ ಶುಲ್ಕ ವಿಚಾರ: ಸಮಸ್ಯೆ ಬಗೆಹರಿಸುವಂತೆ ಸಿಎಂ ಯಡಿಯೂರಪ್ಪಗೆ ಸಿದ್ದರಾಮಯ್ಯ ಪತ್ರ

ಎಬೆನೆಜರ್ ಇಂಟರ್‌ನ್ಯಾಷನಲ್ ಸ್ಕೂಲ್ ಬೆಂಗಳೂರು(EISB) ರಾಜಧಾನಿಯ ಪ್ರತಿಷ್ಠಿತ ಶಾಲೆಗಳಲ್ಲಿ ಒಂದು. ಅಂತರಾಷ್ಟ್ರೀಯ ಪಠ್ಯಕ್ರಮವನ್ನು ಅಳವಡಿಸಿಕೊಂಡಿರುವ ಈ ಶಾಲೆಯಲ್ಲಿ ಸುಮಾರು 800ಕ್ಕೂ ಅಧಿಕ ವಿದ್ಯಾರ್ಥಿಗಳು ಓದುತ್ತಿದ್ದು ಕಳೆದ ಒಂದು ವರ್ಷದಿಂದ ಆನ್‌ಲೈನ್‌ ಮೂಲಕ ತರಗತಿಗಳನ್ನು ಮತ್ತು ಶೈಕ್ಷಣಿಕ ಚಟುವಟಿಕೆಗಳನ್ನು ನಡೆಸುತ್ತಿದೆ. ಭೌತಿಕ ತರಗತಿಗಳನ್ನು ನಡೆಸದ ಕಾರಣ ಶಾಲೆಯು ಸ್ವಾಭಾವಿಕವಾಗಿ ಶುಲ್ಕವನ್ನು ಕಡಿತಗೊಳಿಸಬೇಕಿತ್ತು. ಭೋದನಾ ಶುಲ್ಕವನ್ನು ಮಾತ್ರ ವಿದ್ಯಾರ್ಥಿಗಳಿಂದ ಕಟ್ಟಿಸಿಕೊಳ್ಳಬೇಕೆಂಬ ಸರ್ಕಾರದ ನಿಯಮದನುಸಾರ ಶಾಲೆಯ ಶುಲ್ಕ ಕಳೆದ ವರ್ಷಕ್ಕಿಂತ ಈ ವರ್ಷ ಕಡಿಮೆಯಾಗಬೇಕಿತ್ತು. ಆದರೆ ಶಾಲಾ ಅಡಳಿತ ಈ ವರ್ಷ ಕಳೆದ ವರ್ಷಕ್ಕಿಂತ ಶೇ 30% ಶುಲ್ಕವನ್ನು ಹೆಚ್ಚಿಸಿದೆ ಎಂದು ಶಾಲೆಯ ಈ ನಡೆಯಿಂದ ಬೇಸರಗೊಂಡ ಪೋಷಕರು ತಿಳಿಸಿದ್ದಾರೆ.

ಬೊಮ್ಮಸಂದ್ರದ ಅನ್ವಿತಾ (ಹೆಸರು ಬದಲಾಯಿಸಲಾಗಿದೆ) ಎಲೆಕ್ಟ್ರಾನಿಕ್‌ ಸಿಟಿಯ ಎಬೆನೇಜರ್‌ ಇಂಟರ್‌ನ್ಯಾಷನಲ್‌ ಸ್ಕೂಲ್‌ನಲ್ಲಿ 6 ತರಗತಿಯ ಐಸಿಎಸ್‌ಸಿ ಪಠ್ಯಕ್ರಮದಲ್ಲಿ ಓದುತ್ತಿದ್ದಾರೆ. ಆಕೆಯ ತಮ್ಮ ಅನುಷ್‌ (ಹೆಸರು ಬದಲಾಯಿಸಲಾಗಿದೆ) ಅದೇ ಸ್ಕೂಲ್‌ನಲ್ಲಿ 5 ನೇ ತರಗತಿಯಲ್ಲಿ ಓದುತ್ತಿದ್ದಾನೆ. ಶಾಲೆ ಆಡಳಿತ ಮಂಡಳಿ ಶುಲ್ಕ ಪಾವತಿಸಿಲ್ಲ ಎಂಬ ಕಾರಣದಿಂದ ಜುಲೈ 1 ರಿಂದ ಇವರಿಬ್ಬರ ಆನ್‌ಲೈನ್‌ ತರಗತಿಗಳನ್ನು ನಿಲ್ಲಿಸಿದೆ. ಪೋಷಕರಾದ ಜಗಮೋಹನ್‌ ರೆಡ್ಡಿ (ಹೆಸರು ಬದಲಾಯಿಸಲಾಗಿದೆ) ಸ್ಕೂಲ್ ಆಡಳಿತವನ್ನು ಈ ಕುರಿತು ಸಂಪರ್ಕಿಸಿದರೂ ಸರಿಯಾದ ಸ್ಪಂದನೆ ದೊರೆತಿಲ್ಲ. ಕಳೆದ 12 ದಿನಗಳಿಂದ ಮಕ್ಕಳ ತರಗತಿಗಳು ನಿಂತು ಹೋಗಿವೆ. ತಾಂತ್ರಿಕ ಕಾರಣಗಳದಿಂದ ತರಗತಿ ನಡೆಯುತ್ತಿಲ್ಲವೆಂದು ಶಾಲೆ ಆಡಳಿತ ನಮಗೆ ಹೇಳುತ್ತಿದೆ. ಆದರೆ ನಮ್ಮ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಳೆದ ವರ್ಷ 1,40,000 ರೂ. ಗಳಷ್ಟಿದ್ದ ಶಾಲಾ ಶುಲ್ಕ ಈ ವರ್ಷ 1,70,000 ರೂಗೆ ಹೆಚ್ಚಳವಾಗಿದೆ. ಬೋಧನಾ ಶುಲ್ಕವನ್ನೇ 1,70,000 ಕ್ಕೆ ಹೆಚ್ಚಿಸುವ ಮೂಲಕ ಶಾಲೆ ಆಡಳಿತ ಸರ್ಕಾರಿ ನಿಯಮಗಳನ್ನು ಉಲ್ಲಂಘಿಸಿದೆ ಎಂದು ಪೋಷಕರು ಆರೋಪಿಸಿದ್ದಾರೆ.

