Homeಮುಖಪುಟಚುನಾವಣಾ ಆಯೋಗ ಸದಾ ಮೋದಿ ಸರ್ಕಾರದ ಕೈಗೊಂಬೆಯಾಗಿದೆ: ಕಪಿಲ್ ಸಿಬಲ್

ಚುನಾವಣಾ ಆಯೋಗ ಸದಾ ಮೋದಿ ಸರ್ಕಾರದ ಕೈಗೊಂಬೆಯಾಗಿದೆ: ಕಪಿಲ್ ಸಿಬಲ್

- Advertisement -
- Advertisement -

ಚುನಾವಣಾ ಆಯೋಗ ಯಾವಾಗಲೂ ಮೋದಿ ಸರ್ಕಾರದ ಕೈಗೊಂಬೆಯಾಗಿದೆ ಎಂದು ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಆರೋಪಿಸಿದ್ದಾರೆ. ಬಿಹಾರದಲ್ಲಿ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಬಹುಸಂಖ್ಯಾತರ ಸರ್ಕಾರಗಳು ಅಧಿಕಾರದಲ್ಲಿ ಉಳಿಯುವಂತೆ ಮಾಡುವ ಗುರಿಯನ್ನು ಹೊಂದಿರುವ ‘ಅಸಂವಿಧಾನಿಕ’ ಕ್ರಮ ಎಂದು ಅವರು ಟೀಕಿಸಿದ್ದಾರೆ.

“ಪ್ರತಿಯೊಬ್ಬ ಚುನಾವಣಾ ಆಯುಕ್ತರೂ ಸರ್ಕಾರದೊಂದಿಗಿನ ಹೊಂದಾಣಿಕೆಯಲ್ಲಿ ಅವರ ಹಿಂದಿನವರನ್ನು ಮೀರಿಸುತ್ತಾರೆ” ಎಂದು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಸಿಬಲ್ ಹೇಳಿದ್ದಾರೆ.

ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯನ್ನು ಟೀಕಿಸಿದ ಸಿಬಲ್, “ಚುನಾವಣಾ ಆಯೋಗ ಪೌರತ್ವದ ತಕರಾರುಗಳನ್ನು ನಿರ್ಧರಿಸುವ ಅಧಿಕಾರ ಹೊಂದಿಲ್ಲ”ಎಂದಿದ್ದಾರೆ.

ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ಮೇಲೆ ಪ್ರತಿಪಕ್ಷಗಳು ನಡೆಸುತ್ತಿರುವ ವಾಗ್ವಾಳಿ ಬಗ್ಗೆ ಕೇಳಿದಾಗ “ಈ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಚುನಾವಣಾ ಆಯೋಗ ಅದರ ಕೈಗೊಂಬೆಯಾಗಿದೆ. ಚುನಾವಣಾ ಆಯೋಗದ ನಡವಳಿಕೆ ಬಗ್ಗೆ ಕಡಿಮೆ ಮಾತನಾಡಿದಷ್ಟೂ ಒಳ್ಳೆಯದು” ಎಂದು ಹೇಳಿದ್ದಾರೆ.

“ಮತದಾರರ ಪಟ್ಟಿಯ ಪರಿಷ್ಕರಣೆಯು ಸಂಪೂರ್ಣವಾಗಿ ಸಂವಿಧಾನ ಬಾಹಿರವಾಗಿದೆ. ಚುನಾವಣಾ ಆಯೋಗಕ್ಕೆ, ಅದರಲ್ಲೂ ಒಬ್ಬ ಬ್ಲಾಕ್ ಮಟ್ಟದ ಅಧಿಕಾರಿಗೆ ಪೌರತ್ವದ ತಕರಾರುಗಳನ್ನು ನಿರ್ಧರಿಸುವ ಅಧಿಕಾರ ಇಲ್ಲ. ಅವರು (ಬಿಜೆಪಿ) ಚುನಾವಣೆ ಗೆಲ್ಲಲು ಸಾಧ್ಯವಿರುವ ಎಲ್ಲಾ ವಿಧಾನಗಳನ್ನು ಚುನಾವಣಾ ಆಯೋಗದವರು ಅಳವಡಿಸಿಕೊಳ್ಳುತ್ತಾರೆ. ವಾಸ್ತವವಾಗಿ, ವಿಶೇಷ ತೀವ್ರ ಪರಿಷ್ಕರಣೆಯು ಮುಂಬವರುವ ಎಲ್ಲಾ ಸಮಯದಲ್ಲೂ ಬಹು ಸಂಖ್ಯಾತರ ಸರ್ಕಾರಗಳನ್ನು ಉಳಿಸಿಕೊಳ್ಳುವ ಒಂದು ಪ್ರಕ್ರಿಯೆಯಾಗಿದೆ” ಕಪಿಲ್ ಸಿಬಲ್ ಆರೋಪಿಸಿದ್ದಾರೆ.

