Homeಮುಖಪುಟಚುನಾವಣಾ ಆಯೋಗ ಸದಾ ಮೋದಿ ಸರ್ಕಾರದ ಕೈಗೊಂಬೆಯಾಗಿದೆ: ಕಪಿಲ್ ಸಿಬಲ್

ಚುನಾವಣಾ ಆಯೋಗ ಸದಾ ಮೋದಿ ಸರ್ಕಾರದ ಕೈಗೊಂಬೆಯಾಗಿದೆ: ಕಪಿಲ್ ಸಿಬಲ್

- Advertisement -
- Advertisement -

ಚುನಾವಣಾ ಆಯೋಗ ಯಾವಾಗಲೂ ಮೋದಿ ಸರ್ಕಾರದ ಕೈಗೊಂಬೆಯಾಗಿದೆ ಎಂದು ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಆರೋಪಿಸಿದ್ದಾರೆ. ಬಿಹಾರದಲ್ಲಿ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಬಹುಸಂಖ್ಯಾತರ ಸರ್ಕಾರಗಳು ಅಧಿಕಾರದಲ್ಲಿ ಉಳಿಯುವಂತೆ ಮಾಡುವ ಗುರಿಯನ್ನು ಹೊಂದಿರುವ ‘ಅಸಂವಿಧಾನಿಕ’ ಕ್ರಮ ಎಂದು ಅವರು ಟೀಕಿಸಿದ್ದಾರೆ.

“ಪ್ರತಿಯೊಬ್ಬ ಚುನಾವಣಾ ಆಯುಕ್ತರೂ ಸರ್ಕಾರದೊಂದಿಗಿನ ಹೊಂದಾಣಿಕೆಯಲ್ಲಿ ಅವರ ಹಿಂದಿನವರನ್ನು ಮೀರಿಸುತ್ತಾರೆ” ಎಂದು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಸಿಬಲ್ ಹೇಳಿದ್ದಾರೆ.

ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯನ್ನು ಟೀಕಿಸಿದ ಸಿಬಲ್, “ಚುನಾವಣಾ ಆಯೋಗ ಪೌರತ್ವದ ತಕರಾರುಗಳನ್ನು ನಿರ್ಧರಿಸುವ ಅಧಿಕಾರ ಹೊಂದಿಲ್ಲ”ಎಂದಿದ್ದಾರೆ.

ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ಮೇಲೆ ಪ್ರತಿಪಕ್ಷಗಳು ನಡೆಸುತ್ತಿರುವ ವಾಗ್ವಾಳಿ ಬಗ್ಗೆ ಕೇಳಿದಾಗ “ಈ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಚುನಾವಣಾ ಆಯೋಗ ಅದರ ಕೈಗೊಂಬೆಯಾಗಿದೆ. ಚುನಾವಣಾ ಆಯೋಗದ ನಡವಳಿಕೆ ಬಗ್ಗೆ ಕಡಿಮೆ ಮಾತನಾಡಿದಷ್ಟೂ ಒಳ್ಳೆಯದು” ಎಂದು ಹೇಳಿದ್ದಾರೆ.

“ಮತದಾರರ ಪಟ್ಟಿಯ ಪರಿಷ್ಕರಣೆಯು ಸಂಪೂರ್ಣವಾಗಿ ಸಂವಿಧಾನ ಬಾಹಿರವಾಗಿದೆ. ಚುನಾವಣಾ ಆಯೋಗಕ್ಕೆ, ಅದರಲ್ಲೂ ಒಬ್ಬ ಬ್ಲಾಕ್ ಮಟ್ಟದ ಅಧಿಕಾರಿಗೆ ಪೌರತ್ವದ ತಕರಾರುಗಳನ್ನು ನಿರ್ಧರಿಸುವ ಅಧಿಕಾರ ಇಲ್ಲ. ಅವರು (ಬಿಜೆಪಿ) ಚುನಾವಣೆ ಗೆಲ್ಲಲು ಸಾಧ್ಯವಿರುವ ಎಲ್ಲಾ ವಿಧಾನಗಳನ್ನು ಚುನಾವಣಾ ಆಯೋಗದವರು ಅಳವಡಿಸಿಕೊಳ್ಳುತ್ತಾರೆ. ವಾಸ್ತವವಾಗಿ, ವಿಶೇಷ ತೀವ್ರ ಪರಿಷ್ಕರಣೆಯು ಮುಂಬವರುವ ಎಲ್ಲಾ ಸಮಯದಲ್ಲೂ ಬಹು ಸಂಖ್ಯಾತರ ಸರ್ಕಾರಗಳನ್ನು ಉಳಿಸಿಕೊಳ್ಳುವ ಒಂದು ಪ್ರಕ್ರಿಯೆಯಾಗಿದೆ” ಕಪಿಲ್ ಸಿಬಲ್ ಆರೋಪಿಸಿದ್ದಾರೆ.