ಎಬೆನೇಜರ್‌ ಶಾಲೆಯ ಶುಲ್ಕ ವಿವರ

ಶಾಲೆಯ ಆಡಳಿತ ಒಟ್ಟು ಶುಲ್ಕದಲ್ಲಿ ಬೇರೆ ಬೇರೆ ವಿಭಾಗಗಳನ್ನು ಮಾಡದೇ ಬೋಧನಾ ಶುಲ್ಕದ ಹೆಸರಿನಲ್ಲಿ ಕಳೆದ ವರ್ಷಕ್ಕಿಂತ ಹೆಚ್ಚು ಫೀಸ್‌ ವಿಧಿಸಿದೆ.

ಇದನ್ನೂ ಓದಿ: ಶಾಲಾ ಶುಲ್ಕ ಮನ್ನಾ ಮಾಡುವ ಪಿಐಎಲ್ ತಿರಸ್ಕರಿಸಿದ ದೆಹಲಿ ಹೈಕೋರ್ಟ್

“ಆನ್‌ಲೈನ್‌ ತರಗತಿಗಳನ್ನು ನಿಲ್ಲಿಸಿರುವುದೇಕೆ? ಎಂಬ ಪ್ರಶ್ನೆಗೆ ಶಾಲೆ ಇದುವರೆಗೆ ಉತ್ತರಿಸುತ್ತಿಲ್ಲ. ಫೀಸ್‌ ಕಟ್ಟದ ಕಾರಣಕ್ಕೇ ತರಗತಿಯನ್ನು ನೀಡುತ್ತಿಲ್ಲವೆ ಎಂಬ ಪ್ರಶ್ನೆಗೆ ಉತ್ತರಿಸಲು ಶಾಲೆ ಸಿದ್ಧವಿಲ್ಲ. ಶಾಲೆಗೆ ಬನ್ನಿ ಮಾತನಾಡೋಣ, ಸಮಸ್ಯೆಯನ್ನು ಬಗೆಹರಿಸಿಕೊಳ್ಳೋಣ ಎಂಬ ಉತ್ತರ ಶಾಲೆ ಕಡೆಯಿಂದ ಪ್ರತಿ ಸಾರಿ ಕೇಳಿ ಬರುತ್ತಿದೆ” ಎಂದು ಪೋಷಕರು ದೂರಿದ್ದಾರೆ.

ಪೋಷಕರ ಆರೋಪದ ಕುರಿತು ಶಾಲೆ ಆಡಳಿತ ಮಂಡಳಿಯ ಪ್ರತಿಕ್ರಿಯೆ ಪಡೆಯಲು ನಾನುಗೌರಿ.ಕಾಂ ಪ್ರಯತ್ನಿಸಿತು. “ನಾವು ಯಾವುದೇ ಮಕ್ಕಳ ಆನ್‌ಲೈನ್ ತರಗತಿಗಳನ್ನು ನಿಲ್ಲಿಸಿಲ್ಲ. ಕೆಲವು ತಾಂತ್ರಿಕ ಕಾರಣಗಳಿಂದ ತರಗತಿಗಳು ಆರಂಭವಾಗಿಲ್ಲ. ಶೀ‍ಘ್ರದಲ್ಲಿ ಸಮಸ್ಯೆ ಬಗೆಹರಿಸಲಾಗುತ್ತದೆ. ಬೋಧನಾ ಶುಲ್ಕದಲ್ಲಿ ಹೆಚ್ಚಳ ಮಾಡಿರುವುದು ಶಾಲಾ ಆಡಳಿತದ ನಿರ್ಧಾರ.” ಎಂದು ಹೇಳಿದ್ದಾರೆ.