ಬಡವರು, ತಳಮಟ್ಟದ ಜನರು, ಆದಿವಾಸಿಗಳ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಿದರೆ, ಬಹುಸಂಖ್ಯಾತರ ಪಕ್ಷವು ಯಾವಾಗಲೂ ಗೆಲ್ಲುತ್ತದೆ. ಇದು ಉದ್ದೇಶವಾಗಿದೆ. ಆದ್ದರಿಂದ ಇದು ಕಳವಳಕಾರಿಯಾಗಿದೆ ಎಂದು ಸಿಬಲ್ ಹೇಳಿದ್ದಾರೆ.

ಚುನಾವಣಾ ಆಯೋಗದ ಸ್ವಾತಂತ್ರ್ಯದ ಮೇಲೆ ನಾನು ನಂಬಿಕೆ ಇಡುವುದಿಲ್ಲ. ಏಕೆಂದರೆ ಆ ಸಂಸ್ಥೆಯು ನಿರೀಕ್ಷಿಸಿದ ಸ್ವಾತಂತ್ರ್ಯವನ್ನು ಪ್ರತಿಬಿಂಬಿಸಿಲ್ಲ ಎಂದು ಸಿಬಲ್ ಹೇಳಿದ್ದು, ಸುಪ್ರೀಂ ಕೋರ್ಟ್‌ನ ಮಧ್ಯಂತರ ಆದೇಶದ ಬಗ್ಗೆ ಪ್ರತಿಕ್ರಿಯಿಸಲು ಅವರು ನಿರಾಕರಿಸಿದ್ದಾರೆ. ಈ ವಿಷಯದಲ್ಲಿ ನಾನು ವಕೀಲ ಎಂದಿದ್ದಾರೆ.

“ನ್ಯಾಯಾಲಯ ಏನು ಹೇಳಿದೆಯೋ ಅದನ್ನು ಚುನಾವಣಾ ಆಯೋಗವೇ ಗಣನೆಗೆ ತೆಗೆದುಕೊಳ್ಳುತ್ತದೆ ಎಂದು ಆಶಿಸುತ್ತೇವೆ. ಆದ್ದರಿಂದ ಈ ವಿವಾದ ಮುಂದುವರಿಯದಂತೆ ನೋಡಿಕೊಳ್ಳೋಣ” ಎಂದು ಸಿಬಲ್ ಪ್ರತಿಕ್ರಿಯಿಸಿದ್ದಾರೆ.

ಸಂಸತ್ತಿನ ಮಳೆಗಾಲದ ಅಧಿವೇಶನ ಬರುತ್ತಿದೆ. ಈ ಅಧಿವೇಶನದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಚರ್ಚಿಸುವುದು ಎಲ್ಲದ್ದಕ್ಕಿಂತ ಹೆಚ್ಚು ಮಹತ್ವದ್ದಾಗಿದೆ. ಬಿಜೆಪಿ ಗೆದ್ದ ಕ್ಷೇತ್ರಗಳಲ್ಲಿ ಮಾತ್ರ ಮತದಾರರು ಹಠಾತ್ತನೆ ಹೇಗೆ ಹೆಚ್ಚಾದರು ಎಂಬುದನ್ನು ಚುನಾವಣಾ ಆಯೋಗ ಇನ್ನೂ ವಿವರಿಸಲು ಸಾಧ್ಯವಾಗಿಲ್ಲ. ಆದ್ದರಿಂದ ಮಹಾರಾಷ್ಟ್ರ ವಿಷಯವೂ ಮುಖ್ಯವಾಗಿದೆ ಎಂದಿದ್ದಾರೆ.

ಬಿಹಾರದ ಮತದಾರರ ಪಟ್ಟಿ ಪರಿಷ್ಕರಣೆಗೆ ಮಾನ್ಯ ದಾಖಲೆಯಾಗಿ ಆಧಾರ್ ಕಾರ್ಡ್, ವೋಟರ್ ಐಡಿ ಮತ್ತು ಪಡಿತರ ಚೀಟಿಯನ್ನು ಪರಿಗಣಿಸುವಂತೆ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ಸೂಚಿಸಿದ ಬೆನ್ನಲ್ಲೇ ಕಪಿಲ್ ಸಿಬಲ್ ಮೇಲಿನ ಹೇಳಿಕೆ ನೀಡಿದ್ದಾರೆ.

ಸೌಜನ್ಯ : theprint.in

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...