ಬಡವರು, ತಳಮಟ್ಟದ ಜನರು, ಆದಿವಾಸಿಗಳ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಿದರೆ, ಬಹುಸಂಖ್ಯಾತರ ಪಕ್ಷವು ಯಾವಾಗಲೂ ಗೆಲ್ಲುತ್ತದೆ. ಇದು ಉದ್ದೇಶವಾಗಿದೆ. ಆದ್ದರಿಂದ ಇದು ಕಳವಳಕಾರಿಯಾಗಿದೆ ಎಂದು ಸಿಬಲ್ ಹೇಳಿದ್ದಾರೆ.

ಚುನಾವಣಾ ಆಯೋಗದ ಸ್ವಾತಂತ್ರ್ಯದ ಮೇಲೆ ನಾನು ನಂಬಿಕೆ ಇಡುವುದಿಲ್ಲ. ಏಕೆಂದರೆ ಆ ಸಂಸ್ಥೆಯು ನಿರೀಕ್ಷಿಸಿದ ಸ್ವಾತಂತ್ರ್ಯವನ್ನು ಪ್ರತಿಬಿಂಬಿಸಿಲ್ಲ ಎಂದು ಸಿಬಲ್ ಹೇಳಿದ್ದು, ಸುಪ್ರೀಂ ಕೋರ್ಟ್‌ನ ಮಧ್ಯಂತರ ಆದೇಶದ ಬಗ್ಗೆ ಪ್ರತಿಕ್ರಿಯಿಸಲು ಅವರು ನಿರಾಕರಿಸಿದ್ದಾರೆ. ಈ ವಿಷಯದಲ್ಲಿ ನಾನು ವಕೀಲ ಎಂದಿದ್ದಾರೆ.

“ನ್ಯಾಯಾಲಯ ಏನು ಹೇಳಿದೆಯೋ ಅದನ್ನು ಚುನಾವಣಾ ಆಯೋಗವೇ ಗಣನೆಗೆ ತೆಗೆದುಕೊಳ್ಳುತ್ತದೆ ಎಂದು ಆಶಿಸುತ್ತೇವೆ. ಆದ್ದರಿಂದ ಈ ವಿವಾದ ಮುಂದುವರಿಯದಂತೆ ನೋಡಿಕೊಳ್ಳೋಣ” ಎಂದು ಸಿಬಲ್ ಪ್ರತಿಕ್ರಿಯಿಸಿದ್ದಾರೆ.

ಸಂಸತ್ತಿನ ಮಳೆಗಾಲದ ಅಧಿವೇಶನ ಬರುತ್ತಿದೆ. ಈ ಅಧಿವೇಶನದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಚರ್ಚಿಸುವುದು ಎಲ್ಲದ್ದಕ್ಕಿಂತ ಹೆಚ್ಚು ಮಹತ್ವದ್ದಾಗಿದೆ. ಬಿಜೆಪಿ ಗೆದ್ದ ಕ್ಷೇತ್ರಗಳಲ್ಲಿ ಮಾತ್ರ ಮತದಾರರು ಹಠಾತ್ತನೆ ಹೇಗೆ ಹೆಚ್ಚಾದರು ಎಂಬುದನ್ನು ಚುನಾವಣಾ ಆಯೋಗ ಇನ್ನೂ ವಿವರಿಸಲು ಸಾಧ್ಯವಾಗಿಲ್ಲ. ಆದ್ದರಿಂದ ಮಹಾರಾಷ್ಟ್ರ ವಿಷಯವೂ ಮುಖ್ಯವಾಗಿದೆ ಎಂದಿದ್ದಾರೆ.

ಬಿಹಾರದ ಮತದಾರರ ಪಟ್ಟಿ ಪರಿಷ್ಕರಣೆಗೆ ಮಾನ್ಯ ದಾಖಲೆಯಾಗಿ ಆಧಾರ್ ಕಾರ್ಡ್, ವೋಟರ್ ಐಡಿ ಮತ್ತು ಪಡಿತರ ಚೀಟಿಯನ್ನು ಪರಿಗಣಿಸುವಂತೆ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ಸೂಚಿಸಿದ ಬೆನ್ನಲ್ಲೇ ಕಪಿಲ್ ಸಿಬಲ್ ಮೇಲಿನ ಹೇಳಿಕೆ ನೀಡಿದ್ದಾರೆ.

ಸೌಜನ್ಯ : theprint.in

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...