ಇದನ್ನೂ ಓದಿ: 30% ಶುಲ್ಕ ಕಡಿತ: ಸರ್ಕಾರದ ವಿರುದ್ಧ ಬೀದಿಗಿಳಿದ ಖಾಸಗಿ ಶಾಲಾ ಶಿಕ್ಷಕರು, ಸಿಬ್ಬಂದಿಗಳು

ಒಂದು ಕಡೆ ಮಕ್ಕಳಿಂದ ಹೆಚ್ಚು ಶುಲ್ಕ ವಸೂಲಿ ಮಾಡುವ ಶಾಲೆ ತನ್ನ ಸಿಬ್ಬಂದಿಗೆ ಮಾತ್ರ ವೇತನ ಕಡಿತಗೊಳಿಸಿ ಶೇ. 50% ಹಣ ನೀಡುತ್ತಿದ್ದಾರೆ ಎಂದು ಹೆಸರು ಹೇಳಲಿಚ್ಚಿಸದ ಸಿಬ್ಬಂದಿಯೊಬ್ಬರು ಎಬೆನೆಜರ್ ಶಾಲೆ ಆಡಳಿತದಿಂದ ವಿರುದ್ಧ ಆರೋಪಿಸಿದ್ದಾರೆ. ಇದನ್ನೂ ಸಹ ಶಾಲೆಯ ಆಡಳಿತಾಧಿಕಾರಿ ನಿರಾಕರಿಸಿದ್ದಾರೆ.

ತದನಂತರ “ಶಾಲೆಯ ಆಡಳಿತ  ತಮ್ಮನ್ನು ಕರೆಸಿ ಮಾತನಾಡಿದ್ದು, ಸಮಸ್ಯೆ ಬಗೆಹರಿಸಿರುವುದಾಗಿ ಭರವಸೆ ನೀಡಿದ್ದು, ಎರಡು ದಿನದಲ್ಲಿ ಆನ್‌ಲೈನ್ ಶಿಕ್ಷಣ ಆರಂಭಿಸಲಾಗುವುದು. ಶುಲ್ಕವನ್ನು ಸಾಧ್ಯವಾದಾಗ ಕಟ್ಟಿ ಎಂದಿದ್ದಾರೆ” ಎಂದು ಪೋಷಕರು ತಿಳಿಸಿದ್ದಾರೆ.

ಬೋಧನಾ ಶುಲ್ಕದ ಹೆಸರಿನಲ್ಲಿ ಖಾಸಗಿ ಶಾಲೆಗಳು ಲಕ್ಷಾಂತರ ಹಣವನ್ನು ವಸೂಲಿ ಮಾಡುತ್ತಿರುವುದು ಇನ್ನೂ ಅನೇಕ ಕಡೆ ಬೆಳಕಿಗೆ ಬಂದಿದೆ. ಮಕ್ಕಳ ಆನ್‌ಲೈನ್‌ ತರಗತಿಗಳನ್ನು ನಿಲ್ಲಿಸುವ ಭಯದಿಂದ ಪೋಷಕರು ದೂರು ನೀಡಲು ಈ ಸಂಬಂಧ ಮುಂದೆ ಬರುತ್ತಿಲ್ಲ. ಸರ್ಕಾರ ಮತ್ತು ಶಿಕ್ಷಣ ಸಚಿವರು ಈ ಸಂಬಂಧ ಗಮನಹರಿಸಿ ಖಾಸಗಿ ಶಾಲೆಗಳ ಸುಲಿಗೆಯಿಂದ ಪೋಷಕರನ್ನು ರಕ್ಷಿಸಬೇಕಿದೆ. ಹಾಗೇ ಖಾಸಗಿ ಶಾಲೆಗಳು ಸಿಬ್ಬಂದಿಗಳಿಗೆ ಸರಿಯಾಗಿ ವೇತನ ನೀಡುವಂತೆ ಎಚ್ಚರಿಕೆ ನೀಡಬೇಕಿದೆ.

-ರಾಜೇಶ್‌ ಹೆಬ್ಬಾರ್‌


ಇದನ್ನೂ ಓದಿ: ಶಾಲಾ ಶುಲ್ಕ ವಿಚಾರ: ಸರ್ಕಾರ ನಿಗದಿಪಡಿಸುವ ಶುಲ್ಕಕ್ಕೆ ಬದ್ಧ ಎಂದ ಆಡಳಿತ ಮಂಡಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...